Homeಮುಖಪುಟಯುಪಿ ಚುನಾವಣೆ: ಕಾಂಗ್ರೆಸ್, ಎಸ್‌ಪಿ ಮೈತ್ರಿಯಾಗಿದ್ದರೇ ಮತವಿಭಜನೆ ತಡೆಯಬಹುದಿತ್ತು- ಮಮತಾ ಬ್ಯಾನರ್ಜಿ

ಯುಪಿ ಚುನಾವಣೆ: ಕಾಂಗ್ರೆಸ್, ಎಸ್‌ಪಿ ಮೈತ್ರಿಯಾಗಿದ್ದರೇ ಮತವಿಭಜನೆ ತಡೆಯಬಹುದಿತ್ತು- ಮಮತಾ ಬ್ಯಾನರ್ಜಿ

’ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಗೆಲ್ಲಬೇಕು, ಬಿಜೆಪಿ ಸೋಲಬೇಕೆಂದು ನಾನು ಬಯಸುತ್ತೇನೆ’

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಪರ ನಾಳೆ ಪ್ರಚಾರ ಆರಂಭಿಸಲಿದ್ದಾರೆ. ಯುಪಿಗೆ ಎರಡು ದಿನಗಳ ಪ್ರವಾಸದಲ್ಲಿರುವ ಅವರು ಈ ಎರಡು ದಿನಗಳು ಎಸ್‌ಪಿ ಪರ ಪ್ರಚಾರ ನಡೆಸಲಿದ್ದಾರೆ.

ಲಕ್ನೋಗೆ ಹೊರಟಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ,’ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ನಡುವೆ ಮೈತ್ರಿಯಾಗಿದ್ದರೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ವಿರೋಧಿ ಮತಗಳ ವಿಭಜನೆಯನ್ನು ನಿಲ್ಲಿಸಬಹುದಿತ್ತು. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಿದರೆ ಒಳ್ಳೆಯದು. ಮತಗಳು ವಿಭಜನೆಯಾಗುತ್ತಿರಲಿಲ್ಲ. ನಾವು ಅವರನ್ನು ವಿನಂತಿಸಿದ್ದೇವೆ ಆದರೆ, ಅವರು (ಕಾಂಗ್ರೆಸ್) ಕೇಳಲಿಲ್ಲ” ಎಂದು ಸೋಮವಾರ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.

“ನಾನು ಅಖಿಲೇಶ್ ಯಾದವ್ ಪರ ಪ್ರಚಾರ ಮಾಡುತ್ತಿದ್ದೇನೆ. ಅವರು ನನ್ನನ್ನು ಪ್ರಚಾರ ಮಾಡಲು ಆಹ್ವಾನಿಸಿದ್ದಾರೆ. ಅವರು ಗೆಲ್ಲಬೇಕೆಂದೂ, ಬಿಜೆಪಿ ಸೋಲಬೇಕೆಂದು ನಾನು ಬಯಸುತ್ತೇನೆ” ಎಂದು ಬ್ಯಾನರ್ಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ-2022: ಅಖಿಲೇಶ್‌ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!

ಇದರ ಜೊತೆಗೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಉತ್ತರ ಪ್ರದೇಶದಲ್ಲಿ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಪಂಜಾಬ್‌ನಿಂದ ಸ್ಪರ್ಧಿಸಲಿದೆ ಎಂದೂ ತಿಳಿಸಿದ್ದಾರೆ.

ಇತ್ತ, ರಾಜಕೀಯ ಸೌಜನ್ಯವನ್ನು ಉಲ್ಲೇಖಿಸಿರುವ ಕಾಂಗ್ರೆಸ್‌ ಪಕ್ಷವು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪ್ರಗತಿಶೀಲ ಸಮಾಜವಾದಿ ಪಕ್ಷದ ಅಧ್ಯಕ್ಷ ಶಿವಪಾಲ್ ಯಾದವ್ ಸ್ಪರ್ಧಿಸುತ್ತಿರುವ ಯುಪಿಯ ಕರ್ಹಾಲ್ (ಮೈನ್‌ಪುರಿ) ಮತ್ತು ಜಸ್ವಂತ್ ನಗರ (ಇಟಾವಾ) ಕ್ಷೇತ್ರಗಳಿಂದ ಯಾವುದೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ.

ಕರ್ಹಾಲ್ ಕ್ಷೇತ್ರದಿಂದ ಜ್ಞಾನವತಿ ಯಾದವ್ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಾಗಿ ಪಕ್ಷವು ಈ ಹಿಂದೆ ಘೋಷಿಸಿತ್ತು. ಆದರೆ ಅಖಿಲೇಶ್‌ ಯಾದವ್ ಅಲ್ಲಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷವು ಘೋಷಿಸಿದ ನಂತರ ಕಾಂಗ್ರೆಸ್‌ ತನ್ನ ಸ್ಪರ್ಧಿಯನ್ನು ಹಿಂದೆ ಸರಿಸಿದೆ. ಕಾಂಗ್ರೆಸ್ ಜಸ್ವಂತ್ ನಗರದಿಂದ ಯಾವುದೇ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ, ಈ ಕ್ಷೇತ್ರದಲ್ಲಿ ಅಲ್ಲಿ ಶಿವಪಾಲ್ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಮತದಾನ ಆರಂಭವಾಗಲಿದ್ದು, ಮಾರ್ಚ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...