Homeಮುಖಪುಟತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

- Advertisement -
- Advertisement -

ತಮಿಳುನಾಡಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫೆಬ್ರವರಿ 19ರಂದು ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಹುಕೋನ ಸ್ಪರ್ಧೆ ನಡೆಯುತ್ತಿದ್ದು, ರಾಜ್ಯ ವಿಧಾನಸಭೆಯಲ್ಲಿ ಎಐಎಡಿಎಂಕೆ ಜೊತೆಗಿದ್ದ ವಿರೋಧ ಪಕ್ಷಗಳಾದ ಎಐಎಡಿಎಂಕೆ ಜೊತೆಗಿದ್ದ ಬಿಜೆಪಿ, ಡಾ ಎಸ್ ರಾಮದಾಸ್ ನೇತೃತ್ವದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಡಿಎಂಡಿಕೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿವೆ.

ಈ ಎಲ್ಲಾ ಪಕ್ಷಗಳು ಸ್ಥಳೀಯ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ- ಕಾಂಗ್ರೆಸ್‌ ಮೈತ್ರಿಕೂಟವನ್ನು ಸ್ವತಂತ್ರವಾಗಿ ಎದುರಿಸಲು ಸಜ್ಜಾಗಿವೆ.

ಡಿಎಂಕೆ ತನ್ನ ಮಿತ್ರಪಕ್ಷಗಳ ಜೊತೆಗೇ ಸ್ಪರ್ಧಿಸುತ್ತಿದೆ. ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿದ ಪಕ್ಷವು ಮತ್ತದೇ ಜಯವನ್ನು ಪುನರಾವರ್ತಿಸುವ ಭರವಸೆಯೊಂದಿಗೆ ತನ್ನ ಮಿತ್ರಪಕ್ಷಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ರಾಜ್ಯ ರಾಜಧಾನಿ ಚೆನ್ನೈನ ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ ಒಟ್ಟು 200 ವಾರ್ಡ್‌ಗಳ ಪೈಕಿ 165 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿರುವ ಡಿಎಂಕೆ, ಮಿತ್ರ ಪಕ್ಷಗಳೊಂದಿಗಿನ ಸೀಟು ಹಂಚಿಕೆಯಲ್ಲಿ ಸಿಂಹಪಾಲು ಪಡೆದಿದೆ. ಉಳಿದ 35 ಸ್ಥಾನಗಳನ್ನು ಮಿತ್ರಪಕ್ಷಗಳಾದ ಕಾಂಗ್ರೆಸ್, ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ಎಡಪಕ್ಷಗಳಿಗೆ ಹಂಚಿದೆ.

ಕೊಯಮತ್ತೂರಿನಲ್ಲಿಯೂ ಎಡಪಕ್ಷಗಳಿಗೆ ಅಲ್ಪಸ್ವಲ್ಪ ಸೀಟುಗಳನ್ನು ಡಿಎಂಕೆ ಹಂಚಿದೆ. ಇದರಿಂದಾಗಿ ಅಸಮಾಧಾನಗೊಂಡಿದ್ದ ಎಡಪಕ್ಷಗಳು ಡಿಎಂಕೆಯ ಮತ್ತೊಂದು ಮಿತ್ರ ಪಕ್ಷ ಕೆಎಂಡಿಕೆ ಬೆಂಬಲ ಪಡೆದು ಕಣ್ಣಂಪಾಳ್ಯಂ ಪಟ್ಟಣ ಪಂಚಾಯತ್‌ನ 15 ವಾರ್ಡ್‌ಗಳ ಪೈಕಿ 11 ವಾರ್ಡ್‌ಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ.

ಚೆನ್ನೈ ಪಾಲಿಕೆಯ 200 ವಾರ್ಡ್‌ಗಳಲ್ಲಿಯೂ ಬಿಜೆಪಿ ಸ್ಪರ್ಧಿಸುತ್ತಿದೆ. ಎಐಎಡಿಎಂಕೆ ಮೈತ್ರಿಯಲ್ಲಿ ಸೀಟು ಹಂಚಿಕೆ ಮಾತುಕತೆಯ ವೇಳೆ ಬಿಜೆಪಿಗೆ ನೀರೀಕ್ಷಿಸಿದ್ದಷ್ಟು ಸೀಟುಗಳನ್ನು ಬಿಟ್ಟುಕೊಡಲು ಎಐಎಡಿಎಂಕೆ ನಿರಾಕರಿಸಿದ ಕಾರಣ ಮೈತ್ರಿಯಲ್ಲಿ ಬಿರುಕು ಮೂಡಿದೆ. ಹೀಗಾಗಿ, ಬಿಜೆಪಿ ಚೆನ್ನೈ ಪಾಲಿಕೆಯ ಎಲ್ಲಾ ವಾರ್ಡ್‌ಗಳಲ್ಲಿಯೂ ಸ್ಪರ್ಧಿಸಲು ಮುಂದಾಗಿದೆ. ಅದೇ ರೀತಿಯಲ್ಲಿ ಉಳಿದ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸುತ್ತಿವೆ.

ಇದನ್ನೂ ಓದಿ: ತಮಿಳುನಾಡು: ಫಾಕ್ಸ್‌ಕಾನ್ ಕಂಪನಿ ಕ್ಯಾಂಟೀನ್ ಊಟದಿಂದಾಗಿ 8 ಮಹಿಳೆಯರ ಸಾವು – ಭುಗಿಲೆದ್ದ ಪ್ರತಿಭಟನೆ

ಮಂಗಳವಾರ ಮಡಿಪಕ್ಕಂನಲ್ಲಿ ಹತ್ಯೆಗೀಡಾದ ಡಿಎಂಕೆ ಪಕ್ಷದ ಪದಾಧಿಕಾರಿ ಸೆಲ್ವಂ ಅವರ ಪತ್ನಿ ಸಮೀನಾ ಸೆಲ್ವಂ ಅವರನ್ನು ಚೆನ್ನೈ ಪಾಲಿಕೆಯ ಮಡಿಪಕ್ಕಂ ವಾರ್ಡ್ (ನಂ.188)ನಿಂದ ಡಿಎಂಕೆ ಕಣಕ್ಕಿಳಿಸಿದೆ.

ಮಾಜಿ ರಾಜ್ಯ ಸಚಿವ ಪರುತಿ ಇಳಂವಝುತಿ ಅವರ ಪುತ್ರ, ಡಿಎಂಕೆ ಯುವ ಘಟಕದ ಸದಸ್ಯ ಪರುತಿ ಇಳಮಸುರುತಿ ಅವರನ್ನು ಚೆನ್ನೈ ಪಾಲಿಕೆಯ ವಾರ್ಡ್ ನಂ.99ರಿಂದ ಡಿಎಂಕೆ ಕಣಕ್ಕಿಳಿಸಿದೆ. ಅವರು ಎಐಎಡಿಎಂಕೆಯಿಂದ ಕಣಕ್ಕಿಳಿದಿರುವ ಮಾಜಿ ಐಎಎಸ್ ಅಧಿಕಾರಿ ಶಿವಕಾಮಿ ಅವರನ್ನು ಎದುರಿಸಲಿದ್ದಾರೆ.

ಚೆನ್ನೈ ಕಾರ್ಪೊರೇಷನ್‌ನಲ್ಲಿ ಎಲ್ಲಾ ಸಮುದಾಯಗಳ ಸದಸ್ಯರಿಗೆ ಅವಕಾಶ ಕಲ್ಪಿಸಲು ತಮ್ಮ ಪಕ್ಷವು ಹೆಚ್ಚಿನ ಪ್ರಯತ್ನಗಳನ್ನು ಮಾಡಿದೆ ಎಂದು ಡಿಎಂಕೆ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಡಿಎಂಕೆ ಸೇರಿದಂತೆ ಎಐಎಡಿಎಂಕೆ ಮತ್ತು ಬಿಜೆಪಿ ಈ ಚುನಾವಣೆಗೆ ತೃತೀಯಲಿಂಗಿಗಳನ್ನೂ ಕಣಕ್ಕಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: ವಿದ್ಯಾರ್ಥಿ ಮೇಲೆ ಪೊಲೀಸ್ ದೌರ್ಜನ್ಯ, 9 ಮಂದಿ ಪೊಲೀಸರ ಮೇಲೆ FIR

ಡಿಎಂಕೆಯ ಸದಸ್ಯೆ, ತೃತೀಯಲಿಂಗಿ ಆರ್ ಗಂಗಾ ಅವರು ವೆಲ್ಲೂರಿನ ವಾರ್ಡ್ 37 ರಿಂದ ಸ್ಪರ್ಧಿಸಿದರೆ, ಎಐಎಡಿಎಂಕೆಯ ಜಯದೇವಿ ವೆಲ್ಲೂರಿನ ವಾರ್ಡ್ 112ರಿಂದ ಮತ್ತು ಬಿಜೆಪಿಯ ರಾಜಮ್ಮ ಅವರು ತಿರುವಿ ಕಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಇತರ ಪಕ್ಷಗಳಾದ ನಟ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ, ನಟ-ನಿರ್ದೇಶಕ ಸೀಮಾನ್ ಅವರ ನಾಮ್ ತಮಿಳರ್ ಕಚ್ಚಿ ಮತ್ತು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಕೂಡ ಕಣದಲ್ಲಿವೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ 200 ವಾರ್ಡ್‌ಗಳಲ್ಲಿ 16 ಸ್ಥಾನಗಳು ಪರಿಶಿಷ್ಟ ಜಾತಿ (ಸಾಮಾನ್ಯ) ಮತ್ತು 16 ಸ್ಥಾನಗಳು ಎಸ್‌ಸಿ (ಮಹಿಳೆ) ಅಭ್ಯರ್ಥಿಗಳಿಗೆ ಮೀಸಲಾಗಿದ್ದು, 84 ಮಹಿಳೆಯರಿಗೆ (ಸಾಮಾನ್ಯ) ಮೀಸಲಾಗಿದೆ. 21 ಕಾರ್ಪೋರೇಷನ್‌ಗಳು, 138 ಪುರಸಭೆಗಳು, 490 ಪಟ್ಟಣ ಪಂಚಾಯಿತಿಗಳು ಮತ್ತು 649 ನಗರ ಸ್ಥಳೀಯ ಸಂಸ್ಥೆಗಳ 12,838 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಫೆಬ್ರವರಿ 7 ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿ, ಫೆಬ್ರವರಿ 19ರಂದು ಚುನಾವಣೆ ನಡೆಯಲಿದೆ. ಫೆಬ್ರವರಿ 22 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...