Homeಮುಖಪುಟಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

ಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

- Advertisement -
- Advertisement -

ಭಾರತದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿಯನ್ನು ‘ಆರ್ಟಿಕಲ್ 14’ ವೆಬ್‌‌ಸೈಟ್‌‌ ಶುಕ್ರವಾರ ಪ್ರಕಟಿಸಿದೆ. ‘ಒಂದು ಅಂಧಕಾರದ ದಶಕ’ ಎಂಬ ಶೀರ್ಷಿಕೆಯಿರುವ ವರದಿಯಲ್ಲಿ, 2010 ರಿಂದ 2021ರ ನಡುವೆ ದೇಶದಲ್ಲಿ ದಾಖಲಾದ ದೇಶದ್ರೋಹಕ್ಕೆ ಸಂಬಂಧಿಸಿದ ಸಮಗ್ರ ವಿವರಗಳನ್ನು ನೀಡಲಾಗಿದೆ.

ವೆಬ್‌ಸೈಟ್‌ ತನ್ನ ವರದಿಯ ಹೆಡ್‌ಲೈನ್‌ನಲ್ಲಿ, “ಒಂದು ಅಂಧಕಾರದ ದಶಕ: ನಮ್ಮ ಹೊಸ ಮಾಹಿತಿ ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ದುರುಪಯೋಗಪಡಿಸಿಕೊಳ್ಳುತ್ತದೆ ಎಂಬುದನ್ನು ಬಹಿರಂಗಪಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: 1947 ರಲ್ಲಿ ದೇಶಕ್ಕೆ ಸಿಕ್ಕಿದು ಸ್ವತಂತ್ರವಲ್ಲ ಭಿಕ್ಷೆ ಎಂಬ ಕಂಗನಾ ಹೇಳಿಕೆ: ಇದು ಹುಚ್ಚುತನವೋ..ದೇಶದ್ರೋಹವೋ- ವರುಣ್ ಗಾಂಧಿ ಪ್ರಶ್ನೆ

“151 ವರ್ಷಗಳಿಂದ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ವ್ಯಕ್ತಪಡಿಸುವ ಭಾರತೀಯರು ದೇಶದ್ರೋಹದ ಆರೋಪದ ಭಯವನ್ನು ಎದುರಿಸುತ್ತಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A ಅಡಿಯಲ್ಲಿ ದೇಶದ ಬಗ್ಗೆ ‘ಅಸಮಾಧಾನ’ ಹೊಂದಿದ್ದಾರೆ ಎಂದು ದೇಶದ್ರೋಹವನ್ನು ಹೊರಿಸಲಾಗುತ್ತಿದೆ. ನಮ್ಮ ಹೊಸ ಡೇಟಾಬೇಸ್ 2010-2021 ರ ನಡುವೆ ದೇಶದ್ರೋಹದ ಆರೋಪ ಹೊರಿಸಲಾದ 13,000 ಜನರನ್ನು ಎಣಿಕೆ ಮಾಡಿದ್ದೇವೆ” ಎಂದು ‘ಆರ್ಟಿಕಲ್‌‌ 14’ ಹೇಳಿದೆ.

ಇಷ್ಟೇ ಅಲ್ಲದೆ, ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ಬಳಕೆ ಮಾಡಲಾಗುತ್ತಿದೆ ಎಂಬ ಬಗ್ಗೆ ಅಭೂತಪೂರ್ವ ಒಳನೋಟವನ್ನು ಈ ವರದಿ ಒದಗಿಸುತ್ತದೆ. ಕಳೆದ ದಶಕದಲ್ಲಿ ಇದರ ಬಳಕೆಯು ತೀವ್ರವಾಗಿ ಏರಿದೆ. ತೀರಾ ಇತ್ತೀಚೆಗೆ ಸಾರ್ವಜನಿಕ ಪ್ರತಿಭಟನೆಗಳು, ಭಿನ್ನಾಭಿಪ್ರಾಯಗಳು, ಸಾಮಾಜಿಕ-ಮಾಧ್ಯಮ ಪೋಸ್ಟ್‌ಗಳು, ಸರ್ಕಾರದ ಟೀಕೆ ಮತ್ತು ಕ್ರಿಕೆಟ್ ಫಲಿತಾಂಶಗಳ ವಿರುದ್ಧವೂ ಸಹ ಇದನ್ನು ಬಳಸಲಾಗುತ್ತಿದೆ” ಎಂದು ಆರ್ಟಿಕಲ್‌ 14 ತನ್ನ ಉಪಶೀರ್ಷಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಸರ್ಕಾರ ಬದಲಾಗುತ್ತಿದ್ದಂತೆ ದೇಶದ್ರೋಹ ಪ್ರಕರಣಗಳು ದಾಖಲಿಸುವ ಬಗ್ಗೆ ಸುಪ್ರೀಂ ಆತಂಕ

‘ಆರ್ಟಿಕಲ್‌ 14’ ವೆಬ್‌ತಾಣದ ಸಂಪಾದಕೀಯ ಮಂಡಳಿಯು ವಕೀಲರು, ಪತ್ರಕರ್ತರು ಮತ್ತು ಶಿಕ್ಷಣ ತಜ್ಞರನ್ನು ಒಳಗೊಂಡಿದೆ. ಸಹಾಯಕ ಪ್ರಾಧ್ಯಾಪಕರಾದ ಮೊಹ್ಸಿನ್ ಅಲಂ ಭಟ್, ಅಪರ್ಣ ಚಂದ್ರ, ಪತ್ರಕರ್ತರಾದ ಚಿತ್ರಾಂಗದಾ ಚೌಧರಿ, ಪ್ರಿಯಾ ರಮಣಿ, ಮನೋಜ್ ಮಿತ್ತಾ, ಸುಪ್ರೀಂಕೋರ್ಟ್ ವಕೀಲ ಗೌತಮ್ ಭಾಟಿಯಾ, ಜಾವೇದ್ ಅನ್ಸಾರಿ, ನಿಖಿತಾ ಸೋನವಾನೆ, ಸಮರ್ ಹಲರ್ಕರ್ ಇತರರಿದ್ದಾರೆ.

ವೆಬ್‌ತಾಣದ ಸಲಹಾ ಸಮಿತಿಯಲ್ಲಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಆಫ್ತಬ್ ಅಲಂ, ಪ್ರೊ. ಸುನೀಲ್ ಕಿಲ್ನಾನಿ, ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಅಜಿತ್ ಪ್ರಕಾಶ್ ಶಾ ಇನ್ನಿತರರಿದ್ದಾರೆ. ಸಂಶೋಧನೆ ಮತ್ತು ವರದಿಗಾರಿಕೆ, ಮಾಹಿತಿ ಸಂಗ್ರಹ, ವೈವಿಧ್ಯಮಯ ದೃಷ್ಟಿಕೋನಗಳೊಂದಿಗೆ ತನಿಖಾ ವರದಿ ನೀಡುವ ಉದ್ದೇಶವನ್ನು ‘ಆರ್ಟಿಕಲ್ 14’ ಹೊಂದಿದೆ.

ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರ ಟೀಕಿಸಿದ್ದ ಮಾಜಿ ರಾಜ್ಯಪಾಲರ ಮೇಲೆ ದೇಶದ್ರೋಹ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...