Homeಮುಖಪುಟಲಸಿಕೆ ಸರ್ಟಿಫಿಕೇಟ್‌‌ನಲ್ಲಿ ಮೋದಿ ಭಾವಚಿತ್ರ ಸ್ವೀಕರಿಸಲಾಗದಷ್ಟು ಅಸಹಿಷ್ಣುತೆ ಇರಬಾರದು: ಕೇರಳ ಹೈಕೋರ್ಟ್

ಲಸಿಕೆ ಸರ್ಟಿಫಿಕೇಟ್‌‌ನಲ್ಲಿ ಮೋದಿ ಭಾವಚಿತ್ರ ಸ್ವೀಕರಿಸಲಾಗದಷ್ಟು ಅಸಹಿಷ್ಣುತೆ ಇರಬಾರದು: ಕೇರಳ ಹೈಕೋರ್ಟ್

- Advertisement -
- Advertisement -

ಕೋವಿಡ್‌‌ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿಯವರ ಭಾವಚಿತ್ರ ಇರುವುದನ್ನು ಸ್ವೀಕರಿಸಲು ಸಾಧ್ಯವಾಗದ ಮಟ್ಟಿಗೆ ನಾಗರಿಕರು ಅಸಹಿಷ್ಣುತೆ ಹೊಂದಬಾರದು ಎಂದು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠವು ಶನಿವಾರ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ಅವರನ್ನೊಳಗೊಂಡ ಪೀಠವು, ಲಸಿಕೆ ಪ್ರಮಾಣಪತ್ರ ಸಂಬಂಧ ಏಕ ಸದಸ್ಯ ಪೀಠದ ನ್ಯಾಯಾಧೀಶರ ಆದೇಶದ ವಿರುದ್ಧದ ಮೇಲ್ಮನವಿಯನ್ನು ವಜಾಗೊಳಿಸಿತು. ಕೋವಿಡ್‌‌ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ತೆಗೆದುಹಾಕುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ನಾಗರಿಕರ ಗಮನವನ್ನು ಸೆಳೆಯಲು, ಗರಿಷ್ಠ ಸಂಖ್ಯೆಯ ಜನರು ಲಸಿಕೆಯನ್ನು ತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ತನ್ನ ಕರ್ತವ್ಯಗಳನ್ನು ನಿರ್ವಹಿಸುವ ಪ್ರಯತ್ನವಾಗಿ ಛಾಯಾಚಿತ್ರವು  ಇರುವುದಾಗಿ ವಿಭಾಗೀಯ ಪೀಠ ಹೇಳಿದೆ.

ಪ್ರಧಾನ ಮಂತ್ರಿಯವರ ಭಾವಚಿತ್ರವನ್ನು ಪ್ರಮಾಣಪತ್ರಗಳಿಂದ ತೆಗೆದುಹಾಕುವಂತೆ ಸರ್ಕಾರವನ್ನು ಪ್ರಶ್ನಿಸುವ ಮೂಲಕ ನಾಗರಿಕರು ಮೂಲಭೂತ ಹಕ್ಕನ್ನು ಪ್ರತಿಪಾದಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಕೇಂದ್ರ ಸರ್ಕಾರವು ಸಾರ್ವಜನಿಕರ ಮೂಲಭೂತ ಹಕ್ಕುಗಳ ಬಗ್ಗೆ ಕಾಳಜಿ ವಹಿಸುತ್ತದೆಯೇ ಹೊರತು ಕರೋನವೈರಸ್ ಸಾಂಕ್ರಾಮಿಕದಂತಹ ಪರಿಸ್ಥಿತಿಯಲ್ಲಿ ವ್ಯಕ್ತಿಯ ಮೂಲಭೂತ ಹಕ್ಕುಗಳ ಬಗ್ಗೆ ಅಲ್ಲ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಅಸ್ಥಿರ ಪರಿಸ್ಥಿತಿಯು ರಾಷ್ಟ್ರ ಮತ್ತು ಇಡೀ ಜಗತ್ತನ್ನು ಆವರಿಸಿದಾಗ ಭಾರತದ ಸಂವಿಧಾನದ ಭಾಗ IIIರ ಅಡಿಯಲ್ಲಿ ಖಾತರಿಪಡಿಸಿದ ವೈಯಕ್ತಿಕ ಹಕ್ಕು ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿಗೆ ಅಧೀನವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಇದಕ್ಕೂ ಮುನ್ನ ಏಕ ಸದಸ್ಯ ಪೀಠವು  ಅರ್ಜಿದಾರರಾದ ಪೀಟರ್ ಮೈಲಿಪರಂಪಿಲ್ ಅವರ ಮೇಲೆ 1 ಲಕ್ಷ ರೂ. ದಂಡ ವಿಧಿಸಿತ್ತು. ಆದರೆ ವಿಭಾಗೀಯ ಪೀಠ ಅದನ್ನು 25 ಸಾವಿರ ರೂ.ಗೆ ಇಳಿಸಿತು. ಕ್ಷುಲ್ಲಕ ಅರ್ಜಿಗಳನ್ನು ಸಲ್ಲಿಸದಂತೆ ಪೀಠವು ಎಚ್ಚರಿಕೆ ನೀಡಿದೆ.

ಪ್ರಧಾನಿಯವರು ರಾಜಕೀಯ ಪಕ್ಷವೊಂದರ ನಾಯಕರೂ ಆಗಿರುವುದರಿಂದ ಸರ್ಕಾರಿ ಅನುದಾನಿತ ಸಂದೇಶಗಳು, ಪ್ರಚಾರಗಳಲ್ಲಿ ಪ್ರಧಾನಿಯವರನ್ನು ಉದಾಹರಿಸುವುದನ್ನು ತಡೆಯಬೇಕು ಎಂದು ಮೈಲಿಪರಂಪಿಲ್ ವಾದಿಸಿದ್ದರು.

ಇಂತಹ ಪ್ರಚಾರವು ಚುನಾವಣಾ ವ್ಯವಸ್ಥೆಯಲ್ಲಿ ಅಳವಡಿಸಲಾಗಿರುವ ಮತದಾನದ ಸ್ವತಂತ್ರ ಆಯ್ಕೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದರು.

ಕೊರೊನಾ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆಯುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್‌, “ಪ್ರಧಾನಿ ಬಗ್ಗೆ ನಾಚಿಕೆ ಏಕೆ?” ಎಂದು ಅರ್ಜಿದಾರರನ್ನು ಪ್ರಶ್ನಿಸಿತ್ತು.

ಇತರ ದೇಶಗಳಲ್ಲಿ ಇಂತಹ ಪದ್ಧತಿ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ಕೇರಳ ಹೈಕೋರ್ಟ್‌ಗೆ ತಿಳಿಸಿದ್ದರು. ಇದಕ್ಕೆ ಮೌಖಿಕವಾಗಿ ಪ್ರತಿಕ್ರಿಯಿಸಿದ್ದ ನ್ಯಾಯಾಧೀಶರು, “ಅವರು ತಮ್ಮ ಪ್ರಧಾನಿಗಳ ಬಗ್ಗೆ ಹೆಮ್ಮೆಪಡದಿರಬಹುದು, ನಮ್ಮ ಪ್ರಧಾನಿ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಹೇಳಿದ್ದರು.

ದೇಶದ ಜನರು ಬಹುಮತದಿಂದ ಪ್ರಧಾನಿಯನ್ನು ಅಧಿಕಾರಕ್ಕೆ ಆಯ್ಕೆ ಮಾಡಿದ್ದಾರೆ. ಲಸಿಕೆ ಪ್ರಮಾಣ ಪತ್ರದಲ್ಲಿ ಅವರ ಭಾವಚಿತ್ರ ಇರುವುದರಲ್ಲಿ ತಪ್ಪೇನು ಎಂದು ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಕೇಳಿದ್ದರು.

“ನೀವು (ಅರ್ಜಿದಾರರು) ಪ್ರಧಾನ ಮಂತ್ರಿಯ ಬಗ್ಗೆ ಏಕೆ ನಾಚಿಕೆಪಡುತ್ತೀರಿ? ಅವರು ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ…. ನಾವು ವಿಭಿನ್ನ ರಾಜಕೀಯ ದೃಷ್ಟಿಕೋನಗಳನ್ನು ಹೊಂದಿರಬಹುದು, ಆದರೆ ಅವರು ಇನ್ನೂ ನಮ್ಮ ಪ್ರಧಾನಿ” ಎಂದು ನ್ಯಾಯಾಲಯ ಹೇಳಿತ್ತು.

ಅರ್ಜಿದಾರರ ಪರ ವಕೀಲ ಪೀಟರ್ ಮೈಲಿಪರಂಪಿಲ್ ಅವರು, “ಪ್ರಮಾಣಪತ್ರವು ಖಾಸಗಿ ದಾಖಲೆ ಆಗಿದ್ದು, ಅದರ ಮೇಲೆ ನಮಗೆ ಹಕ್ಕಿದೆ. ನಾವು ಹಣ ಕೊಟ್ಟು ಲಸಿಕೆ ಖರೀದಿಸಿದ್ದು, ಅದರ ಕ್ರೆಡಿಟ್ ಅನ್ನು ಪ್ರಭುತ್ವ ತೆಗೆದುಕೊಳ್ಳುವುದು ಸರಿಯಲ್ಲ” ಎಂದು ವಾದಿಸಿದ್ದಾರೆ.

ಪ್ರಮಾಣ ಪತ್ರಕ್ಕೆ ಪ್ರಧಾನಮಂತ್ರಿಯವರ ಭಾವಚಿತ್ರವನ್ನು ಸೇರಿಸಿರುವುದು ವ್ಯಕ್ತಿಯ ಖಾಸಗಿತನವನ್ನು ಉಲ್ಲಂಘಿಸಿದಂತಾಗುತ್ತದೆ ಪೀಟರ್‌ ಪ್ರತಿಪಾದಿಸಿದ್ದರು.

ಈ ದೇಶದಲ್ಲಿ ಜವಾಹಾರ್‌ ಲಾಲ್ ನೆಹರೂ ಹೆಸರಿನಲ್ಲಿ ವಿಶ್ವವಿದ್ಯಾಲಯವೇ ಇದೆ. ಹಾಗಿದ್ದಾಗ ಲಸಿಕೆ ಪ್ರಮಾಣ ಪತ್ರದ ಮೇಲೆ ಈಗಿನಿ ಪ್ರಧಾನಿಯವರ ಫೋಟೊ ಏಕಿರಬಾರದು ಎಂದು ಪೀಠ ಪ್ರಶ್ನಿಸಿತ್ತು.

ದೇಶದ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೊ ಇರುವುದರಿಂದ ತೊಂದರೆಯಾಗಿಲ್ಲ. ನಿಮಗೇಕೆ ತೊಂದರೆ? ಎಂದು ಕೇಳಿತ್ತು. ಅರ್ಜಿಗೆ ಯಾವುದೇ ಅರ್ಹತೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಇಲ್ಲವೆಂದಾದರೆ, ಅರ್ಜಿಯನ್ನು ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿತ್ತು.


ಇದನ್ನೂ ಓದಿರಿ: ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...