Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಬರಿಯ ನೆನಪಲ್ಲ: ಪ್ಯಾಲಸ್ತೇನ್ ಸಮಸ್ಯೆಯ ಬಗ್ಗೆ ವಿಮರ್ಶಾತ್ಮಕ ಅನುಸಂಧಾನ

ಬರಿಯ ನೆನಪಲ್ಲ: ಪ್ಯಾಲಸ್ತೇನ್ ಸಮಸ್ಯೆಯ ಬಗ್ಗೆ ವಿಮರ್ಶಾತ್ಮಕ ಅನುಸಂಧಾನ

- Advertisement -
- Advertisement -

ಕನ್ನಡದಲ್ಲಿ ಪ್ರತಿವರ್ಷ ನೂರಾರು ಅನುವಾದ ಕೃತಿಗಳು ಪ್ರಕಟವಾಗುತ್ತವೆ. ಹೆಚ್ಚಿನವು ಕಥೆ ಕಾದಂಬರಿ ಕಾವ್ಯಗಳು. ವಿಚಾರಸಾಹಿತ್ಯ, ಚರಿತ್ರೆ, ಆತ್ಮಕಥನ, ಪ್ರವಾಸಕಥನಗಳು ಕಡಿಮೆ. ಹೀಗಿರುತ್ತ ಯುವಲೇಖಕ ಆರ್.ಕೆ. ಆಕರ್ಷ, ಭೂಮಂಡಲದ ಗಾಯವೆನಿಸಿಕೊಂಡಿರುವ ಪ್ಯಾಲಸ್ತೇನಿಗೆ ಸಂಬಂಧಿಸಿದ ಅನುಭವ ಕಥನವೊಂದನ್ನು ಅನುವಾದಿಸಿರುವುದು ವಿಶಿಷ್ಟವಾಗಿದೆ. ಇದು ಏಶ್ಯಾ-ಆಫ್ರಿಕಾದ ಬೇರೆಬೇರೆ ದೇಶಗಳಿಗೆ ಹೋಗಿ, ಅಲ್ಲಿನ ಜನರೊಂದಿಗೆ ಮಾತುಕತೆಯಾಡಿ, ಆ ನಾಡುಗಳ ಸಂಘರ್ಷಮಯ ಕಥನಗಳನ್ನು ರಚಿಸುವುದಕ್ಕೆ ಖ್ಯಾತರಾಗಿರುವ ಕೆನಡಾದ ಲೇಖಕ ಸಿಂಟಿಯೊ ಅವರ ‘ಪೇ ನೋ ಹೀಡ್ ಟು ದಿ ರಾಕೆಟ್ಸ್: ಪ್ಯಾಲೆಸ್ಟೈನ್ ಇನ್ ಪ್ರೆಸೆಂಟ್ ಟೆನ್ಸ್’ ಕೃತಿಯ ತರ್ಜುಮೆ. ‘ನಾನು ಅರೆಬಿಕ್‌ನಲ್ಲಿ ಪ್ರೀತಿಸುತ್ತೇನೆ’ ‘ನಾನೀಗ ಸೈರನ್ನುಗಳಿಗೆ ಹೆದರುವುದಿಲ್ಲ’ ‘ನಿಮ್ಮದೇ ಮುಳ್ಳುಗಳನ್ನು ನಿಮ್ಮ ಕೈಯಿಂದ ಕಿತ್ತುಕೊಳ್ಳುತ್ತ’ ಮೊದಲಾದ ಎಂಟು ಅಧ್ಯಾಯಗಳುಳ್ಳ ಪುಸ್ತಕವಿದು. ಪ್ರತಿ ಅಧ್ಯಾಯವೂ ಒಬ್ಬೊಬ್ಬ ಪ್ಯಾಲಸ್ತೇನಿ ಹೋರಾಟಗಾರ-ಲೇಖಕರನ್ನು ಭೇಟಿಯಾಗಿ ನಡೆಸಲಾದ ಮಾತುಕತೆ ಮತ್ತು ವಿಶ್ಲೇಷಣೆಯನ್ನು ಒಳಗೊಂಡಿದೆ. ಇಸ್ರೇಲ್ ಮತ್ತು ಅಮೆರಿಕಗಳು ಆಕ್ರಮಣಕಾರಿ ರಾಜಕೀಯ ಧೋರಣೆಯ ಫಲವಾಗಿ ಲೋಕದ ಕಣ್ಣಲ್ಲಿ ಉಗ್ರಗಾಮಿಗಳಾಗಿರುವ, ಆದರೆ ತಮ್ಮ ಪೂರ್ವಜರಿಂದ ಬಂದ ಜಮೀನು ಮನೆ ತೋಟ ಗ್ರಂಥಭಂಡಾರಗಳನ್ನು ಕಳೆದುಕೊಂಡು, ಘನತೆಯ ಬದುಕಿಗಾಗಿ ಹೋರಾಡುತ್ತಿರುವ ಜನರ ದುಃಖದುಮ್ಮಾನಗಳ ಅನುಭವ ಮತ್ತು ಚಿಂತನೆಯನ್ನು ಇಲ್ಲಿರುವ ಕಥನವು ಒಳಗೊಂಡಿದೆ. ಇದನ್ನು ಓದುತ್ತಿದ್ದರೆ ಸಾಹಿತ್ಯಕ ತಾತ್ವಿಕ ರಾಜಕೀಯ ತತ್ವಗಳ ಕಿಡಿಗಳೇ ತುಂಬಿದ ಕೊಂಡದಲ್ಲಿ ಹಾಯುವಂತಹ ಅನುಭವವಾಗುತ್ತದೆ.

ನಾನು ಇಸ್ರೇಲ್ ಮತ್ತು ಪ್ಯಾಲೆಸ್ತೇನಿನ ಪ್ರವಾಸ ಮಾಡಿದ್ದೆ. ರಾಜಕೀಯ ಚರ್ಚೆ ಮಾಡುವುದಕ್ಕೆಂದೇ ಇರುವ ಕಾಫಿಕ್ಲಬ್ಬುಗಳನ್ನು ಬೆತ್ಲೆಹೆಂನಲ್ಲಿ ನೋಡಿದ್ದೆ. ಪಶ್ಚಿಮದಂಡೆಯ ಹೆಬ್ರೋನ್ ಜೆರಿಕಾ ಮೊದಲಾದ ಪಟ್ಟಣಗಳಲ್ಲಿ ತಿರುಗಾಡುವಾಗ, ಪ್ಯಾಲಸ್ಟೇನಿಯರ ಊರುಗಳನ್ನು ಬೆಟ್ಟತೋಟಗಳನ್ನು ಒತ್ತುವರಿ ಮಾಡುತ್ತ ಇಸ್ರೇಲಿ ಸರ್ಕಾರವು ಯಹೂದಿಗಳಿಗೆ ಮನೆಗಳನ್ನು ಕಟ್ಟಿಕೊಡುವುದನ್ನು, ಬೃಹತ್ ಗೋಡೆಗಳನ್ನು ನಿರ್ಮಿಸುವುದನ್ನು ಗಮನಿಸಿದ್ದೆ. ಆದರೆ ಅಲ್ಲಿನ ಹೋರಾಟಗಳ ಬಗ್ಗೆ ನೇರವಾಗಿ ಯಾರೊಟ್ಟಿಗೂ ಮಾತಾಡಲು ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನನಗೆ ಈ ಪುಸ್ತಕವು ನನ್ನ ತಿರುಗಾಟದ ಕೊರತೆಗಳನ್ನು ತುಂಬಿಕೊಡುವ ಸಮೃದ್ಧ ಅನುಭವ ನೀಡಿತು. ಇಸ್ರೇಲಿನ ಸೈನಿಕರ ನಿಷ್ಠುರ ತಪಾಸಣೆಯಲ್ಲಿ ಒಂದೇ ಊರಲ್ಲಿರುವ ಬೇರೆಬೇರೆ ಭಾಗಗಳಿಗೆ ಹೋಗಲು ಚೆಕ್‌ಪಾಯಿಂಟುಗಳನ್ನು ದಾಟುವ ಕಷ್ಟವನ್ನು ಕುರಿತ ಇಲ್ಲಿನ ಭಾಗಗಳು ಪ್ರವಾಸಿಗರಾಗಿ ಹೋಗುವ ಎಲ್ಲರ ಅನುಭವಕ್ಕೂ ಬರುತ್ತವೆ. ಆದರೆ ಪ್ಯಾಲೆಸ್ತೇನಿಯರಿಗೆ ಈ ಅಪಮಾನಜನಕ ದಾಟುವಿಕೆ ನಿತ್ಯದ ಅನುಭವವಾಗಿದೆ.

ನೋವು ಹೋರಾಟ ಸಾವು ಹೊರದಬ್ಬುವಿಕೆ ಅನಾಥಪ್ರಜ್ಞೆಗಳ ಅಗ್ನಿಪರ್ವತದಂತಿರುವ ಸಂಘರ್ಷಮಯ ಪ್ರದೇಶದಲ್ಲಿ ಸಾಹಿತ್ಯದಂತಹ ಕಲೆಯೊಂದು ಏನು ಮಾಡಬಲ್ಲದು ಎಂಬುದಕ್ಕೆ, ಈ ಕೃತಿಯಲ್ಲಿರುವ ದಾಖಲೆ ಮಾತುಕತೆ ವಿಶ್ಲೇಷಣೆ ವ್ಯಾಖ್ಯಾನಗಳು ಸಾಕ್ಷಿಯಂತಿವೆ. ಪ್ಯಾಲೆಸ್ತೇನಿ ಲೇಖಕರು ಹೇಳಿಕೊಂಡಿರುವ ಅನುಭವಗಳು ಮೈಜುಂ ಅನಿಸುವಂತಿವೆ. ಒಮ್ಮೆ ಕವಿ ಮೊಹಮ್ಮದ ಕುರ್ದ್ ಅವರು ತಮ್ಮ ಮೂಲಮನೆಯನ್ನು ಯಹೂದಿ ಆಕ್ರಮಣಕಾರರಿಂದ ಕಳೆದುಕೊಂಡ ಅನುಭವದ ಆಧಾರದಲ್ಲಿ ನಿರ್ಮಿಸಿದ ‘ಮೈ ನೈಬರ್‌ಹುಡ್’ ಸಾಕ್ಷ್ಯಚಿತ್ರದೊಂದಿಗೆ ಅಮೆರಿಕಕ್ಕೆ ಹೋಗಬೇಕಾಗುತ್ತದೆ. ಅವರಿಗೆ ರೈಲನ್ನು ನಡುನಡುವೆ ನಿಲ್ಲಿಸಿ ಸೈನಿಕರಿಂದ ತಪಾಸಣೆಗೆ ಒಳಗಾಗದೆ ಪಯಣ ಮಾಡುವುದರ ಅನುಭವವು ಹೊಸತೆನಿಸುತ್ತದೆ. ನಿತ್ಯವೂ ಪ್ರತಿಭಟನ ಘೋಷಣೆ ಹಾಕುತ್ತ ವಿಮೋಚನ ಚಳವಳಿ ನಡೆಸುತ್ತಿರುವ ಪ್ಯಾಲೆಸ್ತೇನಿಯರು ಎಷ್ಟೆಲ್ಲ ಸಣ್ಣಪುಟ್ಟ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದಾರೆ ಎಂಬುದನ್ನು ಕೂಡ ಇದು ಮನದಟ್ಟುಮಾಡುತ್ತದೆ.

 

ಆಕರ್ಷ ರಮೇಶ ಕಮಲ

ಈ ಕೃತಿಯಲ್ಲಿ ಧೀಮಂತರಾದ ಲೇಖಕಿಯರ ಜತೆಗಿನ ಮಾತುಕತೆಗಳಂತೂ ಉಜ್ವಲವಾಗಿವೆ. ಹೋರಾಟದ ಗರ್ಭದಲ್ಲಿರುವ ಸಾಮಾನ್ಯ ಜನ ರೂಪಕಗಳಲ್ಲಿ ಮಾತಾಡುವ ಕವಿಗಳಾಗಿರುತ್ತಾರೆ. ಹೋರಾಟಗಾರರು ದಾರ್ಶನಿಕರಾಗಿರುತ್ತಾರೆ ಮತ್ತು ಲೇಖಕರು ರಾಜಕೀಯ ಪ್ರಜ್ಞೆಯುಳ್ಳವರಾಗಿರುತ್ತಾರೆ ಎಂಬುದನ್ನು ಇಲ್ಲಿನ ಮಾತುಕತೆಗಳು ಸೂಚಿಸುತ್ತವೆ. ಲೇಖಕ ಸಿಂಟಿಯೊ, ಪ್ಯಾಲಸ್ತೇನಿಯರ ಹೋರಾಟ ಮತ್ತು ಸಾಹಿತ್ಯಗಳ ಬಗ್ಗೆ ಸಹಾನುಭೂತಿ ಉಳ್ಳವರು. ಆದರೂ ಇಸ್ರೇಲಿನ ಅಸ್ತಿತ್ವವನ್ನೇ ನಿರಾಕರಿಸುವ ಅತಿರೇಕದ ಅವಾಸ್ತವಿಕ ವಾದಗಳ ಬಗ್ಗೆ ಭಿನ್ನಮತವುಳ್ಳವರು. ಹೀಗಾಗಿ ಇದೊಂದು ಪ್ಯಾಲಸ್ತೇನ್ ಸಮಸ್ಯೆಯ ಬಗ್ಗೆ ವಿಮರ್ಶಾತ್ಮಕ ಅನುಸಂಧಾನವಿರುವ ಕೃತಿ ಕೂಡ ಆಗಿದೆ.

ಹೊಸಕಾಲದ ತರುಣ-ತರುಣಿಯರಲ್ಲಿ ಮತೀಯ ರಾಜಕಾರಣಕ್ಕೆ ಒಲಿದವರು ಸಾಕಷ್ಟು ಜನರಿದ್ದಾರೆ. ಯಾವುದೇ ರಾಜಕೀಯ ಪ್ರಜ್ಞೆಯ ಅಗತ್ಯವನ್ನು ನಿರಾಕರಿಸುತ್ತ ಭೋಗವಾದವನ್ನೇ ನಂಬಿದವರೂ ಇದ್ದಾರೆ. ಆದರೆ ಇಂಜಿನಿಯರಿಂಗ್ ಪದವೀಧರರಾದ ಆಕರ್ಷ ಅವರಂತೆ ಕೆಲವರು, ನಾಡಿನ ಮತ್ತು ದೇಶದ ನೋವುಗಳಿಗೆ ಮಿಡಿಯುವವರೂ ಇದ್ದಾರೆ. ಅನುವಾದಕ್ಕೆ ಈ ಕೃತಿಯ ಆಯ್ಕೆಯೇ ಅವರ ಕಾಳಜಿಯನ್ನು ಲೋಕದೃಷ್ಟಿಯನ್ನು ಕಾಣಿಸುತ್ತದೆ. ತಾಯಿ ಎಂ.ಆರ್. ಕಮಲ ಕನ್ನಡಿಗರಿಗೆ ಅಮೆರಿಕದ ಆಫ್ರಿಕನರ ಹೋರಾಟಗಳ ಕಥನಗಳನ್ನು ಕೊಟ್ಟಿದ್ದರು. ಅವರ ಮಗ ಜಗತ್ತಿನ ಇನ್ನೊಂದು ಭೂಭಾಗದ ಹೋರಾಟದ ಕಥನವನ್ನು ಕೊಟ್ಟಿದ್ದಾರೆ.

ಬರಿಯ ನೆನಪಲ್ಲ
ಮೂಲ: ಪೇ ನೋ ಹೀಡ್ ಟು ದಿ ರಾಕೆಟ್ಸ್
ಲೇಖಕ: ಮಾಸೆಲ್ಲೊ ಟಿ ಸಿಂಟಿಯೊ
ಅನು: ಆಕರ್ಷ ರಮೇಶ್ ಕಮಲ
ಕಥನ ಪ್ರಕಾಶನ, ಬೆಂಗಳೂರು, 2021, ಬೆಲೆ: 225

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...