Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ, ರಾಜ್ಯದ ವಯೋವೃದ್ದನೋರ್ವ ‘ಛೀಮಾರಿ’ ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 14 ಸೆಕೆಂಡಿನ ಈ ವಿಡಿಯೊದಲ್ಲಿ ಅಖಿಲೇಶ್‌ ಯಾದವ್‌ ಅವರು ಕಾಣಿಸಿಕೊಂಡಿದ್ದು, ವಯಸ್ಸಾದ ವ್ಯಕ್ತಿಯೊಬ್ಬರು ಅವರ ಜೊತೆಗೆ ಮಾತನಾಡುವುದು ಕೇಳಿಸುತ್ತದೆ.

ಹಿಂದಿ ಹಾಗೂ ಕನ್ನಡ ಸಂದೇಶದೊಂದಿಗೆ ಈ ವಿಡಿಯೊ ವೈರಲ್‌ ಆಗಿದೆ. “ನೀನು ಹೋಗು, ಮಸೀದಿ ಕಟ್ಟಿಸು, ಇಡೀ ಪ್ರದೇಶದಿಂದ ನಿನಗೆ ಒಂದು ಮತವನ್ನೂ ನಾವು ಕೊಡುವುದಿಲ್ಲ” ಎಂದು ವೃದ್ದ ವ್ಯಕ್ತಿ ಅಖಿಲೇಶ್ ಯಾದವ್‌ ಅವರಿಗೆ ಹೇಳಿದ್ದಾರೆ ಎಂದು ಕನ್ನಡದಲ್ಲಿ ವೈರಲ್ ಆಗಿದೆ. ಈ ವೈರಲ್ ಪೋಸ್ಟ್‌ “ಅಖಿಲೇಶ್‌ ಯಾದವ್‌ಗೆ ಮಂಗಳಾರತಿ” ಮಾಡಲಾಗಿದೆ ಎಂದು ಪ್ರತಿಪಾದಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ವಿಡಿಯೊವನ್ನು ಬಿಜೆಪಿ ಬೆಂಬಲಿಗ ಸಂತೋಷ್‌ ಕೆಂಚಾಂಬ ಎಂಬ ವ್ಯಕ್ತಿ ಸೇರಿದಂತೆ, ಇನ್ನೂ ಹಲವಾರು ಜನರು ಹಂಚಿಕೊಂಡಿದ್ದಾರೆ. ಈ ಮೂಲಕ ಈ ವಿಡಿಯೊವನ್ನು ಸಾವಿರಾರು ಜನರು ಹಂಚಿಕೊಂಡಿದ್ದಾರೆ ಮತ್ತು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಟ್ವಿಟರ್‌ನಲ್ಲೂ ಈ ವಿಡಿಯೊ ಅದೇ ಪ್ರತಿಪಾದನೆಯೊಂದಿಗೆ ಕನ್ನಡ ಸಂದೇಶದೊಂದಿಗೆ ಹಂಚಿಕೊಂಡಿರುವುದನ್ನು ಇಲ್ಲಿ ನೋಡಬಹುದು.

ಇಷ್ಟೇ ಅಲ್ಲದೆ ಹಿಂದಿ ಭಾಷೆಯಲ್ಲೂ ಈ ವಿಡಿಯೊ ವೈರಲ್ ಆಗಿದೆ. ದೆಹಲಿ ಬಿಜೆಪಿಯ ಉಪಾಧ್ಯಕ್ಷ ಸುನಿಲ್ ಯಾದವ್‌ ಅವರು, “ವಯೋವೃದ್ಧ ವ್ಯಕ್ತಿ ಅಖಿಲೇಶ್ ಯಾದವ್ ಅವರಿಗೆ ವೋಟ್ ಇಲ್ಲ, ವೋಟ್ ಇಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ” ಎಂಬ ಪ್ರತಿಪಾದನೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ವೈರಲ್ ಆಗಿರುವಂತೆಯೇ ಹಿಂದಿಯಲ್ಲಿ ಕೂಡಾ, “ನೀವು ಮಸೀದಿ ಮಾಡಲು ಹೋಗುತ್ತೀರಿ, ಇಡೀ ಪ್ರದೇಶದ ಯಾರೂ ನಿಮಗೆ ಮತ ನೀಡುವುದಿಲ್ಲ” ಎಂದು ವಯೋವೃದ್ದ ವ್ಯಕ್ತಿ ಅಖಿಲೇಶ್‌ಗೆ ಛೀಮಾರಿ ಹಾಕಿದ್ದಾರೆ ಎಂದು ವೈರಲ್ ಆಗಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಟ್ವಿಟರ್‌ನಲ್ಲಿ ಹಲವು ಜನರು ಹಂಚಿಕೊಂಡಿದ್ದಾರೆ. ಜೊತೆಗೆ ಫೇಸ್‌ಬುಕ್‌ ಅಲ್ಲೂ ಈ ವಿಡಿಯೊ ವೈರಲ್ ಆಗಿದೆ. ಅದಲ್ಲಿ ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್

ಒಟ್ಟಿನಲ್ಲಿ ನೋಡುವುದಾದರೆ, ‘ಅಖಿಲೇಶ್ ಯಾದವ್‌ ಅವರಿಗೆ ಯುಪಿಯಲ್ಲಿ ವೃದ್ದರೊಬ್ಬರು ಛೀಮಾರಿ ಹಾಕಿದ್ದಾರೆ’ ಎಂಬ ಪ್ರತಿಪಾದನೆಯೊಂದಿಗೆ 14 ಸೆಕೆಂಡಿನ ಈ ವಿಡಿಯೊವನ್ನು ವೈರಲ್ ಮಾಡಿರುವವರಲ್ಲಿ ಹೆಚ್ಚಿನ ಜನರು ಬಿಜೆಪಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ನಾನುಗೌರಿ.ಕಾಂ ಈ ವಿಡಿಯೊದ ಸ್ಕ್ರೀನ್‌ ಶಾರ್ಟ್ ಬಳಿಸಿ ರಿವರ್ಸ್ ಸರ್ಚ್ ಮಾಡಿದಾಗ, ವೈರಲ್ ವಿಡಿಯೊದ ಧೀರ್ಘ ವಿಡಿಯೊ ಲಭ್ಯವಾಗಿದೆ. ಈ ವಿಡಿಯೊ 1:04 ಸೆಕೆಂಡ್‌ ಇದೆ.

ಈ ವಿಡಿಯೊ, ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಅಖಿಲೇಶ್‌ ಯಾದವ್ ಮನೆ ಮನೆ ಪ್ರಚಾರದ ಸಮಯದಲ್ಲಿ ಮಾಡಿರುವ ವಿಡಿಯೊ ಎಂದು ತೋರುತ್ತಿದೆ. ಆದರೆ ಈ ವಿಡಿಯೊ ಯಾವಾಗ ರೆಕಾರ್ಡ್ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಅವರು ಮಾತನಾಡುತ್ತಾ ಇರುವ ಸಂಧರ್ಭದಲ್ಲಿ ಹಲವಾರು ಜನರು ಅವರ ಸುತ್ತುವರೆದು ಮಾತನಾಡುತ್ತಿದ್ದಾರೆ.

ಅಖಿಲೇಶ್ ಯಾದವ್ ಅವರು ಅಲ್ಲಿ ನೆರೆದಿರುವ ಜನರೊಂದಿಗೆ ಮಾತನಾಡುತ್ತಾ, “ಜನರು ಏನು ಯೋಚಿಸುತ್ತಿದ್ದಾರೆ” ಎಂದು ಪ್ರಶ್ನಿಸುತ್ತಾರೆ. ಜೊತೆಗೆ, ಜನರು ಚೆನ್ನಾಗಿದ್ದಾರೆಯೆ? ರಸ್ತೆ ಮತ್ತು ಹೆದ್ದಾರಿ ಚೆನ್ನಾಗಿದೆಯೆ ಎಂದು ಕೇಳುತ್ತಾರೆ.

ಈ ವೇಳೆ ವಯೋವೃದ್ದಎಂದು ತೋರುವ ವ್ಯಕ್ತಿಯೊಬ್ಬರು, “ಮಗನೇ, ಮೊದಲು ಮಿಷಿನ್(EVM) ಅನ್ನು ಸುಟ್ಟು ಹಾಕು” ಎಂದು ಹೇಳುತ್ತಾರೆ. ವಿಡಿಯೊದಲ್ಲಿ ವ್ಯಕ್ತಿ ಕಾಣಿಸುವುದಿಲ್ಲ. ಕೇವಲ ಕೈಗಳಷ್ಟೇ ಕಾಣುತ್ತದೆ.

ಈ ಸಮಯದಲ್ಲಿ ಅಖಿಲೇಶ್ ಯಾದವ್ ಅವರು, “ಈ ಹಿಂದೆ ಅವರು ಚುನಾವಣಾ ಬೂತ್‌ಗಳನ್ನು ಗಲಾಟೆ ಮಾಡಿ ವಶಕ್ಕೆ ಪಡೆಯುತ್ತಿದ್ದರು. ಈಗ ಬಿಜೆಪಿಯವರು ಅದನ್ನು ಬೇರೆಯೆ ರೀತಿಯಲ್ಲಿ ತಂತ್ರಪೂರ್ವಕವಾಗಿ ಮಾಡುತ್ತಿದ್ದಾರೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಇದರ ನಂತರ ಅಖಿಲೇಶ್‌ ಅವರನ್ನು ಉದ್ದೇಶಿಸಿ ಮತ್ತೇ ಮಾತನಾಡುವ ವಯೋವೃದ್ಧ, “ನಾನು ನಿಮಗೆ ಹೇಳುತ್ತಿದ್ದೇನೆ. ಇಲ್ಲಿ ಒಂದು ಓಟು ಕೂಡಾ ಇಲ್ಲ, ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದು ಹೇಳುತ್ತಾರೆ.

ಈ ವೇಳೆ ಅಖಿಲೇಶ್‌ ಯಾದವ್‌, “ಇದು ನಿಜವೇ” ಎಂದು ಕೇಳುತ್ತಾರೆ. ಅದಕ್ಕೆ ವಯೋವೃದ್ದ , “ಮಿಷಿನ್(EVM) ಬದಲಾಯಿಸಿ, ಒಂದೇ ಬಾರಿಗೆ ಎಲ್ಲಾ ಓಟುಗಳೂ ಬರುತ್ತದೆ” ಎಂದು ಹೇಳುತ್ತಾರೆ. ಇದರ ನಂತರ ವೃದ್ದ, ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಅಶ್ಲೀಲ ಪದ ಉಲ್ಲೇಖಿಸುವಾಗ ಅಖಿಲೇಶ್‌ ಯಾದವ್‌ ಅವರು ಬಾಯಿಗೆ ಬೆರಳಿಟ್ಟು, ಹಾಗೆ ಹೇಳಬೇಡಿ ಎಂದು ಸೂಚಿಸುತ್ತಾರೆ.

ಪೂರ್ಣ ವಿಡಿಯೊ ನೋಡಿ

ವಾಸ್ತವದಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ವಿಡಿಯೊ 14 ಸೆಕೆಂಡ್‌ ಇದೆ. ಅದು ಅಸ್ಪಷ್ಟವಾಗಿದೆ. ಅದರಲ್ಲಿ ವಯೋವೃದ್ದ ಮಾತನಾಡುವುದು, “ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದಾಗಿದೆ.

ಬಿಜೆಪಿ ಬೆಂಬಲಿಗರು ಪ್ರತಿಪಾದಿಸಿದಂತೆ, ವಯೋವೃದ್ದ ವ್ಯಕ್ತಿಯು ಈ ಇಡೀ ಸಂಭಾಷಣೆಯಲ್ಲಿ, ಮಸೀದಿಯ ಬಗ್ಗೆಯಾಗಲಿ, ನಿಮಗೆ ಓಟು ನೀಡುವುದಿಲ್ಲ ಎಂದಾಗಲಿ ಅಥವಾ ನಿಮ್ಮ ಸರ್ಕಾರ ಬರುವುದಿಲ್ಲ ಎಂದಾಗಲಿ ಹೇಳುವುದಿಲ್ಲ.

ಒಟ್ಟಿನಲ್ಲಿ ಹೇಳಬಹುದಾದರೆ, ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಸಮಯದಲ್ಲಿ ಅಖಿಲೇಶ್ ಯಾದವ್‌ ಅವರಿಗೆ ವಿಡಿಯೊದಲ್ಲಿನ ವಯೋವೃದ್ದ ಛೀಮಾರಿ ಹಾಕಿಲ್ಲ. ಅವರು ಮಾತನಾಡಿದ್ದು ‘EVM’ ಮಿಷಿನ್ ಬಗ್ಗೆಯಾಗಿದ್ದು, ಅದನ್ನು ಬದಲಾಯಿಸಿ ಎಂದು ಅಖಿಲೇಶ್ ಜೊತೆಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...