Homeಕರ್ನಾಟಕಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಬಿಜೆಪಿಯವರು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ-ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಜಾಬ್ ವಿವಾದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ. ಅವರಿಗೆ ಸಂವಿಧಾನ ನೀಡಿರುವ ಶಿಕ್ಷಣದ ಹಕ್ಕು, ಧಾರ್ಮಿಕ ಹಕ್ಕನ್ನು ಕಸಿಯುವ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ವಿವಾದ ಜೀವಂತ ಇರುವಾಗಲೇ, ಕುಂದಾಪುರದ ಸರ್ಕಾರಿ ಕಾಲೇಜಿನಲ್ಲೂ ಅದೇ ರೀತಿಯ ವಿವಾದ ಪ್ರಾರಂಭವಾಗಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವತಂ ಕಾಲೇಜು ಪ್ರಾಂಶುಪಾಲರೇ ಗೇಟ್ ಮುಚ್ಚಿ ಪ್ರವೇಶ ನಿರಾಕರಿಸಿದ್ದಾರೆ.

ಇನ್ನು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬರುವುದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ವಿವಾದ ಮಾಡಿದ್ದಾರೆ. ಹಿಜಾಬ್ ಮತ್ತು ಕೇಸರಿ ಶಾಲು ಹಾಕಿಕೊಮಡು ಬಂದಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ಎಲ್ಲಾ ಕಾಲೇಜುಗಳಿಗೂ ಹಬ್ಬುವ ಹಂತದಲ್ಲಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಸಮವಸ್ತ್ರ ಕಡ್ಡಾಯ ಮಾಡಿ ಎಂದು ಸರ್ಕಾರ ಎಲ್ಲೂ ಹೇಳಿಲ್ಲ. ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಈಗ ಕುಂದಾಪುರ ಕಾಲೇಜ್‌ನಲ್ಲಿ ಪ್ರಿನ್ಸಿಪಾಲ್‌ ಗೇಟ್ ಹಾಕಿ 29 ಮುಸ್ಲಿಂ ಹೆಣ್ಣು ಮಕ್ಕಳನ್ನು ಕ್ಲಾಸ್‌ಗೆ ಬರಬಾರದು ಎಂದು ತಡೆದಿದ್ದಾರೆ. ಇದು ಮೂಲಭೂತ ಹಕ್ಕಿನ ಉಲ್ಲಂಘನೆ. ಅದು ಸರ್ಕಾರಿ ಕಾಳೇಜಿನಲ್ಲಿ ಹೀಗೆ ಮಾಡಿದ್ದಾರೆ. ಬಿಜೆಪಿಯವರು ಇದೊಂದು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ. ಇಷ್ಟು ದಿನ ಇರದ ಕೇಸರಿ ಶಾಲು ಈಗ ಬಂದಿದೆ. ಶಿಕ್ಷಣ ಮೂಲಭೂತ ಹಕ್ಕು. ಈ ಸ್ಕಾರ್ಫ್ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದನ್ನು ಈಗ ಇದ್ದಕ್ಕಿಂದಂತೆ ತಡೆಯುವ ಪ್ರಯತ್ನ ಯಾಕೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ಫೆ. 8 ರಂದು ವಿಚಾರನೆ ನಡೆಯಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

“ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು ಶಿಕ್ಷಣ. ವೈಯಕ್ತಿಕವಾಗಿ ಹೇಳುವುದಾದರೆ, ಇದು ಹೆಣ್ಣುಮಕ್ಕಳ ಮೂಲಭೂತ ಶಿಕ್ಷಣದ ಹಕ್ಕನ್ನು ಕಸಿಯುವುದು. ಆ ಮುಸ್ಲಿಂ ಹೆಣ್ಣುಮಕ್ಕಳಿಗೆ ಶಿಕ್ಷಣ ಸಿಗದಂತೆ ನೋಡಿಕೊಳ್ಳುವುದು, ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಕುಟಿಲ ಪ್ರಯತ್ನ ಇದು. ಶಿಕ್ಷಣ, ಧಾರ್ಮಿಕ ಆಚರಣೆ ಪ್ರತಿಯೊಬ್ಬರ ಮೂಲಭೂತ ಹಕ್ಕು. ತಲೆಗೆ ಸ್ಕಾರ್ಫ್ ಹಾಕಿಕೊಳ್ಳೂವುದು ಧಾರ್ಮಿಕ ಆಚರಣೆಯ ಒಂದು ಭಾಗ. ಈಗ ಅದನ್ನು ವಿವಾದ ಏಕೆ ಮಾಡುತ್ತಿದ್ದಾರೆ. ಇದು ತುಂಬ ಕೆಟ್ಟದು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದುವರೆದು, “ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಸುತ್ತೋಲೆಗಳನ್ನು ನೋಡಿದೆ ಅದರಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ. ಒಬ್ಬ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರು ಗೇಟಿನ ಮುಂದೆ ನಿಂತು ವಿದ್ಯಾರ್ಥಿಗಳನ್ನು ಕಾಳೇಜಿನ ಒಳಗೆ ಬಿಡದಿರುವುದು ಅಮಾನವೀಯವಲ್ಲವೇ..? ಇದು ಆ ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತರನ್ನಾಗಿಸುವ ಪ್ರಯತ್ನವಲ್ಲವೇ..? ಆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಸಮವಸ್ತ್ರ ಕಡ್ಡಾಯ ಮಾಡಬೇಕು ಅಂತ ಹೇಳೊಕೆ ಅವರ್‍ಯಾರು..? ಆತ ಹೇಳಿದ ತಕ್ಷಣ ಜನರ ದುಡ್ಡಲ್ಲಿ ಸಂಬಳ ತೆಗೆದುಕೊಳ್ಳುವ ಈ ಸರ್ಕಾರಿ ಪ್ರಾಂಶುಪಾಲರು ಗೇಟ್ ಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೋಡಿ ಈಗ ಕೇಸರಿ ಶಾಲು ಹಾಕುವುದರ ಉದ್ದೇಶವೇನು..? ಈ ಮೊದಲಿನಿಂದಲೂ ಹಾಕಿದ್ರಾ..? ಶಾಲು ಹಾಕಿಕೊಳ್ಳಬೇಕು ಎಂದುಬುದು ನಿನ್ನೆ ಮೊನ್ನೆ ಜ್ಞಾನೋದಯವಾಗಿದ್ಯಾ..? ಈ ಹೆಣ್ಣು ಮಕ್ಕಳು ಯಾವಾಗಿನಿಂದ ಸ್ಕಾರ್ಪ ಹಾಕಿಕೊಂಡು ಬರುತ್ತಿದ್ದರು ಹೇಳಿ. ಸುಮ್ಮನೆ ಶಿಕ್ಷಣದ ವಿಷಯದಲ್ಲಿ ಧರ್ಮ ಸೇರಿಸಲು ಹೋಗಬೇಡಿ” ಎಂದಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಈ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದೆ ಎಂದಿರುವ ಸಿದ್ದರಾಮಯ್ಯ, ’ಗೃಹ ಸಚಿವ ಅರಗ ಜ್ಞಾನೆಂದ್ರ ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಅದೆಲ್ಲಾ ಆಗುವುದಿಲ್ಲ. ಹೈಕೋರ್ಟ್ ಏನು ಹೇಳುತ್ತದೆ ನೋಡೊಣ. ಆದರೆ, ವೈಯಕ್ತಿಕವಾಗಿ ಒಬ್ಬ ವಕೀಲ, ವಿರೋಧ ಪಕ್ಷದ ನಾಯಕನಾಗಿ ಹೇಳುವುದೆನೆಂದರೆ ಇದು ಸಂವಿಧಾನ ವಿರೋಧಿ” ಎಂದು ಹೇಳಿದ್ದಾರೆ.

ಇನ್ನು, ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದೆ. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಗೇಟ್ ಹೊರಗೆ ನಿಲ್ಲಿಸಲಾಗಿದೆ. ಅವರಿಗೆ ಬೆಂಬಲ ನೀಡಲು ಮುಸ್ಲಿಂ ವಿದ್ಯಾರ್ಥಿಗಳು ಸಹ ಕಾಲೇಜು ಗೇಟ್‌ನ ಹೊರಗೆ ಕುಳಿತಿದ್ದಾರೆ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...