Homeಮುಖಪುಟಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ...

ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

ಸೋಮವಾರ ಅವರ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಈ ಖಾತೆಯನ್ನು ಅಳಿಸಲಾಗಿದೆ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ನೂತನ ಉಪಕುಲಪತಿಯಾಗಿ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಕ ಮಾಡಿ ಕೇಂದ್ರ ಶಿಕ್ಷಣ ಸಚಿವಾಲಯ ಘೋಷಿಸಿತ್ತು. ಈ ಬೆನ್ನಲ್ಲೇ, ಅವರ ಹೆಸರಿನಲ್ಲಿದ್ದ ಟ್ವಿಟರ್‌ ಖಾತೆಯಿಂದ ಜೆಎನ್‌ಯು ವಿದ್ಯಾರ್ಥಿಗಳನ್ನು ಟೀಕಿಸುವ, ರೈತರನ್ನು ದಲ್ಲಾಳಿಗಳು ಎಂದಿದ್ದ ಮತ್ತು ಬಿಜೆಪಿ ಸರ್ಕಾರವನ್ನು, ಗೋಡ್ಸೆಯನ್ನು ಬೆಂಬಲಿಸುವ  ಹಳೆಯ ಟ್ವೀಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

ಈ ಟ್ವೀಟ್‌ಗಳು ವೈರಲ್‌ ಆಗುತ್ತಿದ್ದ ಹಾಗೆಯೇ ಈ ಖಾತೆಯನ್ನು ಡಿಲೀಟ್ ಮಾಡಲಾಗಿದೆ. ಈ ಖಾತೆಯು ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರದ್ದೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಈ ಟ್ವೀಟ್‌ಗಳು @SantishreeD ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆ. ಈ ಅಕೌಂಟ್ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಎಂದು ಅವರ ಪೂರ್ಣ ಹೆಸರಿನಿಂದ ಇತ್ತು. ಪ್ರೋಫೈಲ್ ಫೋಟೋ ಮಾತ್ರ ದೇವರ ಚಿತ್ರವಾಗಿತ್ತು. ಜೊತೆಗೆ ಮೇ 2021 ರಿಂದ ಈ ಖಾತೆಯಿಂದ ಯಾವುದೇ ಟ್ವೀಟ್‌ಗಳನ್ನು ಮಾಡಲಾಗಿಲ್ಲ.

ಸೋಮವಾರ ಅವರ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಈ ಖಾತೆಯನ್ನು ಅಳಿಸಲಾಗಿದೆ. ಆದರೆ ಈ ಮೊದಲೇ ತೆಗೆದುಕೊಳ್ಳಲಾಗಿದ್ದ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ.

ಇದನ್ನೂ ಓದಿ: ಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

ಈ ಟ್ವಿಟರ್‌ ಖಾತೆಯಿಂದ ದೇಶದ್ರೋಹದ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ಜೆಎನ್‌ಯುನ ಪಿಎಚ್‌ಡಿ ಸಂಶೋಧನಾರ್ಥಿ ಶರ್ಜೀಲ್ ಇಮಾಮ್ ಅವರನ್ನು “ಐಐಟಿ-ಬಿ ಮತ್ತು ಜೆಎನ್‌ಯು ನಿರ್ಮಿಸಿದ ಜಿಹಾದಿ” ಎಂದು ಟ್ವೀಟ್‌ ಒಂದರಲ್ಲಿ ಉಲ್ಲೇಖಿಸಲಾಗಿತ್ತು. 2020 ರಲ್ಲಿ ಪೋಸ್ಟ್ ಮಾಡಲಾದ ಟ್ವೀಟ್‌ಗಳಲ್ಲಿ JNU ವಿದ್ಯಾರ್ಥಿಗಳನ್ನು “ಸೋತವರು” ಎಂದು ಹೇಳಿದ್ದರು. ಮತ್ತೊಂದು ಟ್ವೀಟ್‌ನಲ್ಲಿ “ಜಾಮಿಯಾ ಮತ್ತು ಸೇಂಟ್ ಸ್ಟೀಫನ್ಸ್” ನಂತಹ ಸಂಸ್ಥೆಗಳಿಗೆ ಧನಸಹಾಯವನ್ನು ನೀಡದಂತೆ ಕರೆ ನೀಡಲಾಗಿದೆ.

ಈ ಖಾತೆಯ ಬಹುತೇಕ ಟ್ವೀಟ್‌ಗLಳು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್, ಎಡಪಂಥೀಯರು ಮತ್ತು  ಬುದ್ಧಿಜೀವಿಗಳ ಬಗೆಗಿನ ಟೀಕೆಗಳೆ ಆಗಿವೆ.

ಇನ್ನು ರೈತ ಹೋರಾಟವನ್ನು ವಿರೋಧಿಸಿ ಹಲವು ಟ್ವೀಟ್‌ಗಳನ್ನು ಮಾಡಲಾಗಿದೆ. 2021 ರಲ್ಲಿ ಲೇಖಕಿ ಶೆಫಾಲಿ ವೈದ್ಯ, ರೈತ ನಾಯಕ ರಾಕೇಶ್ ಟಿಕೈತ್ ಅವರ ಹೇಳಿಕೆಯನ್ನು ಹಂಚಿಕೊಂಡು, “ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ” ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರ ಹೆಸರಿನ ಟ್ವಿಟರ್ ಹ್ಯಾಂಡಲ್‌ನಿಂದ “ಅವರಿಗೆ ನೇಣು ಹಾಕಿಕೊಳ್ಳಲು ನಾನು ಹಗ್ಗ ಕೊಡುತ್ತೇನೆ” ಎಂದು ಟ್ವೀಟ್‌ ಮಾಡಲಾಗಿತ್ತು.

ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಈ ಖಾತೆಯ ಹಳೆಯ ಹಲವು ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಉಪಕುಲಪತಿಯಾಗಿ ಶಿಕ್ಷಣ ಸಚಿವಾಲಯ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಿಸಿ ಸೋಮವಾರ ಆದೇಶಿಸಿದೆ. ಪ್ರಸ್ತುತ ಮಹಾರಾಷ್ಟ್ರದ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯದ ಉಪಕುಲಪತಿಯಾಗಿರುವ 59 ವರ್ಷ ವಯಸ್ಸಿನ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಜೆಎನ್‌ಯುನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಇಲ್ಲಿಯೇ ಅವರು ತಮ್ಮ ಎಂಫಿಲ್ ಮತ್ತು ಪಿಎಚ್‌ಡಿ ಮುಗಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...