Homeಮುಖಪುಟನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ...

ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

- Advertisement -
- Advertisement -

ಪತ್ರಕರ್ತರು, ಹಲವು ನೆಟ್ಟಿಗರು ಚಿತ್ರ ನಟಿಯರ ಬಗ್ಗೆ ಮನಸ್ಸಿಗೆ ಬಂದಂತೆ ಬರೆಯುವುದು, ಪ್ರಶ್ನಾರ್ಥಕ ಚಿಹ್ನೆ ಹಾಕಿ ತಮ್ಮ ಮನಸ್ಸಿನಲ್ಲಿರುವ ಕಹಿಯನ್ನು ಕಾರಿಕೊಳ್ಳುವುದು ನೋಡುತ್ತಲೇ ಇದ್ದೇವೆ. ಇದೆ ಸಾಲಿಗೆ ಮತ್ತೊಬ್ಬ ಸಿನಿಮಾ ಪರ್ತಕರ್ತನ ಸೇರ್ಪಡೆಯಾಗಿದೆ. ತೆಲುಗಿನ ’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಪತ್ರಕರ್ತ ಸುರೇಶ್ ಕೊಂಡೆಟಿ, ನಟ ಸಿದ್ದು ಜೊನ್ನಲಗಡ್ಡ ಅವರಿಗೆ ಅಸಭ್ಯ ಪ್ರಶ್ನೆಯನ್ನು ಹಾಕಿ ವಿವಾದಕ್ಕೆ ಕಾರಣರಾಗಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ಸಿನಿಮಾದ ನಾಯಕ ನಟನಿಗೆ ಪ್ರಶ್ನೆ ಮಾಡಿದ ಸಿನಿಮಾ ಪತ್ರಕರ್ತ, “ಟ್ರೇಲರ್‌ನಲ್ಲಿ ಹೇಳಿರುವಂತೆಯೇ, ನಿಜವಾಗಿಯೂ ನಾಯಕಿ ದೇಹದಲ್ಲಿರುವ ಹುಟ್ಟು ಮಚ್ಚೆಗಳನ್ನು ಎಣಿಸಿದ್ದಿರಾ..?” ಎಂದ ಅಸಭ್ಯವಾಗಿ  ಪ್ರಶ್ನಿಸಿದ್ದಾರೆ.

’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್‌ನಲ್ಲಿ, ನಾಯಕನು ನಾಯಕಿ ನೇಹಾ ಶೆಟ್ಟಿಗೆ “ನಿಮಗೆ ಎಷ್ಟು ಮಚ್ಚೆಗಳಿವೆ?” ಎಂದು ಕೇಳುತ್ತಾರೆ. ಅದಕ್ಕೆ ಆಕೆ 16 ಎಂದು ಉತ್ತರಿಸುತ್ತಾರೆ. ಇದು ಸಿನಿಮಾದ ದೃಶ್ಯವಾಗಿದೆ. ಆದರೆ, ಕಾರ್ಯಕ್ರಮದಲ್ಲಿ ಪತ್ರಕರ್ತ ಸುರೇಶ್ ಕೊಂಡೆಟಿ, “ನಿಜ ಜೀವನದಲ್ಲಿ ಅವರಿಗೆ ಎಷ್ಟು ಮಚ್ಚೆಗಳಿವೆ ಎಂದು ನೀವು ಎಣಿಸಿದ್ದೀರಾ?” ಎಂದು ನಾಯಕನಿಗೆ ಕೇಳಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಲು ಸಿದ್ದು ನಯವಾಗಿ ನಿರಾಕರಿಸಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಈ ಸಂವೇದನಾರಹಿತ ಪ್ರಶ್ನೆಯನ್ನು ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿಸಿರುವ ನಟಿ ನೇಹಾ ಶೆಟ್ಟಿ, “ಇಂದು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಈ ಪ್ರಶ್ನೆ ದುರದೃಷ್ಟಕರವಾಗಿತ್ತು. ಆದರೆ, ಇದು ತನ್ನ ಕೆಲಸದ ಸ್ಥಳದಲ್ಲಿ ಮತ್ತು ಮನೆಯಲ್ಲಿ ತನ್ನ ಸುತ್ತಲಿನ ಮಹಿಳೆಯರ ಬಗ್ಗೆ ಆತ ಹೊಂದಿರುವ ಗೌರವವನ್ನು ವ್ಯಕ್ತಪಡಿಸುತ್ತದೆ”ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಚಿತ್ರದ ನಟ ಸಿದ್ದು ಕೂಡ ಈ ಘಟನೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರೊಮ್ಯಾಂಟಿಕ್ ದೃಶ್ಯಗಳನ್ನು ಚಿತ್ರಿಸುವಾಗ ನಟರಿಗಾಗುವ, ಅದರಲ್ಲೂ ಮಹಿಳಾ ಕಲಾವಿದರಿಗಾಗುವ ಒತ್ತಡಗಳ ಬಗ್ಗೆ ತಿಳಿಸಿದ್ದಾರೆ. ನೂರಾರು ಜನರ ಮಧ್ಯೆ ನಟಿಸುವಾಗ ಎದುರಿಸುವ ಸಂಕಟಗಳ ಬಗ್ಗೆ ಅರಿತು ಮಾತಾಡಬೇಕು. ಕಲಾವಿದರಿಗೆ ಗೌರವ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಪತ್ರಕರ್ತನ ನಡೆಯನ್ನು ನೆಟ್ಟಿಗರು ಸೇರಿದಂತೆ ಹಲವು ಮಂದಿ ಖಂಡಿಸಿದ ಬಳಿಕ ಸುರೇಶ್ ಕೊಂಡೆಟಿ ಕ್ಷಮೆಯಾಚಿಸಿದ್ದಾರೆ. ಪ್ರಶ್ನೆಯ ಹಿಂದಿನ ಉದ್ದೇಶದಲ್ಲಿ ಯಾವುದೇ ತಪ್ಪು ಇರಲಿಲ್ಲ ಎಂದಿದ್ದಾರೆ.

“ಇದು ರೊಮ್ಯಾಂಟಿಕ್ ಚಿತ್ರ, ನಾನು ರೊಮ್ಯಾಂಟಿಕ್ ಪ್ರಶ್ನೆಯನ್ನು ಕೇಳಿದೆ. ನನ್ನ ಉದ್ದೇಶ ತುಂಬಾ ಕ್ಲಿನ್ ಆಗಿತ್ತು. ಅದರಲ್ಲಿ ಡಬಲ್ ಮೀನಿಂಗ್ ಇಲ್ಲ. ದಯವಿಟ್ಟು ನನ್ನನ್ನು ತಪ್ಪು ತಿಳಿದುಕೊಳ್ಳಬೇಡಿ. ಡಿಜೆ ಟಿಲ್ಲು ಟ್ರೈಲರ್ ಅತ್ಯುತ್ತಮವಾಗಿದೆ. ಪ್ರೀತಿಯ ಜೋಡಿಗೆ ಆಲ್ ದಿ ಬೆಸ್ಟ್” ಎಂದು ಚಿತ್ರದ ನಾಯಕ, ನಾಯಕಿಯನ್ನು ಟ್ಯಾಗ್ ಮಾಡಿದ್ದಾರೆ.

ನೇಹಾ ಶೆಟ್ಟಿ ಬಹುಭಾಷಾ ನಟಿ ಮತ್ತು ರೂಪದರ್ಶಿ. 2014 ರ ಮಿಸ್ ಮಂಗಳೂರು, 2015 ರ ಮಿಸ್ ಸೌತ್-ಇಂಡಿಯಾ ಸ್ಪರ್ಧೆಯಲ್ಲಿ ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. 2016 ರಲ್ಲಿ ತೆರೆಕಂಡ ಕನ್ನಡದ ಬಹು ನಿರೀಕ್ಷಿತ ಚಿತ್ರವಾಗಿದ್ದ ಮುಂಗಾರು ಮಳೆ- 2 ನಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸದ್ಯ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...