Homeಚಳವಳಿಮಾಧ್ಯಮಗಳ ಶಾಕಿಂಗ್ ನ್ಯೂಸ್ ಎಂಬ ಮಹಾನಾಟಕ: ಅದು ಒಂದು ಪಕ್ಷದ ಪರ ಪ್ರಚಾರದ ದ್ಯೋತಕ

ಮಾಧ್ಯಮಗಳ ಶಾಕಿಂಗ್ ನ್ಯೂಸ್ ಎಂಬ ಮಹಾನಾಟಕ: ಅದು ಒಂದು ಪಕ್ಷದ ಪರ ಪ್ರಚಾರದ ದ್ಯೋತಕ

- Advertisement -
- Advertisement -

ಶಾಕಿಂಗ್: “ಪಶ್ಚಿಮ ಬಂಗಾಳದಲ್ಲಿ ನೇತಾಡುವ ಸ್ಥಿತಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಶವ ಪತ್ತೆ”. ಎಂಬ ತಲೆಬರಹದಲ್ಲಿ ಎರಡು ದಿನಗಳ ಹಿಂದೆ ಪ್ರಸಿದ್ದ ದಿನಪತ್ರಿಕೆ ಟೈಮ್ಸ್ ನೌ ವರದಿ ಮಾಡಿತ್ತು.

ಈ ರೀತಿಯ ಶಾಕಿಂಗ್ ಸುದ್ದಿಗಳನ್ನು ಕೊಡುವ ಮುಖ್ಯವಾಹಿನಿ ಮಾಧ್ಯಮಗಳ ಕೆಲಸವನ್ನು ಶ್ಲಾಘಿಸುತ್ತೇನೆ. ಆದರೆ ಮತ್ತೆ ನನಗೆ ಆಶ್ಚರ್ಯವಾಗುತ್ತದೆ,

2015ರಲ್ಲಿ 3263 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2016ರಲ್ಲಿ 3063 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2017ರಲ್ಲಿ 2917 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
2018ರಲ್ಲಿ 2761 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಂದರೆ 2014-2018ರ ಅವಧಿಯಲ್ಲಿ ಒಟ್ಟು 12004 ರೈತರು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ನಾಲ್ಕು ವರ್ಷದಲ್ಲಿ ಪ್ರತಿ ದಿನಕ್ಕೆ 8 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಅಂಕಿಅಂಶ ಇಡೀ ಭಾರತದ್ದು ಅಲ್ಲ ಬದಲಿಗೆ ಕೇವಲ ಮಹರಾಷ್ಟ್ರ ರಾಜ್ಯದಲ್ಲಿ ಸಂಭವಿಸಿರುವ ರೈತರ ಆತ್ಮಹತ್ಯೆಗಳ ಕುರಿತದ್ದಾಗಿದೆ.

ಈ ಅಂಕಿಅಂಶಗಳನ್ನು ನ್ಯಾಷನಲ್ ಕ್ರೈಮ್ ರೆಕಾಡ್ರ್ಸ್ ಬ್ಯೂರೋ(NCRB) ನೀಡಿದ ವರದಿಯಾಧರಿಸಿ ದಿ ಹಿಂದೂಸ್ಥಾನ್ ಟೈಮ್ಸ್ ಮತ್ತು ಇತರ ವೆಬ್ ತಾಣಗಳು ಪ್ರಕಟಿಸಿವೆ. ಇದೆ NCRB ಯು 2010ರಿಂದ 2014ರ ವರೆಗೆ ಒಟ್ಟು 8009 ರೈತರು ದಿನಕ್ಕೆ 4 ಜನರಂತೆ ಆತ್ಮಹತ್ಯೆಗೆ ಶರಣಾಗಿದ್ದರೆಂದು ವರದಿ ನೀಡಿದೆ.

ಆದರೆ ಯಾವುದೇ ಮುಖ್ಯವಾಹಿನಿ ಮಾಧ್ಯಮಕ್ಕೂ ಸಹ ಈ ನಾಲ್ಕು ವರ್ಷಗಳಲ್ಲಿ ದಿನಕ್ಕೆ 8 ಜನ ರೈತರು ಕೊಲೆಯಾಗುತ್ತಿರುವುದು ಕಂಡುಬಂದಿಲ್ಲ ಏಕೆ? ಇದು ಏಕೆ ಅವರಿಗೆ ಶಾಕಿಂಗ್ ಅನ್ನಿಸಲಿಲ್ಲ?

ಆದರೆ ಒಂದು ಪಕ್ಷಕ್ಕೆ ಸೇರಿದ ಇಬ್ಬರು ಗೂಂಡಾಗಳು ಬಹುಶಃ ಬೇರೆ ಪಕ್ಷಕ್ಕೆ ಸೇರಿದ ಗೂಂಡಾಗಳಿಂದ ಮೂಲತಃ ಚುನಾವಣಾ ವೈಷಮ್ಯದಿಂದ ಕೊಲೆಯಾದರೆ ಈ ಮಾಧ್ಯಮಗಳಿಗೆ ಶಾಕಿಂಗ್ ನ್ಯೂಸ್ ಆಗುತ್ತದೆ ಮತ್ತು ಅದನ್ನವರು ಮುಖಪುಟದಲ್ಲಿ ಪ್ರಕಟಿಸುತ್ತಾರೆ…

ಈ ನಡುವೆ ಘನತೆಯ ಜೀವನಕ್ಕಾಗಿ ಹೋರಾಟವನ್ನೇ ಮಾರ್ಗವಾಗಿಸಿಕೊಂಡವರು, ಯಾರು ಬಡತನದ ವಿರುದ್ಧ ಯುದ್ದ ಮಾಡುತ್ತಿದ್ದಾರೋ ಅವರು ವಿಷಯಗಳು ಯಾವುದೇ ಆಕ್ರೋಶವಿಲ್ಲದೆ ಹಿಂದಕ್ಕೆ ತಳ್ಳಲ್ಪಡುತ್ತಿವೆ.

ಬಡತನದ ಕಾರಣಕ್ಕೆ ಸ್ವಯಂ ಕೊಲೆಯಾಗಲ್ಪಡುತ್ತಿರುವ ಜನರ ನೋವಿಗೆ ಬದಲಾಗಿ ಯಾರೋ ಇಬ್ಬರು ಗೂಂಡಾಗಳು ಪರಸ್ಪರ ಕೊಲೆಯಾಗುತ್ತಿರುವುದೇ ನಮ್ಮನ್ನು ಹೆಚ್ಚು ಬಾಧಿಸುತ್ತಿರುವ ದೇಶದಲ್ಲಿ ನಾವು ವಾಸಿಸುತ್ತಿರುವುದು ನಮ್ಮ ದುರ್ಧೈವವೇ ಸರಿ.

– ದರ್ಶನ್ ಮಂಡ್ಕರ್ ಫೇಸ್ ಬುಕ್ ಪುಟದಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...