Homeಮುಖಪುಟನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಅಲಿಗಢ (ಉತ್ತರ ಪ್ರದೇಶ): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಕಾಂಗ್ರೆಸ್‌ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಅಲಿಗಢದಲ್ಲಿ ರೋಡ್ ಶೋ ನಡೆಸಿದರು.

ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಕಾಂಗ್ರೆಸ್‌ನ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಜನರ “ಅಹಂಕಾರ” ತೊಡೆದುಹಾಕುವುದಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ ವಿರುದ್ಧ ಕಿಡಿಕಾರಿರುವ ಅವರು, “ಕಾಂಗ್ರೆಸ್ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವತ್ತ ಗಮನಹರಿಸಿದೆ” ಎಂದರು. ಸರ್ಕಾರದಲ್ಲಿ ಸುಮಾರು 12 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಟೀಕಿಸಿದರು.

ಕಾಂಗ್ರೆಸ್ ನಾಯಕರಿಗೆ ಪಕ್ಷದ ಬೆಂಬಲಿಗರು ಮತ್ತು ಕಾರ್ಯಕರ್ತರು ಹೂವಿನ ದಳಗಳನ್ನು ಸುರಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಆರು ಗಂಟೆಗಳ ಕಾಲ ರೋಡ್ ಶೋ ನಡೆದಿದ್ದು, ಕಾಂಗ್ರೆಸ್ ಬೆಂಬಲಿಗರು ರಸ್ತೆಗಳಲ್ಲಿ ಜಮಾಯಿಸಿ ಬೆಂಬಲ ಸೂಚಿಸಿದರು.

ಪ್ರಿಯಾಂಕಾ ಅವರು ಗುರುವಾರ ಮನೆ ಮನೆಗೆ ತೆರಳಿ ಪ್ರಚಾರದಲ್ಲಿ ಪಾಲ್ಗೊಂಡಿದ್ದು, ಕೋಯಿಲ್‌ನ ಕಾಂಗ್ರೆಸ್ ಅಭ್ಯರ್ಥಿ ವಿವೇಕ್ ಬನ್ಸಾಲ್, ಇಗ್ಲಾಸ್ ಅಭ್ಯರ್ಥಿ ಪ್ರೀತಿ ಧಂಗರ್ ಮತ್ತು ಅಲಿಘರ್ ಅಭ್ಯರ್ಥಿ ಸಲ್ಮಾನ್ ಇಮ್ತಿಯಾಜ್ ಅವರಿಗೆ ಮತ ನೀಡುವಂತೆ ಸಾರ್ವಜನಿಕರಲ್ಲಿ ಕೋರಿದರು.

ಇಗ್ಲಾಸ್ ಮತ್ತು ಕೊಯಿಲ್‌ನಲ್ಲಿ ಅವರು ಸ್ಥಳೀಯ ಜನರೊಂದಿಗೆ ಸಾರ್ವಜನಿಕ ಸಭೆಗಳನ್ನು ನಡೆಸಿದರು. ಕಚ್ಚಾ ವಸ್ತು, ವಿದ್ಯುತ್ ಮತ್ತು ಇಂಧನದ ಬೆಲೆ ಏರಿಕೆಯಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಪ್ಪರ್‌‌ಪೋರ್ಟ್ ಪ್ರದೇಶದಲ್ಲಿ ಹಲವಾರು ಅಂಗಡಿಗಳ ಮಾಲೀಕರೊಂದಿಗೆ ಅವರು ಮಾತನಾಡಿದರು.

ರೋಡ್ ಶೋನ ಭಾಗವಾಗಿ ಯುವತಿಯರು ಮತ್ತು ಮಹಿಳೆಯರು ಕಾಂಗ್ರೆಸ್ ಪಕ್ಷದ ಮುಖ್ಯ ಘೋಷಣೆಯಾದ, “ಲಡ್ಕಿ ಹೂಂ, ಲಾಡ್ ಸಕ್ತಿ ಹೂಂ (ನಾನು ಹುಡುಗಿ, ಮತ್ತು ನಾನು ಹೋರಾಡಬಲ್ಲೆ)” ಕೂಗಿದರು.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ರೋಡ್‌ಶೋ ಸಮಯದಲ್ಲಿ, ಅವರು ಅಪ್ಪರ್‌ಪೋರ್ಟ್‌ ಪ್ರದೇಶದಲ್ಲಿ ಬಟ್ಟೆ ಮಾರಾಟಗಾರರನ್ನು ಭೇಟಿಯಾದರು. COVID-19 ಲಾಕ್‌ಡೌನ್ ಸಮಯದಲ್ಲಿ ಅವರು ಎದುರಿಸಿದ ತೊಂದರೆಗಳ ಬಗ್ಗೆ ಕೇಳಿದರು.

ಲಾಕ್‌ಡೌನ್‌ನಿಂದ ಉದ್ಯಮದ ಮೇಲಾದ ಪರಿಣಾಮವನ್ನು ವ್ಯಾಪಾರಿಗಳು ಹಂಚಿಕೊಂಡ ನಂತರ, “ಬಿಜೆಪಿ ಸರ್ಕಾರವು ದ್ವೇಷದ ಮೇಲೆ ಹೆಚ್ಚು ಗಮನಹರಿಸಿರುವುದರಿಂದ ಕಾಂಗ್ರೆಸ್‌ಗೆ ಮತ ಚಲಾಯಿಸಿರಿ” ಎಂದು ಅವರು ಕೋರಿದರು.

ಪ್ರಿಯಾಂಕಾ ಅವರು ಬ್ಯೂಟಿ ಪಾರ್ಲರ್‌ಗೆ ಭೇಟಿ ನೀಡಿದರು. ಮಹಿಳಾ ಸಮಸ್ಯೆಗಳ ಕುರಿತು ಕಾಂಗ್ರೆಸ್ ರೂಪಿಸಿರುವ ಪ್ರಣಾಳಿಕೆಯ ಕುರಿತು ಅವರು ತಿಳಿಸಿದರು.

ಖೈರ್ ಪ್ರದೇಶದಲ್ಲಿ, ಅವರು ಕೆಲವು ಅಂಗಡಿಯವರು ಮತ್ತು ಯುವಕರೊಂದಿಗೆ ಮಾತನಾಡಿದರು. ಯುವಕರೊಬ್ಬರು, “ಖಾಲಿ ಇರುವ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ನಡೆಯದೆ, ಯುವಜನರಿಗೆ ದೊಡ್ಡ ಸಮಸ್ಯೆಯಾಗಿದೆ” ಎಂದು ಹೇಳಿದರು.

“ಯುವಕರು ಸಮಸ್ಯೆಗಳ ಆಧಾರದ ಮೇಲೆ ಮತ ಚಲಾಯಿಸಬೇಕು” ಎಂದು ಪ್ರಿಯಾಂಕಾ ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿರಿ: ಅಂಬೇಡ್ಕರ್‌ ಅನುಯಾಯಿಗಳು ಸಮಾಜವಾದಿ ಪಕ್ಷಕ್ಕೆ ಕೈಜೋಡಿಸಬೇಕು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...