Homeಮುಖಪುಟನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ...

ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

- Advertisement -
- Advertisement -

ಪತ್ರಕರ್ತರು, ಹಲವು ನೆಟ್ಟಿಗರು ಚಿತ್ರ ನಟಿಯರ ಬಗ್ಗೆ ಮನಸ್ಸಿಗೆ ಬಂದಂತೆ ಬರೆಯುವುದು, ಪ್ರಶ್ನಾರ್ಥಕ ಚಿಹ್ನೆ ಹಾಕಿ ತಮ್ಮ ಮನಸ್ಸಿನಲ್ಲಿರುವ ಕಹಿಯನ್ನು ಕಾರಿಕೊಳ್ಳುವುದು ನೋಡುತ್ತಲೇ ಇದ್ದೇವೆ. ಇದೆ ಸಾಲಿಗೆ ಮತ್ತೊಬ್ಬ ಸಿನಿಮಾ ಪರ್ತಕರ್ತನ ಸೇರ್ಪಡೆಯಾಗಿದೆ. ತೆಲುಗಿನ ’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಪತ್ರಕರ್ತ ಸುರೇಶ್ ಕೊಂಡೆಟಿ, ನಟ ಸಿದ್ದು ಜೊನ್ನಲಗಡ್ಡ ಅವರಿಗೆ ಅಸಭ್ಯ ಪ್ರಶ್ನೆಯನ್ನು ಹಾಕಿ ವಿವಾದಕ್ಕೆ ಕಾರಣರಾಗಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ಸಿನಿಮಾದ ನಾಯಕ ನಟನಿಗೆ ಪ್ರಶ್ನೆ ಮಾಡಿದ ಸಿನಿಮಾ ಪತ್ರಕರ್ತ, “ಟ್ರೇಲರ್‌ನಲ್ಲಿ ಹೇಳಿರುವಂತೆಯೇ, ನಿಜವಾಗಿಯೂ ನಾಯಕಿ ದೇಹದಲ್ಲಿರುವ ಹುಟ್ಟು ಮಚ್ಚೆಗಳನ್ನು ಎಣಿಸಿದ್ದಿರಾ..?” ಎಂದ ಅಸಭ್ಯವಾಗಿ  ಪ್ರಶ್ನಿಸಿದ್ದಾರೆ.

’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್‌ನಲ್ಲಿ, ನಾಯಕನು ನಾಯಕಿ ನೇಹಾ ಶೆಟ್ಟಿಗೆ “ನಿಮಗೆ ಎಷ್ಟು ಮಚ್ಚೆಗಳಿವೆ?” ಎಂದು ಕೇಳುತ್ತಾರೆ. ಅದಕ್ಕೆ ಆಕೆ 16 ಎಂದು ಉತ್ತರಿಸುತ್ತಾರೆ. ಇದು ಸಿನಿಮಾದ ದೃಶ್ಯವಾಗಿದೆ. ಆದರೆ, ಕಾರ್ಯಕ್ರಮದಲ್ಲಿ ಪತ್ರಕರ್ತ ಸುರೇಶ್ ಕೊಂಡೆಟಿ, “ನಿಜ ಜೀವನದಲ್ಲಿ ಅವರಿಗೆ ಎಷ್ಟು ಮಚ್ಚೆಗಳಿವೆ ಎಂದು ನೀವು ಎಣಿಸಿದ್ದೀರಾ?” ಎಂದು ನಾಯಕನಿಗೆ ಕೇಳಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಲು ಸಿದ್ದು ನಯವಾಗಿ ನಿರಾಕರಿಸಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಈ ಸಂವೇದನಾರಹಿತ ಪ್ರಶ್ನೆಯನ್ನು ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿಸಿರುವ ನಟಿ ನೇಹಾ ಶೆಟ್ಟಿ, “ಇಂದು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಈ ಪ್ರಶ್ನೆ ದುರದೃಷ್ಟಕರವಾಗಿತ್ತು. ಆದರೆ, ಇದು ತನ್ನ ಕೆಲಸದ ಸ್ಥಳದಲ್ಲಿ ಮತ್ತು ಮನೆಯಲ್ಲಿ ತನ್ನ ಸುತ್ತಲಿನ ಮಹಿಳೆಯರ ಬಗ್ಗೆ ಆತ ಹೊಂದಿರುವ ಗೌರವವನ್ನು ವ್ಯಕ್ತಪಡಿಸುತ್ತದೆ”ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಚಿತ್ರದ ನಟ ಸಿದ್ದು ಕೂಡ ಈ ಘಟನೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರೊಮ್ಯಾಂಟಿಕ್ ದೃಶ್ಯಗಳನ್ನು ಚಿತ್ರಿಸುವಾಗ ನಟರಿಗಾಗುವ, ಅದರಲ್ಲೂ ಮಹಿಳಾ ಕಲಾವಿದರಿಗಾಗುವ ಒತ್ತಡಗಳ ಬಗ್ಗೆ ತಿಳಿಸಿದ್ದಾರೆ. ನೂರಾರು ಜನರ ಮಧ್ಯೆ ನಟಿಸುವಾಗ ಎದುರಿಸುವ ಸಂಕಟಗಳ ಬಗ್ಗೆ ಅರಿತು ಮಾತಾಡಬೇಕು. ಕಲಾವಿದರಿಗೆ ಗೌರವ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಪತ್ರಕರ್ತನ ನಡೆಯನ್ನು ನೆಟ್ಟಿಗರು ಸೇರಿದಂತೆ ಹಲವು ಮಂದಿ ಖಂಡಿಸಿದ ಬಳಿಕ ಸುರೇಶ್ ಕೊಂಡೆಟಿ ಕ್ಷಮೆಯಾಚಿಸಿದ್ದಾರೆ. ಪ್ರಶ್ನೆಯ ಹಿಂದಿನ ಉದ್ದೇಶದಲ್ಲಿ ಯಾವುದೇ ತಪ್ಪು ಇರಲಿಲ್ಲ ಎಂದಿದ್ದಾರೆ.

“ಇದು ರೊಮ್ಯಾಂಟಿಕ್ ಚಿತ್ರ, ನಾನು ರೊಮ್ಯಾಂಟಿಕ್ ಪ್ರಶ್ನೆಯನ್ನು ಕೇಳಿದೆ. ನನ್ನ ಉದ್ದೇಶ ತುಂಬಾ ಕ್ಲಿನ್ ಆಗಿತ್ತು. ಅದರಲ್ಲಿ ಡಬಲ್ ಮೀನಿಂಗ್ ಇಲ್ಲ. ದಯವಿಟ್ಟು ನನ್ನನ್ನು ತಪ್ಪು ತಿಳಿದುಕೊಳ್ಳಬೇಡಿ. ಡಿಜೆ ಟಿಲ್ಲು ಟ್ರೈಲರ್ ಅತ್ಯುತ್ತಮವಾಗಿದೆ. ಪ್ರೀತಿಯ ಜೋಡಿಗೆ ಆಲ್ ದಿ ಬೆಸ್ಟ್” ಎಂದು ಚಿತ್ರದ ನಾಯಕ, ನಾಯಕಿಯನ್ನು ಟ್ಯಾಗ್ ಮಾಡಿದ್ದಾರೆ.

ನೇಹಾ ಶೆಟ್ಟಿ ಬಹುಭಾಷಾ ನಟಿ ಮತ್ತು ರೂಪದರ್ಶಿ. 2014 ರ ಮಿಸ್ ಮಂಗಳೂರು, 2015 ರ ಮಿಸ್ ಸೌತ್-ಇಂಡಿಯಾ ಸ್ಪರ್ಧೆಯಲ್ಲಿ ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. 2016 ರಲ್ಲಿ ತೆರೆಕಂಡ ಕನ್ನಡದ ಬಹು ನಿರೀಕ್ಷಿತ ಚಿತ್ರವಾಗಿದ್ದ ಮುಂಗಾರು ಮಳೆ- 2 ನಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸದ್ಯ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...