Homeಕರ್ನಾಟಕರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು? ಒಂದು ಪ್ರತ್ಯಕ್ಷದರ್ಶಿ ವರದಿ

ರಾಯಚೂರಿನ ವಕೀಲರಾದ ತಾಯಪ್ಪ ಭಂಡಾರಿಯವರ ಪ್ರತ್ಯಕ್ಷದರ್ಶಿ ಹೇಳಿಕೆಯನ್ನು ಆಧರಿಸಿ ದೇಮರವರ ನಿರೂಪಣೆ.

- Advertisement -
- Advertisement -

ರಾಯಚೂರು ಮುಖ್ಯ ನ್ಯಾಯಾಧೀಶರ ಛೇಂಬರ್‌ನಲ್ಲಿ ನಡೆದದ್ದೇನು?
ಒಂದು ಪ್ರತ್ಯಕ್ಷದರ್ಶಿ ವರದಿ

ಬೆಳಿಗ್ಗೆ : 8:30
1) ಗಣರಾಜ್ಯೋತ್ಸವ ಆಚರಿಸಲು 2022 ಜನವರಿ 26ರಂದು ಕೋರ್ಟ್ ಬಿಲ್ಡಿಂಗ್‌ನಲ್ಲಿ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರು ಗಾಂಧಿ ಜೊತೆ ಅಂಬೇಡ್ಕರ್ ಪೋಟೋ ಇಟ್ಟಿದ್ದರು.
2) ಸಿಬ್ಬಂದಿಯೊಬ್ಬರು ಅಂಬೇಡ್ಕರ್ ಫೋಟೋ ಇಟ್ಟಿರುವ ಬಗ್ಗೆ ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ನೀಡುತ್ತಾರೆ.
3) ಜಿಲ್ಲಾ ನ್ಯಾಯಾಧೀಶರು, ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರನ್ನು ಛೇಂಬರ್‌ಗೆ ಕರೆಸುತ್ತಾರೆ. ಅಲ್ಲಿ ಇನ್ನಿತರ ನ್ಯಾಯಾಧೀಶರು ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಇದ್ದರು.

ಸಂಭಾಷಣೆ:
ಜಿಲ್ಲಾ ನ್ಯಾಯಾಧೀಶರು : ಯಾಕೆ ಅಂಬೇಡ್ಕರ್ ಫೋಟೋ ಇಟ್ಟಿರಿ. ಹೈಕೋರ್ಟ್‌ನಿಂದ ಇನ್ನೂ ಅನುಮತಿ ಸಿಕ್ಕಿಲ್ಲ.

ವಕೀಲರು : ಹಿಂದಿನ ವರ್ಷವೇ ಬೇರೆ ಜಿಲ್ಲಾ ನ್ಯಾಯಾಲಯದಲ್ಲಿ ಇಟ್ಟಿದ್ದಾರೆ, ನಾವು ಯಾಕೆ ಇಡಬಾರದು?

ಜಿಲ್ಲಾ ನ್ಯಾಯಾಧೀಶರು : ಇಲ್ಲ, ಇಡಕ್ಕೆ ಬರಲ್ಲ, ಹೈಕೋರ್ಟ್‌ನಿಂದ ನೋಟಿಫಿಕೇಷನ್ ಇಲ್ಲ.

ವಕೀಲರು : ಹಾಗಾದರೆ, ಕಳೆದ ವರ್ಷ ನಿಮ್ಮ ನೇತೃತ್ವದಲ್ಲೆ ದಸರಾ ಆಚರಿಸಿ, ಕೋರ್ಟ್ ಆವರಣದಲ್ಲಿ ಅಲಂಕರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ನೀವೇ ಪ್ರಸಾದ ಹಂಚಿದಿರಿ. ಇದಕ್ಕೆ ಹೈಕೋರ್ಟ್ ಅನುಮತಿ ನೀಡಿತ್ತೆ? ನಿರ್ದೇಶನ ಮಾಡಿತ್ತೆ?

ಜಿಲ್ಲಾ ನ್ಯಾಯಾಧೀಶರು : ಇಲ್ಲ.

ವಕೀಲರು : ಇದು ತಪ್ಪಲ್ಲವೆ?

ಜಿಲ್ಲಾ ನ್ಯಾಯಾಧೀಶರು : ಅದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ, ನಮ್ಮ ಸಂಸ್ಕೃತಿ.
ವಕೀಲರು : ನೀವು ತೀರ್ಪು ನೀಡುವುದು ಕಾನೂನು ಅಡಿಯಲ್ಲೊ ಅಥವಾ ಹಿಂದೂ ಸಂಸ್ಕೃತಿ, ಸಂಪ್ರದಾಯದ ಅಡಿಯಲ್ಲೊ?

ಜಿಲ್ಲಾ ನ್ಯಾಯಾಧೀಶರು : ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಂಬೇಡ್ಕರ್ ಫೋಟೋ ಇಡಲು ಈಗ ಅನುಮತಿಸಿದರೂ, ಎರಡೂ ಫೋಟೋ ಇಟ್ಟು ಧ್ವಜ ಆರೋಹಣ ಮಾಡುತ್ತೇನೆ.
(ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫೋನ್ ಮಾಡಿಕೊಡುತ್ತಾರೆ. ಅವರೊಡನೆ ವಕೀಲರ ಮಾತುಕತೆ ನಡೆಯುತ್ತದೆ.)

ವಕೀಲರು : ಕಳೆದ ವರ್ಷವೇ ನಾವು ಅಂಬೇಡ್ಕರ್ ಫೋಟೋ ಇಡಲು ಅನುಮತಿಗೆ ಅರ್ಜಿ ಕೊಟ್ಟಿದ್ದೆವು. ತಮ್ಮಿಂದ ಇನ್ನೂ ನಿರ್ಧಾರ ಬಂದಿಲ್ಲ. ನಾವು ಈಗ ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಫೋಟೋ ಇಡಲು ಅನುಮತಿ ನೀಡಿ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ನೋಟಿಫಿಕೇಷನ್ ಇಲ್ಲದೆ ಜಿಲ್ಲಾ ನ್ಯಾಯಾಧೀಶರು ಮಾಡಲು ಬರುವುದಿಲ್ಲ.

ವಕೀಲರು : ಕಳೆದ ನಮ್ಮ ಜಿಲ್ಲಾ ನ್ಯಾಯಾಧೀಶರು ಕೋರ್ಟ್ ಆವರಣವನ್ನು ಸಿಂಗರಿಸಿ ಗಣೇಶ, ಚಾಮುಂಡೇಶ್ವರಿ ಫೋಟೋ ಇಟ್ಟು ಪೂಜಾರಿ ಕರೆಸಿ ಪೂಜೆ ಮಾಡಿ ದಸರಾ ಹಬ್ಬ ಆಚರಿಸಿದರು. ಅವರೇ ಪ್ರಸಾದ ಹಂಚಿದರು. ಇದಕ್ಕೆ ನೀವೇನಾರು ಅನುಮತಿ ಕೊಟ್ಟಿದ್ದೀರಾ?

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಇಲ್ಲ.

ವಕೀಲರು : ಇದನ್ನು ನಮ್ಮ ರಾಯಚೂರು ಜಿಲ್ಲಾ ನ್ಯಾಯಾಧೀಶರು ಮಾಡಿದ್ದಕ್ಕೆ ಏನು Action ತೆಗೆದುಕೊಂಡಿರಿ?
(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಂದ ಉತ್ತರ ಇಲ್ಲ. ಆಮೇಲೆ)

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ : ಹೈಕೋರ್ಟ್‌ನ Full court ಮೀಟಿಂಗ್‌ನಲ್ಲಿ ಅಂಬೇಡ್ಕರ್ ಫೋಟೋ ಇಡುವ ಪ್ರಸ್ತಾಪವನ್ನು ಮುಂದಿಟ್ಟು ನಿರ್ಧರಿಸಬೇಕು. ಅದು ಪೆಂಡಿಂಗ್‌ನಲ್ಲಿದೆ.

ವಕೀಲರು : ನಾವು ಅರ್ಜಿಕೊಟ್ಟಾದ ಮೇಲೆ ಸುಮಾರು 20 ಫುಲ್‌ಕೋರ್ಟ್ ಮೀಟಿಂಗ್‌ಗಳು ನಡೆದಿವೆ. ನಮ್ಮ ಅಂಬೇಡ್ಕರ್ ಅರ್ಜಿಯನ್ನು ಫುಲ್‌ಕೋರ್ಟ್ ಮುಂದೆ ಇಡಬೇಕಾದವರು ನೀವು. ಸಂವಿಧಾನ ಶಿಲ್ಪಿಯ ಅರ್ಜಿಯನ್ನು ಯಾಕೆ ನೀವು ಇಷ್ಟು ದಿನಗಳಾದರೂ ಪರಿಗಣಿಸಿ ಫುಲ್‌ಕೋರ್ಟ್ ಮುಂದೆ ಇಡಲಿಲ್ಲ ಏಕೆ?

(ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಫೋನ್ ಕಟ್ ಮಾಡಿಬಿಟ್ಟರು. ಇದೆಲ್ಲಾ ಆಗುವವರೆಗೆ ಕಾಲ 9:30 ಆಗಿತ್ತು. 8:30ಕ್ಕೆನೇ ಧ್ವಜಾರೋಹಣ ಮಾಡಬೇಕಿತ್ತು. ಒಂದು ಗಂಟೆ ವಿಳಂಬವಾಗಿತ್ತು.)

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರು : ‘ನಿಮ್ಮ ಕಾಲಿಗೆ ಮುಗಿತೀನಿ. ಅಂಬೇಡ್ಕರ್ ಫೋಟೋ ತೆಗೀರಿ’.

ಇದಾದ ಮೇಲೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಛೇಂಬರ್‌ನಲ್ಲಿದ್ದ ಎಸ್‌ಸಿ., ಎಸ್.ಟಿ., ಓ.ಬಿ.ಸಿ., ಪ್ರಗತಿಪರ ವಕೀಲರಿಗೆ ‘ಜಿಲ್ಲಾ ಮುಖ್ಯ ನ್ಯಾಯಾಧೀಶರು ಇಷ್ಟೆಲ್ಲಾ ಹೀಗೆಲ್ಲಾ ಕೇಳಿಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ನೋಡಿಕೊಳ್ಳೋಣ. ಈಗ ಅಂಬೇಡ್ಕರ್ ಭಾವಚಿತ್ರ ತೆಗೆಯಲು ಸಮ್ಮತಿಸಿ’ ಎಂದು ವಿನಂತಿಸಿ ಸಮ್ಮತಿಸುವಂತೆ ಮಾಡುತ್ತಾರೆ. ಆಮೇಲೆ ಅಲ್ಲಿದ್ದ ವಕೀಲರೆಲ್ಲರೂ ಛೇಂಬರ್‌ನಿಂದ ಹೊರ ನಡೆಯುತ್ತಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಪ್ರಾಂಗಣದಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಮೇಲೆ ಅಂಬೇಡ್ಕರ್ ಭಾವಚಿತ್ರವನ್ನು ಅಲ್ಲಿಂದ ತೆಗೆಯಲಾಗುತ್ತದೆ, ಆಕ್ರೋಶದ ನಡುವೆ. ಅಂಬೇಡ್ಕರ್ ಭಾವಚಿತ್ರ ತೆಗೆದ ನಂತರ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಛೇಂಬರ್‌ನಿಂದ ಹೊರಬಂದು ಧ್ವಜಾರೋಹಣ ಮಾಡುತ್ತಾರೆ! ಸ್ಥೂಲವಾಗಿ ಇದಿಷ್ಟು ನಡೆಯುತ್ತದೆ.

ನ್ಯಾಯವು ಕೇಳುತ್ತಿರುವುದೇನು?

(1) ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ತಕ್ಷಣವೇ ಗಣರಾಜ್ಯೋತ್ಸವ ದಿನದಂದು ಹಾಗೂ ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತಾಗಲು – ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಫುಲ್‌ಕೋರ್ಟ್ ಮುಂದೆ ಪ್ರಸ್ತಾಪನೆ ಮಂಡಿಸುವಂತೆ ಆದೇಶಿಸಬೇಕು. (ಫೆಬ್ರವರಿ 04ರ ಸಂಜೆ ಹೈಕೋರ್ಟ್ ಈ ಕುರಿತು ಆದೇಶ ನೀಡಿದ್ದು, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಸಂವಿಧಾನ ದಿನ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ಅಧಿಕೃತ ಕಾರ್ಯಕ್ರಮಗಳನ್ನು ಅಂಬೇಡ್ಕರ್ ಫೋಟೊ ಇಡಬೇಕೆಂದು ನಿರ್ದೇಶನ ನೀಡಲಾಗಿದೆ)

(2) ಫುಲ್‌ಕೋರ್ಟ್ ಅಂಬೇಡ್ಕರ್ ಭಾವಚಿತ್ರ ಇಡಬೇಕೆಂದು ನಿರ್ಧರಿಸಿದರೆ ಮುಂದಾಗಬಹುದಾದ ವಿವಾದಗಳನ್ನು ತಪ್ಪಿಸಲೋಸುಗ – ಗಾಂಧೀ ಮತ್ತು ಅಂಬೇಡ್ಕರ್‌ರ ಭಾವಚಿತ್ರಗಳ ಅಳತೆಯನ್ನು ಸೂಚಿಸಬೇಕು.

(3) ಯಾವುದೇ ಧರ್ಮ, ಸಂಸ್ಕೃತಿ, ಆಚರಣೆ, ಪರಂಪರೆ, ರೂಢಿಗಳನ್ನು ಕೋರ್ಟ್ ಆವರಣದಲ್ಲಿ ಆಚರಿಸುವ ಬಗ್ಗೆ ಖಚಿತ ನಿಲುವನ್ನು ಫುಲ್‌ಕೋರ್ಟ್ ನಿರ್ದೇಶಿಸಬೇಕು. ನಿರ್ದೇಶನವನ್ನು ಉಲ್ಲಂಘಿಸಿದರೆ ತೆಗೆದುಕೊಳ್ಳುವ ಕ್ರಮವನ್ನೂ ಸ್ಪಷ್ಟಗೊಳಿಸಬೇಕು.

(4) ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುವ ತೆರೆದ (Open) ಕೋರ್ಟ್ ಹಾಲ್‌ನಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವುದರ ಬಗ್ಗೆ ಫುಲ್‌ಕೋರ್ಟ್ ನಿರ್ಧಾರ ತೆಗೆದುಕೊಳ್ಳಬೇಕು.

  • ಪ್ರತ್ಯಕ್ಷದರ್ಶಿ – ತಾಯಪ್ಪ ಭಂಡಾರಿ, ವಕೀಲರು, ರಾಯಚೂರು
  • ನಿರೂಪಣೆ – ದೇಮ

ಇದನ್ನೂ ಓದಿ: ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...