Homeಅಂತರಾಷ್ಟ್ರೀಯಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

ಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

- Advertisement -
- Advertisement -

ಉಕ್ರೇನ್‌ನ ಗಡಿಭಾಗದಲ್ಲಿ ತನ್ನ ಸೇನಾ ನಿಯೋಜನೆಯನ್ನ ಹಿಂತೆಗೆದುಕೊಳ್ಳಲು ರಷ್ಯಾ ಸಿದ್ಧವಾಗಿಲ್ಲ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಷ್ಯಾವು ಉಕ್ರೇನ್ನ ಉತ್ತರದ ಗಡಿಭಾಗದಲ್ಲಿ ಮತ್ತು ಬೆಲಾರಸ್‌ನಲ್ಲಿ ತನ್ನ ಸೈನಿಕರು ಮತ್ತು ಸೇನಾ ಶಸ್ತ್ರಾಸ್ತ್ರಗಳ ಪ್ರಮಾಣವನ್ನು ಹೆಚ್ಚಿಸಿದೆ ಎಂದು ನ್ಯಾಟೋ ಸೆಕ್ರೆಟರಿ-ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ರಷ್ಯಾದ ಉದ್ದೇಶಗಳು ಏನಿರಬಹುದು ಎಂಬ ಅನಿಶ್ಚಿತತೆ ಜಾಗತಿಕ ಮಟ್ಟದಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಈ ನಡುವೆ ಮಾಸ್ಕೋ (ರಷ್ಯಾ ರಾಜಧಾನಿ) ಮತ್ತು ಕೈವ್‌ (ಉಕ್ರೇನ್‌ ರಾಜಧಾನಿ)ನಲ್ಲಿ ಹೆಚ್ಚಿನ ಉನ್ನತ ಮಟ್ಟದ ರಾಜತಾಂತ್ರಿಕತೆಯು ತೆರೆದುಕೊಂಡಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ 

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗಾನ್‌ ಅವರು ಉಕ್ರೇನ್ ರಾಜಧಾನಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಇದೇ ಸಮಯದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅರ್ಜೆಂಟೀನಾದ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಲಿದ್ದಾರೆ.

ಉಕ್ರೇನ್‌ನ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ 1,00,000 ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ನಿಯೋಜಿಸಿದೆ. 2014ರಲ್ಲಿ ಮಾಡಿದಂತೆಯೇ ರಷ್ಯಾ ಮತ್ತೊಮ್ಮೆ ಆಕ್ರಮಣ ಮಾಡಬಹುದು. ಇದರಿಂದಾಗಿ ಉಕ್ರೇನ್‌ನ ಆರ್ಥಿಕತೆ ಅಸ್ಥಿರಗೊಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ. ಆದರೆ, ಉಕ್ರೇನ್‌ ಮೇಲೆ ಆಕ್ರಮಣ ಮಾಡಲು ಯೋಜಿಸಲಾಗಿದೆ ಎಂಬ ಅನುಮಾನಗಳನ್ನು ರಷ್ಯಾದ ಅಧಿಕಾರಿಗಳು ನಿರಾಕರಿಸಿದ್ದಾರೆ.

ಆದರೂ, “ಕಳೆದ ಕೆಲವು ದಿನಗಳಿಂದ ರಷ್ಯಾ ಮಿಲಿಟರಿ ಪಡೆಗಳು ಬೆಲಾರಸ್‌ನಲ್ಲಿ ಬೀಡು ಬಿಡಲಾರಂಭಿಸಿವೆ. ಶೀತಲ ಸಮರದ ನಂತರ ಇದು ರಷ್ಯಾದ ಅತಿದೊಡ್ಡ ನಿಯೋಜನೆಯಾಗಿದೆ” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶೇಷ ಪಡೆಗಳು, ಸುಧಾರಿತ ಫೈಟರ್ ಜೆಟ್‌ಗಳು, ಇಸ್ಕಾಂಡರ್ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು S-400 ಗ್ರೌಂಡ್‌ ಟು ಏರ್‌ ಕ್ಷಿಪಣಿಗಳು ಸೇರಿದಂತೆ 30,000 ಸೈನಿಕರನ್ನು ರಷ್ಯಾವು ಬೆಲಾರಸ್‌ನಲ್ಲಿ ಸಜ್ಜುಗೊಳಿಸಿದೆ ಎಂದು ಸ್ಟೋಲ್ಟೆನ್‌ಬರ್ಗ್‌ ಹೇಳಿದ್ದಾರೆ.

ಅದೇ ಸಮಯದಲ್ಲಿ, ಉಕ್ರೇನ್ ಕಳೆದ ತಿಂಗಳು ಡ್ರೋನ್ ಮೂಲಕ ದೇಶದ ವಾಯುಪ್ರದೇಶದ ಗಡಿ ಉಲ್ಲಂಘನೆಯನ್ನು ಮಾಡಿದೆ ಎಂದು ಬೆಲಾರಸ್‌ನ ರಕ್ಷಣಾ ಸಚಿವಾಲಯವು ಆರೋಪಿಸಿದೆ. ಬೆಲಾರಸ್‌ನ ಆರೋಪವನ್ನು ತಿರಸ್ಕರಿಸಿರುವ ಉಕ್ರೇನ್, ತಮ್ಮನ್ನು ಮತ್ತಷ್ಟು ಅಸ್ಥಿರಗೊಳಿಸಲು ರಷ್ಯಾದೊಂದಿಗೆ ಬೆಲಾರಸ್ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಉಕ್ರೇನ್‌ಅನ್ನು ಅಸ್ಥಿರಗೊಳಿಸುವ ರಷ್ಯಾದ ಚಟುವಟಿಕೆಗಳನ್ನು ತಡೆಯಲು ನಾವು ಮಿನ್ಸ್ಕ್‌ಗೆ ಕರೆ ನೀಡುತ್ತೇವೆ. ಬೆದರಿಕೆ ಅಸ್ತಿತ್ವದಲ್ಲಿದೆ, ಅಪಾಯಗಳು ಅಸ್ತಿತ್ವದಲ್ಲಿವೆ, ಆದರೆ ಅವರು 2014 ರಿಂದಲೂ ಇದು ಮುಂದುವರೆಯುತ್ತಿದೆ. ಅಂದಿನಿಂದಲೂ ರಷ್ಯಾ ಆಕ್ರಮಣಕಾರಿಯಾಗಿದೆ” ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯದ ವಕ್ತಾರ ಒಲೆಗ್ ನಿಕೊಲೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ರಷ್ಯಾ ಹೊಸ ಯುದ್ಧವನ್ನು ಬಯಸುವುದಿಲ್ಲ ಎನ್ನುವುದಾರೆ, ರಷ್ಯಾ ರಾಜತಾಂತ್ರಿಕ ಒಪ್ಪಂದಗಳನ್ನು ಮುಂದುವರೆಸಬೇಕು. ಉಕ್ರೇನ್‌ನ ಗಡಿಗಳಲ್ಲಿ ಮತ್ತು ಉಕ್ರೇನ್‌ ಭಾಗದ ಆಕ್ರಮಿತ ಪ್ರದೇಶಗಳಲ್ಲಿ ನಿಯೋಜಿಸಿರುವ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು. ರಾಜತಾಂತ್ರಿಕತೆ ಮಾತ್ರವೇ ಜವಾಬ್ದಾರಿಯುತ ಮಾರ್ಗವಾಗಿದೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ಟ್ವೀಟ್‌ ಮಾಡಿದ್ದಾರೆ.

ರಷ್ಯಾ ಆಕ್ರಮಣ ಮಾಡಿದರೆ ಉಕ್ರೇನ್‌ಗೆ ಸೈನ್ಯವನ್ನು ನಿಯೋಜಿಸುವ ಉದ್ದೇಶವನ್ನು NATO ಹೊಂದಿಲ್ಲ. ಆದರೆ, ಉಕ್ರೇನ್‌ ಸಮೀಪವಿರುವ ನ್ಯಾಟೋದ ಸದಸ್ಯ ರಾಷ್ಟ್ರಗಳ (ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಪೋಲೆಂಡ್) ರಕ್ಷಣೆಯನ್ನು ಬಲಪಡಿಸಲು ಪ್ರಾರಂಭಿಸಿದೆ. 30 ರಾಷ್ಟ್ರಗಳ ಮಿಲಿಟರಿ ಮೈತ್ರಿಕೂಟವಾದ ನ್ಯಾಟೋ, ಬಲ್ಗೇರಿಯಾ ಮತ್ತು ರೊಮೇನಿಯಾ ಬಳಿಯ ಕಪ್ಪು ಸಮುದ್ರ ಪ್ರದೇಶದಲ್ಲಿ ತನ್ನ ರಕ್ಷಣೆಯನ್ನು ಹೆಚ್ಚಿಸಲು ಯೋಜಿಸುತ್ತಿದೆ.

2,000 ಅಮೆರಿಕಾ ಸೈನಿಕರನ್ನು ಪೋಲೆಂಡ್ ಮತ್ತು ಜರ್ಮನಿಗೆ ಕಳುಹಿಸಲು ಮತ್ತು ಜರ್ಮನಿಯಿಂದ ರೊಮೇನಿಯಾಗೆ 1,000 ಸೈನಿಕರನ್ನು ಸ್ಥಳಾಂತರಿಸಲು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸಿರುವ ಸ್ಟೋಲ್ಟೆನ್‌ಬರ್ಗ್, ಇದು ಪೂರ್ವ ದೇಶಗಳ ಬಗ್ಗೆ NATOದ ಸದಸ್ಯ ರಾಷ್ಟ್ರವಾಗಿರುವ ಅಮೆರಿಕಾದ ಬದ್ಧತೆಯನ್ನು ಮಿತ್ರರಾಷ್ಟ್ರಗಳು ಮತ್ತು ಶತ್ರುಗಳಿಗೆ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

“ಬಿಕ್ಕಟ್ಟಿಗೆ ರಾಜಕೀಯ ಪರಿಹಾರವನ್ನು ಕಂಡುಹಿಡಿಯಲು ನಾವು ಬದ್ಧರಾಗಿದ್ದೇವೆ. ಆದರೆ, ಕೆಟ್ಟ ಪರಿಸ್ಥಿತಿ ಎದುರಾದರೆ, ಅದನ್ನು ನಿಭಾಯಿಸಲು ನಾವು ಸಿದ್ಧರಾಗಿರಬೇಕು” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...