Homeಮುಖಪುಟಬಜೆಟ್‌ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ: ಜನರ ಗುಳೇ ಹೆಚ್ಚಿಸುವ ಹುನ್ನಾರ

ಬಜೆಟ್‌ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ: ಜನರ ಗುಳೇ ಹೆಚ್ಚಿಸುವ ಹುನ್ನಾರ

ಕನಿಷ್ಠ ನೂರು ದಿನ ಉದ್ಯೋಗ ನೀಡಲು 2.64 ಲಕ್ಷ ಕೋಟಿ ಹಣ ಈ ವರ್ಷದ ಬಜೆಟ್ಟಿನಲ್ಲಿ ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ 73,000 ಕೋಟಿ...

- Advertisement -
- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು. ಬಲು ಬಲಾಢ್ಯ ಶಾಸಕರ ಮನೆತನಗಳೇ ಇರಬಹುದು ಈ ತಾಲೂಕಿನಿಂದ. ಆದರೆ ಶ್ರೀಮಂತರ ಥಳಕು ಬೆಳಕಿನ ಬುಡ ಕಗ್ಗತ್ತಲು. ಒಂದೊಂದು ಹಳ್ಳಿಯೂ ಬಡತನವನ್ನೇ ಹಾಸಿ ಹೊದ್ದುಕೊಂಡು ಮಲಗಿದೆ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಹೆಸರನ್ನು ಈಗೀಗ ಕೇಳುತ್ತಿರುವ ಹಳ್ಳಿಗಳಿವೆ ಇಲ್ಲಿ. ಒಮ್ಮೆ ಕೆಲಸ ಪಡೆದುಕೊಂಡವರು ಮತ್ತೊಮ್ಮೆ ಅರ್ಜಿ ಕೊಟ್ಟರೆ ಪಂಚಾಯತಿಯವರ ಹುಬ್ಬು ಮೇಲೇರುತ್ತದೆ. ‘ಎಲ್ಲಿಂದ ಕೊಡ್ಲವ್ವಾ ಕೆಲಸಾ? ನೀವೇ ಹುಡ್ಕೊಂಡು ರ‍್ರಿ!’ ತಿಂಗಳುಗಟ್ಟಲೆ ಕಾಯಿಸಿ ಕಡೆಯಲ್ಲಿ ಭಿಕ್ಷೆ ಎಂಬಂತೆ ಒಂದು ಎನ್ನೆಮ್ಮಾರ್ ಕೊಡುತ್ತಾರೆ. ಅದು ಮುಗಿದ ಬಳಿಕ ಮತ್ತೆ ತಿಂಗಳಾನುಗಟ್ಟಲೆ ಕಾಯಬೇಕು. ಎಲ್ಲಿಯದು ಬಿಡು! ಎನ್ನುತ್ತ ಹತ್ತಾರು ಹಳ್ಳಿಗಳ ಜನರಾಗಲೇ ಕೆಲಸ ಹುಡುಕಿ ಇಟ್ಟಿಗೆ ಭಟ್ಟಿಗಳಿಗೆ ಹೋಗಿಬಿಟ್ಟಿದ್ದಾರೆ.

ಆದರೂ ಕೋವಿಡ್‌ನಂತಹ ಮಹಾಮಾರಿ ಎರಗಿ ವಲಸೆ ಹೋದವರು ಊರಿಗೆ ವಾಪಸ್ಸಾದಾಗ ಹಿಂದೆ ಸಂಕಟಮಯ ಸಂದರ್ಭದಲ್ಲಿ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿಯೊಂದೇ ಅವರನ್ನು ನೆಲಕಚ್ಚದಂತೆ ಎತ್ತಿ ಹಿಡಿದಿತ್ತು. 2020-21ರಲ್ಲಿ ಉದ್ಯೋಗ ಖಾತರಿಯ ಹಾಜರಾತಿಯ ಸಂಖ್ಯೆಯು ಹಿಂದಿನ ವರ್ಷದ್ದಕ್ಕಿಂತ ಒಮ್ಮೆಗೇ 46% ಹೆಚ್ಚಾಯಿತು. ಮರುವರ್ಷ 2021ರ ಡಿಸೆಂಬರ್ ಹೊತ್ತಿಗಾಗಲೇ ಎರಡು ವರ್ಷ ಹಿಂದಿನ ಪೂರ್ತಿ ಹಾಜರಿಗಿಂತಲೂ 10% ಹೆಚ್ಚಾಗಿದೆ. ಕೆಲಸ ಕೇಳಿದ ಜನರ ಸಂಖ್ಯೆಯು ಇದಕ್ಕಿಂತಲೂ ಹೆಚ್ಚಿನದಿರುತ್ತದೆ.

ಈ ಚಿತ್ರ ಬಿಚ್ಚಿಡುವುದೇನನ್ನು? ಗ್ರಾಮೀಣ ಸಂಕಟವನ್ನು ಕೊನೆಗಾಣಿಸಲು ಒಂದು ಕಾನೂನಿನ ಮೂಲಕ ಸರಕಾರವು ಗ್ರಾಮೀಣ ಜನರಿಗೆ ಮಾಡಿದ ವಾಗ್ದಾನವಾಗಿತ್ತು. ಉದ್ಯೋಗಕ್ಕಾಗಿ ಜನರು ಬೇಡಿಕೆ ಇಟ್ಟಾಗ ಕೆಲಸ ಕೊಡುತ್ತೇನೆಂದು ಮಾಡಿದ ವಾಗ್ದಾನವು ಅತಿ ಕಡಿಮೆ ಬಜೆಟ್ ಮಾಡುವುದರ ಮೂಲಕ `ನಾವು ಕೆಲಸ ಕೊಟ್ಟಾಗ ಮಾಡಿ’ ಎಂಬ ಉದ್ಧಟ ನೀತಿಯಾಗಿ ಪರಿವರ್ತನೆಗೊಂಡಿದೆ. ಊರು ತೊರೆದು ವಲಸೆ ಹೋಗಿಬಿಡುತ್ತಿದ್ದ ಜನರನ್ನು ತಡೆದು ನಿಲ್ಲಿಸಿತು ಉದ್ಯೋಗ ಖಾತರಿ. ಈಗ ಮತ್ತೆ ಅದು ‘ಎಲ್ಲಿಗೆ ಹೋಗ್ತೀರೋ ಹೋಗಿ’ ಎನ್ನುತ್ತಿದೆ. ಎಂಥಾ ಅವಸ್ಥೆ!

2020-21ರಲ್ಲಿ ಉದ್ಯೋಗ ಖಾತರಿಗೆ ಇಟ್ಟಿದ್ದ ಹಣವು ಸಾಕಾಗದೇ ಮತ್ತೆ 40,000 ಕೋಟಿಯ ಹೆಚ್ಚುವರಿ ಹಣ ಹಾಕಿದಾಗಲೂ ವರ್ಷ ಮುಗಿಯುವ ಹೊತ್ತಿಗೆ ಜನರ ಕೂಲಿಬಾಕಿಯು 17,000 ಕೋಟಿ ಇತ್ತು. ಆ ವರ್ಷ ಇಟ್ಟ ಬಜೆಟ್ 82,000 ಕೋಟಿಯಾಗಿತ್ತು. ಉದ್ಯೋಗ ಖಾತರಿಯ ಸರಿಯಾದ ಜಾರಿಗಾಗಿ ಒತ್ತಾಯಿಸುವ ಜನಸಂಘಟನೆಗಳು ಕಲೆತು ಲೆಕ್ಕ ಹಾಕಿ ಮರುವರ್ಷ 1.15 ಲಕ್ಷ ಕೋಟಿ ಹಣ ಇಡಬೇಕೆಂದು ಸರಕಾರವನ್ನು ಒತ್ತಾಯಿಸಿದ್ದವು. ಆದರೆ ಸರಕಾರ ಇಟ್ಟಿದ್ದು ಬರಿಯ 73,000 ಕೋಟಿ. ಅದರಲ್ಲಿ 26%ನಷ್ಟು ಹಣವು ಹಿಂದಿನ ವರ್ಷದ ಬಾಕಿಗೇ ಹೋಯಿತು. ಈ ವರ್ಷದ ಅರ್ಧಭಾಗ ಕಳೆಯುವುದರೊಳಗೆ ಅನೇಕ ರಾಜ್ಯಗಳು ಉದ್ಯೋಗ ಖಾತರಿಗೆ ಹಣವಿಲ್ಲದೇ ನಮ್ಮ ಹುಕ್ಕೇರಿಯ ಪಂಚಾಯತಿಗಳಲ್ಲಿ ಮಾಡಿದಂತೆ ಕೆಲಸ ಕೊಡಲಾರದಾದವು. ಡಿಸೆಂಬರ್‌ಲ್ಲಿ ಸರಕಾರವು ಮತ್ತೆ 25000 ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿತಾದರೂ ಇನ್ನೂವರೆಗೆ ಕೇಂದ್ರ ಬೊಕ್ಕಸದಿಂದ ಹೊರಬಿದ್ದಿದ್ದು 7114 ಕೋಟಿ ರೂ. ಮಾತ್ರ. ಇಲ್ಲಿಯವರೆಗೆ ಕೇವಲ 5% ಕುಟುಂಬಗಳು 100 ದಿನಗಳನ್ನು ಮುಗಿಸಲು ಸಾಧ್ಯವಾಗಿದೆ.

ಕಳೆದ ಐದು ವರ್ಷಗಳಿಂದ ಬಜೆಟ್ ಮತ್ತು ಹಣ ಸಂದಾಯವಾಗುವ ರೀತಿಯು ಹೀಗೆಯೇ ಸಾಗಿದೆ. ಸುಮಾರು 20%ನಷ್ಟು ಬಜೆಟ್ಟಿನ ಹಣ ಕಳೆದ ವರ್ಷದ ಬಾಕಿಯನ್ನು ತೀರಿಸಲಿಕ್ಕೇ ಹೋಗುತ್ತದೆ. ಈ ವರ್ಷವೂ ಕೂಡ. ಈಗಾಗಲೇ 12,414 ಕೋಟಿ ರೂ. ಬಾಕಿಯಿದ್ದು ವರ್ಷದ ಕೊನೆಯ ವೇಳೆಗೆ ಅದು 21,000 ಕೋಟಿ ಆಗಬಹುದು.

ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಅಧಿನಿಯಮದ ಪರಿಚ್ಛೇದ 2 ಅಧ್ಯಾಯದ ಪ್ರಕಾರ ಉದ್ಯೋಗ ಖಾತರಿಯ ಕೂಲಿಯು ಆಯಾ ರಾಜ್ಯದ ಕೃಷಿ ಕನಿಷ್ಟ ಕೂಲಿಗಿಂತಲೂ ಕಡಿಮೆ ಇರಬಾರದು. ಎಲ್ಲಾ ರಾಜ್ಯಗಳ ಕನಿಷ್ಟ ಕೃಷಿ ಕೂಲಿಯನ್ನು ನೋಡಲಾಗಿ ಮತ್ತು ಬಳಕೆಯಾಗುತ್ತಿರುವ ಉದ್ಯೋಗ ಚೀಟಿಗಳನ್ನು ಲೆಕ್ಕ ಹಾಕಲಾಗಿ ಕೇಂದ್ರ ಸರಕಾರವು ಸರಾಸರಿ 269 ರೂ. ಕನಿಷ್ಟ ಕೂಲಿಯನ್ನು ನಿಗದಿ ಮಾಡಬೇಕು.

ಸರಾಸರಿ ಕನಿಷ್ಟ 269 ರೂ. ಕೂಲಿಯನ್ನು ಕೊಡುವುದಾದರೂ ಕೇಂದ್ರ ಸರಕಾರವು ಕೆಲಸ ಕೇಳಿ ಬರುವಂಥ ಜಾಬ್ ಕಾರ್ಡುಗಳಿಗೆ 100 ದಿನಗಳ ಕೆಲಸವನ್ನು ಕೊಡಬೇಕೆಂದರೆ ಕನಿಷ್ಟ 2.64 ಲಕ್ಷ ಕೋಟಿ ಹಣವನ್ನು ಈ ವರ್ಷದ ಬಜೆಟ್ಟಿನಲ್ಲಿ ಉದ್ಯೋಗ ಖಾತರಿಗೆಂದು ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ 73,000 ಕೋಟಿ. ಮುಂದಿನ ದಿನಗಳಲ್ಲಿ ಮತ್ತದೇ ಸಂಕಟಾವು ಪುನರಾವರ್ತನೆ ಆಗಲಿದೆ. ಜನರು ಉದ್ಯೋಗಕ್ಕೆ ಅರ್ಜಿ ಹಿಡಿದು ಪಂಚಾಯತಿಯ ಎದುರು ನಿಲ್ಲುವುದು. ಅವರು ಕೈಯಾಡಿಸುವುದು. ಇವರು ಕಾದು ಕಾದು ಸಾಕಾಗಿ ಮತ್ತೆ ಗುಳೇ ಹೋಗುವುದು.

ಜನರು ಊರು ಬಿಟ್ಟು ಗುಳೇ ಹೋಗುವುದೇ ಬೇಕಾಗಿದೆ ನಮ್ಮ ಆಳುವ ವರ್ಗಕ್ಕೆ. ಬೇಕಾದಷ್ಟು ಹಣವಿದೆ ರಸ್ತೆಗಳನ್ನು ಮಾಡುವುದಕ್ಕೆ. ಮೂಲ ಸೌಕರ್ಯದ ಹೆಸರಿನಲ್ಲಿ ಇಟ್ಟಿಗೆ ಬಟ್ಟಿಗಳಲ್ಲಿ ಜೀತಕ್ಕಿರುವಂತೆ ದುಡಿಯಲು, ರಸ್ತೆ ಪಕ್ಕದ ಮರಗಳನ್ನು ಕಡಿದುರುಳಿಸಲು, ರಸ್ತೆಗೆ ನಿಮ್ಮದೇ ಊರಿನ ಗುಡ್ಡ ಬೆಟ್ಟಗಳನ್ನು ಕಡಿದು ಮಣ್ಣು ಸುರಿಯಲು, ಸಿಮೆಂಟ್ ಕಲಸಿ ರಸ್ತೆಗೆ ಸುರಿಯಲು, ಮಾಡಿದ ಸಿಮೆಂಟ್ ರಸ್ತೆಗಳಿಗೆ ನಿಮ್ಮ ಕೆರೆ, ಹಳ್ಳಗಳಿಂದ ನೀರು ತಂದು ಸುರಿಯಲು. ಧೂಳು, ಸಿಮೆಂಟ್‌ಗಳಲ್ಲಿ ಮುಚ್ಚಿ ಹೋಗುವ ಅನಾಮಧೇಯರು ಬೇಕಾಗಿದ್ದಾರೆ.

ಶಾರದಾ ಗೋಪಾಲ

ಶಾರದಾ ಮಹಿಳಾಪರ ಕಾಳಜಿಯ ಚಿಂತಕಿ, ಬರಹಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಜನಾರೋಗ್ಯದ ಪ್ರಯತ್ನಗಳಲ್ಲಿ ಗಂಭೀರವಾಗಿ ದಶಕಗಳಿಂದ ತೊಡಗಿಸಿಕೊಂಡವರು. ಎಲ್ಲ ಸಮಾಜಮುಖಿ ಚಟುವಟಿಕೆಗಳ ಒಡನಾಡಿ. ಪ್ರಸ್ತುತ ಧಾರವಾಡದಲ್ಲಿ ನೆಲೆಸಿದ್ದಾರೆ.


ಇದನ್ನೂ ಓದಿ; ಆಹಾರ ಆಹಾರವಾಗಿಯೇ ಇರಲಿ; ಅನವಶ್ಯಕ ಔಷಧವಾಗಿ ಬೇಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....