Homeಮುಖಪುಟತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಕಾಂಗ್ರೆಸ್ ನಾಯಕತ್ವ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ

ತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಕಾಂಗ್ರೆಸ್ ನಾಯಕತ್ವ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ

- Advertisement -
- Advertisement -

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕಾಂಗ್ರೆಸ್ ವಿರುದ್ಧ ಯಾವುದೇ ತಡೆರಹಿತ ದಾಳಿ ನಡೆಸಿದ್ದು, “ಬಹುಸಂಸ್ಕೃತಿ, ವೈವಿಧ್ಯಮಯ ದೇಶವನ್ನು ಆಳಲು ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್‌ ಅಳವಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತಂದಿದೆ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ವಿಭಜಕ ಮನಸ್ಥಿತಿ ಕಾಂಗ್ರೆಸ್‌ಗೆ ಇದೆ” ಎಂದು ದೂರಿದ್ದಾರೆ.

“ಅಂಗ್ರೇಜ್ ಚಲೇ ಗಯೇ (ಬ್ರಿಟಿಷರು ತೊರೆದರು). ಆದರೆ ಒಡೆದು ಆಳುವುದು ಉಳಿದಿದೆ… ಅದಕ್ಕಾಗಿಯೇ ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್‌ನ ನಾಯಕನಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿಯವರು, ಭಾರತವು ರಾಜ್ಯಗಳ ಒಕ್ಕೂಟವೆಂದು ಸಂವಿಧಾನ ಹೇಳುತ್ತದೆ ಎಂಬುದನ್ನು ನೆನಪಿಸಿದ್ದರು. ಆರ್‌ಎಸ್‌ಎಸ್‌ ಸಂವಿಧಾನದ ಮೂಲ ಆಶಯದೊಂದಿಗೆ ಆಡವಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು.

“ನನ್ನ ಅಜ್ಜಿಗೆ (ಮಾಜಿ ಪ್ರಧಾನಿ ಇಂದಿರಾಗಾಂಧಿ) 32 ಬಾರಿ ಗುಂಡು ಹಾರಿಸಿದ್ದರು. ನನ್ನ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಛಿದ್ರಗೊಂಡರು. ಇದು ಏನೆಂದು ನನಗೆ ತಿಳಿದಿದೆ. ದೇಶವನ್ನು ಅರಿತಿದ್ದೇನೆ” ಎಂದಿದ್ದರು.

ಇದನ್ನೂ ಓದಿರಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ರಾಹುಲ್‌ ಗಾಂಧಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಮೋದಿ, “ರಾಷ್ಟ್ರವು ಆಡಳಿತ ಅಥವಾ ಸರ್ಕಾರದ ವ್ಯವಸ್ಥೆ ಅಲ್ಲ – ಇದು ನಮಗೆ ಜೀವಂತ ಆತ್ಮ. 1000 ವರ್ಷಗಳಿಂದ ಜನರು ಅದರೊಂದಿಗೆ ಸಂಪರ್ಕ ಹೊಂದಿದ್ದಾರೆ” ಎಂದು ವಿಷ್ಣು ಪುರಾಣದ ಪುರಾತನ ಪಠ್ಯವನ್ನು ಉಲ್ಲೇಖಿಸಿದ್ದಾರೆ.

“ಪ್ರಜಾಸತ್ತಾತ್ಮಕವಾಗಿ ನಮ್ಮನ್ನು ತಡೆಯಲು ಸಾಧ್ಯವಾಗದವರು ಅಶಿಸ್ತಿನ ಮೂಲಕ ನಮ್ಮನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ವಿಫಲರಾಗುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಇಚ್ಛೆ ಕೊನೆಗೊಂಡಿದೆ” ಎಂದಿದ್ದಾರೆ.

ದೇಶಾದ್ಯಂತ ಕೋವಿಡ್ ಹರಡುವಿಕೆಗೆ ಮತ್ತು ಆರಂಭಿಕ ದಿನಗಳಲ್ಲಿ ವಲಸೆ ಬಿಕ್ಕಟ್ಟಿಗೆ ಪ್ರತಿಪಕ್ಷಗಳು ಜವಾಬ್ದಾರರು ಎಂದು ಪ್ರಧಾನಿ ಆರೋಪಿಸಿದ್ದಾರೆ. ಮಹಾರಾಷ್ಟ್ರ ಮತ್ತು ದೆಹಲಿ ಆಡಳಿತದ ಸರ್ಕಾರಗಳತ್ತ ಬೊಟ್ಟುಮಾಡಿದ ಅವರು, “ನೀವು ಕಾರ್ಮಿಕರನ್ನು ಕಷ್ಟಕ್ಕೆ ತಳ್ಳಿದ್ದೀರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

ಕಾಂಗ್ರೆಸ್ ಮಿತಿಯನ್ನು ಮೀರಿದೆ. “ಮೊದಲ ಅಲೆಯ ಸಮಯದಲ್ಲಿ ಕಾರ್ಮಿಕರು ತೆರಳಲು ಮತ್ತು ಕರೋನವೈರಸ್ ಹರಡಲು ಕಾಂಗ್ರೆಸ್‌ ಟಿಕೆಟ್ ನೀಡಿತು. ದೆಹಲಿ ಸರ್ಕಾರವು ಬಸ್‌ಗಳನ್ನು ವ್ಯವಸ್ಥೆಮಾಡಿತು” ಎಂದು ಪ್ರಧಾನಿ ಹೇಳಿದರು. “ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಕರೋನಾ ಈ ತೀವ್ರತೆಯನ್ನು ಹೊಂದಿರಲಿಲ್ಲ” ಎಂದು ತಿಳಿಸಿದ್ದಾರೆ.

“ಕೋವಿಡ್ ಸಮಯದಲ್ಲಿ, ಭಾರತೀಯ ಆರ್ಥಿಕತೆಯು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆದಿದೆ. ರೈತರು ದಾಖಲೆ ಪ್ರಮಾಣದ ಆಹಾರ ಧಾನ್ಯಗಳನ್ನು ಉತ್ಪಾದಿಸಿದರು. ಬಹಳಷ್ಟು ದೇಶಗಳು ಆಹಾರದ ಕೊರತೆಯನ್ನು ಎದುರಿಸಿದವು. ಆದರೆ ಈ ದೇಶವು ಹಸಿವಿನಿಂದ ಸಾಯಲು ಯಾರನ್ನೂ ಬಿಡಲಿಲ್ಲ. ಭಾರತವು 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ನೀಡಲಾಗಿದೆ, ಈಗಲೂ ನೀಡುತ್ತಿದ್ದಾರೆ” ಎಂದರು.

ರಾಹುಲ್‌ ಗಾಂಧಿಯವರು ಸಂಸತ್ತಿನಲ್ಲಿ ರಾಷ್ಟ್ರಪತಿಯವರ ಭಾಷಣವನ್ನು ಉದ್ದೇಶಿಸಿ ಮಾಡಿದ ಭಾಷಣ ಭಾರೀ ಪ್ರಶಂಸೆಗೆ ಒಳಗಾಗಿತ್ತು. ರಾಹುಲ್ ಅವರು ಬಹುತ್ವದ ಬಗ್ಗೆ ಮಾತನಾಡಿದ್ದರು. ಈ ಬಳಿಕ ಪ್ರತಿಕ್ರಿಯೆ ನೀಡಿರುವ ಪ್ರಧಾನಿಯವರು ವಾಗ್ದಾಳಿ ನಡೆಸಿದ್ದಾರೆ.

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದರು.

“ನೀವು ಮೇಕ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂದು ಮಾತನಾಡುತ್ತಲೇ ಇರುತ್ತೀರಿ. ಮೇಕ್ ಇನ್ ಇಂಡಿಯಾ ಎಂಬುದು ಇನ್ನು ಸಾಧ್ಯವಿಲ್ಲ. ‘ಮೇಡ್ ಇನ್ ಇಂಡಿಯಾ’ ಎಂಬುದನ್ನು ನಾಶ ಮಾಡಿದ್ದೀರಿ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬೆಂಬಲ ನೀಡಬೇಕು, ಇಲ್ಲದಿದ್ದರೆ ‘ಮೇಕ್ ಇನ್ ಇಂಡಿಯಾ’ ಸಾಧ್ಯವಿಲ್ಲ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಬಲ್ಲವು. ನೀವು ಮೇಡ್ ಇನ್ ಇಂಡಿಯಾ, ನ್ಯೂ ಇಂಡಿಯಾ, ಸ್ಟಾರ್ಟ್-ಅಪ್ ಇಂಡಿಯಾ ಇತ್ಯಾದಿಗಳ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ. ಆದರೆ, ನಿರುದ್ಯೋಗ ಹೆಚ್ಚುತ್ತಿದೆ” ಎಂದು ದೇಶದ ನಿರುದ್ಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಆಡಳಿತಾರೂಢ ಬಿಜೆಪಿಯು ಭಾರತದಲ್ಲಿ “ರಾಜ” ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ನಾವು 1947 ರಲ್ಲಿ ರಾಜನ ಕಲ್ಪನೆಯನ್ನು ಒಡೆದು ಹಾಕಿದ್ದೇವೆ. ಈಗ ರಾಜನ ಕಲ್ಪನೆ ಮತ್ತೆ ಬಂದಿದೆ. ಒಬ್ಬ ರಾಜ, ಒಬ್ಬ ಶೆಹನ್ ಶಾ, ಒಬ್ಬ ಆಡಳಿತಗಾರರ ಯಜಮಾನ, ಒಬ್ಬ ಯಜಮಾನರ ಯಜಮಾನ ಆಗಿದೆ. ಇದು ರಾಜ್ಯಗಳ ಒಕ್ಕೂಟದ ಕಲ್ಪನೆ ಮತ್ತು ರಾಜನ ಕಲ್ಪನೆಯ ನಡುವಿನ ಘರ್ಷಣೆ” ಎಂದು ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದರು.


ಇದನ್ನೂ ಓದಿರಿ: ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...