Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ, ರಾಜ್ಯದ ವಯೋವೃದ್ದನೋರ್ವ ‘ಛೀಮಾರಿ’ ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 14 ಸೆಕೆಂಡಿನ ಈ ವಿಡಿಯೊದಲ್ಲಿ ಅಖಿಲೇಶ್‌ ಯಾದವ್‌ ಅವರು ಕಾಣಿಸಿಕೊಂಡಿದ್ದು, ವಯಸ್ಸಾದ ವ್ಯಕ್ತಿಯೊಬ್ಬರು ಅವರ ಜೊತೆಗೆ ಮಾತನಾಡುವುದು ಕೇಳಿಸುತ್ತದೆ.

ಹಿಂದಿ ಹಾಗೂ ಕನ್ನಡ ಸಂದೇಶದೊಂದಿಗೆ ಈ ವಿಡಿಯೊ ವೈರಲ್‌ ಆಗಿದೆ. “ನೀನು ಹೋಗು, ಮಸೀದಿ ಕಟ್ಟಿಸು, ಇಡೀ ಪ್ರದೇಶದಿಂದ ನಿನಗೆ ಒಂದು ಮತವನ್ನೂ ನಾವು ಕೊಡುವುದಿಲ್ಲ” ಎಂದು ವೃದ್ದ ವ್ಯಕ್ತಿ ಅಖಿಲೇಶ್ ಯಾದವ್‌ ಅವರಿಗೆ ಹೇಳಿದ್ದಾರೆ ಎಂದು ಕನ್ನಡದಲ್ಲಿ ವೈರಲ್ ಆಗಿದೆ. ಈ ವೈರಲ್ ಪೋಸ್ಟ್‌ “ಅಖಿಲೇಶ್‌ ಯಾದವ್‌ಗೆ ಮಂಗಳಾರತಿ” ಮಾಡಲಾಗಿದೆ ಎಂದು ಪ್ರತಿಪಾದಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ವಿಡಿಯೊವನ್ನು ಬಿಜೆಪಿ ಬೆಂಬಲಿಗ ಸಂತೋಷ್‌ ಕೆಂಚಾಂಬ ಎಂಬ ವ್ಯಕ್ತಿ ಸೇರಿದಂತೆ, ಇನ್ನೂ ಹಲವಾರು ಜನರು ಹಂಚಿಕೊಂಡಿದ್ದಾರೆ. ಈ ಮೂಲಕ ಈ ವಿಡಿಯೊವನ್ನು ಸಾವಿರಾರು ಜನರು ಹಂಚಿಕೊಂಡಿದ್ದಾರೆ ಮತ್ತು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಟ್ವಿಟರ್‌ನಲ್ಲೂ ಈ ವಿಡಿಯೊ ಅದೇ ಪ್ರತಿಪಾದನೆಯೊಂದಿಗೆ ಕನ್ನಡ ಸಂದೇಶದೊಂದಿಗೆ ಹಂಚಿಕೊಂಡಿರುವುದನ್ನು ಇಲ್ಲಿ ನೋಡಬಹುದು.

ಇಷ್ಟೇ ಅಲ್ಲದೆ ಹಿಂದಿ ಭಾಷೆಯಲ್ಲೂ ಈ ವಿಡಿಯೊ ವೈರಲ್ ಆಗಿದೆ. ದೆಹಲಿ ಬಿಜೆಪಿಯ ಉಪಾಧ್ಯಕ್ಷ ಸುನಿಲ್ ಯಾದವ್‌ ಅವರು, “ವಯೋವೃದ್ಧ ವ್ಯಕ್ತಿ ಅಖಿಲೇಶ್ ಯಾದವ್ ಅವರಿಗೆ ವೋಟ್ ಇಲ್ಲ, ವೋಟ್ ಇಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ” ಎಂಬ ಪ್ರತಿಪಾದನೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ವೈರಲ್ ಆಗಿರುವಂತೆಯೇ ಹಿಂದಿಯಲ್ಲಿ ಕೂಡಾ, “ನೀವು ಮಸೀದಿ ಮಾಡಲು ಹೋಗುತ್ತೀರಿ, ಇಡೀ ಪ್ರದೇಶದ ಯಾರೂ ನಿಮಗೆ ಮತ ನೀಡುವುದಿಲ್ಲ” ಎಂದು ವಯೋವೃದ್ದ ವ್ಯಕ್ತಿ ಅಖಿಲೇಶ್‌ಗೆ ಛೀಮಾರಿ ಹಾಕಿದ್ದಾರೆ ಎಂದು ವೈರಲ್ ಆಗಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಟ್ವಿಟರ್‌ನಲ್ಲಿ ಹಲವು ಜನರು ಹಂಚಿಕೊಂಡಿದ್ದಾರೆ. ಜೊತೆಗೆ ಫೇಸ್‌ಬುಕ್‌ ಅಲ್ಲೂ ಈ ವಿಡಿಯೊ ವೈರಲ್ ಆಗಿದೆ. ಅದಲ್ಲಿ ಇಲ್ಲಿ, ಇಲ್ಲಿ ಮತ್ತು ಇಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್

ಒಟ್ಟಿನಲ್ಲಿ ನೋಡುವುದಾದರೆ, ‘ಅಖಿಲೇಶ್ ಯಾದವ್‌ ಅವರಿಗೆ ಯುಪಿಯಲ್ಲಿ ವೃದ್ದರೊಬ್ಬರು ಛೀಮಾರಿ ಹಾಕಿದ್ದಾರೆ’ ಎಂಬ ಪ್ರತಿಪಾದನೆಯೊಂದಿಗೆ 14 ಸೆಕೆಂಡಿನ ಈ ವಿಡಿಯೊವನ್ನು ವೈರಲ್ ಮಾಡಿರುವವರಲ್ಲಿ ಹೆಚ್ಚಿನ ಜನರು ಬಿಜೆಪಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ನಾನುಗೌರಿ.ಕಾಂ ಈ ವಿಡಿಯೊದ ಸ್ಕ್ರೀನ್‌ ಶಾರ್ಟ್ ಬಳಿಸಿ ರಿವರ್ಸ್ ಸರ್ಚ್ ಮಾಡಿದಾಗ, ವೈರಲ್ ವಿಡಿಯೊದ ಧೀರ್ಘ ವಿಡಿಯೊ ಲಭ್ಯವಾಗಿದೆ. ಈ ವಿಡಿಯೊ 1:04 ಸೆಕೆಂಡ್‌ ಇದೆ.

ಈ ವಿಡಿಯೊ, ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಅಖಿಲೇಶ್‌ ಯಾದವ್ ಮನೆ ಮನೆ ಪ್ರಚಾರದ ಸಮಯದಲ್ಲಿ ಮಾಡಿರುವ ವಿಡಿಯೊ ಎಂದು ತೋರುತ್ತಿದೆ. ಆದರೆ ಈ ವಿಡಿಯೊ ಯಾವಾಗ ರೆಕಾರ್ಡ್ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಅವರು ಮಾತನಾಡುತ್ತಾ ಇರುವ ಸಂಧರ್ಭದಲ್ಲಿ ಹಲವಾರು ಜನರು ಅವರ ಸುತ್ತುವರೆದು ಮಾತನಾಡುತ್ತಿದ್ದಾರೆ.

ಅಖಿಲೇಶ್ ಯಾದವ್ ಅವರು ಅಲ್ಲಿ ನೆರೆದಿರುವ ಜನರೊಂದಿಗೆ ಮಾತನಾಡುತ್ತಾ, “ಜನರು ಏನು ಯೋಚಿಸುತ್ತಿದ್ದಾರೆ” ಎಂದು ಪ್ರಶ್ನಿಸುತ್ತಾರೆ. ಜೊತೆಗೆ, ಜನರು ಚೆನ್ನಾಗಿದ್ದಾರೆಯೆ? ರಸ್ತೆ ಮತ್ತು ಹೆದ್ದಾರಿ ಚೆನ್ನಾಗಿದೆಯೆ ಎಂದು ಕೇಳುತ್ತಾರೆ.

ಈ ವೇಳೆ ವಯೋವೃದ್ದಎಂದು ತೋರುವ ವ್ಯಕ್ತಿಯೊಬ್ಬರು, “ಮಗನೇ, ಮೊದಲು ಮಿಷಿನ್(EVM) ಅನ್ನು ಸುಟ್ಟು ಹಾಕು” ಎಂದು ಹೇಳುತ್ತಾರೆ. ವಿಡಿಯೊದಲ್ಲಿ ವ್ಯಕ್ತಿ ಕಾಣಿಸುವುದಿಲ್ಲ. ಕೇವಲ ಕೈಗಳಷ್ಟೇ ಕಾಣುತ್ತದೆ.

ಈ ಸಮಯದಲ್ಲಿ ಅಖಿಲೇಶ್ ಯಾದವ್ ಅವರು, “ಈ ಹಿಂದೆ ಅವರು ಚುನಾವಣಾ ಬೂತ್‌ಗಳನ್ನು ಗಲಾಟೆ ಮಾಡಿ ವಶಕ್ಕೆ ಪಡೆಯುತ್ತಿದ್ದರು. ಈಗ ಬಿಜೆಪಿಯವರು ಅದನ್ನು ಬೇರೆಯೆ ರೀತಿಯಲ್ಲಿ ತಂತ್ರಪೂರ್ವಕವಾಗಿ ಮಾಡುತ್ತಿದ್ದಾರೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಇದರ ನಂತರ ಅಖಿಲೇಶ್‌ ಅವರನ್ನು ಉದ್ದೇಶಿಸಿ ಮತ್ತೇ ಮಾತನಾಡುವ ವಯೋವೃದ್ಧ, “ನಾನು ನಿಮಗೆ ಹೇಳುತ್ತಿದ್ದೇನೆ. ಇಲ್ಲಿ ಒಂದು ಓಟು ಕೂಡಾ ಇಲ್ಲ, ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದು ಹೇಳುತ್ತಾರೆ.

ಈ ವೇಳೆ ಅಖಿಲೇಶ್‌ ಯಾದವ್‌, “ಇದು ನಿಜವೇ” ಎಂದು ಕೇಳುತ್ತಾರೆ. ಅದಕ್ಕೆ ವಯೋವೃದ್ದ , “ಮಿಷಿನ್(EVM) ಬದಲಾಯಿಸಿ, ಒಂದೇ ಬಾರಿಗೆ ಎಲ್ಲಾ ಓಟುಗಳೂ ಬರುತ್ತದೆ” ಎಂದು ಹೇಳುತ್ತಾರೆ. ಇದರ ನಂತರ ವೃದ್ದ, ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಅಶ್ಲೀಲ ಪದ ಉಲ್ಲೇಖಿಸುವಾಗ ಅಖಿಲೇಶ್‌ ಯಾದವ್‌ ಅವರು ಬಾಯಿಗೆ ಬೆರಳಿಟ್ಟು, ಹಾಗೆ ಹೇಳಬೇಡಿ ಎಂದು ಸೂಚಿಸುತ್ತಾರೆ.

ಪೂರ್ಣ ವಿಡಿಯೊ ನೋಡಿ

ವಾಸ್ತವದಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ವಿಡಿಯೊ 14 ಸೆಕೆಂಡ್‌ ಇದೆ. ಅದು ಅಸ್ಪಷ್ಟವಾಗಿದೆ. ಅದರಲ್ಲಿ ವಯೋವೃದ್ದ ಮಾತನಾಡುವುದು, “ಎಲ್ಲಾ ಓಟು ಕೂಡಾ ಮಿಷಿನ್‌(EVM)ಗೆ ಹೋಗುತ್ತಿದೆ. ನೀವು ಮಿಷಿನ್‌(EVM) ಬದಲಾಯಿಸದೆ, ಜನರ ಸರ್ಕಾರ ಬರುವುದಿಲ್ಲ, ಬರುವುದಿಲ್ಲ, ಬರುವುದಿಲ್ಲ” ಎಂದಾಗಿದೆ.

ಬಿಜೆಪಿ ಬೆಂಬಲಿಗರು ಪ್ರತಿಪಾದಿಸಿದಂತೆ, ವಯೋವೃದ್ದ ವ್ಯಕ್ತಿಯು ಈ ಇಡೀ ಸಂಭಾಷಣೆಯಲ್ಲಿ, ಮಸೀದಿಯ ಬಗ್ಗೆಯಾಗಲಿ, ನಿಮಗೆ ಓಟು ನೀಡುವುದಿಲ್ಲ ಎಂದಾಗಲಿ ಅಥವಾ ನಿಮ್ಮ ಸರ್ಕಾರ ಬರುವುದಿಲ್ಲ ಎಂದಾಗಲಿ ಹೇಳುವುದಿಲ್ಲ.

ಒಟ್ಟಿನಲ್ಲಿ ಹೇಳಬಹುದಾದರೆ, ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಸಮಯದಲ್ಲಿ ಅಖಿಲೇಶ್ ಯಾದವ್‌ ಅವರಿಗೆ ವಿಡಿಯೊದಲ್ಲಿನ ವಯೋವೃದ್ದ ಛೀಮಾರಿ ಹಾಕಿಲ್ಲ. ಅವರು ಮಾತನಾಡಿದ್ದು ‘EVM’ ಮಿಷಿನ್ ಬಗ್ಗೆಯಾಗಿದ್ದು, ಅದನ್ನು ಬದಲಾಯಿಸಿ ಎಂದು ಅಖಿಲೇಶ್ ಜೊತೆಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...