Homeಮುಖಪುಟಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

ಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

- Advertisement -
- Advertisement -

ಭಾರತದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿಯನ್ನು ‘ಆರ್ಟಿಕಲ್ 14’ ವೆಬ್‌‌ಸೈಟ್‌‌ ಶುಕ್ರವಾರ ಪ್ರಕಟಿಸಿದೆ. ‘ಒಂದು ಅಂಧಕಾರದ ದಶಕ’ ಎಂಬ ಶೀರ್ಷಿಕೆಯಿರುವ ವರದಿಯಲ್ಲಿ, 2010 ರಿಂದ 2021ರ ನಡುವೆ ದೇಶದಲ್ಲಿ ದಾಖಲಾದ ದೇಶದ್ರೋಹಕ್ಕೆ ಸಂಬಂಧಿಸಿದ ಸಮಗ್ರ ವಿವರಗಳನ್ನು ನೀಡಲಾಗಿದೆ.

ವೆಬ್‌ಸೈಟ್‌ ತನ್ನ ವರದಿಯ ಹೆಡ್‌ಲೈನ್‌ನಲ್ಲಿ, “ಒಂದು ಅಂಧಕಾರದ ದಶಕ: ನಮ್ಮ ಹೊಸ ಮಾಹಿತಿ ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ದುರುಪಯೋಗಪಡಿಸಿಕೊಳ್ಳುತ್ತದೆ ಎಂಬುದನ್ನು ಬಹಿರಂಗಪಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: 1947 ರಲ್ಲಿ ದೇಶಕ್ಕೆ ಸಿಕ್ಕಿದು ಸ್ವತಂತ್ರವಲ್ಲ ಭಿಕ್ಷೆ ಎಂಬ ಕಂಗನಾ ಹೇಳಿಕೆ: ಇದು ಹುಚ್ಚುತನವೋ..ದೇಶದ್ರೋಹವೋ- ವರುಣ್ ಗಾಂಧಿ ಪ್ರಶ್ನೆ

“151 ವರ್ಷಗಳಿಂದ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ವ್ಯಕ್ತಪಡಿಸುವ ಭಾರತೀಯರು ದೇಶದ್ರೋಹದ ಆರೋಪದ ಭಯವನ್ನು ಎದುರಿಸುತ್ತಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A ಅಡಿಯಲ್ಲಿ ದೇಶದ ಬಗ್ಗೆ ‘ಅಸಮಾಧಾನ’ ಹೊಂದಿದ್ದಾರೆ ಎಂದು ದೇಶದ್ರೋಹವನ್ನು ಹೊರಿಸಲಾಗುತ್ತಿದೆ. ನಮ್ಮ ಹೊಸ ಡೇಟಾಬೇಸ್ 2010-2021 ರ ನಡುವೆ ದೇಶದ್ರೋಹದ ಆರೋಪ ಹೊರಿಸಲಾದ 13,000 ಜನರನ್ನು ಎಣಿಕೆ ಮಾಡಿದ್ದೇವೆ” ಎಂದು ‘ಆರ್ಟಿಕಲ್‌‌ 14’ ಹೇಳಿದೆ.

ಇಷ್ಟೇ ಅಲ್ಲದೆ, ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ಬಳಕೆ ಮಾಡಲಾಗುತ್ತಿದೆ ಎಂಬ ಬಗ್ಗೆ ಅಭೂತಪೂರ್ವ ಒಳನೋಟವನ್ನು ಈ ವರದಿ ಒದಗಿಸುತ್ತದೆ. ಕಳೆದ ದಶಕದಲ್ಲಿ ಇದರ ಬಳಕೆಯು ತೀವ್ರವಾಗಿ ಏರಿದೆ. ತೀರಾ ಇತ್ತೀಚೆಗೆ ಸಾರ್ವಜನಿಕ ಪ್ರತಿಭಟನೆಗಳು, ಭಿನ್ನಾಭಿಪ್ರಾಯಗಳು, ಸಾಮಾಜಿಕ-ಮಾಧ್ಯಮ ಪೋಸ್ಟ್‌ಗಳು, ಸರ್ಕಾರದ ಟೀಕೆ ಮತ್ತು ಕ್ರಿಕೆಟ್ ಫಲಿತಾಂಶಗಳ ವಿರುದ್ಧವೂ ಸಹ ಇದನ್ನು ಬಳಸಲಾಗುತ್ತಿದೆ” ಎಂದು ಆರ್ಟಿಕಲ್‌ 14 ತನ್ನ ಉಪಶೀರ್ಷಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಸರ್ಕಾರ ಬದಲಾಗುತ್ತಿದ್ದಂತೆ ದೇಶದ್ರೋಹ ಪ್ರಕರಣಗಳು ದಾಖಲಿಸುವ ಬಗ್ಗೆ ಸುಪ್ರೀಂ ಆತಂಕ

‘ಆರ್ಟಿಕಲ್‌ 14’ ವೆಬ್‌ತಾಣದ ಸಂಪಾದಕೀಯ ಮಂಡಳಿಯು ವಕೀಲರು, ಪತ್ರಕರ್ತರು ಮತ್ತು ಶಿಕ್ಷಣ ತಜ್ಞರನ್ನು ಒಳಗೊಂಡಿದೆ. ಸಹಾಯಕ ಪ್ರಾಧ್ಯಾಪಕರಾದ ಮೊಹ್ಸಿನ್ ಅಲಂ ಭಟ್, ಅಪರ್ಣ ಚಂದ್ರ, ಪತ್ರಕರ್ತರಾದ ಚಿತ್ರಾಂಗದಾ ಚೌಧರಿ, ಪ್ರಿಯಾ ರಮಣಿ, ಮನೋಜ್ ಮಿತ್ತಾ, ಸುಪ್ರೀಂಕೋರ್ಟ್ ವಕೀಲ ಗೌತಮ್ ಭಾಟಿಯಾ, ಜಾವೇದ್ ಅನ್ಸಾರಿ, ನಿಖಿತಾ ಸೋನವಾನೆ, ಸಮರ್ ಹಲರ್ಕರ್ ಇತರರಿದ್ದಾರೆ.

ವೆಬ್‌ತಾಣದ ಸಲಹಾ ಸಮಿತಿಯಲ್ಲಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಆಫ್ತಬ್ ಅಲಂ, ಪ್ರೊ. ಸುನೀಲ್ ಕಿಲ್ನಾನಿ, ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಅಜಿತ್ ಪ್ರಕಾಶ್ ಶಾ ಇನ್ನಿತರರಿದ್ದಾರೆ. ಸಂಶೋಧನೆ ಮತ್ತು ವರದಿಗಾರಿಕೆ, ಮಾಹಿತಿ ಸಂಗ್ರಹ, ವೈವಿಧ್ಯಮಯ ದೃಷ್ಟಿಕೋನಗಳೊಂದಿಗೆ ತನಿಖಾ ವರದಿ ನೀಡುವ ಉದ್ದೇಶವನ್ನು ‘ಆರ್ಟಿಕಲ್ 14’ ಹೊಂದಿದೆ.

ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರ ಟೀಕಿಸಿದ್ದ ಮಾಜಿ ರಾಜ್ಯಪಾಲರ ಮೇಲೆ ದೇಶದ್ರೋಹ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...