Homeಮುಖಪುಟತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಕಾಂಗ್ರೆಸ್ ನಾಯಕತ್ವ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ

ತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಕಾಂಗ್ರೆಸ್ ನಾಯಕತ್ವ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ

- Advertisement -
- Advertisement -

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕಾಂಗ್ರೆಸ್ ವಿರುದ್ಧ ಯಾವುದೇ ತಡೆರಹಿತ ದಾಳಿ ನಡೆಸಿದ್ದು, “ಬಹುಸಂಸ್ಕೃತಿ, ವೈವಿಧ್ಯಮಯ ದೇಶವನ್ನು ಆಳಲು ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್‌ ಅಳವಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತಂದಿದೆ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ವಿಭಜಕ ಮನಸ್ಥಿತಿ ಕಾಂಗ್ರೆಸ್‌ಗೆ ಇದೆ” ಎಂದು ದೂರಿದ್ದಾರೆ.

“ಅಂಗ್ರೇಜ್ ಚಲೇ ಗಯೇ (ಬ್ರಿಟಿಷರು ತೊರೆದರು). ಆದರೆ ಒಡೆದು ಆಳುವುದು ಉಳಿದಿದೆ… ಅದಕ್ಕಾಗಿಯೇ ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್‌ನ ನಾಯಕನಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿಯವರು, ಭಾರತವು ರಾಜ್ಯಗಳ ಒಕ್ಕೂಟವೆಂದು ಸಂವಿಧಾನ ಹೇಳುತ್ತದೆ ಎಂಬುದನ್ನು ನೆನಪಿಸಿದ್ದರು. ಆರ್‌ಎಸ್‌ಎಸ್‌ ಸಂವಿಧಾನದ ಮೂಲ ಆಶಯದೊಂದಿಗೆ ಆಡವಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು.

“ನನ್ನ ಅಜ್ಜಿಗೆ (ಮಾಜಿ ಪ್ರಧಾನಿ ಇಂದಿರಾಗಾಂಧಿ) 32 ಬಾರಿ ಗುಂಡು ಹಾರಿಸಿದ್ದರು. ನನ್ನ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಛಿದ್ರಗೊಂಡರು. ಇದು ಏನೆಂದು ನನಗೆ ತಿಳಿದಿದೆ. ದೇಶವನ್ನು ಅರಿತಿದ್ದೇನೆ” ಎಂದಿದ್ದರು.

ಇದನ್ನೂ ಓದಿರಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ರಾಹುಲ್‌ ಗಾಂಧಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಮೋದಿ, “ರಾಷ್ಟ್ರವು ಆಡಳಿತ ಅಥವಾ ಸರ್ಕಾರದ ವ್ಯವಸ್ಥೆ ಅಲ್ಲ – ಇದು ನಮಗೆ ಜೀವಂತ ಆತ್ಮ. 1000 ವರ್ಷಗಳಿಂದ ಜನರು ಅದರೊಂದಿಗೆ ಸಂಪರ್ಕ ಹೊಂದಿದ್ದಾರೆ” ಎಂದು ವಿಷ್ಣು ಪುರಾಣದ ಪುರಾತನ ಪಠ್ಯವನ್ನು ಉಲ್ಲೇಖಿಸಿದ್ದಾರೆ.

“ಪ್ರಜಾಸತ್ತಾತ್ಮಕವಾಗಿ ನಮ್ಮನ್ನು ತಡೆಯಲು ಸಾಧ್ಯವಾಗದವರು ಅಶಿಸ್ತಿನ ಮೂಲಕ ನಮ್ಮನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ವಿಫಲರಾಗುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಇಚ್ಛೆ ಕೊನೆಗೊಂಡಿದೆ” ಎಂದಿದ್ದಾರೆ.

ದೇಶಾದ್ಯಂತ ಕೋವಿಡ್ ಹರಡುವಿಕೆಗೆ ಮತ್ತು ಆರಂಭಿಕ ದಿನಗಳಲ್ಲಿ ವಲಸೆ ಬಿಕ್ಕಟ್ಟಿಗೆ ಪ್ರತಿಪಕ್ಷಗಳು ಜವಾಬ್ದಾರರು ಎಂದು ಪ್ರಧಾನಿ ಆರೋಪಿಸಿದ್ದಾರೆ. ಮಹಾರಾಷ್ಟ್ರ ಮತ್ತು ದೆಹಲಿ ಆಡಳಿತದ ಸರ್ಕಾರಗಳತ್ತ ಬೊಟ್ಟುಮಾಡಿದ ಅವರು, “ನೀವು ಕಾರ್ಮಿಕರನ್ನು ಕಷ್ಟಕ್ಕೆ ತಳ್ಳಿದ್ದೀರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

ಕಾಂಗ್ರೆಸ್ ಮಿತಿಯನ್ನು ಮೀರಿದೆ. “ಮೊದಲ ಅಲೆಯ ಸಮಯದಲ್ಲಿ ಕಾರ್ಮಿಕರು ತೆರಳಲು ಮತ್ತು ಕರೋನವೈರಸ್ ಹರಡಲು ಕಾಂಗ್ರೆಸ್‌ ಟಿಕೆಟ್ ನೀಡಿತು. ದೆಹಲಿ ಸರ್ಕಾರವು ಬಸ್‌ಗಳನ್ನು ವ್ಯವಸ್ಥೆಮಾಡಿತು” ಎಂದು ಪ್ರಧಾನಿ ಹೇಳಿದರು. “ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಕರೋನಾ ಈ ತೀವ್ರತೆಯನ್ನು ಹೊಂದಿರಲಿಲ್ಲ” ಎಂದು ತಿಳಿಸಿದ್ದಾರೆ.

“ಕೋವಿಡ್ ಸಮಯದಲ್ಲಿ, ಭಾರತೀಯ ಆರ್ಥಿಕತೆಯು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆದಿದೆ. ರೈತರು ದಾಖಲೆ ಪ್ರಮಾಣದ ಆಹಾರ ಧಾನ್ಯಗಳನ್ನು ಉತ್ಪಾದಿಸಿದರು. ಬಹಳಷ್ಟು ದೇಶಗಳು ಆಹಾರದ ಕೊರತೆಯನ್ನು ಎದುರಿಸಿದವು. ಆದರೆ ಈ ದೇಶವು ಹಸಿವಿನಿಂದ ಸಾಯಲು ಯಾರನ್ನೂ ಬಿಡಲಿಲ್ಲ. ಭಾರತವು 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ನೀಡಲಾಗಿದೆ, ಈಗಲೂ ನೀಡುತ್ತಿದ್ದಾರೆ” ಎಂದರು.

ರಾಹುಲ್‌ ಗಾಂಧಿಯವರು ಸಂಸತ್ತಿನಲ್ಲಿ ರಾಷ್ಟ್ರಪತಿಯವರ ಭಾಷಣವನ್ನು ಉದ್ದೇಶಿಸಿ ಮಾಡಿದ ಭಾಷಣ ಭಾರೀ ಪ್ರಶಂಸೆಗೆ ಒಳಗಾಗಿತ್ತು. ರಾಹುಲ್ ಅವರು ಬಹುತ್ವದ ಬಗ್ಗೆ ಮಾತನಾಡಿದ್ದರು. ಈ ಬಳಿಕ ಪ್ರತಿಕ್ರಿಯೆ ನೀಡಿರುವ ಪ್ರಧಾನಿಯವರು ವಾಗ್ದಾಳಿ ನಡೆಸಿದ್ದಾರೆ.

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದರು.

“ನೀವು ಮೇಕ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂದು ಮಾತನಾಡುತ್ತಲೇ ಇರುತ್ತೀರಿ. ಮೇಕ್ ಇನ್ ಇಂಡಿಯಾ ಎಂಬುದು ಇನ್ನು ಸಾಧ್ಯವಿಲ್ಲ. ‘ಮೇಡ್ ಇನ್ ಇಂಡಿಯಾ’ ಎಂಬುದನ್ನು ನಾಶ ಮಾಡಿದ್ದೀರಿ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬೆಂಬಲ ನೀಡಬೇಕು, ಇಲ್ಲದಿದ್ದರೆ ‘ಮೇಕ್ ಇನ್ ಇಂಡಿಯಾ’ ಸಾಧ್ಯವಿಲ್ಲ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಬಲ್ಲವು. ನೀವು ಮೇಡ್ ಇನ್ ಇಂಡಿಯಾ, ನ್ಯೂ ಇಂಡಿಯಾ, ಸ್ಟಾರ್ಟ್-ಅಪ್ ಇಂಡಿಯಾ ಇತ್ಯಾದಿಗಳ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ. ಆದರೆ, ನಿರುದ್ಯೋಗ ಹೆಚ್ಚುತ್ತಿದೆ” ಎಂದು ದೇಶದ ನಿರುದ್ಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಆಡಳಿತಾರೂಢ ಬಿಜೆಪಿಯು ಭಾರತದಲ್ಲಿ “ರಾಜ” ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ನಾವು 1947 ರಲ್ಲಿ ರಾಜನ ಕಲ್ಪನೆಯನ್ನು ಒಡೆದು ಹಾಕಿದ್ದೇವೆ. ಈಗ ರಾಜನ ಕಲ್ಪನೆ ಮತ್ತೆ ಬಂದಿದೆ. ಒಬ್ಬ ರಾಜ, ಒಬ್ಬ ಶೆಹನ್ ಶಾ, ಒಬ್ಬ ಆಡಳಿತಗಾರರ ಯಜಮಾನ, ಒಬ್ಬ ಯಜಮಾನರ ಯಜಮಾನ ಆಗಿದೆ. ಇದು ರಾಜ್ಯಗಳ ಒಕ್ಕೂಟದ ಕಲ್ಪನೆ ಮತ್ತು ರಾಜನ ಕಲ್ಪನೆಯ ನಡುವಿನ ಘರ್ಷಣೆ” ಎಂದು ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದರು.


ಇದನ್ನೂ ಓದಿರಿ: ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...