Homeಅಂತರಾಷ್ಟ್ರೀಯಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

ಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

- Advertisement -
- Advertisement -

ಉಕ್ರೇನ್‌ನ ಗಡಿಭಾಗದಲ್ಲಿ ತನ್ನ ಸೇನಾ ನಿಯೋಜನೆಯನ್ನ ಹಿಂತೆಗೆದುಕೊಳ್ಳಲು ರಷ್ಯಾ ಸಿದ್ಧವಾಗಿಲ್ಲ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಷ್ಯಾವು ಉಕ್ರೇನ್ನ ಉತ್ತರದ ಗಡಿಭಾಗದಲ್ಲಿ ಮತ್ತು ಬೆಲಾರಸ್‌ನಲ್ಲಿ ತನ್ನ ಸೈನಿಕರು ಮತ್ತು ಸೇನಾ ಶಸ್ತ್ರಾಸ್ತ್ರಗಳ ಪ್ರಮಾಣವನ್ನು ಹೆಚ್ಚಿಸಿದೆ ಎಂದು ನ್ಯಾಟೋ ಸೆಕ್ರೆಟರಿ-ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ರಷ್ಯಾದ ಉದ್ದೇಶಗಳು ಏನಿರಬಹುದು ಎಂಬ ಅನಿಶ್ಚಿತತೆ ಜಾಗತಿಕ ಮಟ್ಟದಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಈ ನಡುವೆ ಮಾಸ್ಕೋ (ರಷ್ಯಾ ರಾಜಧಾನಿ) ಮತ್ತು ಕೈವ್‌ (ಉಕ್ರೇನ್‌ ರಾಜಧಾನಿ)ನಲ್ಲಿ ಹೆಚ್ಚಿನ ಉನ್ನತ ಮಟ್ಟದ ರಾಜತಾಂತ್ರಿಕತೆಯು ತೆರೆದುಕೊಂಡಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ 

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗಾನ್‌ ಅವರು ಉಕ್ರೇನ್ ರಾಜಧಾನಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಇದೇ ಸಮಯದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅರ್ಜೆಂಟೀನಾದ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಲಿದ್ದಾರೆ.

ಉಕ್ರೇನ್‌ನ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ 1,00,000 ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ನಿಯೋಜಿಸಿದೆ. 2014ರಲ್ಲಿ ಮಾಡಿದಂತೆಯೇ ರಷ್ಯಾ ಮತ್ತೊಮ್ಮೆ ಆಕ್ರಮಣ ಮಾಡಬಹುದು. ಇದರಿಂದಾಗಿ ಉಕ್ರೇನ್‌ನ ಆರ್ಥಿಕತೆ ಅಸ್ಥಿರಗೊಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ. ಆದರೆ, ಉಕ್ರೇನ್‌ ಮೇಲೆ ಆಕ್ರಮಣ ಮಾಡಲು ಯೋಜಿಸಲಾಗಿದೆ ಎಂಬ ಅನುಮಾನಗಳನ್ನು ರಷ್ಯಾದ ಅಧಿಕಾರಿಗಳು ನಿರಾಕರಿಸಿದ್ದಾರೆ.

ಆದರೂ, “ಕಳೆದ ಕೆಲವು ದಿನಗಳಿಂದ ರಷ್ಯಾ ಮಿಲಿಟರಿ ಪಡೆಗಳು ಬೆಲಾರಸ್‌ನಲ್ಲಿ ಬೀಡು ಬಿಡಲಾರಂಭಿಸಿವೆ. ಶೀತಲ ಸಮರದ ನಂತರ ಇದು ರಷ್ಯಾದ ಅತಿದೊಡ್ಡ ನಿಯೋಜನೆಯಾಗಿದೆ” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶೇಷ ಪಡೆಗಳು, ಸುಧಾರಿತ ಫೈಟರ್ ಜೆಟ್‌ಗಳು, ಇಸ್ಕಾಂಡರ್ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು S-400 ಗ್ರೌಂಡ್‌ ಟು ಏರ್‌ ಕ್ಷಿಪಣಿಗಳು ಸೇರಿದಂತೆ 30,000 ಸೈನಿಕರನ್ನು ರಷ್ಯಾವು ಬೆಲಾರಸ್‌ನಲ್ಲಿ ಸಜ್ಜುಗೊಳಿಸಿದೆ ಎಂದು ಸ್ಟೋಲ್ಟೆನ್‌ಬರ್ಗ್‌ ಹೇಳಿದ್ದಾರೆ.

ಅದೇ ಸಮಯದಲ್ಲಿ, ಉಕ್ರೇನ್ ಕಳೆದ ತಿಂಗಳು ಡ್ರೋನ್ ಮೂಲಕ ದೇಶದ ವಾಯುಪ್ರದೇಶದ ಗಡಿ ಉಲ್ಲಂಘನೆಯನ್ನು ಮಾಡಿದೆ ಎಂದು ಬೆಲಾರಸ್‌ನ ರಕ್ಷಣಾ ಸಚಿವಾಲಯವು ಆರೋಪಿಸಿದೆ. ಬೆಲಾರಸ್‌ನ ಆರೋಪವನ್ನು ತಿರಸ್ಕರಿಸಿರುವ ಉಕ್ರೇನ್, ತಮ್ಮನ್ನು ಮತ್ತಷ್ಟು ಅಸ್ಥಿರಗೊಳಿಸಲು ರಷ್ಯಾದೊಂದಿಗೆ ಬೆಲಾರಸ್ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಉಕ್ರೇನ್‌ಅನ್ನು ಅಸ್ಥಿರಗೊಳಿಸುವ ರಷ್ಯಾದ ಚಟುವಟಿಕೆಗಳನ್ನು ತಡೆಯಲು ನಾವು ಮಿನ್ಸ್ಕ್‌ಗೆ ಕರೆ ನೀಡುತ್ತೇವೆ. ಬೆದರಿಕೆ ಅಸ್ತಿತ್ವದಲ್ಲಿದೆ, ಅಪಾಯಗಳು ಅಸ್ತಿತ್ವದಲ್ಲಿವೆ, ಆದರೆ ಅವರು 2014 ರಿಂದಲೂ ಇದು ಮುಂದುವರೆಯುತ್ತಿದೆ. ಅಂದಿನಿಂದಲೂ ರಷ್ಯಾ ಆಕ್ರಮಣಕಾರಿಯಾಗಿದೆ” ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯದ ವಕ್ತಾರ ಒಲೆಗ್ ನಿಕೊಲೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ರಷ್ಯಾ ಹೊಸ ಯುದ್ಧವನ್ನು ಬಯಸುವುದಿಲ್ಲ ಎನ್ನುವುದಾರೆ, ರಷ್ಯಾ ರಾಜತಾಂತ್ರಿಕ ಒಪ್ಪಂದಗಳನ್ನು ಮುಂದುವರೆಸಬೇಕು. ಉಕ್ರೇನ್‌ನ ಗಡಿಗಳಲ್ಲಿ ಮತ್ತು ಉಕ್ರೇನ್‌ ಭಾಗದ ಆಕ್ರಮಿತ ಪ್ರದೇಶಗಳಲ್ಲಿ ನಿಯೋಜಿಸಿರುವ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು. ರಾಜತಾಂತ್ರಿಕತೆ ಮಾತ್ರವೇ ಜವಾಬ್ದಾರಿಯುತ ಮಾರ್ಗವಾಗಿದೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ಟ್ವೀಟ್‌ ಮಾಡಿದ್ದಾರೆ.

ರಷ್ಯಾ ಆಕ್ರಮಣ ಮಾಡಿದರೆ ಉಕ್ರೇನ್‌ಗೆ ಸೈನ್ಯವನ್ನು ನಿಯೋಜಿಸುವ ಉದ್ದೇಶವನ್ನು NATO ಹೊಂದಿಲ್ಲ. ಆದರೆ, ಉಕ್ರೇನ್‌ ಸಮೀಪವಿರುವ ನ್ಯಾಟೋದ ಸದಸ್ಯ ರಾಷ್ಟ್ರಗಳ (ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಪೋಲೆಂಡ್) ರಕ್ಷಣೆಯನ್ನು ಬಲಪಡಿಸಲು ಪ್ರಾರಂಭಿಸಿದೆ. 30 ರಾಷ್ಟ್ರಗಳ ಮಿಲಿಟರಿ ಮೈತ್ರಿಕೂಟವಾದ ನ್ಯಾಟೋ, ಬಲ್ಗೇರಿಯಾ ಮತ್ತು ರೊಮೇನಿಯಾ ಬಳಿಯ ಕಪ್ಪು ಸಮುದ್ರ ಪ್ರದೇಶದಲ್ಲಿ ತನ್ನ ರಕ್ಷಣೆಯನ್ನು ಹೆಚ್ಚಿಸಲು ಯೋಜಿಸುತ್ತಿದೆ.

2,000 ಅಮೆರಿಕಾ ಸೈನಿಕರನ್ನು ಪೋಲೆಂಡ್ ಮತ್ತು ಜರ್ಮನಿಗೆ ಕಳುಹಿಸಲು ಮತ್ತು ಜರ್ಮನಿಯಿಂದ ರೊಮೇನಿಯಾಗೆ 1,000 ಸೈನಿಕರನ್ನು ಸ್ಥಳಾಂತರಿಸಲು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸಿರುವ ಸ್ಟೋಲ್ಟೆನ್‌ಬರ್ಗ್, ಇದು ಪೂರ್ವ ದೇಶಗಳ ಬಗ್ಗೆ NATOದ ಸದಸ್ಯ ರಾಷ್ಟ್ರವಾಗಿರುವ ಅಮೆರಿಕಾದ ಬದ್ಧತೆಯನ್ನು ಮಿತ್ರರಾಷ್ಟ್ರಗಳು ಮತ್ತು ಶತ್ರುಗಳಿಗೆ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

“ಬಿಕ್ಕಟ್ಟಿಗೆ ರಾಜಕೀಯ ಪರಿಹಾರವನ್ನು ಕಂಡುಹಿಡಿಯಲು ನಾವು ಬದ್ಧರಾಗಿದ್ದೇವೆ. ಆದರೆ, ಕೆಟ್ಟ ಪರಿಸ್ಥಿತಿ ಎದುರಾದರೆ, ಅದನ್ನು ನಿಭಾಯಿಸಲು ನಾವು ಸಿದ್ಧರಾಗಿರಬೇಕು” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...