Homeಮುಖಪುಟಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಶತಮಾನದ ಇತಿಹಾಸವಿರುವ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗಮುದ್ರೆ ಬಿದ್ದಿದೆ. ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ. ಇತ್ತ ಜನಪ್ರತಿನಿಧಿಗಳು ಧಾರ್ಮಿಕ ಸೂಕ್ಷ್ಮಗಳ ಸುತ್ತ ಗಿರಕಿ ಹೊಡೆಯುತ್ತಿದ್ದಾರೆ.

- Advertisement -
- Advertisement -

ಹಿಜಾಬ್‌ ವಿವಾದದ ಹಗ್ಗಜಗ್ಗಾಟದಲ್ಲಿ ಕರ್ನಾಟಕ ತೊಡಗಿರುವ ಹೊತ್ತಿನಲ್ಲೇ ಮೈಸೂರಿನ ಶತಮಾನದ ಕನ್ನಡ ಶಾಲೆಗೆ ಬೀಗ ಬಿದ್ದಿರುವುದು ಅಷ್ಟಾಗಿ ಚರ್ಚೆಯಾಗುತ್ತಿಲ್ಲ. ಮೈಸೂರಿನಲ್ಲಿ ನಡೆಯುತ್ತಿರುವ ಹೋರಾಟ ಮೈಸೂರಿನಾಚೆಗೆ ಪಸರಿಸಲಿಲ್ಲ.

ಮೈಸೂರು ನಗರದ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ (ಎನ್‌‌ಟಿಎಂಎಸ್‌‌) ಕಳೆದ ಗುರುವಾರ ಬೀಗ ಜಡಿಯಲಾಗಿದೆ. ಶತಮಾನದ ಕನ್ನಡ ಶಾಲೆ, ಹೆಣ್ಣು ಮಕ್ಕಳಿಗಾಗಿಯೇ ಆ ಕಾಲದಲ್ಲಿ ರಾಜ ವಂಶಸ್ಥರು ಆರಂಭಿಸಿದ ಶಾಲೆ ಮುಚ್ಚಿ ಹೋಗುತ್ತಿದೆ. ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ.

ಸ್ವಾಮಿ ವಿವೇಕನಂದರ ಹೆಸರಿನಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಈ ಶಾಲೆಯ ಕಟ್ಟಡ ಸೇರಿದಂತೆ ಜಾಗವನ್ನು ರಾಜ್ಯ ಸರ್ಕಾರ ನೀಡಿತ್ತು. ಇದರ ಸಂಬಂಧ ವಿವಾದ ಉಂಟಾಗಿತ್ತು. ಸ್ವಾಮಿ ವಿವೇಕಾನಂದರು ಭೇಟಿ ನೀಡಿದ ಜಾಗವೆಂದು ಆಶ್ರಮಕ್ಕೆ ಈ ಶಾಲೆಯ ಜಾಗವನ್ನು ನೀಡಲು ಮುಂದಾದ ದಿನದಿಂದಲೂ ಹೋರಾಟ ನಡೆಯುತ್ತಿತ್ತು. ಸುಮಾರು ಹತ್ತು ವರ್ಷಗಳಿಂದ ವಿವಾದ ಜೀವಂತವಾಗಿದೆ. ಕಳೆದ ಹಲವು ತಿಂಗಳಿಂದ ಹೋರಾಟ ತೀವ್ರವಾಗಿತ್ತು.

ಮಹಾರಾಣಿ ಕೆಂಪನಂಜಮಣ್ಣಿಯವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತೆರೆದ ಈ ಶಾಲೆಗೆ ಐತಿಹಾಸಿಕ ಮಹತ್ವವಿದೆ. ಇದನ್ನು ಮುಚ್ಚಬಾರದು ಎಂದು ಹಲವಾರು ತಿಂಗಳಿಂದ ಹೋರಾಟ ನಡೆಯುತ್ತಿತ್ತು.  ಕಳೆದ ಹತ್ತು ವರ್ಷಗಳಿಂದಲೂ ಈ ಜಾಗ ವಿವಾದ ಕೇಂದ್ರವಾಗಿತ್ತು. ಸ್ವಾಮಿ ವಿವೇಕಾನಂದರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಆ ಮೂಲಕ ಸ್ವಾಮೀಜಿಯವರ ಆಶಯ ಈಡೇರಿಸಬೇಕು. ಆಶ್ರಮ ಪಟ್ಟು ಬಿಡಬೇಕು ಎಂದು ಒತ್ತಾಯಿಸಲಾಗಿತ್ತು. ಶಾಲೆಯನ್ನು ಉಳಿಸಿಕೊಂಡೇ ಸ್ಮಾರಕ ನಿರ್ಮಿಸುವ ಚರ್ಚೆಗಳಾಗುತ್ತಿದ್ದವು.

ಆದರೆ ಏಕಾಏಕಿ ಶಾಲೆಯ ಪಿಠೋಪಕರಣಗಳನ್ನು ಕಳೆದ ಗುರುವಾರ ಸಂಜೆ ಬೇರೆಡೆಗೆ ಸಾಗಿಸಲಾಗಿದೆ. “ಪೀಠೋಪಕರಣಗಳನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ” ಎಂದು ಎನ್‌ಟಿಎಂಎಸ್ ಉಳಿಸಿ ಹೋರಾಟ ಸಮಿತಿಯ ಸದಸ್ಯರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಹೋರಾಟಗಾರರನ್ನು ಬಂಧಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಬೀಗ ಹಾಕಿಸಿದ್ದಾರೆ.

ಸಂಧಾನ ಕುರಿತು ಅಂತಿಮ ತೀರ್ಮಾನವಾಗುವ ಮುನ್ನವೇ ಶಾಲೆಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ, ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಶಾಲೆ ಉಳಿಸಿ ಹೋರಾಟ ಸಮಿತಿ ಮಾತುಕತೆ ನಡೆಸಿದೆ.

ಹಿರಿಯ ಸಾಹಿತಿ ದೇವನೂರ ಮಹಾದೇವ, ಹೋರಾಟ ಸಮಿತಿ ಅಧ್ಯಕ್ಷ ಪ.ಮಲ್ಲೇಶ್‌, ರೈತ ಸಂಘದ ಅಧ್ಯಕ್ಷ  ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಹೋರಾಟಗಾರರು ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ಶಾಲೆಯೂ ಉಳಿಯಬೇಕು, ಸ್ಮಾರಕ ನಿರ್ಮಿಸಬೇಕು ಎನ್ನುವ ಕುರಿತು ಸಂಧಾನ ಕಳೆದ ವರ್ಷವೇ ನಡೆದಿತ್ತು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲೂ ಒಂದು ಸಭೆ ನಡೆದರೆ, ಆಶ್ರಮದ ಪರವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅವರು ಸಂಧಾನ ಸೂತ್ರದಂತೆ ಚರ್ಚೆ ನಡೆಸುವುದಾಗಿ ಹೇಳಿದ್ದರು. ಈಗ ಅದು ಬಿಟ್ಟು ಶಾಲೆ ಸ್ಥಳಾಂತರ ಮಾಡಲಾಗಿದೆ. ಏಕಾಏಕಿ ಶಾಲೆಯನ್ನು ಸ್ಥಳಾಂತರಿಸಲಾಗಿದೆ. ಈ ಕುರಿತು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸುವಂತೆ ಪ್ರಸಾದ್ ಅವರಲ್ಲಿ ಹಿರಿಯ ಹೋರಾಟಗಾರರು ಕೋರಿದ್ದಾರೆ. ಪ್ರಸಾದ್ ಅವರು ಹೋರಾಟಗಾರರ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಶಾಲೆಯನ್ನು ಸ್ಥಳಾಂತರಕ್ಕೆ ಸರ್ಕಾರ ಆದೇಶ ಮಾಡಿರುವ ಸಂಬಂಧ ವರದಿಗಳಾಗಿವೆ. ಇತ್ತ ಶಾಲೆಯ ಬಳಿ ಪೊಲೀಸ್ ಬಗಿ ಬಂದೋಬಸ್ತ್‌ ಮಾಡಲಾಗಿದೆ. ಹೋರಾಟಗಾರರು ದನಿ ಎತ್ತಿದ್ದಾರೆ. ಪ್ರಕರಣ ಇತ್ಯರ್ಥವಾಗದೆ ಇರುವಾಗ ಏಕಾಏಕಿ ಶಾಲೆಯನ್ನು ಹಸ್ತಾಂತರಿಸಿರುವ ಕ್ರಮವನ್ನು ಖಂಡಿಸಿದ್ದಾರೆ.

ಶಾಲೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಪ.ಮಲ್ಲೇಶ್‌ ಅವರು, “ಐತಿಹಾಸಿಕ ಹಿನ್ನೆಲೆ ಇರುವ ಶಾಲೆಯನ್ನು ಉಳಿಸುವ ಹೋರಾಟ ನಿರಂತವಾಗಿ ನಡೆಯಲಿದೆ” ಎಂದು ಎಚ್ಚರಿಸಿದ್ದಾರೆ.

ಎನ್‌ಟಿಎಂ ಶಾಲೆಯಲ್ಲಿ 70 ಬಾಲಕಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯನ್ನು ಸ್ಥಳಾಂತರ ಮಾಡಿದ 51 ಹೆಣ್ಣು ಮಕ್ಕಳು ಹಾಜರಿದ್ದರು.  ಶಾಲೆಯ ಎದುರಿಗೆ ಇರುವ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ತರಗತಿಗಳನ್ನು ಸ್ಥಳಾಂತರಿಸಲಾಗಿದೆ.

ಧಾರ್ಮಿಕ ವಿಷಯವನ್ನಿಟ್ಟುಕೊಂಡು ರಾಜ್ಯದಲ್ಲಿ ದೊಡ್ಡಮಟ್ಟದ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ ಸಂಬಂಧ ತರಹೇವಾರಿ ಹೇಳಿಕೆಗಳನ್ನು ಶಾಸಕರು, ಸಚಿವರು ನೀಡುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಮೈಸೂರಿನ ಶತಮಾನದ ಶಾಲೆ, ಹೆಣ್ಣು ಮಕ್ಕಳ ಶಾಲೆಗೆ ಬೀಗ ಜಡಿದಿರುವುದು, ಮೈಸೂರಿನಾಚೆಗೆ ಗಂಭೀರ ಚರ್ಚೆಗೆ ಒಳಪಟ್ಟಿಲ್ಲದಿರುವುದು ದುರಂತವೇ ಸರಿ.


ಇದನ್ನೂ ಓದಿರಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...