Homeಮುಖಪುಟನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಅಲಿಗಢ (ಉತ್ತರ ಪ್ರದೇಶ): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಕಾಂಗ್ರೆಸ್‌ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಅಲಿಗಢದಲ್ಲಿ ರೋಡ್ ಶೋ ನಡೆಸಿದರು.

ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಕಾಂಗ್ರೆಸ್‌ನ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಜನರ “ಅಹಂಕಾರ” ತೊಡೆದುಹಾಕುವುದಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ ವಿರುದ್ಧ ಕಿಡಿಕಾರಿರುವ ಅವರು, “ಕಾಂಗ್ರೆಸ್ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವತ್ತ ಗಮನಹರಿಸಿದೆ” ಎಂದರು. ಸರ್ಕಾರದಲ್ಲಿ ಸುಮಾರು 12 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಟೀಕಿಸಿದರು.

ಕಾಂಗ್ರೆಸ್ ನಾಯಕರಿಗೆ ಪಕ್ಷದ ಬೆಂಬಲಿಗರು ಮತ್ತು ಕಾರ್ಯಕರ್ತರು ಹೂವಿನ ದಳಗಳನ್ನು ಸುರಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಆರು ಗಂಟೆಗಳ ಕಾಲ ರೋಡ್ ಶೋ ನಡೆದಿದ್ದು, ಕಾಂಗ್ರೆಸ್ ಬೆಂಬಲಿಗರು ರಸ್ತೆಗಳಲ್ಲಿ ಜಮಾಯಿಸಿ ಬೆಂಬಲ ಸೂಚಿಸಿದರು.

ಪ್ರಿಯಾಂಕಾ ಅವರು ಗುರುವಾರ ಮನೆ ಮನೆಗೆ ತೆರಳಿ ಪ್ರಚಾರದಲ್ಲಿ ಪಾಲ್ಗೊಂಡಿದ್ದು, ಕೋಯಿಲ್‌ನ ಕಾಂಗ್ರೆಸ್ ಅಭ್ಯರ್ಥಿ ವಿವೇಕ್ ಬನ್ಸಾಲ್, ಇಗ್ಲಾಸ್ ಅಭ್ಯರ್ಥಿ ಪ್ರೀತಿ ಧಂಗರ್ ಮತ್ತು ಅಲಿಘರ್ ಅಭ್ಯರ್ಥಿ ಸಲ್ಮಾನ್ ಇಮ್ತಿಯಾಜ್ ಅವರಿಗೆ ಮತ ನೀಡುವಂತೆ ಸಾರ್ವಜನಿಕರಲ್ಲಿ ಕೋರಿದರು.

ಇಗ್ಲಾಸ್ ಮತ್ತು ಕೊಯಿಲ್‌ನಲ್ಲಿ ಅವರು ಸ್ಥಳೀಯ ಜನರೊಂದಿಗೆ ಸಾರ್ವಜನಿಕ ಸಭೆಗಳನ್ನು ನಡೆಸಿದರು. ಕಚ್ಚಾ ವಸ್ತು, ವಿದ್ಯುತ್ ಮತ್ತು ಇಂಧನದ ಬೆಲೆ ಏರಿಕೆಯಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಪ್ಪರ್‌‌ಪೋರ್ಟ್ ಪ್ರದೇಶದಲ್ಲಿ ಹಲವಾರು ಅಂಗಡಿಗಳ ಮಾಲೀಕರೊಂದಿಗೆ ಅವರು ಮಾತನಾಡಿದರು.

ರೋಡ್ ಶೋನ ಭಾಗವಾಗಿ ಯುವತಿಯರು ಮತ್ತು ಮಹಿಳೆಯರು ಕಾಂಗ್ರೆಸ್ ಪಕ್ಷದ ಮುಖ್ಯ ಘೋಷಣೆಯಾದ, “ಲಡ್ಕಿ ಹೂಂ, ಲಾಡ್ ಸಕ್ತಿ ಹೂಂ (ನಾನು ಹುಡುಗಿ, ಮತ್ತು ನಾನು ಹೋರಾಡಬಲ್ಲೆ)” ಕೂಗಿದರು.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ರೋಡ್‌ಶೋ ಸಮಯದಲ್ಲಿ, ಅವರು ಅಪ್ಪರ್‌ಪೋರ್ಟ್‌ ಪ್ರದೇಶದಲ್ಲಿ ಬಟ್ಟೆ ಮಾರಾಟಗಾರರನ್ನು ಭೇಟಿಯಾದರು. COVID-19 ಲಾಕ್‌ಡೌನ್ ಸಮಯದಲ್ಲಿ ಅವರು ಎದುರಿಸಿದ ತೊಂದರೆಗಳ ಬಗ್ಗೆ ಕೇಳಿದರು.

ಲಾಕ್‌ಡೌನ್‌ನಿಂದ ಉದ್ಯಮದ ಮೇಲಾದ ಪರಿಣಾಮವನ್ನು ವ್ಯಾಪಾರಿಗಳು ಹಂಚಿಕೊಂಡ ನಂತರ, “ಬಿಜೆಪಿ ಸರ್ಕಾರವು ದ್ವೇಷದ ಮೇಲೆ ಹೆಚ್ಚು ಗಮನಹರಿಸಿರುವುದರಿಂದ ಕಾಂಗ್ರೆಸ್‌ಗೆ ಮತ ಚಲಾಯಿಸಿರಿ” ಎಂದು ಅವರು ಕೋರಿದರು.

ಪ್ರಿಯಾಂಕಾ ಅವರು ಬ್ಯೂಟಿ ಪಾರ್ಲರ್‌ಗೆ ಭೇಟಿ ನೀಡಿದರು. ಮಹಿಳಾ ಸಮಸ್ಯೆಗಳ ಕುರಿತು ಕಾಂಗ್ರೆಸ್ ರೂಪಿಸಿರುವ ಪ್ರಣಾಳಿಕೆಯ ಕುರಿತು ಅವರು ತಿಳಿಸಿದರು.

ಖೈರ್ ಪ್ರದೇಶದಲ್ಲಿ, ಅವರು ಕೆಲವು ಅಂಗಡಿಯವರು ಮತ್ತು ಯುವಕರೊಂದಿಗೆ ಮಾತನಾಡಿದರು. ಯುವಕರೊಬ್ಬರು, “ಖಾಲಿ ಇರುವ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ನಡೆಯದೆ, ಯುವಜನರಿಗೆ ದೊಡ್ಡ ಸಮಸ್ಯೆಯಾಗಿದೆ” ಎಂದು ಹೇಳಿದರು.

“ಯುವಕರು ಸಮಸ್ಯೆಗಳ ಆಧಾರದ ಮೇಲೆ ಮತ ಚಲಾಯಿಸಬೇಕು” ಎಂದು ಪ್ರಿಯಾಂಕಾ ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿರಿ: ಅಂಬೇಡ್ಕರ್‌ ಅನುಯಾಯಿಗಳು ಸಮಾಜವಾದಿ ಪಕ್ಷಕ್ಕೆ ಕೈಜೋಡಿಸಬೇಕು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...