Homeಕರ್ನಾಟಕವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ಹಾವೇರಿಯಲ್ಲಿ ರಾಷ್ಟ್ರಧ್ವಜ ಹಿಡಿದು ಎಸ್ಎಫ್ಐ ನೇತೃತ್ವದಲ್ಲಿ ವಿಧ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ರಾಜ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಒಳ್ಳೆಯ ವಾತಾವರಣ ನಿರ್ಮಾಣ ಮಾಡುವ ಶಿಕ್ಷಣ ಸಂಸ್ಥೆಗಳಂತಹ  ಜಾಗದಲ್ಲಿ ವಿವಾದಗಳನ್ನು ಸೃಷ್ಟಿಸಿ ಶೈಕ್ಷಣಿಕ ವಾತಾವರಣ ಹದಗೆಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೋಮು ಪ್ರಚೋದನೆಗೆ ಒಳಗಾಗಿ, ತಮ್ಮತನವನ್ನು ಕಳೆದುಕೊಂಡು, ಶೈಕ್ಷಣಿಕ ವಾತಾವರಣ ಹದಗೆಡಲು ಬಿಡಬಾರದು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಹೇಳಿದೆ.

SFI ಹಾವೇರಿ ಜಿಲ್ಲಾ ಸಮಿತಿಯು ಸೋಮವಾರದಂದು ಹಾವೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಿಡಿದು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದೆ.

ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ಈ ಸಂದರ್ಭದಲ್ಲಿ, “ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಲ್ಲಿಲ್ಲ ಕ್ರೈಸ್ತ ರಕ್ತ, ನಮ್ಮಲಿರುವುದು ಒಂದೇ ರಕ್ತ, ಅದುವೇ ಮಾನವ ಕೆಂಪು ರಕ್ತ” ಎಂದು ಘೋಷಣೆ ಕೂಗಿರುವ ವಿದ್ಯಾರ್ಥಿಗಳು, ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡೋಣ. ಶಾಂತಿ, ಸೌಹಾರ್ದತೆ, ಸಂವಿಧಾನದ ಜಾತ್ಯಾತೀತತೆ, ವಿದ್ಯಾರ್ಥಿಗಳ ಐಕ್ಯತೆ ಚಿರಾಯುವಾಗಲಿ. ನಮ್ಮ ದೇಹ ಛಿದ್ರವಾದರೂ, ದೇಶ ಛಿಧ್ರವಾಗಲು ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

“ವಿದ್ಯಾರ್ಥಿಗಳು ಕೋಮ ಶಕ್ತಿಗಳ ಪ್ರಚೋದನೆಗೆ ಒಳಗಾಗದೆ, ನಮ್ಮ ದೇಶದ ಹೆಮ್ಮೆಯ ಸಂಕೇತ ತ್ರಿವರ್ಣ ಧ್ವಜವನ್ನು ಹಿಡಿದು ನಾವೆಲ್ಲರೂ ಐಕ್ಯತೆಯಿಂದ ಇರುವುದರ ಮೂಲಕ ಹಿಂದೂ-ಮುಸ್ಲಿಂಮರು ಒಂದೇ ಎಂಬ ಸಂದೇಶವನ್ನು ಸಾರಬೇಕು. ಈ ದೇಶ ಎಲ್ಲರೂ ಸೇರಿ ಕಟ್ಟಿದ್ದಾಗಿದೆ” ಎಂದು SFI ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

“ರಾಜ್ಯದಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸಿಕೊಂಡು ಬರುತ್ತಿರುವುದು ಇದು ಮೊದಲೇನಲ್ಲ. ಈಗಾಗಲೇ ಸುಮಾರು ವರ್ಷಗಳಿಂದ ಅವರು ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಕೋಮುವಾದಿ ಶಕ್ತಿಗಳು ತಮ್ಮ ಹಿಡನ್ ಅಜೆಂಡಾವನ್ನು ರಾಜಕೀಯಕ್ಕೆ ಬಳಕೆ ಮಾಡುತ್ತಿದೆ. ಶಿಕ್ಷಣ ಕಲಿಯುವ ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತುವ ಮೂಲಕ ರಾಜ್ಯವನ್ನು ಒಡೆದು ಆಳುವ ಕೆಲಸ ಸರಕಾರವೇ ಮಾಡುತ್ತಿರುವುದು ದುರಂತ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುಂದಾಪುರ: ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ, ಪಾಠವಿಲ್ಲ

“ರಾಜ್ಯದ ಬಹುತೇಕ ಸರಕಾರಿ ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳಾದ ಶಿಕ್ಷಕರು-ಉಪನ್ಯಾಸಕರು ಇಲ್ಲ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲ, ಶೌಚಾಲಯಗಳಿಲ್ಲ, ಕುಡಿಯಲು ಶುದ್ಧವಾದ ನೀರು ಇಲ್ಲ, ಗ್ರಂಥಾಲಯಗಳಿಲ್ಲ. ಇವು ಯಾವುದು ಕೂಡ ಇವರಿಗೆ ವಿಷಯವೇ ಅಲ್ಲ. ಮೂಲಭೂತ ಸೌಲಭ್ಯಗಳ ಕೊರತೆಯಿಂದ ಅಲ್ಪಸಂಖ್ಯಾತ, ದಲಿತ, ಹಿಂದುಳಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸಮುದಾಯಕ್ಕೆ ಸಮರ್ಪಕವಾಗಿ ಗುಣಮಟ್ಟದ ಶಿಕ್ಷಣ ಸಿಗದಿದ್ದರೂ ಪರವಾಗಿಲ್ಲ. ಆದರೆ ಮುಸ್ಲಿಂ ಹೆಣ್ಣು ಮಕ್ಕಳು ಹಿಜಬ್ ಹಾಕಿಕೊಂಡರೆ ಅದು ಇವರಿಗೆ ದೊಡ್ಡ ವಿಷಯ ಅಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಇಂತಹ ಮನಸ್ಥಿತಿಯ ವ್ಯಕ್ತಿಗಳಿಂದ ಇಂದು ಶೈಕ್ಷಣಿಕ ವಾತಾವರಣ ಹದಗೆಡಲು ಕಾರಣವಾಗಿದೆ. ಅಂತಹ ಯಾವುದೇ ಶಕ್ತಿಗಳಿಗೆ ವಿದ್ಯಾರ್ಥಿಗಳು ಕಿವಿ ಕೊಡಬಾರದು ಹಾಗೂ ಯಾವುದೇ ರೀತಿಯಿಂದ ಪ್ರಚೋದನೆಗೆ ಒಳಗಾಗದೆ ಅವರನ್ನು ಹಿಮ್ಮೆಟ್ಟಿಸಬೇಕು. ಅದಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌ ಸಂಘಟನೆಯು ರಾಷ್ಟ್ರ ಧ್ವಜವನ್ನು ಹಿಡಿದು ಪ್ರತಿಭಟನೆ ಮಾಡುವುದರ ಮೂಲಕ ಕೋಮು ಶಕ್ತಿಗಳಿಗೆ ಎಚ್ಚರಿಕೆ ನೀಡಿದೆ” ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಐಕ್ಯತೆಯಿಂದ ಹೋರಾಡಬೇಕೆಂದು SFI ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದೆ.

ಇದನ್ನೂ ಓದಿ: ಪಿಯು ನಿರ್ದೇಶಕಿ ಸ್ನೇಹಲ್‌ ವರ್ಗಾವಣೆ; ಸಮವಸ್ತ್ರ ಸುತ್ತೋಲೆಯೇ ಕಾರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಾರಂಭ ಗುಲಾಮರು ಮಾಡಿದ್ದಾರೆ ,ಅಂತ್ಯ ಭಕ್ತರು ಮಾಡ್ತಾರೇ ಹಿಜಾಬ್ ವಿಚಾರದಲ್ಲಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...