Homeಕರ್ನಾಟಕನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್...

ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

- Advertisement -
- Advertisement -

ಒಂದು ವರ್ಷ ಇರುವಾಗ ‘ಹಿಜಾಬ್-ಕೇಸರಿ ಶಾಲು’ ಎಂಬ ರೀತಿಯ ಅಜೆಂಡಾ ಕರಾವಳಿಯಲ್ಲಿ ಜಾರಿಯಾಗುತ್ತದೆ. ಕಾಂಗ್ರೆಸ್ ಸರ್ಕಾರ ಇದ್ದರೆ ಹಿಂದೂ ಕಾರ್ಯಕರ್ತರು ಕೊಲೆಯಾಗುತ್ತಾರೆ. ಈಗ ಬಿಜೆಪಿ ಸರ್ಕಾರವಿದೆ. ಕಾರ್ಯಕರ್ತರನ್ನು ಕೊಲೆ ಮಾಡಲು ಆಗಲ್ಲ. ಕಾಂಗ್ರೆಸ್ ಸರ್ಕಾರವಿದ್ದರೆ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಹಬ್ಬಿಸಬಹುದಿತ್ತು. ಈಗ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಹೇಳಲಾಗದು ಎಂದು ಸಂಘಪರಿವಾರದ ಮಾಜಿ ನಾಯಕ, ಹಿಂದುತ್ವದಿಂದ ಬಂಧುತ್ವದೆಡೆಗೆ ಅಭಿಯಾನದ ರುವಾರಿ ಸುನಿಲ್ ಬಜಿಲಕೇರಿ ಹೇಳಿದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ನಾರಾಯಣ ಗುರುಗಳ ವಿವಾದ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿತು. ಕರಾವಳಿಯಲ್ಲಿ ಎಲ್ಲ ಕಡೆಯಲ್ಲಿ ಬಿಲ್ಲವ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಬಿಲ್ಲವರು ಬಿಜೆಪಿಯ ಪರವಾಗಿದ್ದರು. ಆದರೆ ನಾರಾಯಣ ಗುರುಗಳಿಗೆ ಆದ ಅವಮಾನದಿಂದಾಗಿ ಸಮುದಾಯಕ್ಕೆ ಇರಿಸುಮುರುಸಾಗಿತ್ತು. ಮತಬ್ಯಾಂಕಿಗೆ ದೊಡ್ಡ ಪೆಟ್ಟು ಬಿದ್ದಿತ್ತು. ಪ್ರತಿ ಕ್ಷೇತ್ರದಲ್ಲಿ ಕನಿಷ್ಠ ಹತ್ತು ಸಾವಿರ ಮತಗಳು ಬಿಜೆಪಿಯಿಂದ ಹೊರಹೋದರೆ ಬಿಜೆಪಿಗೆ ನಷ್ಟವಾಗುತ್ತದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಹಿಜಾಬ್‌ನಂತಹ ಪ್ರಕರಣಗಳನ್ನು ಮುಂದೆ ತರುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಹಿಜಾಬ್‌‌‌: ವಿದ್ಯಾರ್ಥಿನಿಯರ ಪರವಾಗಿ ಧ್ವನಿ ಎತ್ತಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಮೊದಲು ನಾವೆಲ್ಲ ಶಾಲೆಗೆ ಹೋಗುವಾಗ ಹಿಜಾಬ್ ಧರಿಸಿ ಮುಸ್ಲಿಂ ಹೆಣ್ಣು ಮಕ್ಕಳು ಶಾಲೆಗೆ ಬರುತ್ತಿದ್ದರು. ಆಗ ಯಾವುದೇ ವಿವಾದ ಇರಲಿಲ್ಲ. ಈಗಿನ ವಿವಾದದ ಹಿಂದೆ ಎಸ್‌ಡಿಪಿಐ ಕೂಡ ಇದೆ. ಎಸ್‌ಡಿಪಿಐ ಬಿಜೆಪಿಯ ‘ಬಿ ಟೀಮ್’ ಥರ. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಎಸ್‌ಡಿಪಿಐ ಬ್ಯಾನ್ ಮಾಡ್ತೀವಿ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ ಬ್ಯಾನ್ ಮಾಡುವುದಿಲ್ಲ. ಯಾಕೆಂದರೆ ಮತ ಧ್ರುವೀಕರಣವಾಗುವುದು ಎಸ್‌ಡಿಪಿಐನಿಂದ. ಕಾಂಗ್ರೆಸ್ ಮತಗಳು ಒಡೆದು ಹೋಗುವುದು ಎಸ್‌ಡಿಪಿಐನಿಂದ. ಹೀಗಾಗಿ ಬಿಜೆಪಿಯವರು ಇಂಥದ್ದಕ್ಕೆಲ್ಲ ಕೈ ಹಾಕುತ್ತಾರೆ. ಕಾಂಗ್ರೆಸ್ ಕೂಡ ದೊಡ್ಡ ಮಟ್ಟದಲ್ಲಿ ವಿರೋಧ ಮಾಡುತ್ತಿಲ್ಲ. ಸುಮ್ಮನೆ ಕುಳಿತು ನೋಡುತ್ತಿದೆ ಎಂದು ತಿಳಿಸಿದರು.

ಎಂಎಲ್‌ಎ, ಎಂಪಿಗಳ ಮಕ್ಕಳು ಕಲಿಯುವ ಶಾಲೆಗಳಲ್ಲಿ ಇದೆಲ್ಲ ನಡೆಯುವುದಿಲ್ಲ. ಬಡವರ ಮಕ್ಕಳು, ಹಿಂದುಳಿದವರ ಮಕ್ಕಳು ಓದುವಂತಹ ಸರ್ಕಾರಿ ಶಾಲೆಗಳಲ್ಲಿ ಹೆಚ್ಚು ಗೊಂದಲಗಳನ್ನು ಎಬ್ಬಿಸುತ್ತಾರೆ. ಎಂಎಲ್‌ಎ ಮಕ್ಕಳು ಯಾರಾದರೂ ಕೇಸರಿ ಶಾಲು ಹಾಕಿಕೊಂಡು ಶಾಲೆಗೆ ಬಂದಿದ್ದು ನೀವು ನೋಡಿದ್ದೀರಾ? ಯಾರೂ ಬರಲ್ಲ. ಈ ಬಡವರ ಮಕ್ಕಳು ಹೊಡೆಸಿಕೊಂಡು ಸಾಯಬೇಕಷ್ಟೇ ಎಂದು ಆತಂಕ ವ್ಯಕ್ತಪಡಿಸಿದರು.

ಶಾಲೆಗೆ ಹೋಗುವುದು, ಶಿಕ್ಷಣ ಪಡೆಯುವುದು ಎಲ್ಲರ ಹಕ್ಕು. ಮೂರು ಸಾವಿರ ವರ್ಷಗಳಿಂದ ಮೇಲ್ವರ್ಗದವರ ದಬ್ಬಾಳಿಕೆ ನಡೆಯುತ್ತಾ ಬಂದಿತ್ತು. ಸ್ವಾತಂತ್ರ್ಯ ನಂತರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೀಸಲಾತಿಯನ್ನು ಜಾರಿ ಮಾಡಿತು. ಮೀಸಲಾತಿಯನ್ನು ಏಕಾಏಕಿ ತೆಗೆಯಲು ಸಾಧ್ಯವಿಲ್ಲ. ಹಿಂದುಳಿದ ವರ್ಗಗಳಲ್ಲಿ ಹಿಂದುತ್ವದ ಭಾವನೆಗಳನ್ನು ಜೋರಾಗಿ ಹಚ್ಚಿ ಮುಂದಿನ ದಿನಗಳಲ್ಲಿ ಇವರು ಮೀಸಲಾತಿ ತೆಗೆದು ಹಾಕಿದರೂ ಯಾರೂ ಮಾತನಾಡಬಾರದು ಎಂಬ ಯೋಜನೆಯನ್ನು ಹಾಕಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಿಜಾಬ್ ವಿವಾದ: ಕಠಿಣ ನಿಲುವು ತಳೆಯದ ಬೊಮ್ಮಾಯಿ ಸರ್ಕಾರ

ಕರಾವಳಿಯಲ್ಲಿ ಕಡಲ್ಕೊರೆತ ತಡೆಯಲು ಸಾವಿರಾರು ಕೋಟಿ ರೂ.ಗಳನ್ನು ನೀಡುತ್ತಿದ್ದಾರೆ. ಆದರೆ ಯೋಜನೆ ವಿಫಲವಾಗುತ್ತಿದೆ. ಅದರ ಬಗ್ಗೆ ಇವರು ಹೋರಾಟ ಮಾಡಲ್ಲ. ಕರಾವಳಿ ಜನರು ಉದ್ಯೋಗಕ್ಕಾಗಿ ಧ್ವನಿ ಎತ್ತಿದ್ದಾರೆ. ದೊಡ್ಡ ದೊಡ್ಡ ಇಂಡಸ್ಟ್ರಿಗಳು ಈ ಭಾಗದಲ್ಲಿವೆ. ಆದರೆ ಇಲ್ಲಿನ ಜನರಿಗೆ ಉದ್ಯೋಗ ಸಿಗುವುದಿಲ್ಲ. ಉತ್ತರ ಪ್ರದೇಶ, ಬಿಹಾರದವರಿಗೆ ಕೆಲಸ ಕೊಡುತ್ತಾರೆ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸುವುದಾಗಿ ಚುನಾವಣಾ ಸಂದರ್ಭದಲ್ಲಿ ಇವರು ಹೇಳುತ್ತಾರೆ. ಅಧಿಕಾರಕ್ಕೆ ಬಂದ ಮೇಲೆ ಅದನ್ನೂ ಮಾಡಲ್ಲ. ಈ ವರದಿ ಜಾರಿಯಾದರೆ ಶೇ. ೪೦ರಷ್ಟು ಮೀಸಲಾತಿ ಕರಾವಳಿಯವರಿಗೆ ಸಿಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕರ್ತರು ಸಾವಿರಾರು ಫೇಕ್ ಅಕೌಂಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುತ್ತಾರೆ. ನಮ್ಮ ಮುಖಚರ್ಯೆಯನ್ನೇ ಹೋಲುವ ಶ್ರೀಲಂಕಾ, ಬಂಗ್ಲಾದೇಶದವರ ಫೋಟೋಗಳನ್ನು ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುತ್ತಾರೆ. ನಾನೇನಾದರೂ ಬಿಲ್ಲವನಾಗಿದ್ದರೆ ಬಿಲ್ಲವರ ಡುಬ್ಲಿಕೇಟ್ ಅಕೌಂಟ್ ಮಾಡಿ, ಅದರಲ್ಲೇ ಕಮೆಂಟ್ ಮಾಡ್ತಾರೆ. ಜಿಎಸ್‌ಬಿಯಾಗಿದ್ದರೆ ಜಿಎಸ್‌ಬಿ ಹೆಸರಲ್ಲೇ ಫೇಕ್ ಅಕೌಂಟ್ ಮಾಡಿ ಅದರಲ್ಲೇ ಕಮೆಂಟ್ ಮಾಡುತ್ತಾರೆ. ಇನ್ನೆರಡು ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೃಷ್ಟಿಯಾಗುತ್ತವೆ ಎಂದು ಎಚ್ಚರ ನೀಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರವಿದ್ದಾಗ ಪ್ರಧಾನಿ ಮೋದಿಯವರೇ ಬಂದು ಶೇ. ೧೦ರಷ್ಟು ಭ್ರಷ್ಟಾಚಾರ ಕರ್ನಾಟಕದಲ್ಲಿ ಇದೆ ಎಂದಿದ್ದರು. ನಾವು ಅದನ್ನೂ ನಂಬಿದ್ದೆವು. ಆದರೆ ಬಿಜೆಪಿಯವರು ಶೇ. ೪೦ರಷ್ಟು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಗುತ್ತಿಗೆದಾರರೇ ಮೋದಿಯವರಿಗೆ ಲಿಖಿತವಾಗಿ ದೂರು ನೀಡಿದರು. ಈ ದೂರಿನ ಬಗ್ಗೆ ಯಾವುದೇ ವಿಚಾರಣೆಯಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಹಿಜಾಬ್ ಮತ್ತು ಕೇಸರಿ ಶಾಲು ಎರಡನ್ನೂ ಬಿಟ್ಟುಬಿಡಿ. ಮಕ್ಕಳಿಗೆ ವಿದ್ಯಾಭ್ಯಾಸ ಮುಖ್ಯ. ನೀವು ಗಲ್ಫ್ ದೇಶಗಳಿಗೆ ಹೋದರೆ ನೋಡಬಹುದು. ಒಂದು ಮಸೀದಿ ಇದ್ದರೆ ಪಕ್ಕದಲ್ಲಿ ಹತ್ತು ಲೈವ್‌ಬ್ಯಾಂಡ್‌ಗಳು ಇರುತ್ತವೆ. ಡ್ಯಾನ್ಸ್ ಮಾಡುತ್ತಾರೆ, ಕುಡಿಯುತ್ತಾರೆ. ಆ ದೇಶಗಳು ಮುಂದುವರಿದಿವೆ. ಧರ್ಮಗಳ ಗೊಂದಲಗಳ ಅಗತ್ಯ ಅವರಿಗಿಲ್ಲ ಎಂದರು.

ಕರಾವಳಿಯ ಪ್ರತಿಯೊಂದು ಮನೆಯವರು (ಹಿಂದೂ ಇರಲಿ, ಮುಸ್ಲಿಂ ಇರಲಿ) ಗಲ್ಫ್ ರಾಷ್ಟ್ರಗಳಲ್ಲಿ ಇದ್ದಾರೆ. ಆ ದೇಶಗಳಲ್ಲಿ ಇಂಥವುಗಳನ್ನೆಲ್ಲ ಮಾಡಿದರೆ ನಾವು ನಿರುದ್ಯೋಗಿಗಳಾಗಿ ಇಲ್ಲಿ ಸಾಯಬೇಕಾಗುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೀರುವ ಪರಿಣಾಮಗಳನ್ನು ನಾವು ಯೋಚಿಸಬೇಕಲ್ಲ. ಕರಾವಳಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಗಲ್ಪ್ ರಾಷ್ಟ್ರಗಳಲ್ಲಿ ಆದರೆ ನಮ್ಮಲ್ಲಿ ನಿರುದ್ಯೋಗ ಹೆಚ್ಚಾಗುತ್ತದೆ. ಅಲ್ಲಿ ಡ್ರೈವರ್ ಆಗಿರುವವರಿಗೆ, ಸೇಲ್ಸ್‌ಮನ್ ಆಗಿರುವವರಿಗೆ ಕೆಲಸ ಇಲ್ಲದಾಗುತ್ತದೆ. ಇಲ್ಲಿ ಉದ್ಯೋಗ ಸೃಷ್ಟಿ ಮಾಡಲು ಇವರಿಂದ ಆಗುತ್ತಿಲ್ಲ. ದುಬೈನಲ್ಲಿ ಇರುವವರು ನೆಮ್ಮದಿಯಾಗಿ ಕೆಲಸ ಮಾಡದ ಹಾಗೆ ಕರಾವಳಿಯಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಮಕ್ಕಳ ಹೆಸರಲ್ಲಿ ರಾಜಕಾರಣ ಮಾಡುತ್ತಿರುವುದು ನಿಲ್ಲಬೇಕಾದರೆ ಒಂದು ಸುಲಭವಾದ ಮಾರ್ಗವಿದೆ. ೨೧ ವರ್ಷಗಳ ನಂತರವೇ ಮತದಾನದ ಹಕ್ಕನ್ನು ನೀಡಬೇಕು. ಶಾಲಾ ಮಕ್ಕಳನ್ನು ಛೂ ಬಿಟ್ಟು ರಾಜಕಾರಣ ಮಾಡುವುದನ್ನು ಆಗ ನಿಲ್ಲಿಸುವ ಸಾಧ್ಯತೆ ಇದೆ.


ಇದನ್ನೂ ಓದಿರಿ:  ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...