Homeಮುಖಪುಟಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಶತಮಾನದ ಇತಿಹಾಸವಿರುವ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗಮುದ್ರೆ ಬಿದ್ದಿದೆ. ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ. ಇತ್ತ ಜನಪ್ರತಿನಿಧಿಗಳು ಧಾರ್ಮಿಕ ಸೂಕ್ಷ್ಮಗಳ ಸುತ್ತ ಗಿರಕಿ ಹೊಡೆಯುತ್ತಿದ್ದಾರೆ.

- Advertisement -
- Advertisement -

ಹಿಜಾಬ್‌ ವಿವಾದದ ಹಗ್ಗಜಗ್ಗಾಟದಲ್ಲಿ ಕರ್ನಾಟಕ ತೊಡಗಿರುವ ಹೊತ್ತಿನಲ್ಲೇ ಮೈಸೂರಿನ ಶತಮಾನದ ಕನ್ನಡ ಶಾಲೆಗೆ ಬೀಗ ಬಿದ್ದಿರುವುದು ಅಷ್ಟಾಗಿ ಚರ್ಚೆಯಾಗುತ್ತಿಲ್ಲ. ಮೈಸೂರಿನಲ್ಲಿ ನಡೆಯುತ್ತಿರುವ ಹೋರಾಟ ಮೈಸೂರಿನಾಚೆಗೆ ಪಸರಿಸಲಿಲ್ಲ.

ಮೈಸೂರು ನಗರದ ಮಹಾರಾಣಿಯವರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ (ಎನ್‌‌ಟಿಎಂಎಸ್‌‌) ಕಳೆದ ಗುರುವಾರ ಬೀಗ ಜಡಿಯಲಾಗಿದೆ. ಶತಮಾನದ ಕನ್ನಡ ಶಾಲೆ, ಹೆಣ್ಣು ಮಕ್ಕಳಿಗಾಗಿಯೇ ಆ ಕಾಲದಲ್ಲಿ ರಾಜ ವಂಶಸ್ಥರು ಆರಂಭಿಸಿದ ಶಾಲೆ ಮುಚ್ಚಿ ಹೋಗುತ್ತಿದೆ. ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಕೃಷ್ಣ ಆಶ್ರಮ ಮೇಲುಗೈ ಸಾಧಿಸಿದೆ.

ಸ್ವಾಮಿ ವಿವೇಕನಂದರ ಹೆಸರಿನಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಈ ಶಾಲೆಯ ಕಟ್ಟಡ ಸೇರಿದಂತೆ ಜಾಗವನ್ನು ರಾಜ್ಯ ಸರ್ಕಾರ ನೀಡಿತ್ತು. ಇದರ ಸಂಬಂಧ ವಿವಾದ ಉಂಟಾಗಿತ್ತು. ಸ್ವಾಮಿ ವಿವೇಕಾನಂದರು ಭೇಟಿ ನೀಡಿದ ಜಾಗವೆಂದು ಆಶ್ರಮಕ್ಕೆ ಈ ಶಾಲೆಯ ಜಾಗವನ್ನು ನೀಡಲು ಮುಂದಾದ ದಿನದಿಂದಲೂ ಹೋರಾಟ ನಡೆಯುತ್ತಿತ್ತು. ಸುಮಾರು ಹತ್ತು ವರ್ಷಗಳಿಂದ ವಿವಾದ ಜೀವಂತವಾಗಿದೆ. ಕಳೆದ ಹಲವು ತಿಂಗಳಿಂದ ಹೋರಾಟ ತೀವ್ರವಾಗಿತ್ತು.

ಮಹಾರಾಣಿ ಕೆಂಪನಂಜಮಣ್ಣಿಯವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತೆರೆದ ಈ ಶಾಲೆಗೆ ಐತಿಹಾಸಿಕ ಮಹತ್ವವಿದೆ. ಇದನ್ನು ಮುಚ್ಚಬಾರದು ಎಂದು ಹಲವಾರು ತಿಂಗಳಿಂದ ಹೋರಾಟ ನಡೆಯುತ್ತಿತ್ತು.  ಕಳೆದ ಹತ್ತು ವರ್ಷಗಳಿಂದಲೂ ಈ ಜಾಗ ವಿವಾದ ಕೇಂದ್ರವಾಗಿತ್ತು. ಸ್ವಾಮಿ ವಿವೇಕಾನಂದರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಆ ಮೂಲಕ ಸ್ವಾಮೀಜಿಯವರ ಆಶಯ ಈಡೇರಿಸಬೇಕು. ಆಶ್ರಮ ಪಟ್ಟು ಬಿಡಬೇಕು ಎಂದು ಒತ್ತಾಯಿಸಲಾಗಿತ್ತು. ಶಾಲೆಯನ್ನು ಉಳಿಸಿಕೊಂಡೇ ಸ್ಮಾರಕ ನಿರ್ಮಿಸುವ ಚರ್ಚೆಗಳಾಗುತ್ತಿದ್ದವು.

ಆದರೆ ಏಕಾಏಕಿ ಶಾಲೆಯ ಪಿಠೋಪಕರಣಗಳನ್ನು ಕಳೆದ ಗುರುವಾರ ಸಂಜೆ ಬೇರೆಡೆಗೆ ಸಾಗಿಸಲಾಗಿದೆ. “ಪೀಠೋಪಕರಣಗಳನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ” ಎಂದು ಎನ್‌ಟಿಎಂಎಸ್ ಉಳಿಸಿ ಹೋರಾಟ ಸಮಿತಿಯ ಸದಸ್ಯರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಹೋರಾಟಗಾರರನ್ನು ಬಂಧಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಬೀಗ ಹಾಕಿಸಿದ್ದಾರೆ.

ಸಂಧಾನ ಕುರಿತು ಅಂತಿಮ ತೀರ್ಮಾನವಾಗುವ ಮುನ್ನವೇ ಶಾಲೆಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಹಿರಿಯ ರಾಜಕಾರಣಿ, ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಶಾಲೆ ಉಳಿಸಿ ಹೋರಾಟ ಸಮಿತಿ ಮಾತುಕತೆ ನಡೆಸಿದೆ.

ಹಿರಿಯ ಸಾಹಿತಿ ದೇವನೂರ ಮಹಾದೇವ, ಹೋರಾಟ ಸಮಿತಿ ಅಧ್ಯಕ್ಷ ಪ.ಮಲ್ಲೇಶ್‌, ರೈತ ಸಂಘದ ಅಧ್ಯಕ್ಷ  ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಹೋರಾಟಗಾರರು ಶ್ರೀನಿವಾಸಪ್ರಸಾದ್ ಅವರನ್ನು ಭೇಟಿಯಾಗಿ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ.

ಶಾಲೆಯೂ ಉಳಿಯಬೇಕು, ಸ್ಮಾರಕ ನಿರ್ಮಿಸಬೇಕು ಎನ್ನುವ ಕುರಿತು ಸಂಧಾನ ಕಳೆದ ವರ್ಷವೇ ನಡೆದಿತ್ತು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲೂ ಒಂದು ಸಭೆ ನಡೆದರೆ, ಆಶ್ರಮದ ಪರವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅವರು ಸಂಧಾನ ಸೂತ್ರದಂತೆ ಚರ್ಚೆ ನಡೆಸುವುದಾಗಿ ಹೇಳಿದ್ದರು. ಈಗ ಅದು ಬಿಟ್ಟು ಶಾಲೆ ಸ್ಥಳಾಂತರ ಮಾಡಲಾಗಿದೆ. ಏಕಾಏಕಿ ಶಾಲೆಯನ್ನು ಸ್ಥಳಾಂತರಿಸಲಾಗಿದೆ. ಈ ಕುರಿತು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸುವಂತೆ ಪ್ರಸಾದ್ ಅವರಲ್ಲಿ ಹಿರಿಯ ಹೋರಾಟಗಾರರು ಕೋರಿದ್ದಾರೆ. ಪ್ರಸಾದ್ ಅವರು ಹೋರಾಟಗಾರರ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಶಾಲೆಯನ್ನು ಸ್ಥಳಾಂತರಕ್ಕೆ ಸರ್ಕಾರ ಆದೇಶ ಮಾಡಿರುವ ಸಂಬಂಧ ವರದಿಗಳಾಗಿವೆ. ಇತ್ತ ಶಾಲೆಯ ಬಳಿ ಪೊಲೀಸ್ ಬಗಿ ಬಂದೋಬಸ್ತ್‌ ಮಾಡಲಾಗಿದೆ. ಹೋರಾಟಗಾರರು ದನಿ ಎತ್ತಿದ್ದಾರೆ. ಪ್ರಕರಣ ಇತ್ಯರ್ಥವಾಗದೆ ಇರುವಾಗ ಏಕಾಏಕಿ ಶಾಲೆಯನ್ನು ಹಸ್ತಾಂತರಿಸಿರುವ ಕ್ರಮವನ್ನು ಖಂಡಿಸಿದ್ದಾರೆ.

ಶಾಲೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಪ.ಮಲ್ಲೇಶ್‌ ಅವರು, “ಐತಿಹಾಸಿಕ ಹಿನ್ನೆಲೆ ಇರುವ ಶಾಲೆಯನ್ನು ಉಳಿಸುವ ಹೋರಾಟ ನಿರಂತವಾಗಿ ನಡೆಯಲಿದೆ” ಎಂದು ಎಚ್ಚರಿಸಿದ್ದಾರೆ.

ಎನ್‌ಟಿಎಂ ಶಾಲೆಯಲ್ಲಿ 70 ಬಾಲಕಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯನ್ನು ಸ್ಥಳಾಂತರ ಮಾಡಿದ 51 ಹೆಣ್ಣು ಮಕ್ಕಳು ಹಾಜರಿದ್ದರು.  ಶಾಲೆಯ ಎದುರಿಗೆ ಇರುವ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ತರಗತಿಗಳನ್ನು ಸ್ಥಳಾಂತರಿಸಲಾಗಿದೆ.

ಧಾರ್ಮಿಕ ವಿಷಯವನ್ನಿಟ್ಟುಕೊಂಡು ರಾಜ್ಯದಲ್ಲಿ ದೊಡ್ಡಮಟ್ಟದ ವಿವಾದ ಸೃಷ್ಟಿಸಲಾಗಿದೆ. ಹಿಜಾಬ್‌ ಸಂಬಂಧ ತರಹೇವಾರಿ ಹೇಳಿಕೆಗಳನ್ನು ಶಾಸಕರು, ಸಚಿವರು ನೀಡುತ್ತಿದ್ದಾರೆ. ಆದರೆ ಇದೆಲ್ಲದರ ನಡುವೆ ಮೈಸೂರಿನ ಶತಮಾನದ ಶಾಲೆ, ಹೆಣ್ಣು ಮಕ್ಕಳ ಶಾಲೆಗೆ ಬೀಗ ಜಡಿದಿರುವುದು, ಮೈಸೂರಿನಾಚೆಗೆ ಗಂಭೀರ ಚರ್ಚೆಗೆ ಒಳಪಟ್ಟಿಲ್ಲದಿರುವುದು ದುರಂತವೇ ಸರಿ.


ಇದನ್ನೂ ಓದಿರಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...