Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ, ರಾಜ್ಯದ ವಯೋವೃದ್ದನೋರ್ವ ‘ಛೀಮಾರಿ’ ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 14 ಸೆಕೆಂಡಿನ ಈ ವಿಡಿಯೊದಲ್ಲಿ ಅಖಿಲೇಶ್‌ ಯಾದವ್‌ ಅವರು ಕಾಣಿಸಿಕೊಂಡಿದ್ದು, ವಯಸ್ಸಾದ ವ್ಯಕ್ತಿಯೊಬ್ಬರು ಅವರ ಜೊತೆಗೆ ಮಾತನಾಡುವುದು ಕೇಳಿಸುತ್ತದೆ.

ಹಿಂದಿ ಹಾಗೂ ಕನ್ನಡ ಸಂದೇಶದೊಂದಿಗೆ ಈ ವಿಡಿಯೊ ವೈರಲ್‌ ಆಗಿದೆ. “ನೀನು ಹೋಗು, ಮಸೀದಿ ಕಟ್ಟಿಸು, ಇಡೀ ಪ್ರದೇಶದಿಂದ ನಿನಗೆ ಒಂದು ಮತವನ್ನೂ ನಾವು ಕೊಡುವುದಿಲ್ಲ” ಎಂದು ವೃದ್ದ ವ್ಯಕ್ತಿ ಅಖಿಲೇಶ್ ಯಾದವ್‌ ಅವರಿಗೆ ಹೇಳಿದ್ದಾರೆ ಎಂದು ಕನ್ನಡದಲ್ಲಿ ವೈರಲ್ ಆಗಿದೆ. ಈ ವೈರಲ್ ಪೋಸ್ಟ್‌ “ಅಖಿಲೇಶ್‌ ಯಾದವ್‌ಗೆ ಮಂಗಳಾರತಿ” ಮಾಡಲಾಗಿದೆ ಎಂದು ಪ್ರತಿಪಾದಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ವಿಡಿಯೊವನ್ನು ಬಿಜೆಪಿ ಬೆಂಬಲಿಗ ಸಂತೋಷ್‌ ಕೆಂಚಾಂಬ ಎಂಬ ವ್ಯಕ್ತಿ ಸೇರಿದಂತೆ, ಇನ್ನೂ ಹಲವಾರು ಜನರು ಹಂಚಿಕೊಂಡಿದ್ದಾರೆ. ಈ ಮೂಲಕ ಈ ವಿಡಿಯೊವನ್ನು ಸಾವಿರಾರು ಜನರು ಹಂಚಿಕೊಂಡಿದ್ದಾರೆ ಮತ್ತು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಟ್ವಿಟರ್‌ನಲ್ಲೂ ಈ ವಿಡಿಯೊ ಅದೇ ಪ್ರತಿಪಾದನೆಯೊಂದಿಗೆ ಕನ್ನಡ ಸಂದೇಶದೊಂದಿಗೆ ಹಂಚಿಕೊಂಡಿರುವುದನ್ನು ಇಲ್ಲಿ ನೋಡಬಹುದು.

ಇಷ್ಟೇ ಅಲ್ಲದೆ ಹಿಂದಿ ಭಾಷೆಯಲ್ಲೂ ಈ ವಿಡಿಯೊ ವೈರಲ್ ಆಗಿದೆ. ದೆಹಲಿ ಬಿಜೆಪಿಯ ಉಪಾಧ್ಯಕ್ಷ ಸುನಿಲ್ ಯಾದವ್‌ ಅವರು, “ವಯೋವೃದ್ಧ ವ್ಯಕ್ತಿ ಅಖಿಲೇಶ್ ಯಾದವ್ ಅವರಿಗೆ ವೋಟ್ ಇಲ್ಲ, ವೋಟ್ ಇಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ” ಎಂಬ ಪ್ರತಿಪಾದನೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ವೈರಲ್ ಆಗಿರುವಂತೆಯೇ ಹಿಂದಿಯಲ್ಲಿ ಕೂಡಾ, “ನೀವು ಮಸೀದಿ ಮಾಡಲು ಹೋಗುತ್ತೀರಿ, ಇಡೀ ಪ್ರದೇಶದ ಯಾರೂ ನಿಮಗೆ ಮತ ನೀಡುವುದಿಲ್ಲ” ಎಂದು ವಯೋವೃದ್ದ ವ್ಯಕ್ತಿ ಅಖಿಲೇಶ್‌ಗೆ ಛೀಮಾರಿ ಹಾಕಿದ್ದಾರೆ ಎಂದು ವೈರಲ್ ಆಗಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಟ್ವಿಟರ್‌ನಲ್ಲಿ ಹಲವು ಜನರು ಹಂಚಿಕೊಂಡಿದ್ದಾರೆ. ಜೊತೆಗೆ ಫೇಸ್‌ಬುಕ್‌ ಅಲ್ಲೂ ಈ ವಿಡಿಯೊ ವೈರಲ್ ಆಗಿದೆ. ಅದಲ್ಲಿ ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್

ಒಟ್ಟಿನಲ್ಲಿ ನೋಡುವುದಾದರೆ, ‘ಅಖಿಲೇಶ್ ಯಾದವ್‌ ಅವರಿಗೆ ಯುಪಿಯಲ್ಲಿ ವೃದ್ದರೊಬ್ಬರು ಛೀಮಾರಿ ಹಾಕಿದ್ದಾರೆ’ ಎಂಬ ಪ್ರತಿಪಾದನೆಯೊಂದಿಗೆ 14 ಸೆಕೆಂಡಿನ ಈ ವಿಡಿಯೊವನ್ನು ವೈರಲ್ ಮಾಡಿರುವವರಲ್ಲಿ ಹೆಚ್ಚಿನ ಜನರು ಬಿಜೆಪಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ನಾನುಗೌರಿ.ಕಾಂ ಈ ವಿಡಿಯೊದ ಸ್ಕ್ರೀನ್‌ ಶಾರ್ಟ್ ಬಳಿಸಿ ರಿವರ್ಸ್ ಸರ್ಚ್ ಮಾಡಿದಾಗ, ವೈರಲ್ ವಿಡಿಯೊದ ಧೀರ್ಘ ವಿಡಿಯೊ ಲಭ್ಯವಾಗಿದೆ. ಈ ವಿಡಿಯೊ 1:04 ಸೆಕೆಂಡ್‌ ಇದೆ.

ಈ ವಿಡಿಯೊ, ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಅಖಿಲೇಶ್‌ ಯಾದವ್ ಮನೆ ಮನೆ ಪ್ರಚಾರದ ಸಮಯದಲ್ಲಿ ಮಾಡಿರುವ ವಿಡಿಯೊ ಎಂದು ತೋರುತ್ತಿದೆ. ಆದರೆ ಈ ವಿಡಿಯೊ ಯಾವಾಗ ರೆಕಾರ್ಡ್ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಅವರು ಮಾತನಾಡುತ್ತಾ ಇರುವ ಸಂಧರ್ಭದಲ್ಲಿ ಹಲವಾರು ಜನರು ಅವರ ಸುತ್ತುವರೆದು ಮಾತನಾಡುತ್ತಿದ್ದಾರೆ.

ಅಖಿಲೇಶ್ ಯಾದವ್ ಅವರು ಅಲ್ಲಿ ನೆರೆದಿರುವ ಜನರೊಂದಿಗೆ ಮಾತನಾಡುತ್ತಾ, “ಜನರು ಏನು ಯೋಚಿಸುತ್ತಿದ್ದಾರೆ” ಎಂದು ಪ್ರಶ್ನಿಸುತ್ತಾರೆ. ಜೊತೆಗೆ, ಜನರು ಚೆನ್ನಾಗಿದ್ದಾರೆಯೆ? ರಸ್ತೆ ಮತ್ತು ಹೆದ್ದಾರಿ ಚೆನ್ನಾಗಿದೆಯೆ ಎಂದು ಕೇಳುತ್ತಾರೆ.

ಈ ವೇಳೆ ವಯೋವೃದ್ದಎಂದು ತೋರುವ ವ್ಯಕ್ತಿಯೊಬ್ಬರು, “ಮಗನೇ, ಮೊದಲು ಮಿಷಿನ್(EVM) ಅನ್ನು ಸುಟ್ಟು ಹಾಕು” ಎಂದು ಹೇಳುತ್ತಾರೆ. ವಿಡಿಯೊದಲ್ಲಿ ವ್ಯಕ್ತಿ ಕಾಣಿಸುವುದಿಲ್ಲ. ಕೇವಲ ಕೈಗಳಷ್ಟೇ ಕಾಣುತ್ತದೆ.

ಈ ಸಮಯದಲ್ಲಿ ಅಖಿಲೇಶ್ ಯಾದವ್ ಅವರು, “ಈ ಹಿಂದೆ ಅವರು ಚುನಾವಣಾ ಬೂತ್‌ಗಳನ್ನು ಗಲಾಟೆ ಮಾಡಿ ವಶಕ್ಕೆ ಪಡೆಯುತ್ತಿದ್ದರು. ಈಗ ಬಿಜೆಪಿಯವರು ಅದನ್ನು ಬೇರೆಯೆ ರೀತಿಯಲ್ಲಿ ತಂತ್ರಪೂರ್ವಕವಾಗಿ ಮಾಡುತ್ತಿದ್ದಾರೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಇದರ ನಂತರ ಅಖಿಲೇಶ್‌ ಅವರನ್ನು ಉದ್ದೇಶಿಸಿ ಮತ್ತೇ ಮಾತನಾಡುವ ವಯೋವೃದ್ಧ, “ನಾನು ನಿಮಗೆ ಹೇಳುತ್ತಿದ್ದೇನೆ. ಇಲ್ಲಿ ಒಂದು ಓಟು ಕೂಡಾ ಇಲ್ಲ, ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದು ಹೇಳುತ್ತಾರೆ.

ಈ ವೇಳೆ ಅಖಿಲೇಶ್‌ ಯಾದವ್‌, “ಇದು ನಿಜವೇ” ಎಂದು ಕೇಳುತ್ತಾರೆ. ಅದಕ್ಕೆ ವಯೋವೃದ್ದ , “ಮಿಷಿನ್(EVM) ಬದಲಾಯಿಸಿ, ಒಂದೇ ಬಾರಿಗೆ ಎಲ್ಲಾ ಓಟುಗಳೂ ಬರುತ್ತದೆ” ಎಂದು ಹೇಳುತ್ತಾರೆ. ಇದರ ನಂತರ ವೃದ್ದ, ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಅಶ್ಲೀಲ ಪದ ಉಲ್ಲೇಖಿಸುವಾಗ ಅಖಿಲೇಶ್‌ ಯಾದವ್‌ ಅವರು ಬಾಯಿಗೆ ಬೆರಳಿಟ್ಟು, ಹಾಗೆ ಹೇಳಬೇಡಿ ಎಂದು ಸೂಚಿಸುತ್ತಾರೆ.

ಪೂರ್ಣ ವಿಡಿಯೊ ನೋಡಿ

ವಾಸ್ತವದಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ವಿಡಿಯೊ 14 ಸೆಕೆಂಡ್‌ ಇದೆ. ಅದು ಅಸ್ಪಷ್ಟವಾಗಿದೆ. ಅದರಲ್ಲಿ ವಯೋವೃದ್ದ ಮಾತನಾಡುವುದು, “ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದಾಗಿದೆ.

ಬಿಜೆಪಿ ಬೆಂಬಲಿಗರು ಪ್ರತಿಪಾದಿಸಿದಂತೆ, ವಯೋವೃದ್ದ ವ್ಯಕ್ತಿಯು ಈ ಇಡೀ ಸಂಭಾಷಣೆಯಲ್ಲಿ, ಮಸೀದಿಯ ಬಗ್ಗೆಯಾಗಲಿ, ನಿಮಗೆ ಓಟು ನೀಡುವುದಿಲ್ಲ ಎಂದಾಗಲಿ ಅಥವಾ ನಿಮ್ಮ ಸರ್ಕಾರ ಬರುವುದಿಲ್ಲ ಎಂದಾಗಲಿ ಹೇಳುವುದಿಲ್ಲ.

ಒಟ್ಟಿನಲ್ಲಿ ಹೇಳಬಹುದಾದರೆ, ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಸಮಯದಲ್ಲಿ ಅಖಿಲೇಶ್ ಯಾದವ್‌ ಅವರಿಗೆ ವಿಡಿಯೊದಲ್ಲಿನ ವಯೋವೃದ್ದ ಛೀಮಾರಿ ಹಾಕಿಲ್ಲ. ಅವರು ಮಾತನಾಡಿದ್ದು ‘EVM’ ಮಿಷಿನ್ ಬಗ್ಗೆಯಾಗಿದ್ದು, ಅದನ್ನು ಬದಲಾಯಿಸಿ ಎಂದು ಅಖಿಲೇಶ್ ಜೊತೆಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...