Homeಮುಖಪುಟಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

ಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಕಾಲೇಜಿಗೆ ಹಿಜಾಬ್ ಧರಿಸಿ ಬರುವ ಮುಸ್ಲಿಂ ಹೆಣ್ಣು ಮಕ್ಕಳನ್ನು ವಿರೋಧಿಸಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ, ಇಂದು ಶಿವಮೊಗ್ಗ ಮತ್ತು ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಒಂಟಿ ಹೆಣ್ಣು ಮಕ್ಕಳನ್ನು ಗುರಿಯಾಗಿಸಿದ ಕೇಸರಿ ಶಾಲು ಧರಿಸಿದ್ದ ಕೆಲವು ಮಂದಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ವಿದ್ಯಾರ್ಥಿನಿಯರು ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಪಿಇಎಸ್‌ ಕಾಲೇಜಿನಲ್ಲಿ ಇಂದು ಕೂಡ ಹಿಜಾಬ್-ಕೇಸರಿ ಶಾಲು ವಿವಾದ ಜೋರಾಗಿತ್ತು. ಕೇಸರಿ ಶಾಲು ಧರಿಸಿ ಕಾಲೇಜು ಆವರಣದಲ್ಲಿ ಕುಳಿತಿದ್ದ ಹಲವರು, ಕಾಲೇಜು ಆವರಣದಲ್ಲಿ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯನ್ನು ಕಂಡ ತಕ್ಷಣವೇ ಆಕೆಯನ್ನು ಗುರಿಯಾಗಿಸಿದ್ದಾರೆ.

ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ಆಕೆಯನ್ನು ಸುತ್ತುವರೆಯಲು ಪ್ರಯತ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಆಕೆ ಅಲ್ಲಾ ಹು ಅಕ್ಬರ್‌ ಎಂದು ಘೋಷಣೆ ಕೂಗಿದ್ದಾರೆ. ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿದ್ದ ವಿದ್ಯಾರ್ಥಿಗಳನ್ನು ತಡೆಯಲು ಉಪನ್ಯಾಸಕರು ಹರ ಸಾಹಸ ಪಟ್ಟಿದ್ದಾರೆ. ಆದರೂ ಆಕೆಯನ್ನು ಹಿಂಬಾಲಿಸಿ ಆಕೆ ತರಗತಿಗೆ ಹೋಗುವವರೆಗೂ ಘೋಷಣೆ ಕೂಗಿದ್ದಾರೆ. ಬಳಿಕ ಉಪನ್ಯಾಸಕರ ಮಾತಿಗು ಒಪ್ಪದೆ ಅವರ ಜೊತೆಗೆ ವಾಗ್ವಾದ ನಡೆಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಇತ್ತ ಉಡುಪಿಯ ಎಂಜಿಎಂ ಕಾಲೇಜಿನಲ್ಲಿಯೂ ಬುರ್ಖಾ ತೊಟ್ಟ ಮುಸ್ಲಿಂ ವಿದ್ಯಾರ್ಥಿನಿಯನ್ನು ಸುತ್ತುವರೆದು ಕೇಸರಿ ಶಾಲುಧಾರಿಗಳು ದೌರ್ಜನ್ಯವೆಸಗಿದ್ದಾರೆ. ಆಕೆ ದಿಟ್ಟತನದಿಂದ ಉತ್ತರ ನೀಡಿದ್ದಾರೆ.

ಈ ಕುರಿತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೋವ್ನನು ಹಂಚಿಕೊಂಡಿದ್ದು, ಹೈಕೋರ್ಟ್ ಮಧ್ಯಪ್ರವೇಶಿಸಲು ಆಗ್ರಹಿಸಿದ್ದಾರೆ.

ಹೆಣ್ಣು ಮಕ್ಕಳು ತಮ್ಮ ಸಹಪಾಠಿಗಳಿಂದ ಕಿರುಕುಳ, ಬೆದರಿಸುವಿಕೆ, ಅಪಮಾನ ಮತ್ತು ಅವಮಾನಕ್ಕೆ ಒಳಗಾಗುತ್ತಿದ್ದಾರೆ. ನಮ್ಮ ಕಣ್ಣ ಮುಂದೆ ಏನಾಗುತ್ತಿದೆ ಎಂಬುದನ್ನು ನೋಡಲು ಅಸಹ್ಯಕರವಾಗಿದೆ, ಬಿಜೆಪಿಯು ಮಕ್ಕಳಲ್ಲೂ ನೈತಿಕತೆಯನ್ನು ನಾಶಪಡಿಸಿದೆ. ಕೂಡಲೇ ಹೈಕೋರ್ಟ್ ಮಧ್ಯಪ್ರವೇಶಿಸಲಿ ಎಂದು ಹೇಳಿದ್ದಾರೆ.

ಇನ್ನು ಘರ್ಷಣೆ ಹೆಚ್ಚಾದ ಹಿನ್ನೆಲೆ ತುರ್ತು ಸಭೆ ನಡೆಸಿದ ಉಡುಪಿಯ ಎಂಜಿಎಂ ಕಾಲೇಜು ಆಡಳಿತ ಮಂಡಳಿ ಕಾಲೇಜಿಗೆ ಅನಿರ್ಧಿಷ್ಠಾವಧಿ ರಜೆ ಘೊಷಿಸಿದೆ. ನ್ಯಾಯಾಲಯದ ತೀರ್ಪು ನೋಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಾಲೇಜು ಸೂಚನೆ ನೀಡುವವರೆಗೂ ವಿದ್ಯಾರ್ಥಿಗಳು ಕಾಲೇಜಿಗೆ ಬರಬಾರದು ಎಂದು ಆಡಳಿತ ಮಂಡಳಿ ತಿಳಿಸಿದೆ.


ಇದನ್ನೂ ಓದಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....