Homeಮುಖಪುಟನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ...

ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

- Advertisement -
- Advertisement -

ಪತ್ರಕರ್ತರು, ಹಲವು ನೆಟ್ಟಿಗರು ಚಿತ್ರ ನಟಿಯರ ಬಗ್ಗೆ ಮನಸ್ಸಿಗೆ ಬಂದಂತೆ ಬರೆಯುವುದು, ಪ್ರಶ್ನಾರ್ಥಕ ಚಿಹ್ನೆ ಹಾಕಿ ತಮ್ಮ ಮನಸ್ಸಿನಲ್ಲಿರುವ ಕಹಿಯನ್ನು ಕಾರಿಕೊಳ್ಳುವುದು ನೋಡುತ್ತಲೇ ಇದ್ದೇವೆ. ಇದೆ ಸಾಲಿಗೆ ಮತ್ತೊಬ್ಬ ಸಿನಿಮಾ ಪರ್ತಕರ್ತನ ಸೇರ್ಪಡೆಯಾಗಿದೆ. ತೆಲುಗಿನ ’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಪತ್ರಕರ್ತ ಸುರೇಶ್ ಕೊಂಡೆಟಿ, ನಟ ಸಿದ್ದು ಜೊನ್ನಲಗಡ್ಡ ಅವರಿಗೆ ಅಸಭ್ಯ ಪ್ರಶ್ನೆಯನ್ನು ಹಾಕಿ ವಿವಾದಕ್ಕೆ ಕಾರಣರಾಗಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ಸಿನಿಮಾದ ನಾಯಕ ನಟನಿಗೆ ಪ್ರಶ್ನೆ ಮಾಡಿದ ಸಿನಿಮಾ ಪತ್ರಕರ್ತ, “ಟ್ರೇಲರ್‌ನಲ್ಲಿ ಹೇಳಿರುವಂತೆಯೇ, ನಿಜವಾಗಿಯೂ ನಾಯಕಿ ದೇಹದಲ್ಲಿರುವ ಹುಟ್ಟು ಮಚ್ಚೆಗಳನ್ನು ಎಣಿಸಿದ್ದಿರಾ..?” ಎಂದ ಅಸಭ್ಯವಾಗಿ  ಪ್ರಶ್ನಿಸಿದ್ದಾರೆ.

’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್‌ನಲ್ಲಿ, ನಾಯಕನು ನಾಯಕಿ ನೇಹಾ ಶೆಟ್ಟಿಗೆ “ನಿಮಗೆ ಎಷ್ಟು ಮಚ್ಚೆಗಳಿವೆ?” ಎಂದು ಕೇಳುತ್ತಾರೆ. ಅದಕ್ಕೆ ಆಕೆ 16 ಎಂದು ಉತ್ತರಿಸುತ್ತಾರೆ. ಇದು ಸಿನಿಮಾದ ದೃಶ್ಯವಾಗಿದೆ. ಆದರೆ, ಕಾರ್ಯಕ್ರಮದಲ್ಲಿ ಪತ್ರಕರ್ತ ಸುರೇಶ್ ಕೊಂಡೆಟಿ, “ನಿಜ ಜೀವನದಲ್ಲಿ ಅವರಿಗೆ ಎಷ್ಟು ಮಚ್ಚೆಗಳಿವೆ ಎಂದು ನೀವು ಎಣಿಸಿದ್ದೀರಾ?” ಎಂದು ನಾಯಕನಿಗೆ ಕೇಳಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಲು ಸಿದ್ದು ನಯವಾಗಿ ನಿರಾಕರಿಸಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಈ ಸಂವೇದನಾರಹಿತ ಪ್ರಶ್ನೆಯನ್ನು ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿಸಿರುವ ನಟಿ ನೇಹಾ ಶೆಟ್ಟಿ, “ಇಂದು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಈ ಪ್ರಶ್ನೆ ದುರದೃಷ್ಟಕರವಾಗಿತ್ತು. ಆದರೆ, ಇದು ತನ್ನ ಕೆಲಸದ ಸ್ಥಳದಲ್ಲಿ ಮತ್ತು ಮನೆಯಲ್ಲಿ ತನ್ನ ಸುತ್ತಲಿನ ಮಹಿಳೆಯರ ಬಗ್ಗೆ ಆತ ಹೊಂದಿರುವ ಗೌರವವನ್ನು ವ್ಯಕ್ತಪಡಿಸುತ್ತದೆ”ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಚಿತ್ರದ ನಟ ಸಿದ್ದು ಕೂಡ ಈ ಘಟನೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರೊಮ್ಯಾಂಟಿಕ್ ದೃಶ್ಯಗಳನ್ನು ಚಿತ್ರಿಸುವಾಗ ನಟರಿಗಾಗುವ, ಅದರಲ್ಲೂ ಮಹಿಳಾ ಕಲಾವಿದರಿಗಾಗುವ ಒತ್ತಡಗಳ ಬಗ್ಗೆ ತಿಳಿಸಿದ್ದಾರೆ. ನೂರಾರು ಜನರ ಮಧ್ಯೆ ನಟಿಸುವಾಗ ಎದುರಿಸುವ ಸಂಕಟಗಳ ಬಗ್ಗೆ ಅರಿತು ಮಾತಾಡಬೇಕು. ಕಲಾವಿದರಿಗೆ ಗೌರವ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಪತ್ರಕರ್ತನ ನಡೆಯನ್ನು ನೆಟ್ಟಿಗರು ಸೇರಿದಂತೆ ಹಲವು ಮಂದಿ ಖಂಡಿಸಿದ ಬಳಿಕ ಸುರೇಶ್ ಕೊಂಡೆಟಿ ಕ್ಷಮೆಯಾಚಿಸಿದ್ದಾರೆ. ಪ್ರಶ್ನೆಯ ಹಿಂದಿನ ಉದ್ದೇಶದಲ್ಲಿ ಯಾವುದೇ ತಪ್ಪು ಇರಲಿಲ್ಲ ಎಂದಿದ್ದಾರೆ.

“ಇದು ರೊಮ್ಯಾಂಟಿಕ್ ಚಿತ್ರ, ನಾನು ರೊಮ್ಯಾಂಟಿಕ್ ಪ್ರಶ್ನೆಯನ್ನು ಕೇಳಿದೆ. ನನ್ನ ಉದ್ದೇಶ ತುಂಬಾ ಕ್ಲಿನ್ ಆಗಿತ್ತು. ಅದರಲ್ಲಿ ಡಬಲ್ ಮೀನಿಂಗ್ ಇಲ್ಲ. ದಯವಿಟ್ಟು ನನ್ನನ್ನು ತಪ್ಪು ತಿಳಿದುಕೊಳ್ಳಬೇಡಿ. ಡಿಜೆ ಟಿಲ್ಲು ಟ್ರೈಲರ್ ಅತ್ಯುತ್ತಮವಾಗಿದೆ. ಪ್ರೀತಿಯ ಜೋಡಿಗೆ ಆಲ್ ದಿ ಬೆಸ್ಟ್” ಎಂದು ಚಿತ್ರದ ನಾಯಕ, ನಾಯಕಿಯನ್ನು ಟ್ಯಾಗ್ ಮಾಡಿದ್ದಾರೆ.

ನೇಹಾ ಶೆಟ್ಟಿ ಬಹುಭಾಷಾ ನಟಿ ಮತ್ತು ರೂಪದರ್ಶಿ. 2014 ರ ಮಿಸ್ ಮಂಗಳೂರು, 2015 ರ ಮಿಸ್ ಸೌತ್-ಇಂಡಿಯಾ ಸ್ಪರ್ಧೆಯಲ್ಲಿ ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. 2016 ರಲ್ಲಿ ತೆರೆಕಂಡ ಕನ್ನಡದ ಬಹು ನಿರೀಕ್ಷಿತ ಚಿತ್ರವಾಗಿದ್ದ ಮುಂಗಾರು ಮಳೆ- 2 ನಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸದ್ಯ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...