Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಬರಿಯ ನೆನಪಲ್ಲ: ಪ್ಯಾಲಸ್ತೇನ್ ಸಮಸ್ಯೆಯ ಬಗ್ಗೆ ವಿಮರ್ಶಾತ್ಮಕ ಅನುಸಂಧಾನ

ಬರಿಯ ನೆನಪಲ್ಲ: ಪ್ಯಾಲಸ್ತೇನ್ ಸಮಸ್ಯೆಯ ಬಗ್ಗೆ ವಿಮರ್ಶಾತ್ಮಕ ಅನುಸಂಧಾನ

- Advertisement -
- Advertisement -

ಕನ್ನಡದಲ್ಲಿ ಪ್ರತಿವರ್ಷ ನೂರಾರು ಅನುವಾದ ಕೃತಿಗಳು ಪ್ರಕಟವಾಗುತ್ತವೆ. ಹೆಚ್ಚಿನವು ಕಥೆ ಕಾದಂಬರಿ ಕಾವ್ಯಗಳು. ವಿಚಾರಸಾಹಿತ್ಯ, ಚರಿತ್ರೆ, ಆತ್ಮಕಥನ, ಪ್ರವಾಸಕಥನಗಳು ಕಡಿಮೆ. ಹೀಗಿರುತ್ತ ಯುವಲೇಖಕ ಆರ್.ಕೆ. ಆಕರ್ಷ, ಭೂಮಂಡಲದ ಗಾಯವೆನಿಸಿಕೊಂಡಿರುವ ಪ್ಯಾಲಸ್ತೇನಿಗೆ ಸಂಬಂಧಿಸಿದ ಅನುಭವ ಕಥನವೊಂದನ್ನು ಅನುವಾದಿಸಿರುವುದು ವಿಶಿಷ್ಟವಾಗಿದೆ. ಇದು ಏಶ್ಯಾ-ಆಫ್ರಿಕಾದ ಬೇರೆಬೇರೆ ದೇಶಗಳಿಗೆ ಹೋಗಿ, ಅಲ್ಲಿನ ಜನರೊಂದಿಗೆ ಮಾತುಕತೆಯಾಡಿ, ಆ ನಾಡುಗಳ ಸಂಘರ್ಷಮಯ ಕಥನಗಳನ್ನು ರಚಿಸುವುದಕ್ಕೆ ಖ್ಯಾತರಾಗಿರುವ ಕೆನಡಾದ ಲೇಖಕ ಸಿಂಟಿಯೊ ಅವರ ‘ಪೇ ನೋ ಹೀಡ್ ಟು ದಿ ರಾಕೆಟ್ಸ್: ಪ್ಯಾಲೆಸ್ಟೈನ್ ಇನ್ ಪ್ರೆಸೆಂಟ್ ಟೆನ್ಸ್’ ಕೃತಿಯ ತರ್ಜುಮೆ. ‘ನಾನು ಅರೆಬಿಕ್‌ನಲ್ಲಿ ಪ್ರೀತಿಸುತ್ತೇನೆ’ ‘ನಾನೀಗ ಸೈರನ್ನುಗಳಿಗೆ ಹೆದರುವುದಿಲ್ಲ’ ‘ನಿಮ್ಮದೇ ಮುಳ್ಳುಗಳನ್ನು ನಿಮ್ಮ ಕೈಯಿಂದ ಕಿತ್ತುಕೊಳ್ಳುತ್ತ’ ಮೊದಲಾದ ಎಂಟು ಅಧ್ಯಾಯಗಳುಳ್ಳ ಪುಸ್ತಕವಿದು. ಪ್ರತಿ ಅಧ್ಯಾಯವೂ ಒಬ್ಬೊಬ್ಬ ಪ್ಯಾಲಸ್ತೇನಿ ಹೋರಾಟಗಾರ-ಲೇಖಕರನ್ನು ಭೇಟಿಯಾಗಿ ನಡೆಸಲಾದ ಮಾತುಕತೆ ಮತ್ತು ವಿಶ್ಲೇಷಣೆಯನ್ನು ಒಳಗೊಂಡಿದೆ. ಇಸ್ರೇಲ್ ಮತ್ತು ಅಮೆರಿಕಗಳು ಆಕ್ರಮಣಕಾರಿ ರಾಜಕೀಯ ಧೋರಣೆಯ ಫಲವಾಗಿ ಲೋಕದ ಕಣ್ಣಲ್ಲಿ ಉಗ್ರಗಾಮಿಗಳಾಗಿರುವ, ಆದರೆ ತಮ್ಮ ಪೂರ್ವಜರಿಂದ ಬಂದ ಜಮೀನು ಮನೆ ತೋಟ ಗ್ರಂಥಭಂಡಾರಗಳನ್ನು ಕಳೆದುಕೊಂಡು, ಘನತೆಯ ಬದುಕಿಗಾಗಿ ಹೋರಾಡುತ್ತಿರುವ ಜನರ ದುಃಖದುಮ್ಮಾನಗಳ ಅನುಭವ ಮತ್ತು ಚಿಂತನೆಯನ್ನು ಇಲ್ಲಿರುವ ಕಥನವು ಒಳಗೊಂಡಿದೆ. ಇದನ್ನು ಓದುತ್ತಿದ್ದರೆ ಸಾಹಿತ್ಯಕ ತಾತ್ವಿಕ ರಾಜಕೀಯ ತತ್ವಗಳ ಕಿಡಿಗಳೇ ತುಂಬಿದ ಕೊಂಡದಲ್ಲಿ ಹಾಯುವಂತಹ ಅನುಭವವಾಗುತ್ತದೆ.

ನಾನು ಇಸ್ರೇಲ್ ಮತ್ತು ಪ್ಯಾಲೆಸ್ತೇನಿನ ಪ್ರವಾಸ ಮಾಡಿದ್ದೆ. ರಾಜಕೀಯ ಚರ್ಚೆ ಮಾಡುವುದಕ್ಕೆಂದೇ ಇರುವ ಕಾಫಿಕ್ಲಬ್ಬುಗಳನ್ನು ಬೆತ್ಲೆಹೆಂನಲ್ಲಿ ನೋಡಿದ್ದೆ. ಪಶ್ಚಿಮದಂಡೆಯ ಹೆಬ್ರೋನ್ ಜೆರಿಕಾ ಮೊದಲಾದ ಪಟ್ಟಣಗಳಲ್ಲಿ ತಿರುಗಾಡುವಾಗ, ಪ್ಯಾಲಸ್ಟೇನಿಯರ ಊರುಗಳನ್ನು ಬೆಟ್ಟತೋಟಗಳನ್ನು ಒತ್ತುವರಿ ಮಾಡುತ್ತ ಇಸ್ರೇಲಿ ಸರ್ಕಾರವು ಯಹೂದಿಗಳಿಗೆ ಮನೆಗಳನ್ನು ಕಟ್ಟಿಕೊಡುವುದನ್ನು, ಬೃಹತ್ ಗೋಡೆಗಳನ್ನು ನಿರ್ಮಿಸುವುದನ್ನು ಗಮನಿಸಿದ್ದೆ. ಆದರೆ ಅಲ್ಲಿನ ಹೋರಾಟಗಳ ಬಗ್ಗೆ ನೇರವಾಗಿ ಯಾರೊಟ್ಟಿಗೂ ಮಾತಾಡಲು ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನನಗೆ ಈ ಪುಸ್ತಕವು ನನ್ನ ತಿರುಗಾಟದ ಕೊರತೆಗಳನ್ನು ತುಂಬಿಕೊಡುವ ಸಮೃದ್ಧ ಅನುಭವ ನೀಡಿತು. ಇಸ್ರೇಲಿನ ಸೈನಿಕರ ನಿಷ್ಠುರ ತಪಾಸಣೆಯಲ್ಲಿ ಒಂದೇ ಊರಲ್ಲಿರುವ ಬೇರೆಬೇರೆ ಭಾಗಗಳಿಗೆ ಹೋಗಲು ಚೆಕ್‌ಪಾಯಿಂಟುಗಳನ್ನು ದಾಟುವ ಕಷ್ಟವನ್ನು ಕುರಿತ ಇಲ್ಲಿನ ಭಾಗಗಳು ಪ್ರವಾಸಿಗರಾಗಿ ಹೋಗುವ ಎಲ್ಲರ ಅನುಭವಕ್ಕೂ ಬರುತ್ತವೆ. ಆದರೆ ಪ್ಯಾಲೆಸ್ತೇನಿಯರಿಗೆ ಈ ಅಪಮಾನಜನಕ ದಾಟುವಿಕೆ ನಿತ್ಯದ ಅನುಭವವಾಗಿದೆ.

ನೋವು ಹೋರಾಟ ಸಾವು ಹೊರದಬ್ಬುವಿಕೆ ಅನಾಥಪ್ರಜ್ಞೆಗಳ ಅಗ್ನಿಪರ್ವತದಂತಿರುವ ಸಂಘರ್ಷಮಯ ಪ್ರದೇಶದಲ್ಲಿ ಸಾಹಿತ್ಯದಂತಹ ಕಲೆಯೊಂದು ಏನು ಮಾಡಬಲ್ಲದು ಎಂಬುದಕ್ಕೆ, ಈ ಕೃತಿಯಲ್ಲಿರುವ ದಾಖಲೆ ಮಾತುಕತೆ ವಿಶ್ಲೇಷಣೆ ವ್ಯಾಖ್ಯಾನಗಳು ಸಾಕ್ಷಿಯಂತಿವೆ. ಪ್ಯಾಲೆಸ್ತೇನಿ ಲೇಖಕರು ಹೇಳಿಕೊಂಡಿರುವ ಅನುಭವಗಳು ಮೈಜುಂ ಅನಿಸುವಂತಿವೆ. ಒಮ್ಮೆ ಕವಿ ಮೊಹಮ್ಮದ ಕುರ್ದ್ ಅವರು ತಮ್ಮ ಮೂಲಮನೆಯನ್ನು ಯಹೂದಿ ಆಕ್ರಮಣಕಾರರಿಂದ ಕಳೆದುಕೊಂಡ ಅನುಭವದ ಆಧಾರದಲ್ಲಿ ನಿರ್ಮಿಸಿದ ‘ಮೈ ನೈಬರ್‌ಹುಡ್’ ಸಾಕ್ಷ್ಯಚಿತ್ರದೊಂದಿಗೆ ಅಮೆರಿಕಕ್ಕೆ ಹೋಗಬೇಕಾಗುತ್ತದೆ. ಅವರಿಗೆ ರೈಲನ್ನು ನಡುನಡುವೆ ನಿಲ್ಲಿಸಿ ಸೈನಿಕರಿಂದ ತಪಾಸಣೆಗೆ ಒಳಗಾಗದೆ ಪಯಣ ಮಾಡುವುದರ ಅನುಭವವು ಹೊಸತೆನಿಸುತ್ತದೆ. ನಿತ್ಯವೂ ಪ್ರತಿಭಟನ ಘೋಷಣೆ ಹಾಕುತ್ತ ವಿಮೋಚನ ಚಳವಳಿ ನಡೆಸುತ್ತಿರುವ ಪ್ಯಾಲೆಸ್ತೇನಿಯರು ಎಷ್ಟೆಲ್ಲ ಸಣ್ಣಪುಟ್ಟ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದಾರೆ ಎಂಬುದನ್ನು ಕೂಡ ಇದು ಮನದಟ್ಟುಮಾಡುತ್ತದೆ.

 

ಆಕರ್ಷ ರಮೇಶ ಕಮಲ

ಈ ಕೃತಿಯಲ್ಲಿ ಧೀಮಂತರಾದ ಲೇಖಕಿಯರ ಜತೆಗಿನ ಮಾತುಕತೆಗಳಂತೂ ಉಜ್ವಲವಾಗಿವೆ. ಹೋರಾಟದ ಗರ್ಭದಲ್ಲಿರುವ ಸಾಮಾನ್ಯ ಜನ ರೂಪಕಗಳಲ್ಲಿ ಮಾತಾಡುವ ಕವಿಗಳಾಗಿರುತ್ತಾರೆ. ಹೋರಾಟಗಾರರು ದಾರ್ಶನಿಕರಾಗಿರುತ್ತಾರೆ ಮತ್ತು ಲೇಖಕರು ರಾಜಕೀಯ ಪ್ರಜ್ಞೆಯುಳ್ಳವರಾಗಿರುತ್ತಾರೆ ಎಂಬುದನ್ನು ಇಲ್ಲಿನ ಮಾತುಕತೆಗಳು ಸೂಚಿಸುತ್ತವೆ. ಲೇಖಕ ಸಿಂಟಿಯೊ, ಪ್ಯಾಲಸ್ತೇನಿಯರ ಹೋರಾಟ ಮತ್ತು ಸಾಹಿತ್ಯಗಳ ಬಗ್ಗೆ ಸಹಾನುಭೂತಿ ಉಳ್ಳವರು. ಆದರೂ ಇಸ್ರೇಲಿನ ಅಸ್ತಿತ್ವವನ್ನೇ ನಿರಾಕರಿಸುವ ಅತಿರೇಕದ ಅವಾಸ್ತವಿಕ ವಾದಗಳ ಬಗ್ಗೆ ಭಿನ್ನಮತವುಳ್ಳವರು. ಹೀಗಾಗಿ ಇದೊಂದು ಪ್ಯಾಲಸ್ತೇನ್ ಸಮಸ್ಯೆಯ ಬಗ್ಗೆ ವಿಮರ್ಶಾತ್ಮಕ ಅನುಸಂಧಾನವಿರುವ ಕೃತಿ ಕೂಡ ಆಗಿದೆ.

ಹೊಸಕಾಲದ ತರುಣ-ತರುಣಿಯರಲ್ಲಿ ಮತೀಯ ರಾಜಕಾರಣಕ್ಕೆ ಒಲಿದವರು ಸಾಕಷ್ಟು ಜನರಿದ್ದಾರೆ. ಯಾವುದೇ ರಾಜಕೀಯ ಪ್ರಜ್ಞೆಯ ಅಗತ್ಯವನ್ನು ನಿರಾಕರಿಸುತ್ತ ಭೋಗವಾದವನ್ನೇ ನಂಬಿದವರೂ ಇದ್ದಾರೆ. ಆದರೆ ಇಂಜಿನಿಯರಿಂಗ್ ಪದವೀಧರರಾದ ಆಕರ್ಷ ಅವರಂತೆ ಕೆಲವರು, ನಾಡಿನ ಮತ್ತು ದೇಶದ ನೋವುಗಳಿಗೆ ಮಿಡಿಯುವವರೂ ಇದ್ದಾರೆ. ಅನುವಾದಕ್ಕೆ ಈ ಕೃತಿಯ ಆಯ್ಕೆಯೇ ಅವರ ಕಾಳಜಿಯನ್ನು ಲೋಕದೃಷ್ಟಿಯನ್ನು ಕಾಣಿಸುತ್ತದೆ. ತಾಯಿ ಎಂ.ಆರ್. ಕಮಲ ಕನ್ನಡಿಗರಿಗೆ ಅಮೆರಿಕದ ಆಫ್ರಿಕನರ ಹೋರಾಟಗಳ ಕಥನಗಳನ್ನು ಕೊಟ್ಟಿದ್ದರು. ಅವರ ಮಗ ಜಗತ್ತಿನ ಇನ್ನೊಂದು ಭೂಭಾಗದ ಹೋರಾಟದ ಕಥನವನ್ನು ಕೊಟ್ಟಿದ್ದಾರೆ.

ಬರಿಯ ನೆನಪಲ್ಲ
ಮೂಲ: ಪೇ ನೋ ಹೀಡ್ ಟು ದಿ ರಾಕೆಟ್ಸ್
ಲೇಖಕ: ಮಾಸೆಲ್ಲೊ ಟಿ ಸಿಂಟಿಯೊ
ಅನು: ಆಕರ್ಷ ರಮೇಶ್ ಕಮಲ
ಕಥನ ಪ್ರಕಾಶನ, ಬೆಂಗಳೂರು, 2021, ಬೆಲೆ: 225

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...