Homeಮುಖಪುಟಪಂಚರಾಜ್ಯ ಚುನಾವಣೆ ಮುಖ್ಯಾಂಶಗಳು: ಆದಿತ್ಯನಾಥ್‌‌ ನಾಮಪತ್ರ ಸಲ್ಲಿಕೆ; BJPಗೆ ಓಟಿಲ್ಲ ಎಂದ ರೈತರು!

ಪಂಚರಾಜ್ಯ ಚುನಾವಣೆ ಮುಖ್ಯಾಂಶಗಳು: ಆದಿತ್ಯನಾಥ್‌‌ ನಾಮಪತ್ರ ಸಲ್ಲಿಕೆ; BJPಗೆ ಓಟಿಲ್ಲ ಎಂದ ರೈತರು!

- Advertisement -
- Advertisement -

ಉತ್ತರಪ್ರದೇಶ, ಪಂಜಾಬ್, ಉತ್ತರಖಂಡ್, ಗೋವಾ ಮತ್ತು ಮಣಿಪುರ ರಾಜ್ಯಗಳಿಗೆ ಫೆಬ್ರವರಿ 10ರಿಂದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಐದೂ ರಾಜ್ಯಗಳಲ್ಲಿ ಸೆಣಸಾಟಕ್ಕೆ ಕಣ ಸಿದ್ದವಾಗಿದೆ. ರಾಷ್ಟ್ರೀಯ ಮತ್ತು ಸ್ಥಳೀಯ ಪಕ್ಷಗಳು ಚುನಾವಣೆಗೆ ಬಿರುಸಿನ ತಯಾರಿ ನಡೆಸುತ್ತಿವೆ.

ಪಂಚರಾಜ್ಯ ಚುನಾವಣಾ ಕಣದ ಫೆಬ್ರವರಿ 4ರ ಪ್ರಮುಖ ಅಂಶಗಳು ಹೀಗಿವೆ:

1. ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಇಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಗೋರಖ್‌ಪುರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಮೇಲೆ ಆದಿತ್ಯನಾಥ್ ಜೊತೆಗೆ ಗೋರಖ್‌ಪುರದಲ್ಲಿ ರೋಡ್ ಶೋ ನಡೆಸಿದ ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್ ಶಾ, ಬಿಜೆಪಿಯು ಉತ್ತರಪ್ರದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದ: ಕಠಿಣ ನಿಲುವು ತಳೆಯದ ಬೊಮ್ಮಾಯಿ ಸರ್ಕಾರ 

2. ಮಣಿಪುರದ ವಿಧಾನಸಭಾ ಸ್ಪೀಕರ್ ಯುಮನ್ ಕೆಂಚದ್ ಸಿಂಗ್ ಅವರು ಮಣಿಪುರದ 13-ಸಿಗ್ನಾಮೆಯ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಮಣಿಪುರದ ನಾಲ್ವರು ಸಚಿವರು ಕೂಡ ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

3. ನೂರಾರು ರೈತರ ಸಾವಿಗೆ ಕಾರಣವಾದ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಯ ಭರವಸೆ ನೀಡಿ ಸಮಿತಿಯನ್ನೂ ರಚಿಸದ ಬಿಜೆಪಿಗೆ ಈ ಬಾರಿಯ ಮತ ನೀಡದಂತೆ ಉತ್ತರ ಪ್ರದೇಶ ಹಾಗೂ ಚುನಾವಣೆ ನಡೆಯುತ್ತಿರುವ ಎಲ್ಲಾ ರಾಜ್ಯಗಳ ಜನರಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದಕ್ಕಾಗಿ ಕರಪತ್ರವೊಂದನ್ನು ಹೊರಡಿಸಿದ್ದು, ಅದನ್ನು ಸ್ವಯಂಪ್ರೇರಿತರಾಗಿ ಹಂಚುವಂತೆ ಜನರಲ್ಲಿ ರೈತ ಮುಖಂಡರು ಮನವಿ ಮಾಡಿದ್ದಾರೆ.

4. ಪಂಜಾಬ್ ಚುನಾವಣೆಗೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ, ಪಂಜಾಬ್ ಮುಖ್ಯಮಂತ್ರಿ ಚರಣಜಿತ್‌ ಸಿಂಗ್ ಚನ್ನಿ ಅವರ ಸೋದರಳಿಯ ಭೂಪೇಂದ್ರ ಸಿಂಗ್ ಹನಿ ಅವರನ್ನು ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದ್ದು, ಶುಕ್ರವಾರ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಾಕ್ಷ್ಯವಿಲ್ಲ-ಎಸ್‌ಐಟಿ

5. ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಇಂದು ಗೋವಾದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರು ತಮ್ಮ ಅಭ್ಯರ್ಥಿಗಳ ಪರವಾಗಿ ಮನೆ-ಮನೆ ಪ್ರಚಾರವನ್ನು ನಡೆಸುತ್ತಿದ್ದಾರೆ. ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮಂದಿರ, ಮಸೀದಿ, ಚರ್ಚ್‌ಗಳ ಮುಂದೆ ಪ್ರಮಾಣ ವಚನ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಕಲ್ಪ್ ಅಮೋನ್ಕರ್ ತಿಳಿಸಿದ್ದಾರೆ.

6. ಉತ್ತರಪ್ರದೇಶದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಅದರ ಮೈತ್ರಿ ಪಕ್ಷ ಅಪ್ನಾ ದಳ (ಕೆ) ನಡುವೆ ಬಿರುಕು ಹೆಚ್ಚುತ್ತಿದೆ. ಸೀಟು ಹಂಚಿಕೆಯಲ್ಲಿ ಅಪ್ನಾ ದಳ ನಿರೀಕ್ಷಿಸಿದ್ದ ಅಲಹಾಬಾದ್ ಪಶ್ಚಿಮ ಕ್ಷೇತ್ರದಿಂದ ಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ನಂತರ ಮೈತ್ರಿ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ತಲೆದೂರಿದೆ. ಶುಕ್ರವಾರ ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಮತ್ತು ಅಪ್ನಾ ದಳದ ನಾಯಕ ಪಲ್ಲವಿ ಪಟೇಲ್ ನಡುವೆ ಮಾತುಕತೆ ನಡೆಯಲಿದೆ. ನಂತರ, ಅಪ್ನಾ ದಳವು ಎಸ್‌ಪಿ ಜೊತೆ ಉಳಿಯುವುದೇ ಇಲ್ಲವೇ ಎಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

7. “ರೈತ ಆಂದೋಲನ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದ್ದ ಕನಿಷ್ಠ ಬೆಂಬಲ ಬೆಲೆಗಾಗಿ ಸಮಿತಿ ರಚಿಸಲು ಒಕ್ಕೂಟ ಸರ್ಕಾರ ಬದ್ಧವಾಗಿದೆ. ಆದರೆ, ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದಾಗಿ, ಚುನಾವಣೆ ಮುಗಿದ ನಂತರ ಸಮಿತಿಯನ್ನು ರಚಿಸುವಂತೆ ಚುನಾವಣಾ ಆಯೋಗ ಸೂಚಿಸಿದೆ. ಚುನಾವಣೆಯ ನಂತರ ಸಮಿತಿ ರಚಿಸಲಾಗುವುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

8. ಕಾಂಗ್ರೆಸ್ ಜನರಿಗಾಗಿ ಕೆಲಸ ಮಾಡಿದ್ದರೆ, ನನ್ನಂತವರು ರಾಜಕೀಯಕ್ಕೆ ಬರುವ ಅಗತ್ಯವೇ ಇರಲಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕೇಜ್ರಿವಾಲ್ ಅವರನ್ನು ‘ಛೋಟಾ ಮೋದಿ’ ಎಂದು ಗುರುವಾರ ಕರೆದಿದ್ದರು. ಈ ಕುರಿತು ಗೋವಾ ಚುನಾವಣಾ ಪ್ರಚಾರದಲ್ಲಿ ಪ್ರತಿಕ್ರಿಯಿಸಿದ ಕೇಜ್ರಿವಾಲ್, “ಅವರು ಹೀಗೆಲ್ಲ ಮಾತನಾಡುವ ಬದಲು ಜನರಿಗಾಗಿ ಕೆಲಸ ಮಾಡಿದ್ದರೆ, ನನ್ನಂತವರು ರಾಜಕೀಯಕ್ಕೆ ಬರುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...