Homeಮುಖಪುಟಬಜೆಟ್‌ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ: ಜನರ ಗುಳೇ ಹೆಚ್ಚಿಸುವ ಹುನ್ನಾರ

ಬಜೆಟ್‌ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ: ಜನರ ಗುಳೇ ಹೆಚ್ಚಿಸುವ ಹುನ್ನಾರ

ಕನಿಷ್ಠ ನೂರು ದಿನ ಉದ್ಯೋಗ ನೀಡಲು 2.64 ಲಕ್ಷ ಕೋಟಿ ಹಣ ಈ ವರ್ಷದ ಬಜೆಟ್ಟಿನಲ್ಲಿ ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ 73,000 ಕೋಟಿ...

- Advertisement -
- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು. ಬಲು ಬಲಾಢ್ಯ ಶಾಸಕರ ಮನೆತನಗಳೇ ಇರಬಹುದು ಈ ತಾಲೂಕಿನಿಂದ. ಆದರೆ ಶ್ರೀಮಂತರ ಥಳಕು ಬೆಳಕಿನ ಬುಡ ಕಗ್ಗತ್ತಲು. ಒಂದೊಂದು ಹಳ್ಳಿಯೂ ಬಡತನವನ್ನೇ ಹಾಸಿ ಹೊದ್ದುಕೊಂಡು ಮಲಗಿದೆ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಹೆಸರನ್ನು ಈಗೀಗ ಕೇಳುತ್ತಿರುವ ಹಳ್ಳಿಗಳಿವೆ ಇಲ್ಲಿ. ಒಮ್ಮೆ ಕೆಲಸ ಪಡೆದುಕೊಂಡವರು ಮತ್ತೊಮ್ಮೆ ಅರ್ಜಿ ಕೊಟ್ಟರೆ ಪಂಚಾಯತಿಯವರ ಹುಬ್ಬು ಮೇಲೇರುತ್ತದೆ. ‘ಎಲ್ಲಿಂದ ಕೊಡ್ಲವ್ವಾ ಕೆಲಸಾ? ನೀವೇ ಹುಡ್ಕೊಂಡು ರ‍್ರಿ!’ ತಿಂಗಳುಗಟ್ಟಲೆ ಕಾಯಿಸಿ ಕಡೆಯಲ್ಲಿ ಭಿಕ್ಷೆ ಎಂಬಂತೆ ಒಂದು ಎನ್ನೆಮ್ಮಾರ್ ಕೊಡುತ್ತಾರೆ. ಅದು ಮುಗಿದ ಬಳಿಕ ಮತ್ತೆ ತಿಂಗಳಾನುಗಟ್ಟಲೆ ಕಾಯಬೇಕು. ಎಲ್ಲಿಯದು ಬಿಡು! ಎನ್ನುತ್ತ ಹತ್ತಾರು ಹಳ್ಳಿಗಳ ಜನರಾಗಲೇ ಕೆಲಸ ಹುಡುಕಿ ಇಟ್ಟಿಗೆ ಭಟ್ಟಿಗಳಿಗೆ ಹೋಗಿಬಿಟ್ಟಿದ್ದಾರೆ.

ಆದರೂ ಕೋವಿಡ್‌ನಂತಹ ಮಹಾಮಾರಿ ಎರಗಿ ವಲಸೆ ಹೋದವರು ಊರಿಗೆ ವಾಪಸ್ಸಾದಾಗ ಹಿಂದೆ ಸಂಕಟಮಯ ಸಂದರ್ಭದಲ್ಲಿ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿಯೊಂದೇ ಅವರನ್ನು ನೆಲಕಚ್ಚದಂತೆ ಎತ್ತಿ ಹಿಡಿದಿತ್ತು. 2020-21ರಲ್ಲಿ ಉದ್ಯೋಗ ಖಾತರಿಯ ಹಾಜರಾತಿಯ ಸಂಖ್ಯೆಯು ಹಿಂದಿನ ವರ್ಷದ್ದಕ್ಕಿಂತ ಒಮ್ಮೆಗೇ 46% ಹೆಚ್ಚಾಯಿತು. ಮರುವರ್ಷ 2021ರ ಡಿಸೆಂಬರ್ ಹೊತ್ತಿಗಾಗಲೇ ಎರಡು ವರ್ಷ ಹಿಂದಿನ ಪೂರ್ತಿ ಹಾಜರಿಗಿಂತಲೂ 10% ಹೆಚ್ಚಾಗಿದೆ. ಕೆಲಸ ಕೇಳಿದ ಜನರ ಸಂಖ್ಯೆಯು ಇದಕ್ಕಿಂತಲೂ ಹೆಚ್ಚಿನದಿರುತ್ತದೆ.

ಈ ಚಿತ್ರ ಬಿಚ್ಚಿಡುವುದೇನನ್ನು? ಗ್ರಾಮೀಣ ಸಂಕಟವನ್ನು ಕೊನೆಗಾಣಿಸಲು ಒಂದು ಕಾನೂನಿನ ಮೂಲಕ ಸರಕಾರವು ಗ್ರಾಮೀಣ ಜನರಿಗೆ ಮಾಡಿದ ವಾಗ್ದಾನವಾಗಿತ್ತು. ಉದ್ಯೋಗಕ್ಕಾಗಿ ಜನರು ಬೇಡಿಕೆ ಇಟ್ಟಾಗ ಕೆಲಸ ಕೊಡುತ್ತೇನೆಂದು ಮಾಡಿದ ವಾಗ್ದಾನವು ಅತಿ ಕಡಿಮೆ ಬಜೆಟ್ ಮಾಡುವುದರ ಮೂಲಕ `ನಾವು ಕೆಲಸ ಕೊಟ್ಟಾಗ ಮಾಡಿ’ ಎಂಬ ಉದ್ಧಟ ನೀತಿಯಾಗಿ ಪರಿವರ್ತನೆಗೊಂಡಿದೆ. ಊರು ತೊರೆದು ವಲಸೆ ಹೋಗಿಬಿಡುತ್ತಿದ್ದ ಜನರನ್ನು ತಡೆದು ನಿಲ್ಲಿಸಿತು ಉದ್ಯೋಗ ಖಾತರಿ. ಈಗ ಮತ್ತೆ ಅದು ‘ಎಲ್ಲಿಗೆ ಹೋಗ್ತೀರೋ ಹೋಗಿ’ ಎನ್ನುತ್ತಿದೆ. ಎಂಥಾ ಅವಸ್ಥೆ!

2020-21ರಲ್ಲಿ ಉದ್ಯೋಗ ಖಾತರಿಗೆ ಇಟ್ಟಿದ್ದ ಹಣವು ಸಾಕಾಗದೇ ಮತ್ತೆ 40,000 ಕೋಟಿಯ ಹೆಚ್ಚುವರಿ ಹಣ ಹಾಕಿದಾಗಲೂ ವರ್ಷ ಮುಗಿಯುವ ಹೊತ್ತಿಗೆ ಜನರ ಕೂಲಿಬಾಕಿಯು 17,000 ಕೋಟಿ ಇತ್ತು. ಆ ವರ್ಷ ಇಟ್ಟ ಬಜೆಟ್ 82,000 ಕೋಟಿಯಾಗಿತ್ತು. ಉದ್ಯೋಗ ಖಾತರಿಯ ಸರಿಯಾದ ಜಾರಿಗಾಗಿ ಒತ್ತಾಯಿಸುವ ಜನಸಂಘಟನೆಗಳು ಕಲೆತು ಲೆಕ್ಕ ಹಾಕಿ ಮರುವರ್ಷ 1.15 ಲಕ್ಷ ಕೋಟಿ ಹಣ ಇಡಬೇಕೆಂದು ಸರಕಾರವನ್ನು ಒತ್ತಾಯಿಸಿದ್ದವು. ಆದರೆ ಸರಕಾರ ಇಟ್ಟಿದ್ದು ಬರಿಯ 73,000 ಕೋಟಿ. ಅದರಲ್ಲಿ 26%ನಷ್ಟು ಹಣವು ಹಿಂದಿನ ವರ್ಷದ ಬಾಕಿಗೇ ಹೋಯಿತು. ಈ ವರ್ಷದ ಅರ್ಧಭಾಗ ಕಳೆಯುವುದರೊಳಗೆ ಅನೇಕ ರಾಜ್ಯಗಳು ಉದ್ಯೋಗ ಖಾತರಿಗೆ ಹಣವಿಲ್ಲದೇ ನಮ್ಮ ಹುಕ್ಕೇರಿಯ ಪಂಚಾಯತಿಗಳಲ್ಲಿ ಮಾಡಿದಂತೆ ಕೆಲಸ ಕೊಡಲಾರದಾದವು. ಡಿಸೆಂಬರ್‌ಲ್ಲಿ ಸರಕಾರವು ಮತ್ತೆ 25000 ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿತಾದರೂ ಇನ್ನೂವರೆಗೆ ಕೇಂದ್ರ ಬೊಕ್ಕಸದಿಂದ ಹೊರಬಿದ್ದಿದ್ದು 7114 ಕೋಟಿ ರೂ. ಮಾತ್ರ. ಇಲ್ಲಿಯವರೆಗೆ ಕೇವಲ 5% ಕುಟುಂಬಗಳು 100 ದಿನಗಳನ್ನು ಮುಗಿಸಲು ಸಾಧ್ಯವಾಗಿದೆ.

ಕಳೆದ ಐದು ವರ್ಷಗಳಿಂದ ಬಜೆಟ್ ಮತ್ತು ಹಣ ಸಂದಾಯವಾಗುವ ರೀತಿಯು ಹೀಗೆಯೇ ಸಾಗಿದೆ. ಸುಮಾರು 20%ನಷ್ಟು ಬಜೆಟ್ಟಿನ ಹಣ ಕಳೆದ ವರ್ಷದ ಬಾಕಿಯನ್ನು ತೀರಿಸಲಿಕ್ಕೇ ಹೋಗುತ್ತದೆ. ಈ ವರ್ಷವೂ ಕೂಡ. ಈಗಾಗಲೇ 12,414 ಕೋಟಿ ರೂ. ಬಾಕಿಯಿದ್ದು ವರ್ಷದ ಕೊನೆಯ ವೇಳೆಗೆ ಅದು 21,000 ಕೋಟಿ ಆಗಬಹುದು.

ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಅಧಿನಿಯಮದ ಪರಿಚ್ಛೇದ 2 ಅಧ್ಯಾಯದ ಪ್ರಕಾರ ಉದ್ಯೋಗ ಖಾತರಿಯ ಕೂಲಿಯು ಆಯಾ ರಾಜ್ಯದ ಕೃಷಿ ಕನಿಷ್ಟ ಕೂಲಿಗಿಂತಲೂ ಕಡಿಮೆ ಇರಬಾರದು. ಎಲ್ಲಾ ರಾಜ್ಯಗಳ ಕನಿಷ್ಟ ಕೃಷಿ ಕೂಲಿಯನ್ನು ನೋಡಲಾಗಿ ಮತ್ತು ಬಳಕೆಯಾಗುತ್ತಿರುವ ಉದ್ಯೋಗ ಚೀಟಿಗಳನ್ನು ಲೆಕ್ಕ ಹಾಕಲಾಗಿ ಕೇಂದ್ರ ಸರಕಾರವು ಸರಾಸರಿ 269 ರೂ. ಕನಿಷ್ಟ ಕೂಲಿಯನ್ನು ನಿಗದಿ ಮಾಡಬೇಕು.

ಸರಾಸರಿ ಕನಿಷ್ಟ 269 ರೂ. ಕೂಲಿಯನ್ನು ಕೊಡುವುದಾದರೂ ಕೇಂದ್ರ ಸರಕಾರವು ಕೆಲಸ ಕೇಳಿ ಬರುವಂಥ ಜಾಬ್ ಕಾರ್ಡುಗಳಿಗೆ 100 ದಿನಗಳ ಕೆಲಸವನ್ನು ಕೊಡಬೇಕೆಂದರೆ ಕನಿಷ್ಟ 2.64 ಲಕ್ಷ ಕೋಟಿ ಹಣವನ್ನು ಈ ವರ್ಷದ ಬಜೆಟ್ಟಿನಲ್ಲಿ ಉದ್ಯೋಗ ಖಾತರಿಗೆಂದು ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ 73,000 ಕೋಟಿ. ಮುಂದಿನ ದಿನಗಳಲ್ಲಿ ಮತ್ತದೇ ಸಂಕಟಾವು ಪುನರಾವರ್ತನೆ ಆಗಲಿದೆ. ಜನರು ಉದ್ಯೋಗಕ್ಕೆ ಅರ್ಜಿ ಹಿಡಿದು ಪಂಚಾಯತಿಯ ಎದುರು ನಿಲ್ಲುವುದು. ಅವರು ಕೈಯಾಡಿಸುವುದು. ಇವರು ಕಾದು ಕಾದು ಸಾಕಾಗಿ ಮತ್ತೆ ಗುಳೇ ಹೋಗುವುದು.

ಜನರು ಊರು ಬಿಟ್ಟು ಗುಳೇ ಹೋಗುವುದೇ ಬೇಕಾಗಿದೆ ನಮ್ಮ ಆಳುವ ವರ್ಗಕ್ಕೆ. ಬೇಕಾದಷ್ಟು ಹಣವಿದೆ ರಸ್ತೆಗಳನ್ನು ಮಾಡುವುದಕ್ಕೆ. ಮೂಲ ಸೌಕರ್ಯದ ಹೆಸರಿನಲ್ಲಿ ಇಟ್ಟಿಗೆ ಬಟ್ಟಿಗಳಲ್ಲಿ ಜೀತಕ್ಕಿರುವಂತೆ ದುಡಿಯಲು, ರಸ್ತೆ ಪಕ್ಕದ ಮರಗಳನ್ನು ಕಡಿದುರುಳಿಸಲು, ರಸ್ತೆಗೆ ನಿಮ್ಮದೇ ಊರಿನ ಗುಡ್ಡ ಬೆಟ್ಟಗಳನ್ನು ಕಡಿದು ಮಣ್ಣು ಸುರಿಯಲು, ಸಿಮೆಂಟ್ ಕಲಸಿ ರಸ್ತೆಗೆ ಸುರಿಯಲು, ಮಾಡಿದ ಸಿಮೆಂಟ್ ರಸ್ತೆಗಳಿಗೆ ನಿಮ್ಮ ಕೆರೆ, ಹಳ್ಳಗಳಿಂದ ನೀರು ತಂದು ಸುರಿಯಲು. ಧೂಳು, ಸಿಮೆಂಟ್‌ಗಳಲ್ಲಿ ಮುಚ್ಚಿ ಹೋಗುವ ಅನಾಮಧೇಯರು ಬೇಕಾಗಿದ್ದಾರೆ.

ಶಾರದಾ ಗೋಪಾಲ

ಶಾರದಾ ಮಹಿಳಾಪರ ಕಾಳಜಿಯ ಚಿಂತಕಿ, ಬರಹಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಜನಾರೋಗ್ಯದ ಪ್ರಯತ್ನಗಳಲ್ಲಿ ಗಂಭೀರವಾಗಿ ದಶಕಗಳಿಂದ ತೊಡಗಿಸಿಕೊಂಡವರು. ಎಲ್ಲ ಸಮಾಜಮುಖಿ ಚಟುವಟಿಕೆಗಳ ಒಡನಾಡಿ. ಪ್ರಸ್ತುತ ಧಾರವಾಡದಲ್ಲಿ ನೆಲೆಸಿದ್ದಾರೆ.


ಇದನ್ನೂ ಓದಿ; ಆಹಾರ ಆಹಾರವಾಗಿಯೇ ಇರಲಿ; ಅನವಶ್ಯಕ ಔಷಧವಾಗಿ ಬೇಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...