Homeಮುಖಪುಟಪಂಚರಾಜ್ಯ ಚುನಾವಣೆ ಮುಖ್ಯಾಂಶಗಳು: ಆದಿತ್ಯನಾಥ್‌‌ ನಾಮಪತ್ರ ಸಲ್ಲಿಕೆ; BJPಗೆ ಓಟಿಲ್ಲ ಎಂದ ರೈತರು!

ಪಂಚರಾಜ್ಯ ಚುನಾವಣೆ ಮುಖ್ಯಾಂಶಗಳು: ಆದಿತ್ಯನಾಥ್‌‌ ನಾಮಪತ್ರ ಸಲ್ಲಿಕೆ; BJPಗೆ ಓಟಿಲ್ಲ ಎಂದ ರೈತರು!

- Advertisement -
- Advertisement -

ಉತ್ತರಪ್ರದೇಶ, ಪಂಜಾಬ್, ಉತ್ತರಖಂಡ್, ಗೋವಾ ಮತ್ತು ಮಣಿಪುರ ರಾಜ್ಯಗಳಿಗೆ ಫೆಬ್ರವರಿ 10ರಿಂದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಐದೂ ರಾಜ್ಯಗಳಲ್ಲಿ ಸೆಣಸಾಟಕ್ಕೆ ಕಣ ಸಿದ್ದವಾಗಿದೆ. ರಾಷ್ಟ್ರೀಯ ಮತ್ತು ಸ್ಥಳೀಯ ಪಕ್ಷಗಳು ಚುನಾವಣೆಗೆ ಬಿರುಸಿನ ತಯಾರಿ ನಡೆಸುತ್ತಿವೆ.

ಪಂಚರಾಜ್ಯ ಚುನಾವಣಾ ಕಣದ ಫೆಬ್ರವರಿ 4ರ ಪ್ರಮುಖ ಅಂಶಗಳು ಹೀಗಿವೆ:

1. ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಇಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಗೋರಖ್‌ಪುರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಮೇಲೆ ಆದಿತ್ಯನಾಥ್ ಜೊತೆಗೆ ಗೋರಖ್‌ಪುರದಲ್ಲಿ ರೋಡ್ ಶೋ ನಡೆಸಿದ ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್ ಶಾ, ಬಿಜೆಪಿಯು ಉತ್ತರಪ್ರದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದ: ಕಠಿಣ ನಿಲುವು ತಳೆಯದ ಬೊಮ್ಮಾಯಿ ಸರ್ಕಾರ 

2. ಮಣಿಪುರದ ವಿಧಾನಸಭಾ ಸ್ಪೀಕರ್ ಯುಮನ್ ಕೆಂಚದ್ ಸಿಂಗ್ ಅವರು ಮಣಿಪುರದ 13-ಸಿಗ್ನಾಮೆಯ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಮಣಿಪುರದ ನಾಲ್ವರು ಸಚಿವರು ಕೂಡ ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

3. ನೂರಾರು ರೈತರ ಸಾವಿಗೆ ಕಾರಣವಾದ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಯ ಭರವಸೆ ನೀಡಿ ಸಮಿತಿಯನ್ನೂ ರಚಿಸದ ಬಿಜೆಪಿಗೆ ಈ ಬಾರಿಯ ಮತ ನೀಡದಂತೆ ಉತ್ತರ ಪ್ರದೇಶ ಹಾಗೂ ಚುನಾವಣೆ ನಡೆಯುತ್ತಿರುವ ಎಲ್ಲಾ ರಾಜ್ಯಗಳ ಜನರಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದಕ್ಕಾಗಿ ಕರಪತ್ರವೊಂದನ್ನು ಹೊರಡಿಸಿದ್ದು, ಅದನ್ನು ಸ್ವಯಂಪ್ರೇರಿತರಾಗಿ ಹಂಚುವಂತೆ ಜನರಲ್ಲಿ ರೈತ ಮುಖಂಡರು ಮನವಿ ಮಾಡಿದ್ದಾರೆ.

4. ಪಂಜಾಬ್ ಚುನಾವಣೆಗೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ, ಪಂಜಾಬ್ ಮುಖ್ಯಮಂತ್ರಿ ಚರಣಜಿತ್‌ ಸಿಂಗ್ ಚನ್ನಿ ಅವರ ಸೋದರಳಿಯ ಭೂಪೇಂದ್ರ ಸಿಂಗ್ ಹನಿ ಅವರನ್ನು ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದ್ದು, ಶುಕ್ರವಾರ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಾಕ್ಷ್ಯವಿಲ್ಲ-ಎಸ್‌ಐಟಿ

5. ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಇಂದು ಗೋವಾದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರು ತಮ್ಮ ಅಭ್ಯರ್ಥಿಗಳ ಪರವಾಗಿ ಮನೆ-ಮನೆ ಪ್ರಚಾರವನ್ನು ನಡೆಸುತ್ತಿದ್ದಾರೆ. ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮಂದಿರ, ಮಸೀದಿ, ಚರ್ಚ್‌ಗಳ ಮುಂದೆ ಪ್ರಮಾಣ ವಚನ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಕಲ್ಪ್ ಅಮೋನ್ಕರ್ ತಿಳಿಸಿದ್ದಾರೆ.

6. ಉತ್ತರಪ್ರದೇಶದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಅದರ ಮೈತ್ರಿ ಪಕ್ಷ ಅಪ್ನಾ ದಳ (ಕೆ) ನಡುವೆ ಬಿರುಕು ಹೆಚ್ಚುತ್ತಿದೆ. ಸೀಟು ಹಂಚಿಕೆಯಲ್ಲಿ ಅಪ್ನಾ ದಳ ನಿರೀಕ್ಷಿಸಿದ್ದ ಅಲಹಾಬಾದ್ ಪಶ್ಚಿಮ ಕ್ಷೇತ್ರದಿಂದ ಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ನಂತರ ಮೈತ್ರಿ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ತಲೆದೂರಿದೆ. ಶುಕ್ರವಾರ ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಮತ್ತು ಅಪ್ನಾ ದಳದ ನಾಯಕ ಪಲ್ಲವಿ ಪಟೇಲ್ ನಡುವೆ ಮಾತುಕತೆ ನಡೆಯಲಿದೆ. ನಂತರ, ಅಪ್ನಾ ದಳವು ಎಸ್‌ಪಿ ಜೊತೆ ಉಳಿಯುವುದೇ ಇಲ್ಲವೇ ಎಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

7. “ರೈತ ಆಂದೋಲನ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದ್ದ ಕನಿಷ್ಠ ಬೆಂಬಲ ಬೆಲೆಗಾಗಿ ಸಮಿತಿ ರಚಿಸಲು ಒಕ್ಕೂಟ ಸರ್ಕಾರ ಬದ್ಧವಾಗಿದೆ. ಆದರೆ, ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದಾಗಿ, ಚುನಾವಣೆ ಮುಗಿದ ನಂತರ ಸಮಿತಿಯನ್ನು ರಚಿಸುವಂತೆ ಚುನಾವಣಾ ಆಯೋಗ ಸೂಚಿಸಿದೆ. ಚುನಾವಣೆಯ ನಂತರ ಸಮಿತಿ ರಚಿಸಲಾಗುವುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

8. ಕಾಂಗ್ರೆಸ್ ಜನರಿಗಾಗಿ ಕೆಲಸ ಮಾಡಿದ್ದರೆ, ನನ್ನಂತವರು ರಾಜಕೀಯಕ್ಕೆ ಬರುವ ಅಗತ್ಯವೇ ಇರಲಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕೇಜ್ರಿವಾಲ್ ಅವರನ್ನು ‘ಛೋಟಾ ಮೋದಿ’ ಎಂದು ಗುರುವಾರ ಕರೆದಿದ್ದರು. ಈ ಕುರಿತು ಗೋವಾ ಚುನಾವಣಾ ಪ್ರಚಾರದಲ್ಲಿ ಪ್ರತಿಕ್ರಿಯಿಸಿದ ಕೇಜ್ರಿವಾಲ್, “ಅವರು ಹೀಗೆಲ್ಲ ಮಾತನಾಡುವ ಬದಲು ಜನರಿಗಾಗಿ ಕೆಲಸ ಮಾಡಿದ್ದರೆ, ನನ್ನಂತವರು ರಾಜಕೀಯಕ್ಕೆ ಬರುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...