Homeಮುಖಪುಟಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

- Advertisement -
- Advertisement -

“ಮೋದಿ ಸರ್ಕಾರವು ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ. ಅವರು ಭವಿಷ್ಯದ ಬಗ್ಗೆ ಭಯಪಡುತ್ತಾರೆ ಜೊತೆಗೆ ವರ್ತಮಾನವನ್ನೂ ನಂಬುವುದಿಲ್ಲ” ಎಂದು ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾಷಣ ದೇಶದಲ್ಲಿ ಹೆಚ್ಚು ಚರ್ಚೆಗೆ ಬಂದ ಒಂದು ದಿನದ ಬಳಿಕ ಸಂಸದೆ ಮಹುವಾ ಮೊಯಿತ್ರಾ ತಮ್ಮ ಭಾಷಣದಲ್ಲಿ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

80% ವರ್ಸಸ್‌ 20% ಜನರ ನಡುವಿನ ಯುದ್ಧವು ನಮ್ಮ ಗಣರಾಜ್ಯವನ್ನು ನಾಶಮಾಡುವ ಅಪಾಯಕ್ಕೆ ಈ ಸರ್ಕಾರ ದೂಡಿದೆ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ಸಂಸದೆಯ ಭಾಷಣ  ಐತಿಹಾಸಿಕ ರೈತರ ಆಂದೋಲನ, ಮುಸ್ಲಿಂ ಮಹಿಳೆಯರನ್ನು ಹರಾಜು ಹಾಕಿದ್ದ ‘ಬುಲ್ಲಿ ಡೀಲ್ಸ್’ ಅಪ್ಲಿಕೇಶನ್ ಮತ್ತು ಪೆಗಾಸಸ್ ಸ್ಪೈವೇರ್ ವಿವಾದಗಳನ್ನು ಒಳಗೊಂಡಿತ್ತು.

ನರೇಂದ್ರ ಮೋದಿ ಸರ್ಕಾರದಿಂದ ಕಳೆದ ಕೆಲವು ವರ್ಷಗಳಲ್ಲಿ ನಡೆದಿರುವ ಹಲವಾರು ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ಮಹುವಾ ಧ್ವನಿ ಎತ್ತಿದ್ದಾರೆ. ಭಾರತವು ಮಾನವ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 160 ದೇಶಗಳಲ್ಲಿ 17 ಸ್ಥಾನಗಳನ್ನು ಕುಸಿದು 111 ನೇ ಸ್ಥಾನಕ್ಕೆ ಬಂದಿರುವ ಬಗ್ಗೆ, ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 180 ದೇಶಗಳಲ್ಲಿ 142 ನೇ ಸ್ಥಾನದಲ್ಲಿರುವುದು, ದೇಶವು ಇಂದು ಪತ್ರಕರ್ತರಿಗೆ ಅತ್ಯಂತ ಅಪಾಯಕಾರಿ ಸ್ಥಳಗಳಲ್ಲಿ ಒಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

“ಸರ್ಕಾರವು ತನ್ನ ಸ್ವಂತ ನಾಗರಿಕರ ಮೇಲೆ ವರ್ಷಗಳ ಕಾಲ ಕಣ್ಣಿಡಲು ತಂತ್ರಜ್ಞಾನವನ್ನು ಖರೀದಿಸಲು ತೆರಿಗೆದಾರರ ಹಣವನ್ನು ಖರ್ಚು ಮಾಡಿದೆ. ಇವರ ಪ್ರಕಾರ ಹೇಳುವುದಾದರೆ, ನ್ಯೂಯಾರ್ಕ್ ಟೈಮ್ಸ್ ಸುಳ್ಳು ಹೇಳುತ್ತಿದೆ, ದಿ ವೈರ್ ಸುಳ್ಳು ಹೇಳುತ್ತಿದೆ, ಆಮ್ನೆಸ್ಟಿ ಸುಳ್ಳು ಹೇಳುತ್ತಿದೆ, ಫ್ರೆಂಚ್ ಸರ್ಕಾರ ಸುಳ್ಳು ಹೇಳುತ್ತಿದೆ, ಜರ್ಮನ್ ಸರ್ಕಾರ ಸುಳ್ಳು ಹೇಳುತ್ತಿದೆ, ಯುಎಸ್ ಸರ್ಕಾರ ಸುಳ್ಳು ಹೇಳುತ್ತಿದೆ, NSO ವಿರುದ್ಧ ಮೊಕದ್ದಮೆ ಹೂಡಿರುವ WhatsApp ಮತ್ತು Apple ಸುಳ್ಳು ಹೇಳುತ್ತಿದೆ. ಆದರೆ, ಈ ಸರ್ಕಾರ ಮಾತ್ರ ಪೆಗಾಸಸ್‌ನ ಸತ್ಯ ತಿಳಿದಿದೆ. ಈ ಸರ್ಕಾರ ಸುಪ್ರೀಂ ಕೋರ್ಟ್‌ನನ್ನೂ ದಾರಿ ತಪ್ಪಿಸಿದೆ” ಎಂದು ಕಿಡಿ ಕಾರಿದ್ದಾರೆ.

ಚುನಾವಣೆಗೆ ಮುನ್ನ ವಿರೋಧ ಪಕ್ಷದ ನಾಯಕರ ಮೇಲೆ ದಾಳಿಗಳು, ಹಿಂದೂ ಮೂಲಭೂತವಾದಿಗಳಿಂದ ಮುಸ್ಲಿಮರನ್ನು ಗುರಿಯಾಗಿಸುವುದು. ದೇಶದ 19 ಪಟ್ಟಣಗಳಲ್ಲಿ ಅದೇ ಗುಂಪುಗಳಿಂದ ಕ್ರಿಶ್ಚಿಯನ್ನರ ಮೇಲೆ ಇತ್ತೀಚಿಗೆ ನಡೆಸಿದ ದಾಳಿಗಳು. ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ನರಹತ್ಯೆಗೆ ಕರೆ. ಐಎಎಸ್ ಕೇಡರ್ ನಿಯಮಗಳನ್ನು ಬದಲಾಯಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹುವಾ ಭಾಷಣಕ್ಕೆ ಪ್ರತಿಕ್ರಿಯಿಸಿ ಸಂಸದೆ ರಮಾ ದೇವಿ, ದಯವಿಟ್ಟು ಮೃದುವಾಗಿ ಮಾತನಾಡಿ, ಕೋಪಗೊಳ್ಳಬೇಡಿ. ಒಳ್ಳೆಯ ರೀತಿಯಲ್ಲಿ ಹೇಳಿ (ಮಹುವಾ ಜೀ, ಥೋಡಾ ಸಾ ಪ್ರೇಮ್ ಸೆ ಬೋಲಿಯೇ. ಇತ್ನಾ ಗುಸ್ಸಾ ಮತ್ ಕರಿಯಾ. ಆಚೆ ಸೆ ಬೋಲಿಯೇ) ಎಂದಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದೆ ,”ನಾನು ಕೋಪ ಅಥವಾ ಪ್ರೀತಿಯಿಂದ ಮಾತನಾಡಬೇಕು ಎಂದು ನನಗೆ ಉಪನ್ಯಾಸ ನೀಡಲು, ನನಗೆ ಅಡ್ಡಿಪಡಿಸಲು ಅಧ್ಯಕ್ಷರು ಯಾರು..? ಇದಕ್ಕೂ ನಿಮಗೂ ಸಂಬಂಧವಿಲ್ಲ. ನೀವು ಲೋಕಸಭೆಯ ನೈತಿಕ ವಿಜ್ಞಾನ ಶಿಕ್ಷಕರಲ್ಲ” ಎಂದು ಹರಿಹಾಯ್ದಿದ್ದಾರೆ.

ಇನ್ನು ಸಂಸದೆಯ ಭಾಷಣ ಮಧ್ಯದಲ್ಲಿರುವಾಗಲೇ ಲೋಕಸಭೆಯ ಅಧ್ಯಕ್ಷೆ, ಬಿಜೆಪಿ ಸಂಸದೆ ರಮಾ ದೇವಿ ನಿಗದಿತ ಸಮಯಕ್ಕಿಂತ ಮುಂಚೆಯೇ ಭಾಷಣವನ್ನು ಹಠಾತ್ ಆಗಿ ಮೊಟಕುಗೊಳಿಸಿದ್ದಾರೆ. ಇದರಿಂದ ಕೋಪಗೊಂಡ ಮಹುವಾ ಮೊಯಿತ್ರಾ ಲೋಕಸಭೆಯ ಹೊರಗೆ ಮಾಧ್ಯಮಗಳ ಮುಂದೆ ಭಾಷಣ ಮಾಡಿ, ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...