Homeಮುಖಪುಟಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

ಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಕಾಲೇಜಿಗೆ ಹಿಜಾಬ್ ಧರಿಸಿ ಬರುವ ಮುಸ್ಲಿಂ ಹೆಣ್ಣು ಮಕ್ಕಳನ್ನು ವಿರೋಧಿಸಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ, ಇಂದು ಶಿವಮೊಗ್ಗ ಮತ್ತು ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಒಂಟಿ ಹೆಣ್ಣು ಮಕ್ಕಳನ್ನು ಗುರಿಯಾಗಿಸಿದ ಕೇಸರಿ ಶಾಲು ಧರಿಸಿದ್ದ ಕೆಲವು ಮಂದಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ವಿದ್ಯಾರ್ಥಿನಿಯರು ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಪಿಇಎಸ್‌ ಕಾಲೇಜಿನಲ್ಲಿ ಇಂದು ಕೂಡ ಹಿಜಾಬ್-ಕೇಸರಿ ಶಾಲು ವಿವಾದ ಜೋರಾಗಿತ್ತು. ಕೇಸರಿ ಶಾಲು ಧರಿಸಿ ಕಾಲೇಜು ಆವರಣದಲ್ಲಿ ಕುಳಿತಿದ್ದ ಹಲವರು, ಕಾಲೇಜು ಆವರಣದಲ್ಲಿ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯನ್ನು ಕಂಡ ತಕ್ಷಣವೇ ಆಕೆಯನ್ನು ಗುರಿಯಾಗಿಸಿದ್ದಾರೆ.

ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ಆಕೆಯನ್ನು ಸುತ್ತುವರೆಯಲು ಪ್ರಯತ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಆಕೆ ಅಲ್ಲಾ ಹು ಅಕ್ಬರ್‌ ಎಂದು ಘೋಷಣೆ ಕೂಗಿದ್ದಾರೆ. ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿದ್ದ ವಿದ್ಯಾರ್ಥಿಗಳನ್ನು ತಡೆಯಲು ಉಪನ್ಯಾಸಕರು ಹರ ಸಾಹಸ ಪಟ್ಟಿದ್ದಾರೆ. ಆದರೂ ಆಕೆಯನ್ನು ಹಿಂಬಾಲಿಸಿ ಆಕೆ ತರಗತಿಗೆ ಹೋಗುವವರೆಗೂ ಘೋಷಣೆ ಕೂಗಿದ್ದಾರೆ. ಬಳಿಕ ಉಪನ್ಯಾಸಕರ ಮಾತಿಗು ಒಪ್ಪದೆ ಅವರ ಜೊತೆಗೆ ವಾಗ್ವಾದ ನಡೆಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಇತ್ತ ಉಡುಪಿಯ ಎಂಜಿಎಂ ಕಾಲೇಜಿನಲ್ಲಿಯೂ ಬುರ್ಖಾ ತೊಟ್ಟ ಮುಸ್ಲಿಂ ವಿದ್ಯಾರ್ಥಿನಿಯನ್ನು ಸುತ್ತುವರೆದು ಕೇಸರಿ ಶಾಲುಧಾರಿಗಳು ದೌರ್ಜನ್ಯವೆಸಗಿದ್ದಾರೆ. ಆಕೆ ದಿಟ್ಟತನದಿಂದ ಉತ್ತರ ನೀಡಿದ್ದಾರೆ.

ಈ ಕುರಿತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೋವ್ನನು ಹಂಚಿಕೊಂಡಿದ್ದು, ಹೈಕೋರ್ಟ್ ಮಧ್ಯಪ್ರವೇಶಿಸಲು ಆಗ್ರಹಿಸಿದ್ದಾರೆ.

ಹೆಣ್ಣು ಮಕ್ಕಳು ತಮ್ಮ ಸಹಪಾಠಿಗಳಿಂದ ಕಿರುಕುಳ, ಬೆದರಿಸುವಿಕೆ, ಅಪಮಾನ ಮತ್ತು ಅವಮಾನಕ್ಕೆ ಒಳಗಾಗುತ್ತಿದ್ದಾರೆ. ನಮ್ಮ ಕಣ್ಣ ಮುಂದೆ ಏನಾಗುತ್ತಿದೆ ಎಂಬುದನ್ನು ನೋಡಲು ಅಸಹ್ಯಕರವಾಗಿದೆ, ಬಿಜೆಪಿಯು ಮಕ್ಕಳಲ್ಲೂ ನೈತಿಕತೆಯನ್ನು ನಾಶಪಡಿಸಿದೆ. ಕೂಡಲೇ ಹೈಕೋರ್ಟ್ ಮಧ್ಯಪ್ರವೇಶಿಸಲಿ ಎಂದು ಹೇಳಿದ್ದಾರೆ.

ಇನ್ನು ಘರ್ಷಣೆ ಹೆಚ್ಚಾದ ಹಿನ್ನೆಲೆ ತುರ್ತು ಸಭೆ ನಡೆಸಿದ ಉಡುಪಿಯ ಎಂಜಿಎಂ ಕಾಲೇಜು ಆಡಳಿತ ಮಂಡಳಿ ಕಾಲೇಜಿಗೆ ಅನಿರ್ಧಿಷ್ಠಾವಧಿ ರಜೆ ಘೊಷಿಸಿದೆ. ನ್ಯಾಯಾಲಯದ ತೀರ್ಪು ನೋಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಾಲೇಜು ಸೂಚನೆ ನೀಡುವವರೆಗೂ ವಿದ್ಯಾರ್ಥಿಗಳು ಕಾಲೇಜಿಗೆ ಬರಬಾರದು ಎಂದು ಆಡಳಿತ ಮಂಡಳಿ ತಿಳಿಸಿದೆ.


ಇದನ್ನೂ ಓದಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...