Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ, ರಾಜ್ಯದ ವಯೋವೃದ್ದನೋರ್ವ ‘ಛೀಮಾರಿ’ ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 14 ಸೆಕೆಂಡಿನ ಈ ವಿಡಿಯೊದಲ್ಲಿ ಅಖಿಲೇಶ್‌ ಯಾದವ್‌ ಅವರು ಕಾಣಿಸಿಕೊಂಡಿದ್ದು, ವಯಸ್ಸಾದ ವ್ಯಕ್ತಿಯೊಬ್ಬರು ಅವರ ಜೊತೆಗೆ ಮಾತನಾಡುವುದು ಕೇಳಿಸುತ್ತದೆ.

ಹಿಂದಿ ಹಾಗೂ ಕನ್ನಡ ಸಂದೇಶದೊಂದಿಗೆ ಈ ವಿಡಿಯೊ ವೈರಲ್‌ ಆಗಿದೆ. “ನೀನು ಹೋಗು, ಮಸೀದಿ ಕಟ್ಟಿಸು, ಇಡೀ ಪ್ರದೇಶದಿಂದ ನಿನಗೆ ಒಂದು ಮತವನ್ನೂ ನಾವು ಕೊಡುವುದಿಲ್ಲ” ಎಂದು ವೃದ್ದ ವ್ಯಕ್ತಿ ಅಖಿಲೇಶ್ ಯಾದವ್‌ ಅವರಿಗೆ ಹೇಳಿದ್ದಾರೆ ಎಂದು ಕನ್ನಡದಲ್ಲಿ ವೈರಲ್ ಆಗಿದೆ. ಈ ವೈರಲ್ ಪೋಸ್ಟ್‌ “ಅಖಿಲೇಶ್‌ ಯಾದವ್‌ಗೆ ಮಂಗಳಾರತಿ” ಮಾಡಲಾಗಿದೆ ಎಂದು ಪ್ರತಿಪಾದಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ವಿಡಿಯೊವನ್ನು ಬಿಜೆಪಿ ಬೆಂಬಲಿಗ ಸಂತೋಷ್‌ ಕೆಂಚಾಂಬ ಎಂಬ ವ್ಯಕ್ತಿ ಸೇರಿದಂತೆ, ಇನ್ನೂ ಹಲವಾರು ಜನರು ಹಂಚಿಕೊಂಡಿದ್ದಾರೆ. ಈ ಮೂಲಕ ಈ ವಿಡಿಯೊವನ್ನು ಸಾವಿರಾರು ಜನರು ಹಂಚಿಕೊಂಡಿದ್ದಾರೆ ಮತ್ತು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಟ್ವಿಟರ್‌ನಲ್ಲೂ ಈ ವಿಡಿಯೊ ಅದೇ ಪ್ರತಿಪಾದನೆಯೊಂದಿಗೆ ಕನ್ನಡ ಸಂದೇಶದೊಂದಿಗೆ ಹಂಚಿಕೊಂಡಿರುವುದನ್ನು ಇಲ್ಲಿ ನೋಡಬಹುದು.

ಇಷ್ಟೇ ಅಲ್ಲದೆ ಹಿಂದಿ ಭಾಷೆಯಲ್ಲೂ ಈ ವಿಡಿಯೊ ವೈರಲ್ ಆಗಿದೆ. ದೆಹಲಿ ಬಿಜೆಪಿಯ ಉಪಾಧ್ಯಕ್ಷ ಸುನಿಲ್ ಯಾದವ್‌ ಅವರು, “ವಯೋವೃದ್ಧ ವ್ಯಕ್ತಿ ಅಖಿಲೇಶ್ ಯಾದವ್ ಅವರಿಗೆ ವೋಟ್ ಇಲ್ಲ, ವೋಟ್ ಇಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ” ಎಂಬ ಪ್ರತಿಪಾದನೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ವೈರಲ್ ಆಗಿರುವಂತೆಯೇ ಹಿಂದಿಯಲ್ಲಿ ಕೂಡಾ, “ನೀವು ಮಸೀದಿ ಮಾಡಲು ಹೋಗುತ್ತೀರಿ, ಇಡೀ ಪ್ರದೇಶದ ಯಾರೂ ನಿಮಗೆ ಮತ ನೀಡುವುದಿಲ್ಲ” ಎಂದು ವಯೋವೃದ್ದ ವ್ಯಕ್ತಿ ಅಖಿಲೇಶ್‌ಗೆ ಛೀಮಾರಿ ಹಾಕಿದ್ದಾರೆ ಎಂದು ವೈರಲ್ ಆಗಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಟ್ವಿಟರ್‌ನಲ್ಲಿ ಹಲವು ಜನರು ಹಂಚಿಕೊಂಡಿದ್ದಾರೆ. ಜೊತೆಗೆ ಫೇಸ್‌ಬುಕ್‌ ಅಲ್ಲೂ ಈ ವಿಡಿಯೊ ವೈರಲ್ ಆಗಿದೆ. ಅದಲ್ಲಿ ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್

ಒಟ್ಟಿನಲ್ಲಿ ನೋಡುವುದಾದರೆ, ‘ಅಖಿಲೇಶ್ ಯಾದವ್‌ ಅವರಿಗೆ ಯುಪಿಯಲ್ಲಿ ವೃದ್ದರೊಬ್ಬರು ಛೀಮಾರಿ ಹಾಕಿದ್ದಾರೆ’ ಎಂಬ ಪ್ರತಿಪಾದನೆಯೊಂದಿಗೆ 14 ಸೆಕೆಂಡಿನ ಈ ವಿಡಿಯೊವನ್ನು ವೈರಲ್ ಮಾಡಿರುವವರಲ್ಲಿ ಹೆಚ್ಚಿನ ಜನರು ಬಿಜೆಪಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ನಾನುಗೌರಿ.ಕಾಂ ಈ ವಿಡಿಯೊದ ಸ್ಕ್ರೀನ್‌ ಶಾರ್ಟ್ ಬಳಿಸಿ ರಿವರ್ಸ್ ಸರ್ಚ್ ಮಾಡಿದಾಗ, ವೈರಲ್ ವಿಡಿಯೊದ ಧೀರ್ಘ ವಿಡಿಯೊ ಲಭ್ಯವಾಗಿದೆ. ಈ ವಿಡಿಯೊ 1:04 ಸೆಕೆಂಡ್‌ ಇದೆ.

ಈ ವಿಡಿಯೊ, ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಅಖಿಲೇಶ್‌ ಯಾದವ್ ಮನೆ ಮನೆ ಪ್ರಚಾರದ ಸಮಯದಲ್ಲಿ ಮಾಡಿರುವ ವಿಡಿಯೊ ಎಂದು ತೋರುತ್ತಿದೆ. ಆದರೆ ಈ ವಿಡಿಯೊ ಯಾವಾಗ ರೆಕಾರ್ಡ್ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಅವರು ಮಾತನಾಡುತ್ತಾ ಇರುವ ಸಂಧರ್ಭದಲ್ಲಿ ಹಲವಾರು ಜನರು ಅವರ ಸುತ್ತುವರೆದು ಮಾತನಾಡುತ್ತಿದ್ದಾರೆ.

ಅಖಿಲೇಶ್ ಯಾದವ್ ಅವರು ಅಲ್ಲಿ ನೆರೆದಿರುವ ಜನರೊಂದಿಗೆ ಮಾತನಾಡುತ್ತಾ, “ಜನರು ಏನು ಯೋಚಿಸುತ್ತಿದ್ದಾರೆ” ಎಂದು ಪ್ರಶ್ನಿಸುತ್ತಾರೆ. ಜೊತೆಗೆ, ಜನರು ಚೆನ್ನಾಗಿದ್ದಾರೆಯೆ? ರಸ್ತೆ ಮತ್ತು ಹೆದ್ದಾರಿ ಚೆನ್ನಾಗಿದೆಯೆ ಎಂದು ಕೇಳುತ್ತಾರೆ.

ಈ ವೇಳೆ ವಯೋವೃದ್ದಎಂದು ತೋರುವ ವ್ಯಕ್ತಿಯೊಬ್ಬರು, “ಮಗನೇ, ಮೊದಲು ಮಿಷಿನ್(EVM) ಅನ್ನು ಸುಟ್ಟು ಹಾಕು” ಎಂದು ಹೇಳುತ್ತಾರೆ. ವಿಡಿಯೊದಲ್ಲಿ ವ್ಯಕ್ತಿ ಕಾಣಿಸುವುದಿಲ್ಲ. ಕೇವಲ ಕೈಗಳಷ್ಟೇ ಕಾಣುತ್ತದೆ.

ಈ ಸಮಯದಲ್ಲಿ ಅಖಿಲೇಶ್ ಯಾದವ್ ಅವರು, “ಈ ಹಿಂದೆ ಅವರು ಚುನಾವಣಾ ಬೂತ್‌ಗಳನ್ನು ಗಲಾಟೆ ಮಾಡಿ ವಶಕ್ಕೆ ಪಡೆಯುತ್ತಿದ್ದರು. ಈಗ ಬಿಜೆಪಿಯವರು ಅದನ್ನು ಬೇರೆಯೆ ರೀತಿಯಲ್ಲಿ ತಂತ್ರಪೂರ್ವಕವಾಗಿ ಮಾಡುತ್ತಿದ್ದಾರೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಇದರ ನಂತರ ಅಖಿಲೇಶ್‌ ಅವರನ್ನು ಉದ್ದೇಶಿಸಿ ಮತ್ತೇ ಮಾತನಾಡುವ ವಯೋವೃದ್ಧ, “ನಾನು ನಿಮಗೆ ಹೇಳುತ್ತಿದ್ದೇನೆ. ಇಲ್ಲಿ ಒಂದು ಓಟು ಕೂಡಾ ಇಲ್ಲ, ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದು ಹೇಳುತ್ತಾರೆ.

ಈ ವೇಳೆ ಅಖಿಲೇಶ್‌ ಯಾದವ್‌, “ಇದು ನಿಜವೇ” ಎಂದು ಕೇಳುತ್ತಾರೆ. ಅದಕ್ಕೆ ವಯೋವೃದ್ದ , “ಮಿಷಿನ್(EVM) ಬದಲಾಯಿಸಿ, ಒಂದೇ ಬಾರಿಗೆ ಎಲ್ಲಾ ಓಟುಗಳೂ ಬರುತ್ತದೆ” ಎಂದು ಹೇಳುತ್ತಾರೆ. ಇದರ ನಂತರ ವೃದ್ದ, ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಅಶ್ಲೀಲ ಪದ ಉಲ್ಲೇಖಿಸುವಾಗ ಅಖಿಲೇಶ್‌ ಯಾದವ್‌ ಅವರು ಬಾಯಿಗೆ ಬೆರಳಿಟ್ಟು, ಹಾಗೆ ಹೇಳಬೇಡಿ ಎಂದು ಸೂಚಿಸುತ್ತಾರೆ.

ಪೂರ್ಣ ವಿಡಿಯೊ ನೋಡಿ

ವಾಸ್ತವದಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ವಿಡಿಯೊ 14 ಸೆಕೆಂಡ್‌ ಇದೆ. ಅದು ಅಸ್ಪಷ್ಟವಾಗಿದೆ. ಅದರಲ್ಲಿ ವಯೋವೃದ್ದ ಮಾತನಾಡುವುದು, “ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದಾಗಿದೆ.

ಬಿಜೆಪಿ ಬೆಂಬಲಿಗರು ಪ್ರತಿಪಾದಿಸಿದಂತೆ, ವಯೋವೃದ್ದ ವ್ಯಕ್ತಿಯು ಈ ಇಡೀ ಸಂಭಾಷಣೆಯಲ್ಲಿ, ಮಸೀದಿಯ ಬಗ್ಗೆಯಾಗಲಿ, ನಿಮಗೆ ಓಟು ನೀಡುವುದಿಲ್ಲ ಎಂದಾಗಲಿ ಅಥವಾ ನಿಮ್ಮ ಸರ್ಕಾರ ಬರುವುದಿಲ್ಲ ಎಂದಾಗಲಿ ಹೇಳುವುದಿಲ್ಲ.

ಒಟ್ಟಿನಲ್ಲಿ ಹೇಳಬಹುದಾದರೆ, ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಸಮಯದಲ್ಲಿ ಅಖಿಲೇಶ್ ಯಾದವ್‌ ಅವರಿಗೆ ವಿಡಿಯೊದಲ್ಲಿನ ವಯೋವೃದ್ದ ಛೀಮಾರಿ ಹಾಕಿಲ್ಲ. ಅವರು ಮಾತನಾಡಿದ್ದು ‘EVM’ ಮಿಷಿನ್ ಬಗ್ಗೆಯಾಗಿದ್ದು, ಅದನ್ನು ಬದಲಾಯಿಸಿ ಎಂದು ಅಖಿಲೇಶ್ ಜೊತೆಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...