Homeಮುಖಪುಟಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

- Advertisement -
- Advertisement -

ತಾಜ್‌ಮಹಲ್ ಸಿಟಿ ಎಂದು ಕರೆಸಿಕೊಳ್ಳುವ ನಗರ ಆಗ್ರಾ. ಈ ಜಿಲ್ಲೆಯಲ್ಲಿರುವ ಜನಸಂಖ್ಯೆಯಲ್ಲಿ 21% ದಲಿತರು. ಅವರೆಲ್ಲರೂ, ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದಾರೆ.

42 ವರ್ಷದ ಸೋಹನ್ ಸಿಂಗ್ ಅವರು ಮಾಯಾವತಿಯವರ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಕಟ್ಟಾ ಬೆಂಬಲಿಗರು. ಸೋಹನ್ ಅವರು ಪರಿಶಿಷ್ಟ ಜಾತಿಗೆ ಸೇರಿದವರು. ಅವರು ಫತೇಹಾಬಾದ್ ಪ್ರದೇಶದಲ್ಲಿ ಸಣ್ಣ ವೀಳ್ಯದೆಲೆ ಅಂಗಡಿಯನ್ನು ನಡೆಸುತ್ತಿದ್ದಾರೆ. ಬಿಎಸ್‌ಪಿಗೆ ಮತ ಹಾಕುವ ವಿಚಾರದಲ್ಲಿ ಅವರು ಇತ್ತೀಚೆಗೆ ತಮ್ಮ ಅಂಗಡಿ ಬಂದ ಗ್ರಾಹಕರೊಂದಿಗೆ ವಾಗ್ವಾದ ನಡೆಸಿದ್ದರು.

ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಂತೆ ಯುಪಿ ರೈತರಿಗೆ ಎಸ್‌ಕೆಎಂ ಮನವಿ

ಗ್ರಾಹಕರು ತಮ್ಮ ವಾದದಲ್ಲಿ, “ಆಗ್ರಾ ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದರೂ, ಮಾಯಾವತಿಯಾಗಲಿ ಅಥವಾ ಅವರ ಕಾರ್ಯಕರ್ತರಾಗಲಿ ಬಂದು ತಮ್ಮ ಜನರ ಸಮಸ್ಯೆಗಳನ್ನು ಆಲಿಸಲಿಲ್ಲ. ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಸಮಾಜವಾದಿ ಪಕ್ಷವನ್ನು ಬೆಂಬಲಿಸುವುದು ಉತ್ತಮ” ಎಂದು ಹೇಳಿದ್ದಾರೆ. ತನ್ನ ಗ್ರಾಹಕರ ಹೇಳಿಕೆಯಿಂದ ಕೆರಳಿದ ಸೋಹನ್‌, ಬಿಎಸ್‌ಪಿಗೆ ಪರ್ಯಾಯವಾಗಿ ಇತರ ಪಕ್ಷಗಳನ್ನು ಆಯ್ಕೆಯಾಗಿ ನೋಡುವ ಜನರ ಬೆಂಬಲದ ಅಗತ್ಯ ತಮ್ಮ ಪಕ್ಷಕ್ಕಿಲ್ಲ ಎಂದು ಕೂಗಾಡಿದರು.

ತಾಜ್ ಮಹಲ್ ನಗರ ಎಂದು ಕರೆಯುವುದರ ಹೊರತಾಗಿ, ಆಗ್ರಾವನ್ನು ಉತ್ತರ ಪ್ರದೇಶದ ದಲಿತ ರಾಜಧಾನಿ ಎಂದೂ ಕರೆಯಲಾಗುತ್ತದೆ. ಅದರ ಜನಸಂಖ್ಯೆಯ ಸುಮಾರು ಐದನೇ ಒಂದು ಭಾಗದಷ್ಟು ಪರಿಶಿಷ್ಟ ಜಾತಿಗೆ ಸೇರಿದ ಜನರಿದ್ದಾರೆ. ತಾಜ್ ಜಿಲ್ಲೆಯಲ್ಲಿ ಒಂಭತ್ತು ವಿಧಾನಸಭಾ ಕ್ಷೇತ್ರಗಳಿದ್ದು, ಇವೆಲ್ಲವೂ ಬಿಜೆಪಿಯ ವಶದಲ್ಲಿವೆ. 2017ರ ಮೊದಲು ಒಂಭತ್ತು ಕ್ಷೇತ್ರಗಳ ಪೈಕಿ ಆರರಲ್ಲಿ ಬಿಎಸ್‌ಪಿ ಪ್ರಾಬಲ್ಯ ಹೊಂದಿತ್ತು.

ಆಗ್ರಾದಲ್ಲಿರುವ ದಲಿತ ಸಮುದಾಯದ ಹೆಚ್ಚಿನ ಜನರು ದೊಡ್ಡ ಶೂ ಉದ್ಯಮ, ಶುಚಿಗೊಳಿಸುವ ಉದ್ಯಮ ಮತ್ತು ಚರ್ಮದ ಉದ್ಯಮವನ್ನು ಅವಲಂಭಿಸಿದ್ದಾರೆ. ಆದರೆ, ಇತ್ತೀಚೆಗೆ ಹತ್ರಾಸ್‌ನಲ್ಲಿ ಪೊಲೀಸ್ ವಶದಲ್ಲಿ ವಾಲ್ಮೀಕಿ ಸಮುದಾಯದ ಯುವಕನ ಸಾವು ಮತ್ತು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಜಿಲ್ಲೆಯ ದಲಿತರನ್ನು ಅಸಮಾಧಾನಗೊಳಿಸಿವೆ.

ಇದನ್ನೂ ಓದಿ: ಯುಪಿ ಚುನಾವಣೆ: ರೈತ ಆಕ್ರೋಶದ ಜಿಲ್ಲೆ ಲಖಿಂಪುರ್‌ ಖೇರಿಯಲ್ಲಿ ಪ್ರಚಾರ ನಡೆಸಲಿರುವ ರಾಜನಾಥ್ ಸಿಂಗ್

20,000 ಕ್ಕೂ ಹೆಚ್ಚು ದಲಿತರು ವಾಸಿಸುವ ಲೋಹಾ ಮಂಡಿಯ ವಾಲ್ಮೀಕಿ ನಗರದ ನಿವಾಸಿ ಸ್ವಚ್ಛತಾ ಕಾರ್ಮಿಕ ಸೌರಭ್ ಪ್ರಕಾರ, ತಮ್ಮ ಸಮುದಾಯಕ್ಕೆ ತಮ್ಮದೇ ನಾಯಕನ ಅಗತ್ಯವಿದೆ. “ನಮಗೆ ಶಿಕ್ಷಣ ಬೇಕು, ನಮಗೆ ಉತ್ತಮ ಸೌಲಭ್ಯಗಳು ಬೇಕು, ನಮಗೆ ಗೌರವ ಬೇಕು. ವಾಲ್ಮೀಕಿ ಸಮುದಾಯ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರು ಎಂದರೆ ನಾವು ಕೇವಲ ಶುಚಿಗೊಳಿಸುವಿಕೆ ಅಥವಾ ನೈರ್ಮಲ್ಯ ಕಾರ್ಯಗಳನ್ನು ಮಾತ್ರ ಮಾಡುವ ಜನರು ಎಂದು ಅರ್ಥವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಗ್ರಾದಲ್ಲಿ ಇತ್ತೀಚೆಗೆ ಪೊಲೀಸ್ ವಶದಲ್ಲಿದ್ದ ನೈರ್ಮಲ್ಯ ಕಾರ್ಯಕರ್ತನ ಸಾವಿನ ಬಗ್ಗೆ ಉಲ್ಲೇಖಿಸಿದ ಅವರು, “ನಮ್ಮ ಸಹೋದರ ಅರುಣ್ ವಾಲ್ಮೀಕಿ ಕೂಡ ನೈರ್ಮಲ್ಯ ಕಾರ್ಯಕರ್ತರಾಗಿದ್ದರು. ಅವರು ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪೊಲೀಸರಿಂದ ಕೊಲ್ಲಲ್ಪಟ್ಟರು. ವಾಲ್ಮೀಕಿಗಳು ಮನುಷ್ಯರಲ್ಲವೇ ಅಥವಾ ನಮ್ಮ ಜೀವನ ಯಾರಿಗೂ ಮುಖ್ಯವಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ವಾಲ್ಮೀಕಿನಗರದಲ್ಲಿ ಹಾದು ಹೋಗಿರುವ ದೊಡ್ಡ ಚರಂಡಿಯಿಂದ ದುರ್ನಾತ ಬರುತ್ತಿತ್ತು. ಆದರೂ, ತಮ್ಮ ಸಮಸ್ಯೆಯನ್ನು ಪಕ್ಕಕ್ಕಿಟ್ಟು, 2017ರಲ್ಲಿ ಹಿಂದುತ್ವದ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಗೆ ಮತ ಹಾಕಿದ್ದೆವು. ಆದರೆ, ಈಗ ನಾವು ಎಚ್ಚೆತ್ತುಕೊಂಡಿದ್ದೇವೆ. ನಮಗೆ ಹಿಂದೂತ್ವ ಬೇಡ, ಸಮಸ್ಯೆಗೆ ಪರಿಹಾರ ಬೇಕು” ಎಂದು ಸೌರಭ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

ಆಗ್ರಾದಿಂದ ಸುಮಾರು ನೂರು ಕಿ.ಮೀ. ದೂರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಅರುಣ್ ವಾಲ್ಮೀಕಿ ಮನೆ ಇದೆ. ಆದರೆ, ಅವರ ಸಾವು ಹೃದಯಾಘಾತವಲ್ಲ ಪೊಲೀಸ್ ವಶದಲ್ಲಿ ಅವರ ಹತ್ಯೆಯಾಗಿದೆ ಎಂದು ಕುಟುಂಬ ಮತ್ತು ಸಮುದಾಯದವರು ಆರೋಪಿಸಿದ್ದಾರೆ. 31 ವರ್ಷದ ಈ ನೈರ್ಮಲ್ಯ ಕಾರ್ಯಕರ್ತನ ಸಾವು ಜಿಲ್ಲೆಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ.

ಅರುಣ್ ವಾಲ್ಮೀಕಿ ಅವರ ಕುಟುಂಬ ಸದಸ್ಯರನ್ನು ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ ಮತ್ತು ಇತರ ರಾಜಕೀಯ ಪಕ್ಷದ ಮುಖಂಡರು ಭೇಟಿ ಮಾಡಿದ್ದರು. ಕಾಂಗ್ರೆಸ್ ಮತ್ತು ಎಸ್‌ಪಿಯಂತಹ ಪಕ್ಷಗಳು ಕುಟುಂಬಕ್ಕೆ ಆರ್ಥಿಕ ಪರಿಹಾರವನ್ನು ಸಹ ನೀಡಿವೆ. ಇದರಿಂದ ಸಮುದಾಯವು ಬಿಎಸ್‌ಪಿಗೆ ಪರ್ಯಾಯವಾಗಿ ಈ ಪಕ್ಷಗಳತ್ತ ಮುಖಮಾಡುವಂತೆ ಮಾಡಿದೆ.

ಅರುಣ್ ವಾಲ್ಮೀಕಿಯ ಹಿರಿಯ ಸಹೋದರ ಸೋನು ನರ್ವಾಲ್, “ತನ್ನ ಸಹೋದರ ಸಾವನ್ನಪ್ಪಿದ ಸಮಯದಲ್ಲಿ, ಬಿಎಸ್‌ಪಿ ಮುಖ್ಯಸ್ಥರು ಮತ್ತು ಅವರ ಕೇಡರ್‌ನ ಪ್ರಮುಖ ನಾಯಕರು ನಮ್ಮ ಸಮುದಾಯದೊಂದಿಗೆ (ಬಿಎಸ್ಪಿಗೆ ಮತಹಾಕುವ ಬೃಹತ್ ಸಮುದಾಯ) ಇರಬೇಕಿತ್ತು. ಬದಲಾಗಿ, ಅವರೆಲ್ಲರೂ ಬ್ರಾಹ್ಮಣರನ್ನು ಸಮಾಧಾನಪಡಿಸುವಲ್ಲಿ ನಿರತರಾಗಿದ್ದರು” ಎಂದು ದೂರಿದ್ದಾರೆ.

“ನಮಗಾಗಿ ನಿಲ್ಲುವ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂಬುದು ಸ್ಪಷ್ಟವಾಗಿದೆ. ಆ ಪಟ್ಟಿಯಲ್ಲಿ ಬಿಜೆಪಿ ಇಲ್ಲ. ನಮ್ಮ ಸಮುದಾಯವು ಯಾವ ಪಕ್ಷದತ್ತ ಹೋಗುತ್ತದೆ ಎಂಬುದನ್ನು ಸಮಯ ನಿರ್ಧರಿಸುತ್ತದೆ” ಎಂದು ನರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ-2022: ಅಖಿಲೇಶ್‌ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!

ಒಂದು ಕಾಲದಲ್ಲಿ ಬಿಎಸ್‌ಪಿಯ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿದ್ದ ಆಗ್ರಾದ ಹಿರಿಯ ಬಿಎಸ್‌ಪಿ ಕಾರ್ಯಕರ್ತರೊಬ್ಬರು ಮಾತನಾಡಿ, “ಈ ಬಾರಿ 2017 ರ ಚುನಾವಣೆಯಂತಲ್ಲ. ಮೋದಿ ಅಥವಾ ಯೋಗಿ ಅಲೆ ಇಲ್ಲ. ಜನರು ಈಗ ತಮ್ಮ ಸಮಸ್ಯೆಗಳ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ. ಕಾರ್ಯಕರ್ತರಿಗೆ ಈ ಆಡಳಿತದಲ್ಲಿ ಎದುರಿಸಿದ ತಾರತಮ್ಯಗಳ ಬಗ್ಗೆ ತಿಳಿದಿದೆ. ಇಡೀ ಎಸ್‌ಸಿ, ಎಸ್‌ಟಿ ಸಮುದಾಯದ ಜನರು ತಮ್ಮ ಮೇಲಾದ ದೌರ್ಜನ್ಯ ಮತ್ತು ಅನ್ಯಾಯದ ಸಮಸ್ಯೆಯಿಂದ ಸಿಟ್ಟಿಗೆದ್ದಿದ್ದಾರೆ. ಬಿಎಸ್‌ಪಿ ತಮ್ಮ ಗೆಲುವನ್ನು ಖಾತ್ರಿ ಮಾಡಿಕೊಳ್ಳಲು ಈ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಪಕ್ಷವಾಗಿ ಸ್ಪರ್ಧಿಸಬೇಕು, ಅಭ್ಯರ್ಥಿಗಳಾಗಿ ಅಲ್ಲ” ಎಂದು ಹೇಳಿದ್ದಾರೆ.

ಫೆಬ್ರವರಿ 2 ರಂದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ರ್‍ಯಾಲಿಯಲ್ಲಿ ಆಗ್ರಾದಲ್ಲಿ ಮಾತನಾಡಿದ್ದ ಬಿಎಸ್‌ಪಿ ವರಿಷ್ಠೆ ಮಾಯಾವತಿ, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮಾತನಾಡಿದ್ದರು. “ನಾವು ಅಧಿಕಾರದಲ್ಲಿದ್ದಾಗ ಅದ್ಭುತ ಕೆಲಸ ಮಾಡಿದ್ದೇವೆ. ನಮ್ಮ ಆಡಳಿತದಲ್ಲಿ ಕೈಗೊಂಡ ಕಾರ್ಯಗಳನ್ನು ನಮ್ಮ ನಂತರ ಅಧಿಕಾರಕ್ಕೆ ಬಂದ ಪಕ್ಷಗಳು ನಕಲು ಮಾಡಿವೆ. ಎಲ್ಲ ಜಾತಿ, ಸಮುದಾಯಗಳ ಕಲ್ಯಾಣಕ್ಕಾಗಿ ನಮ್ಮ ಸರ್ಕಾರವನ್ನು ಮರಳಿ ತರಬೇಕು” ಎಂದು ಹೇಳಿದ್ದರು.

ಬಿಜೆಪಿಯಿಂದ ರಾಮರಾಜ್ಯ ಅಥವಾ ಆದರ್ಶ ರಾಜ್ಯ ಎಂದು ಕರೆಯಲ್ಪಟ್ಟಿರುವ ಉತ್ತರ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯು ಹಲವಾರು ಘಟನೆಗಳಿಂದಾಗಿ ಪ್ರಶ್ನಾರ್ಹವಾಗಿದೆ. ಇದರಲ್ಲಿ ಆಪಾದಿತ ಕಸ್ಟಡಿ ಸಾವುಗಳು ಮತ್ತು ಪೊಲೀಸ್ ದೌರ್ಜನ್ಯಗಳೂ ಸೇರಿವೆ. ಇದೆಲ್ಲದರ ನಡುವೆ, ಸೋಹನ್ ಸಿಂಗ್ ಅವರಂತಹ ಬಿಎಸ್‌ಪಿ ಕಾರ್ಯಕರ್ತರು ನಿಂದನೆಗಳಿಗೆ ಒಳಗಾದರೂ, ನಿಷ್ಠಾವಂತ ಕಾರ್ಯಕರ್ತರಂತೆ ಜನರನ್ನು ಬಿಎಸ್‌ಪಿಗೆ ಮತ ಹಾಕಲು ಮನವೊಲಿಸಲು ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ. ಆದರೆ, ಜನರು ಬಿಎಸ್ಪಿ ಮತ್ತು ಬಿಜೆಪಿಗೆ ಪರ್ಯಾಯವನ್ನು ಹುಡುಕುತ್ತಿದ್ದಾರೆ.

ಕೃಪೆ: News Click

ಇದನ್ನೂ ಓದಿ: ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....