Homeಕರ್ನಾಟಕಜೈಲಿನಲ್ಲಿ ವಿಶೇಷ ಸೌಲಭ್ಯ: ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಎಸಿಪಿ ದೋಷಾರೋಪ ಪಟ್ಟಿ ಸಲ್ಲಿಕೆ

ಜೈಲಿನಲ್ಲಿ ವಿಶೇಷ ಸೌಲಭ್ಯ: ಶಶಿಕಲಾ, ಜೈಲು ಅಧಿಕಾರಿಗಳ ವಿರುದ್ಧ ಎಸಿಪಿ ದೋಷಾರೋಪ ಪಟ್ಟಿ ಸಲ್ಲಿಕೆ

- Advertisement -
- Advertisement -

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಆಪ್ತ ಸಹಾಯಕಿ ವಿ.ಕೆ.ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಪ್ರಕರಣದ ಮೊದಲನೇ ಆರೋಪಿ ಬೆಳಗಾವಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಮತ್ತು ಎರಡನೇ ಆರೋಪಿ ಕರ್ನಾಟಕ ಕಾರಾಗೃಹ ಅಕಾಡೆಮಿಯ ಉಪ ನಿರ್ದೇಶಕಿ ಡಾ. ಆರ್ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ.

ಪ್ರಕರಣದ ತನಿಖೆ ಪೂರ್ಣಗೊಳಿಸಿ, ವರದಿ ಸಲ್ಲಿಸಲು ವಿಧಿಸಲಾಗಿರುವ ಗಡುವು ವಿಸ್ತರಣೆಗೆ ಕೋರಿ ಎಸಿಬಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಚಾರಣಾ ನ್ಯಾಯಾಲಯಕ್ಕೆ 2022 ರ ಜನವರಿ 7ರಂದು ದೋಷಾರೋಪ ಪಟ್ಟಿ ಸಲ್ಲಿಸಿದ ಬಗ್ಗೆ ಎಸಿಬಿ ಪರ ವಕೀಲ ಪಿ.ಎನ್‌.ಮನಮೋಹನ್‌ ಅವರ ಹೇಳಿಕೆ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

“ಆರೋಪಿಗಳಾದ ಕೃಷ್ಣ ಕುಮಾರ್ ಮತ್ತು ಡಾ. ಆರ್.ಅನಿತಾ ಅವರು ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ್ದಾರೆ. ಮಹಿಳಾ ಕೈದಿಗಳ ವಿಭಾಗದ ಕಾರಿಡಾರ್‌ ಅನ್ನು ಬಳಸಿಕೊಳ್ಳಲು, ಇತರೆ ಕೈದಿಗಳಿಂದ ಸ್ವತಂತ್ರವಾಗಿ ವಾಸಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ಮಂಚ ಹಾಗೂ ಹಾಸಿಗೆ ವ್ಯವಸ್ಥೆ ಒದಗಿಸಿದ್ದಾರೆ. ಅವರ ಸಂದರ್ಶನಕ್ಕೆ ಬಂದವರಿಗೆ ಜೈಲು ಅಧಿಕಾರಿಗಳ ಕಚೇರಿಯಲ್ಲಿಯೇ, ಹೆಚ್ಚಿನ ಸಮಯಾವಕಾಶ ನೀಡಿ, ಅವಕಾಶ ಮಾಡಿಕೊಟ್ಟಿರುವ ಬಗ್ಗೆ ದೃಢಪಟ್ಟಿರುತ್ತದೆ. ಇವರ ವಿರುದ್ಧ ಐಪಿಸಿ ಕಲಂ 120(ಬಿ) ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ -1988ರ ಕಲಂ 13(1)(ಸಿ) ಅಡಿಯಲ್ಲಿ ವಿಚಾರಣೆ ನಡೆಸಲು ಪೂರ್ವಾನುಮತಿ ನೀಡಲಾಗಿದೆ” ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ಶಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಸಂಬಂಧ ಕಾರಾಗೃಹ ಡಿಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ಎಚ್.ಎನ್. ಸತ್ಯನಾರಾಯಣ ಅವರು ನಿರ್ದೋಷಿಯಾಗಿದ್ದಾರೆ ಎಂದು ಎಸಿಬಿ ತನ್ನ ವರದಿಯಲ್ಲಿ ತಿಳಿಸಿದೆ” ಎಂದು ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಶಶಿಕಲಾ, ಮತ್ತವರ ಸಂಬಂಧಿ ಇಳವರಸಿಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಜೈಲಿನ ಅಧಿಕಾರಿಗಳು 2 ಕೋಟಿ ರೂಪಾಯಿ ಲಂಚ ಪಡೆದ ಆರೋಪವಿತ್ತು. ಈ ಪ್ರಕರಣವನ್ನು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಏಕ ಸದಸ್ಯ ಸಮಿತಿ ವಿಚಾರಣೆ ನಡೆಸಿ ವರದಿ ಸಲ್ಲಿಸಿತ್ತು. ನಂತರ ಎಸಿಬಿ ಪ್ರಕರಣದ ತನಿಖೆ ನಡೆಸಿತು. ಎಸಿಬಿ ವಿಳಂಬ ಮಾಡುತ್ತಿರುವುದಾಗಿ ಆಕ್ಷೇಪಿಸಿ, ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್.ಗೀತಾ ಎಂಬುವರು ಹೈಕೋರ್ಟ್‌ಗೆ 2021ರ ಮಾರ್ಚ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದರು.

ಎರಡು ತಿಂಗಳಲ್ಲಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ 2021ರ ಜೂನ್‌ 11 ರಂದು ಹೈಕೋರ್ಟ್ ಎಸಿಬಿಗೆ ನಿರ್ದೇಶಿಸಿತ್ತು. ಹೈಕೋರ್ಟ್ ನೀಡಿದ್ದ ಗಡುವಿನಲ್ಲಿ ತನಿಖೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಎಸಿಬಿ ಮಧ್ಯಂತರ ಅರ್ಜಿ ಸಲ್ಲಿಸಿ, ಗಡುವು ವಿಸ್ತರಣೆಗೆ ಕೋರಿತ್ತು. 2017 ರಲ್ಲಿ ಅಕ್ರಮ ಆಸ್ತಿ ಗಳಿಗೆ ಪ್ರಕರಣದಡಿ ಜೈಲು ಸೇರಿದ್ದ ಶಶಿಕಲಾ ಹಾಗೂ ಇಳವರಸಿ 2021 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.

ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ: ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಿದ ಸರ್ಕಾರದ ಆದೇಶ ರದ್ದು ಕೋರಿ ಆರೋಪಿ ಡಾ.ಆರ್ ಅನಿತಾ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ನೇತೃತ್ವದ ಏಕ ಸದಸ್ಯ ಪೀಠ ಅನಿತಾ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.


ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...