Homeಕರ್ನಾಟಕಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಸ್ವಾಮಿಗಳ ಹೆಸರನ್ನು ಬಳಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸ್ವಾಮಿಜಿಯ ಅಭಿಮಾನಿಗಳು ಕಾನೂನು ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ

- Advertisement -
- Advertisement -

ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿದ್ದಾರೆ ಎಂದು ಪ್ರತಿಪಾದಿಸಿ, ಇಸ್ಲಾಂ ಧರ್ಮದ ವಿರುದ್ದ ದ್ವೇಷ ಹರಡುವ ಲೇಖನವೊಂದನ್ನು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. ಈ ಲೇಖನವನ್ನು ಇಸ್ಲಾಂ ಧರ್ಮದ ಬಗ್ಗೆ ಮತ್ತು ಹಿಜಾಬ್ ಬಗ್ಗೆ ಅವಹೇಳನಕಾರಿ ಮತ್ತು ತಪ್ಪು ಮಾಹಿತಿಯೊಂದಿಗೆ ಹರಿಯಬಿಡಲಾಗಿದೆ.

ಉಡುಪಿ ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್ ಧರಿಸುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ಕೇಸರಿ ಶಾಲು ಕುತ್ತಿಗೆಗೆ ಸುತ್ತಿಕೊಂಡು ವಿವಾದ ಸೃಷ್ಟಿಸಿದ ನಂತರ ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಈ ಬರಹವನ್ನು ಸ್ವಾಮಿಜಿ ಹೆಸರಿನಲ್ಲಿ, ಜೋರ್ಡಾನ್‌ನ ರಾಜ ಕುಟುಂಬದ ಚಿತ್ರದೊಂದಿಗೆ ಹರಿಬಿಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ವಿಶೇಷವೇನೆಂದರೆ ಈ ಲೇಖನವನ್ನು ಹೆಚ್ಚಿನ ಕಡೆಗೆ ಹಂಚಿರುವವರು ಬಿಜೆಪಿ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರೊಪಗಾಂಡ ಸೃಷ್ಟಿಸುವವ ಪೇಜ್‌ಗಳು ಮತ್ತು ಬಿಜೆಪಿ ಬೆಂಬಲಿಗರಾಗಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌‌

ವೈರಲ್ ಲೇಖನದ ಮೊದಲ ಪ್ಯಾರಾದಲ್ಲಿ ಜೊರ್ಡಾನ್‌ ರಾಜ ಕುಟುಂಬ ಪ್ರವಾದಿ ಮೊಹಮ್ಮದ್‌ ಅವರ ಕುಟುಂಬ ಎಂದು ಉಲ್ಲೇಖಿಸಲಾಗಿದೆ. “ಅಲ್ಲಿನ ರಾಜನಿಗೆ ಒಬ್ಬಳೇ ಪತ್ನಿ, ಯಾರೂ ಗಡ್ಡ ಬಿಟ್ಟಿಲ್ಲಾ, ಟೋಪಿ ಹಾಕಿಲ್ಲಾ, ಹೆಣ್ಣುಮಕ್ಕಳ್ಯಾರು ಬುರ್ಕಾ ಹಾಕಿಲ್ಲಾ, ಹಿಜಾಬ್ ಹಾಕಿಲ್ಲಾ, ಆಧುನಿಕ ವಸ್ತ್ರಗಳನ್ನೇ ತೊಡುತ್ತಿದ್ದಾರೆ, ಅತ್ಯಾಧುನಿಕ ಶಿಕ್ಷಣ ಪಡೆಯುತ್ತಿದ್ದಾರೆ, ಬರ್ತ್ ಡೇ ಆಚರಿಸಿಕೊಳ್ಳುತ್ತಾರೆ, ಆಧುನಿಕರಂತೆ ಬದುಕುತ್ತಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಜೊರ್ಡಾನ್‌‌ ರಾಜಕುಟುಂಬವು ಪ್ರವಾದಿ ಮೊಹಮ್ಮದ್‌‌ ಅವರ ವಂಶಸ್ಥರು ಎಂದು ಘೋಷಿಸಿಕೊಂಡಿದ್ದು ನಿಜವೇ ಆಗಿದೆ. ಆದರೆ ಪ್ರವಾದಿ ಕುಟುಂಬ ಎಂದ ಮಾತ್ರಕ್ಕೆ ಅವರು ಆಚರಣೆ ಮಾಡುವುದೇ ಇಸ್ಲಾಂ ಎಂದಲ್ಲ. ಧರ್ಮವನ್ನು ಪಾಲನೆ ಮಾಡುವುದು ಅವರವರ ಸ್ವಾತಂತ್ಯ್ರವಾಗಿದೆ. ಮೊದಲ ಪ್ಯಾರಾದಲ್ಲಿ ಜೋರ್ಡಾನ್‌ಗೆ ರಾಜನಿಗೆ ‘ಒಬ್ಬಳೇ ಪತ್ನಿ’ ಎಂದು ಬರೆದು, ಇಸ್ಲಾಂ ಎಂದರೆ ಹಲವು ಪತ್ನಿಯರು ಇರಲೇಬೇಕು ಎಂದು ಪ್ರತಿಪಾದಿಸಲಾಗಿದೆ. ಆದರೆ ವಾಸ್ತವದಲ್ಲಿ ‘ಇಸ್ಲಾಂ’ ಬಹುಪತ್ನಿತ್ವವನ್ನು ಪ್ರತಿಪಾದಿಸುವುದಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಹಲವಾರು ಪತ್ನಿಯರನ್ನು ಕಟ್ಟಿಕೊಂಡವರಿಗೆ ಸಮಾಜದಲ್ಲಿ ಹೆಚ್ಚು ಬೆಲೆ ಇರುವುದು ಸಾಮಾನ್ಯವಾಗಿದ್ದ ಕಾಲದಲ್ಲಿ, ನಾಲ್ಕಕ್ಕಿಂತ ಹೆಚ್ಚು ಜನರನ್ನು ಪತ್ನಿಯರನ್ನು ಹೊಂದಿರಬಾರದು ಎಂದು ಇಸ್ಲಾಂ ಬೋಧಿಸಿತ್ತು. ಇದನ್ನೇ, ಮುಸ್ಲಿಮರು ನಾಲ್ಕು ಪತ್ನಿಯನ್ನು ಹೊಂದಿರಬಹುದು ಎಂದು ತಪ್ಪಾಗಿ ಪ್ರತಿಪಾದಿಸಲಾಗುತ್ತಿದೆ.

ಉಳಿದಂತೆ ಗಡ್ಡ, ಟೋಪಿ, ಬುರ್ಖಾ ಮತ್ತು ಹಿಜಾಬ್‌ ಅಥವಾ ಬೇರೆ ಆಚರಣೆಗಳು ಪಾಲಿಸುವುದು ಮತ್ತು ಬಿಡುವುದು ಅವರವರ ಸ್ವಾತಂತ್ಯ್ರವಾಗಿದೆ.

ಎರಡನೇ ಪ್ಯಾರಾದಲ್ಲಿ, “ಇಸ್ಲಾಂನಲ್ಲಿ ಎರಡು ಬಗೆ, ಒಂದು ಅಲ್ಲಾನಾ ಇಸ್ಲಾಂ, ಇನ್ನೊಂದು ಮುಲ್ಲಾನ ಇಸ್ಲಾಂ. ಇವರು ಅಲ್ಲಾ ಇಸ್ಲಾಂನವರು, ಅಲ್ಲಾನ ಇಸ್ಲಾಂನವರು ಎಲ್ಲರೊಳಗೊಂದಾಗಿ, ಎಲ್ಲರಂತೆ ಶಾಂತಿಯಿಂದ ಬದುಕುತ್ತಾರೆ. ಆದರೆ ಮುಲ್ಲಾನ ಇಸ್ಲಾಂನವರು ಅನಕ್ಷರಸ್ಥ ಮುಲ್ಲಾಗಳ ಮಾತು ಕೇಳಿ ಅವರು ಬದುಕಿರುವ ಸಮಾಜ-ದೇಶ ಎಲ್ಲವನ್ನು ಹಿಂಸಿಸುತ್ತಾ, ಭಯೋತ್ಪಾದನೆ, ಲವ್ ಜಿಹಾದ್, ಡ್ರಗ್ಸ್ ಮಾಫಿಯಾ, ರೌಡಿಸಂ, ದೋ ನಂಬರ್ ಬ್ಯುಸಿನೆಸ್ ಎಲ್ಲಾ‌ ಮಾಡುತ್ತಾ ಅಶಾಂತಿಗೆ ಕಾರಣರಾಗಿದ್ದಾರೆ. ಮೇಲಾಗಿ ಇಸ್ಲಾಂ ಸಂಪ್ರದಾಯ ಎಂದು ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುತ್ತಾ, ಬುರ್ಕಾ-ಹಿಜಬ್ ನೊಳಗೆ ತುರುಕಿ, ತಲಾಕ್, ಬಹುಪತ್ನಿತ್ವದ ಹೆಸರಿನಲ್ಲಿ ಮಕ್ಕಳ ಹೆರುವ ಯಂತ್ರ ಮಾಡಿಕೊಂಡಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ.

ಈ ಪ್ಯಾರಾದಲ್ಲಿ ಕೋಮುದ್ವೇಷ ಹರಡುವ ಹುನ್ನಾರವಿದೆ. ಯಾವುದೇ ಧರ್ಮವನ್ನು ಪಾಲಿಸುವವರು ತನ್ನ ಧರ್ಮವನ್ನು ಶಾಂತಿಯಿಂದಲೇ ಪಾಲಿಸುತ್ತಾ, ತನ್ನಷ್ಟಕ್ಕೆ ತಾನಿರುತ್ತಾರೆ. ಜೊತೆಗೆ ಈ ಪ್ಯಾರಾದಲ್ಲಿ ಉಲ್ಲೇಖಿಸಿದ, ‘ಸಮಾಜ ಹಾಗೂ ದೇಶದಲ್ಲಿ ಹಿಂಸೆ, ಭಯೋತ್ಪಾದನೆ, ಡ್ರಗ್ಸ್‌ ಮಾಫಿಯಾ, ರೌಡಿಸಂ, ಇನ್ನಿತರ ಅಶಾಂತಿ’ ಮಾಡುವವರು ಎಲ್ಲೆಡೆಯು ಇರುತ್ತಾರೆ. ಅದರಲ್ಲಿ ಧರ್ಮವನ್ನು ಎಳೆದು ತರುವುದು ಕೋಮುದ್ವೇಷವಾಗಿದೆ. ಎಲ್ಲಾ ಸಮಾಜ, ಸಮುದಾಯಗಳಲ್ಲಿ ಸಾಧಕರು, ಗಣ್ಯರು ಇರುವ ಹಾಗೆಯೆ ಸಮಾಜದ್ರೋಹಿಗಳು ಇರುತ್ತಾರೆ. ಲೇಖನದಲ್ಲಿ ಪ್ರತಿಪಾದಿಸಿರುವ ಹಾಗೆ ಮಹಿಳೆಯು ಮಕ್ಕಳ ಹೆರುವ ಯಂತ್ರ ಎಂದು ಇಸ್ಲಾಂ ಎಲ್ಲಿಯೂ ಉಲ್ಲೇಖಿಸಿಲ್ಲ. ಉಳಿದಂತೆ ‘ಲವ್ ಜಿಹಾದ್‌’ ಪದವನ್ನು ಲೇಖನದಲ್ಲಿ ಉಲ್ಲೇಖಿಸಲಾಗಿದೆ.  ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ‘ಲವ್ ಜಿಹಾದ್’ ಎಂಬುವುದೇ ಇಲ್ಲ ಎಂದು ಸದನದಲ್ಲೇ ಮಾಹಿತಿ ನೀಡಿದೆ. ಆದ್ದರಿಂದ ಈ ಹೇಳಿಕೆಯು ತಪ್ಪಾಗಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಎಲ್ಲಕ್ಕಿಂತ ಮುಖ್ಯವಾಗಿ ಈ ಲೇಖನವನ್ನು ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿದ್ದಾರೆ ಎಂದು ಪ್ರತಿಪಾದಿಸಿ ಹರಿಬಿಡಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ನಿಜಗುಣಾನಂದ ಸ್ವಾಮಿ ಅವರುನ್ನು ಸಂಪರ್ಕಿಸಿದ್ದು, “ಈ ಲೇಖನ ನಾನು ಬರೆದಿಲ್ಲ, ನನ್ನ ಹೆಸರು ಬಳಸಿ ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಸ್ವಾಮಿಗಳ ಆಪ್ತರೊಬ್ಬರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಆರೆಸ್ಸೆಸ್‌ ಮತ್ತು ಸಂಘಪರಿವಾರವನ್ನು ಸ್ವಾಮಿಗಳು ನಿರಂತರವಾಗಿ ಟೀಕಿಸುತ್ತಿರುವುದರಿಂದ ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದೆ. ಈ ಲೇಖನವನ್ನು ಮೊದಲಿಗೆ ಸ್ವಾಮಿಗಳ ಹೆಸರಿನಲ್ಲಿ ಫೇಕ್‌ ಐಡಿ ಕ್ರಿಯೇಟ್‌ ಮಾಡಿ ಹರಿಯಬಿಡಲಾಗಿತ್ತು. ನಂತರ ಅದನ್ನು ಡಿಲೀಟ್ ಮಾಡಲಾಗಿದೆ. ಸ್ವಾಮಿಗಳ ಹೆಸರನ್ನು ಬಳಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸ್ವಾಮಿಜಿ ಅಭಿಮಾನಿಗಳು ಕಾನೂನು ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ” ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬೇಕೆಂದರೆ, ವೈರಲ್ ಲೇಖನವನ್ನು ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿಲ್ಲ. ಅಲ್ಲದೆ ಲೇಖನದಲ್ಲಿ ಹಲವಾರು ದಾರಿ ತಪ್ಪಿಸುವ ಮತ್ತು ಸುಳ್ಳು ಮಾಹಿತಿಗಳಿವೆ. ಜೊತೆಗೆ ಲೇಖನವು ಮುಖ್ಯವಾಗಿ ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಹರಡಲಿ ಬೇಕಾಗಿಯೆ ಬರೆಯಲಾಗಿದೆ. ಅದರಲ್ಲೂ ಈ ಲೇಖನವನ್ನು ಬಿಜೆಪಿ ಪರವಾಗಿ ಬೆಂಬಲಿಸುವ ಪೇಜ್‌ಗಳು ಹಂಚಿಕೊಳ್ಳುತ್ತಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....