Homeಮುಖಪುಟತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

- Advertisement -
- Advertisement -

ತಮಿಳುನಾಡಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫೆಬ್ರವರಿ 19ರಂದು ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಹುಕೋನ ಸ್ಪರ್ಧೆ ನಡೆಯುತ್ತಿದ್ದು, ರಾಜ್ಯ ವಿಧಾನಸಭೆಯಲ್ಲಿ ಎಐಎಡಿಎಂಕೆ ಜೊತೆಗಿದ್ದ ವಿರೋಧ ಪಕ್ಷಗಳಾದ ಎಐಎಡಿಎಂಕೆ ಜೊತೆಗಿದ್ದ ಬಿಜೆಪಿ, ಡಾ ಎಸ್ ರಾಮದಾಸ್ ನೇತೃತ್ವದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಡಿಎಂಡಿಕೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿವೆ.

ಈ ಎಲ್ಲಾ ಪಕ್ಷಗಳು ಸ್ಥಳೀಯ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ- ಕಾಂಗ್ರೆಸ್‌ ಮೈತ್ರಿಕೂಟವನ್ನು ಸ್ವತಂತ್ರವಾಗಿ ಎದುರಿಸಲು ಸಜ್ಜಾಗಿವೆ.

ಡಿಎಂಕೆ ತನ್ನ ಮಿತ್ರಪಕ್ಷಗಳ ಜೊತೆಗೇ ಸ್ಪರ್ಧಿಸುತ್ತಿದೆ. ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿದ ಪಕ್ಷವು ಮತ್ತದೇ ಜಯವನ್ನು ಪುನರಾವರ್ತಿಸುವ ಭರವಸೆಯೊಂದಿಗೆ ತನ್ನ ಮಿತ್ರಪಕ್ಷಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ರಾಜ್ಯ ರಾಜಧಾನಿ ಚೆನ್ನೈನ ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ ಒಟ್ಟು 200 ವಾರ್ಡ್‌ಗಳ ಪೈಕಿ 165 ವಾರ್ಡ್‌ಗಳಲ್ಲಿ ಸ್ಪರ್ಧಿಸುತ್ತಿರುವ ಡಿಎಂಕೆ, ಮಿತ್ರ ಪಕ್ಷಗಳೊಂದಿಗಿನ ಸೀಟು ಹಂಚಿಕೆಯಲ್ಲಿ ಸಿಂಹಪಾಲು ಪಡೆದಿದೆ. ಉಳಿದ 35 ಸ್ಥಾನಗಳನ್ನು ಮಿತ್ರಪಕ್ಷಗಳಾದ ಕಾಂಗ್ರೆಸ್, ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ಎಡಪಕ್ಷಗಳಿಗೆ ಹಂಚಿದೆ.

ಕೊಯಮತ್ತೂರಿನಲ್ಲಿಯೂ ಎಡಪಕ್ಷಗಳಿಗೆ ಅಲ್ಪಸ್ವಲ್ಪ ಸೀಟುಗಳನ್ನು ಡಿಎಂಕೆ ಹಂಚಿದೆ. ಇದರಿಂದಾಗಿ ಅಸಮಾಧಾನಗೊಂಡಿದ್ದ ಎಡಪಕ್ಷಗಳು ಡಿಎಂಕೆಯ ಮತ್ತೊಂದು ಮಿತ್ರ ಪಕ್ಷ ಕೆಎಂಡಿಕೆ ಬೆಂಬಲ ಪಡೆದು ಕಣ್ಣಂಪಾಳ್ಯಂ ಪಟ್ಟಣ ಪಂಚಾಯತ್‌ನ 15 ವಾರ್ಡ್‌ಗಳ ಪೈಕಿ 11 ವಾರ್ಡ್‌ಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ.

ಚೆನ್ನೈ ಪಾಲಿಕೆಯ 200 ವಾರ್ಡ್‌ಗಳಲ್ಲಿಯೂ ಬಿಜೆಪಿ ಸ್ಪರ್ಧಿಸುತ್ತಿದೆ. ಎಐಎಡಿಎಂಕೆ ಮೈತ್ರಿಯಲ್ಲಿ ಸೀಟು ಹಂಚಿಕೆ ಮಾತುಕತೆಯ ವೇಳೆ ಬಿಜೆಪಿಗೆ ನೀರೀಕ್ಷಿಸಿದ್ದಷ್ಟು ಸೀಟುಗಳನ್ನು ಬಿಟ್ಟುಕೊಡಲು ಎಐಎಡಿಎಂಕೆ ನಿರಾಕರಿಸಿದ ಕಾರಣ ಮೈತ್ರಿಯಲ್ಲಿ ಬಿರುಕು ಮೂಡಿದೆ. ಹೀಗಾಗಿ, ಬಿಜೆಪಿ ಚೆನ್ನೈ ಪಾಲಿಕೆಯ ಎಲ್ಲಾ ವಾರ್ಡ್‌ಗಳಲ್ಲಿಯೂ ಸ್ಪರ್ಧಿಸಲು ಮುಂದಾಗಿದೆ. ಅದೇ ರೀತಿಯಲ್ಲಿ ಉಳಿದ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸುತ್ತಿವೆ.

ಇದನ್ನೂ ಓದಿ: ತಮಿಳುನಾಡು: ಫಾಕ್ಸ್‌ಕಾನ್ ಕಂಪನಿ ಕ್ಯಾಂಟೀನ್ ಊಟದಿಂದಾಗಿ 8 ಮಹಿಳೆಯರ ಸಾವು – ಭುಗಿಲೆದ್ದ ಪ್ರತಿಭಟನೆ

ಮಂಗಳವಾರ ಮಡಿಪಕ್ಕಂನಲ್ಲಿ ಹತ್ಯೆಗೀಡಾದ ಡಿಎಂಕೆ ಪಕ್ಷದ ಪದಾಧಿಕಾರಿ ಸೆಲ್ವಂ ಅವರ ಪತ್ನಿ ಸಮೀನಾ ಸೆಲ್ವಂ ಅವರನ್ನು ಚೆನ್ನೈ ಪಾಲಿಕೆಯ ಮಡಿಪಕ್ಕಂ ವಾರ್ಡ್ (ನಂ.188)ನಿಂದ ಡಿಎಂಕೆ ಕಣಕ್ಕಿಳಿಸಿದೆ.

ಮಾಜಿ ರಾಜ್ಯ ಸಚಿವ ಪರುತಿ ಇಳಂವಝುತಿ ಅವರ ಪುತ್ರ, ಡಿಎಂಕೆ ಯುವ ಘಟಕದ ಸದಸ್ಯ ಪರುತಿ ಇಳಮಸುರುತಿ ಅವರನ್ನು ಚೆನ್ನೈ ಪಾಲಿಕೆಯ ವಾರ್ಡ್ ನಂ.99ರಿಂದ ಡಿಎಂಕೆ ಕಣಕ್ಕಿಳಿಸಿದೆ. ಅವರು ಎಐಎಡಿಎಂಕೆಯಿಂದ ಕಣಕ್ಕಿಳಿದಿರುವ ಮಾಜಿ ಐಎಎಸ್ ಅಧಿಕಾರಿ ಶಿವಕಾಮಿ ಅವರನ್ನು ಎದುರಿಸಲಿದ್ದಾರೆ.

ಚೆನ್ನೈ ಕಾರ್ಪೊರೇಷನ್‌ನಲ್ಲಿ ಎಲ್ಲಾ ಸಮುದಾಯಗಳ ಸದಸ್ಯರಿಗೆ ಅವಕಾಶ ಕಲ್ಪಿಸಲು ತಮ್ಮ ಪಕ್ಷವು ಹೆಚ್ಚಿನ ಪ್ರಯತ್ನಗಳನ್ನು ಮಾಡಿದೆ ಎಂದು ಡಿಎಂಕೆ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಡಿಎಂಕೆ ಸೇರಿದಂತೆ ಎಐಎಡಿಎಂಕೆ ಮತ್ತು ಬಿಜೆಪಿ ಈ ಚುನಾವಣೆಗೆ ತೃತೀಯಲಿಂಗಿಗಳನ್ನೂ ಕಣಕ್ಕಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: ವಿದ್ಯಾರ್ಥಿ ಮೇಲೆ ಪೊಲೀಸ್ ದೌರ್ಜನ್ಯ, 9 ಮಂದಿ ಪೊಲೀಸರ ಮೇಲೆ FIR

ಡಿಎಂಕೆಯ ಸದಸ್ಯೆ, ತೃತೀಯಲಿಂಗಿ ಆರ್ ಗಂಗಾ ಅವರು ವೆಲ್ಲೂರಿನ ವಾರ್ಡ್ 37 ರಿಂದ ಸ್ಪರ್ಧಿಸಿದರೆ, ಎಐಎಡಿಎಂಕೆಯ ಜಯದೇವಿ ವೆಲ್ಲೂರಿನ ವಾರ್ಡ್ 112ರಿಂದ ಮತ್ತು ಬಿಜೆಪಿಯ ರಾಜಮ್ಮ ಅವರು ತಿರುವಿ ಕಾ ನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಇತರ ಪಕ್ಷಗಳಾದ ನಟ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ, ನಟ-ನಿರ್ದೇಶಕ ಸೀಮಾನ್ ಅವರ ನಾಮ್ ತಮಿಳರ್ ಕಚ್ಚಿ ಮತ್ತು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಕೂಡ ಕಣದಲ್ಲಿವೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ 200 ವಾರ್ಡ್‌ಗಳಲ್ಲಿ 16 ಸ್ಥಾನಗಳು ಪರಿಶಿಷ್ಟ ಜಾತಿ (ಸಾಮಾನ್ಯ) ಮತ್ತು 16 ಸ್ಥಾನಗಳು ಎಸ್‌ಸಿ (ಮಹಿಳೆ) ಅಭ್ಯರ್ಥಿಗಳಿಗೆ ಮೀಸಲಾಗಿದ್ದು, 84 ಮಹಿಳೆಯರಿಗೆ (ಸಾಮಾನ್ಯ) ಮೀಸಲಾಗಿದೆ. 21 ಕಾರ್ಪೋರೇಷನ್‌ಗಳು, 138 ಪುರಸಭೆಗಳು, 490 ಪಟ್ಟಣ ಪಂಚಾಯಿತಿಗಳು ಮತ್ತು 649 ನಗರ ಸ್ಥಳೀಯ ಸಂಸ್ಥೆಗಳ 12,838 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಫೆಬ್ರವರಿ 7 ರಂದು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿ, ಫೆಬ್ರವರಿ 19ರಂದು ಚುನಾವಣೆ ನಡೆಯಲಿದೆ. ಫೆಬ್ರವರಿ 22 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...