Homeಕರೋನಾ ತಲ್ಲಣಕೋವಿಡ್ ಇಳಿಮುಖ: ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು

ಕೋವಿಡ್ ಇಳಿಮುಖ: ಭಾರತದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್‌ನ ಮೂರನೇ ಅಲೆ ಕಡಿಮೆಯಾದಂತೆ ಭಾಸವಾಗುತ್ತಿದ್ದು, ಭಾರತದ ದೈನಂದಿನ ಕೋವಿಡ್ -19 ಸೊಂಕಿತ ಪ್ರಕರಣಗಳ ಸಂಖ್ಯೆ ಸೋಮವಾರ ಒಂದು ಲಕ್ಷಕ್ಕಿಂತ ಕಡಿಮೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ದೈನಂದಿನ ಆರೋಗ್ಯ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ 83,876 ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟಾರೆ ಸೊಂಕಿತರ ಸಂಖ್ಯೆ ಈಗ 4,22,72,014ಕ್ಕೆ ತಲುಪಿದೆ.

ಒಂದು ದಿನದಲ್ಲಿ 895 ಕೋವಿಡ್‌ ಸಂಬಂಧಿತ ಸಾವುನೋವುಗಳೊಂದಿಗೆ, ಭಾರತದ ಒಟ್ಟು ಸಾವಿನ ಸಂಖ್ಯೆ 5,02,874ಗೆ ತಲುಪಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 1,16,073 ಪ್ರಕರಣಗಳನ್ನು ಕಡಿಮೆಯಾದ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938 ಕ್ಕೆ ಇಳಿದಿದೆ. ಒಟ್ಟು ಸೋಂಕಿತ ಪ್ರಕರಣಗಳಲ್ಲಿ 2.62 ಪ್ರತಿಶತನಷ್ಟು ಸಕ್ರಿಯ ಸೋಂಕಿತ ಪ್ರಕರಣಗಳಲ್ಲಿ ಇಳಿಕೆಯಾಗಿದೆ.

ಆರೋಗ್ಸ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕೋವಿಡ್‌ ಪಾಸಿಟಿವ್ ದರವು ಶೇಕಡಾ 7.25 ಕ್ಕೆ ಕುಸಿದಿದೆ ಹಾಗೆಯೆ ರಾಷ್ಟ್ರೀಯ ಕೋವಿಡ್ -19 ಚೇತರಿಕೆಯ ದರವು ಶೇಕಡಾ 96.19 ಕ್ಕೆ ಸುಧಾರಿಸಿದೆ. ವಾರದ ಪಾಸಿಟಿವ್ ದರವು ಶೇ. 9.18 ರಷ್ಟಾಗಿದೆ.

ಸೋಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,06,60,202 ಕ್ಕೆ ಏರಿದೆ. ಆದರೆ ಸೋಂಕಿನಿಂದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ ಎಂದು ಬುಲೆಟಿನ್ ತಿಳಿಸಿದೆ.

ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆ ಅಭಿಯಾನ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 169.63 ಕೋಟಿ ಡೋಸ್‌ಗಳನ್ನು ನೀಡಲಾಗಿದೆ.

ಪ್ರಕರಣಗಳ ಇಳಿಕೆ ಮತ್ತು ಚೇತರಿಕೆ ಪ್ರಮಾಣ ಹೆಚ್ಚಾದ ಹಿನ್ನೆಲೆ, ಅನೇಕ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತ ಮಂಡಳಿಯವರು ಶಿಕ್ಷಣ ಸಂಸ್ಥೆಗಳನ್ನು ಪುನಃ ತೆರೆಯಲು ನಿರ್ಧರಿಸಿದ್ದಾರೆ.

ಅನೇಕ ರಾಜ್ಯ ಸರ್ಕಾರಗಳು ಸೋಮವಾರದಿಂದ (ಫೆಬ್ರವರಿ 7) ಶಾಲೆಗಳು ಮತ್ತು ಕಾಲೇಜುಗಳನ್ನು ಪುನರಾರಂಭಿಸುತ್ತಿವೆ. ಆದರೆ ಹಲವು ರಾಜ್ಯಗಳು ಪ್ರೌಢ ತರಗತಿಗಳಿಗೆ ಮಾತ್ರ (9 ರಿಂದ 12) ಅನುಮತಿ ನೀಡಿವೆ. ಇನ್ನೂ ಕೆಲವು ರಾಜ್ಯಗಳಲ್ಲಿ ಪ್ರಾಥಮಿಕ ಶಾಲೆಗಳನ್ನೂ ಸಹ ಪುನಃ ತೆರೆಯಲು ಆದೇಶಿಸಿವೆ.

ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಭಾನುವಾರ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರೊಂದಿಗೆ ಪರಿಶೀಲನಾ ಸಭೆಯನ್ನು ನಡೆಸಿದ್ದು, ಕೇಂದ್ರ ಸರ್ಕಾರದ ನೌಕರರನ್ನು ಯಾವುದೇ ವಿನಾಯಿತಿ ಇಲ್ಲದೆ ದೈಹಿಕವಾಗಿ ಕಚೇರಿಗೆ ಹಾಜರಾಗಲು ಆದೇಶ ಹೊರಡಿಸಿದೆ. ಅದರ ನಂತರ ತನ್ನ ನೌಕರರ 100% ಭರ್ತಿಯೊಂದಿಗೆ ಪುನರಾರಂಭಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನು ಓದಿ: ಬಹುಜನ ಭಾರತ; ದೇಶದ ಬಹುಜನರ ಅಣಕಿಸುವ ಬಜೆಟ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...