Homeಅಂತರಾಷ್ಟ್ರೀಯಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

ಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

- Advertisement -
- Advertisement -

ಉಕ್ರೇನ್‌ನ ಗಡಿಭಾಗದಲ್ಲಿ ತನ್ನ ಸೇನಾ ನಿಯೋಜನೆಯನ್ನ ಹಿಂತೆಗೆದುಕೊಳ್ಳಲು ರಷ್ಯಾ ಸಿದ್ಧವಾಗಿಲ್ಲ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಷ್ಯಾವು ಉಕ್ರೇನ್ನ ಉತ್ತರದ ಗಡಿಭಾಗದಲ್ಲಿ ಮತ್ತು ಬೆಲಾರಸ್‌ನಲ್ಲಿ ತನ್ನ ಸೈನಿಕರು ಮತ್ತು ಸೇನಾ ಶಸ್ತ್ರಾಸ್ತ್ರಗಳ ಪ್ರಮಾಣವನ್ನು ಹೆಚ್ಚಿಸಿದೆ ಎಂದು ನ್ಯಾಟೋ ಸೆಕ್ರೆಟರಿ-ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ರಷ್ಯಾದ ಉದ್ದೇಶಗಳು ಏನಿರಬಹುದು ಎಂಬ ಅನಿಶ್ಚಿತತೆ ಜಾಗತಿಕ ಮಟ್ಟದಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಈ ನಡುವೆ ಮಾಸ್ಕೋ (ರಷ್ಯಾ ರಾಜಧಾನಿ) ಮತ್ತು ಕೈವ್‌ (ಉಕ್ರೇನ್‌ ರಾಜಧಾನಿ)ನಲ್ಲಿ ಹೆಚ್ಚಿನ ಉನ್ನತ ಮಟ್ಟದ ರಾಜತಾಂತ್ರಿಕತೆಯು ತೆರೆದುಕೊಂಡಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ 

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗಾನ್‌ ಅವರು ಉಕ್ರೇನ್ ರಾಜಧಾನಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಇದೇ ಸಮಯದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅರ್ಜೆಂಟೀನಾದ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಲಿದ್ದಾರೆ.

ಉಕ್ರೇನ್‌ನ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ 1,00,000 ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ನಿಯೋಜಿಸಿದೆ. 2014ರಲ್ಲಿ ಮಾಡಿದಂತೆಯೇ ರಷ್ಯಾ ಮತ್ತೊಮ್ಮೆ ಆಕ್ರಮಣ ಮಾಡಬಹುದು. ಇದರಿಂದಾಗಿ ಉಕ್ರೇನ್‌ನ ಆರ್ಥಿಕತೆ ಅಸ್ಥಿರಗೊಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ. ಆದರೆ, ಉಕ್ರೇನ್‌ ಮೇಲೆ ಆಕ್ರಮಣ ಮಾಡಲು ಯೋಜಿಸಲಾಗಿದೆ ಎಂಬ ಅನುಮಾನಗಳನ್ನು ರಷ್ಯಾದ ಅಧಿಕಾರಿಗಳು ನಿರಾಕರಿಸಿದ್ದಾರೆ.

ಆದರೂ, “ಕಳೆದ ಕೆಲವು ದಿನಗಳಿಂದ ರಷ್ಯಾ ಮಿಲಿಟರಿ ಪಡೆಗಳು ಬೆಲಾರಸ್‌ನಲ್ಲಿ ಬೀಡು ಬಿಡಲಾರಂಭಿಸಿವೆ. ಶೀತಲ ಸಮರದ ನಂತರ ಇದು ರಷ್ಯಾದ ಅತಿದೊಡ್ಡ ನಿಯೋಜನೆಯಾಗಿದೆ” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶೇಷ ಪಡೆಗಳು, ಸುಧಾರಿತ ಫೈಟರ್ ಜೆಟ್‌ಗಳು, ಇಸ್ಕಾಂಡರ್ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು S-400 ಗ್ರೌಂಡ್‌ ಟು ಏರ್‌ ಕ್ಷಿಪಣಿಗಳು ಸೇರಿದಂತೆ 30,000 ಸೈನಿಕರನ್ನು ರಷ್ಯಾವು ಬೆಲಾರಸ್‌ನಲ್ಲಿ ಸಜ್ಜುಗೊಳಿಸಿದೆ ಎಂದು ಸ್ಟೋಲ್ಟೆನ್‌ಬರ್ಗ್‌ ಹೇಳಿದ್ದಾರೆ.

ಅದೇ ಸಮಯದಲ್ಲಿ, ಉಕ್ರೇನ್ ಕಳೆದ ತಿಂಗಳು ಡ್ರೋನ್ ಮೂಲಕ ದೇಶದ ವಾಯುಪ್ರದೇಶದ ಗಡಿ ಉಲ್ಲಂಘನೆಯನ್ನು ಮಾಡಿದೆ ಎಂದು ಬೆಲಾರಸ್‌ನ ರಕ್ಷಣಾ ಸಚಿವಾಲಯವು ಆರೋಪಿಸಿದೆ. ಬೆಲಾರಸ್‌ನ ಆರೋಪವನ್ನು ತಿರಸ್ಕರಿಸಿರುವ ಉಕ್ರೇನ್, ತಮ್ಮನ್ನು ಮತ್ತಷ್ಟು ಅಸ್ಥಿರಗೊಳಿಸಲು ರಷ್ಯಾದೊಂದಿಗೆ ಬೆಲಾರಸ್ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಉಕ್ರೇನ್‌ಅನ್ನು ಅಸ್ಥಿರಗೊಳಿಸುವ ರಷ್ಯಾದ ಚಟುವಟಿಕೆಗಳನ್ನು ತಡೆಯಲು ನಾವು ಮಿನ್ಸ್ಕ್‌ಗೆ ಕರೆ ನೀಡುತ್ತೇವೆ. ಬೆದರಿಕೆ ಅಸ್ತಿತ್ವದಲ್ಲಿದೆ, ಅಪಾಯಗಳು ಅಸ್ತಿತ್ವದಲ್ಲಿವೆ, ಆದರೆ ಅವರು 2014 ರಿಂದಲೂ ಇದು ಮುಂದುವರೆಯುತ್ತಿದೆ. ಅಂದಿನಿಂದಲೂ ರಷ್ಯಾ ಆಕ್ರಮಣಕಾರಿಯಾಗಿದೆ” ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯದ ವಕ್ತಾರ ಒಲೆಗ್ ನಿಕೊಲೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ರಷ್ಯಾ ಹೊಸ ಯುದ್ಧವನ್ನು ಬಯಸುವುದಿಲ್ಲ ಎನ್ನುವುದಾರೆ, ರಷ್ಯಾ ರಾಜತಾಂತ್ರಿಕ ಒಪ್ಪಂದಗಳನ್ನು ಮುಂದುವರೆಸಬೇಕು. ಉಕ್ರೇನ್‌ನ ಗಡಿಗಳಲ್ಲಿ ಮತ್ತು ಉಕ್ರೇನ್‌ ಭಾಗದ ಆಕ್ರಮಿತ ಪ್ರದೇಶಗಳಲ್ಲಿ ನಿಯೋಜಿಸಿರುವ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು. ರಾಜತಾಂತ್ರಿಕತೆ ಮಾತ್ರವೇ ಜವಾಬ್ದಾರಿಯುತ ಮಾರ್ಗವಾಗಿದೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ಟ್ವೀಟ್‌ ಮಾಡಿದ್ದಾರೆ.

ರಷ್ಯಾ ಆಕ್ರಮಣ ಮಾಡಿದರೆ ಉಕ್ರೇನ್‌ಗೆ ಸೈನ್ಯವನ್ನು ನಿಯೋಜಿಸುವ ಉದ್ದೇಶವನ್ನು NATO ಹೊಂದಿಲ್ಲ. ಆದರೆ, ಉಕ್ರೇನ್‌ ಸಮೀಪವಿರುವ ನ್ಯಾಟೋದ ಸದಸ್ಯ ರಾಷ್ಟ್ರಗಳ (ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಪೋಲೆಂಡ್) ರಕ್ಷಣೆಯನ್ನು ಬಲಪಡಿಸಲು ಪ್ರಾರಂಭಿಸಿದೆ. 30 ರಾಷ್ಟ್ರಗಳ ಮಿಲಿಟರಿ ಮೈತ್ರಿಕೂಟವಾದ ನ್ಯಾಟೋ, ಬಲ್ಗೇರಿಯಾ ಮತ್ತು ರೊಮೇನಿಯಾ ಬಳಿಯ ಕಪ್ಪು ಸಮುದ್ರ ಪ್ರದೇಶದಲ್ಲಿ ತನ್ನ ರಕ್ಷಣೆಯನ್ನು ಹೆಚ್ಚಿಸಲು ಯೋಜಿಸುತ್ತಿದೆ.

2,000 ಅಮೆರಿಕಾ ಸೈನಿಕರನ್ನು ಪೋಲೆಂಡ್ ಮತ್ತು ಜರ್ಮನಿಗೆ ಕಳುಹಿಸಲು ಮತ್ತು ಜರ್ಮನಿಯಿಂದ ರೊಮೇನಿಯಾಗೆ 1,000 ಸೈನಿಕರನ್ನು ಸ್ಥಳಾಂತರಿಸಲು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸಿರುವ ಸ್ಟೋಲ್ಟೆನ್‌ಬರ್ಗ್, ಇದು ಪೂರ್ವ ದೇಶಗಳ ಬಗ್ಗೆ NATOದ ಸದಸ್ಯ ರಾಷ್ಟ್ರವಾಗಿರುವ ಅಮೆರಿಕಾದ ಬದ್ಧತೆಯನ್ನು ಮಿತ್ರರಾಷ್ಟ್ರಗಳು ಮತ್ತು ಶತ್ರುಗಳಿಗೆ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

“ಬಿಕ್ಕಟ್ಟಿಗೆ ರಾಜಕೀಯ ಪರಿಹಾರವನ್ನು ಕಂಡುಹಿಡಿಯಲು ನಾವು ಬದ್ಧರಾಗಿದ್ದೇವೆ. ಆದರೆ, ಕೆಟ್ಟ ಪರಿಸ್ಥಿತಿ ಎದುರಾದರೆ, ಅದನ್ನು ನಿಭಾಯಿಸಲು ನಾವು ಸಿದ್ಧರಾಗಿರಬೇಕು” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...