Homeಕರ್ನಾಟಕಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

"ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು."

- Advertisement -
- Advertisement -

“ನಾವು ಮರೆತ್ತಿಲ್ಲ. ಜೀನ್ಸ್ ಪ್ಯಾಂಟ್ ಹಾಗೂ ಟೀ ಶರ್ಟ್‌ ಧರಿಸಿದ ಮಹಿಳೆಯರಿಗೆ ಥಳಿಸಿದವರು ನೀವು.  ಅಂದು ಏಟು ತಿಂದ ಮಹಿಳೆಯರ್‍ಯಾರೂ ಮುಸ್ಲಿಮರಲ್ಲ, ಶೂದ್ರರು” ಎಂದು ಹೈಕೋರ್ಟ್ ಹಿರಿಯ ವಕೀಲರಾದ ಎಸ್.ಬಾಲನ್‌ ಹೇಳಿದರು.

ಹಿಜಾಬ್‌‌ ಸಂಬಂಧ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಹೆಣ್ಣುಮಕ್ಕಳು, ಶೂದ್ರರು ಓದಬಾರದೆಂದು ಕಾನೂನು ಮಾಡಿದವರು ನೀವು. ಬ್ರಾಹ್ಮಣ ಮಹಿಳೆಯರಿಗೂ ಓದುವ ಅವಕಾಶ ನೀಡದವರು ನೀವು. ಹಿಂದೂ ಕೋಡ್‌ ಬಿಲ್‌ ಮಂಡಿಸಿ ಮಹಿಳೆಯರಿಗೆ ವಿಚ್ಛೇದನಾ ಹಕ್ಕು, ಆಸ್ತಿಯಲ್ಲಿ ಹಕ್ಕು ಕೊಟ್ಟಿದ್ದು ಅಂಬೇಡ್ಕರ್‌. ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ ರವರ ಮನೆಯ ಮುಂದೆ ಧಿಕ್ಕಾರ ಹಾಕಿದವರು ನೀವು” ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳಲ್ಲಿ ಒಂದು ದನಿ ಬರುತ್ತಿದೆ. ನಾವು ಹಿಂದೂ ರಾಷ್ಟ್ರ ಕಟ್ಟುತ್ತೇವೆ. ಹಾಗಾಗಿ ನೀವು ಹಿಜಾಬ್  ಧರಿಸಬಾರದು. ಹಿಜಾಬ್‌ ಧರಿಸಿದರೆ ನೀವು ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಿದ್ದಾರೆ. ಈ ದೇಶ ಜಾತ್ಯತೀತ ದೇಶ. ಪಾಕಿಸ್ತಾನವಲ್ಲ. ಪಾಕಿಸ್ತಾನ ಧಾರ್ಮಿಕ ದೇಶ. ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ ಎಂದು ಬಾಲನ್‌ ಗುಡುಗಿದರು.

ಇದನ್ನೂ ಓದಿರಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ಈ ದೇಶ ಈ ಜನರ ದೇಶ. ಜನರ ಹಕ್ಕುಗಳಿಗೆ ಧಕ್ಕೆ ಮಾಡಬೇಡಿ. ನಿಮ್ಮ ರಾಜಕೀಯ ರಕ್ತದ ಮೇಲೆ, ದ್ವೇಶದ ಮೇಲೆ ನಿಂತಿದೆ. ಗುಜರಾತ್‌ನಲ್ಲಿ ಮುಸ್ಲಿಮರನ್ನು ಕೊಂದಿರಿ. ದಲಿತರು, ಹಿಂದುಳಿದವರನ್ನು ಜೈಲಿಗೆ ತಳ್ಳಿದಿರಿ. ವೈಶ್ಯರು, ಬ್ರಾಹ್ಮಣರು ಅಧಿಕಾರ ಹಿಡಿದು ಐಶಾರಾಮಿ ಜೀವನ ಮಾಡಿದಿರಿ ಎಂದು ವಾಗ್ದಾಳಿ ನಡೆಸಿದರು.

ಹಿಜಾಬ್‌, ಖಿಮರ್‌, ಅಬಯ ಎಂದರೆ ಏನು? ಹಿಜಾಬ್‌‌ ಎಂದರೆ ತಲೆಯ ಮೇಲೆ ಬಟ್ಟೆಯನ್ನು ಧರಿಸಿಕೊಳ್ಳುವುದು. ಖಿಮಾರ್‌ ಅಂದರೆ ಚಕ್ರಾಕಾರದ ಬಟ್ಟೆಯನ್ನು ತಲೆಯ ಮೇಲೆ ಹಾಕಿಕೊಳ್ಳುವುದು. ಅಬಯ ಅಂದರೆ ಇಡೀ ದೇಹದ ಮೇಲೆ ಬಟ್ಟೆಯನ್ನು ಧರಿಸುವುದು ಇಷ್ಟೇ. ಇದರ ಬಗ್ಗೆ ಕುರಾನ್‌ನಲ್ಲಿದೆ, ಶರಯತ್‌ನಲ್ಲಿದೆ. ಸಾಧಾರಣ ಉಡುಗೆ ಇರಬೇಕು. ದೇಹಾಕೃತಿ ಹೊರಗೆ ಕಾಣಬಾರದು ಎಂದು ಇಸ್ಲಾಂ ನಂಬಿದೆ. ಇದನ್ನು 1400 ವರ್ಷಗಳಿಂದ ಇಸ್ಲಾಂ ಅನುಯಾಯಿಗಳು ಅನುಸರಿಸುತ್ತಾ ಬಂದಿದ್ದಾರೆ. ಇದರ ಬಗ್ಗೆ ತಿಳಿಯಬೇಕಾದರೆ ಕುರಾನ್‌ ಓದಬೇಕು. ಚಾಪ್ಟರ್‌ 24 ವರ್ಸಸ್‌ 31 ಓದಿ, 34 ವರ್ಸಸ್‌‌ 59 ಓದಿ. ಇದರಲ್ಲಿ ಹಿಜಾಬ್‌, ಖಿಮೂರ್‌‌, ಹಿಜಾಬ್‌ ಕುರಿತು ವಿವರಗಳಿವೆ. ಇದೊಂದು ಧಾರ್ಮಿಕ ಆಚರಣೆ. ಇದೊಂದು ಧಾರ್ಮಿಕ ‍ವಸ್ತ್ರ. ಅದು ಅವರ ಧಾರ್ಮಿಕ ಹಕ್ಕು ಎಂದು ಪ್ರತಿಪಾದಿಸಿದರು.

ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು. ಮುಸ್ಲಿಂ ಮಹಿಳೆಯರು ತಮ್ಮ ಗುರುತು ಎಂಬಂತೆ ಹಿಜಾಬ್‌ ಧರಿಸುತ್ತಲೇ ಬಂದಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಹಜರತ್ ಬೇಗಂ ಥರದ ವೀರ ಮಹಿಳೆಯರೂ ಹಿಜಾಬ್‌ ಧರಿಸಿ ಹೋರಾಡಿದ್ದರು ಎಂದು ಹೇಳಿದರು.

ಇದನ್ನೂ ಓದಿರಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ಇರಿ ನಾನು ಕೆಲವು ಟಿಪ್ಪಣಿ ಮಾಡುತ್ತೇನೆ: ನ್ಯಾಯಮೂರ್ತಿ ದೀಕ್ಷಿತ್‌

ಸಿಖ್‌ಗಳು ಶೇ. 1.8 ಇದ್ದಾರೆ. ಇಸ್ಲಾಮಿಯರ ಸಂಖ್ಯೆ ಶೇ. 15ರಷ್ಟು ಇದೆ. ಅಂದರೆ ದೇಶದಲ್ಲಿ ಇಪ್ಪತ್ತು ಕೋಟಿ ಜನರಿದ್ದಾರೆ. ಸಿಖ್‌ಗಳು ಆರ್ಮಿಯಲ್ಲಿ ಗಡ್ಡ ಬಿಟ್ಟಿರುತ್ತಾರೆ. ಟರ್ಬನ್ ಹಾಕಿರುತ್ತಾರೆ. ಅವರನ್ನು ಶಾಲೆಗಳಲ್ಲಿ ಸೇರಿಸಿಕೊಳ್ಳುತ್ತೀರಿ. ಸಿಖ್‌ಗಳು ಗಡ್ಡ ಬಿಡುವುದು, ಮುಸ್ಲಿಮರು ಹಿಜಾಬ್‌ ಧರಿಸುವುದು ಎರಡೂ ಒಂದೇ. ಅವರು ಗಡ್ಡ ಬಿಡಬಹುದು, ಇವರು ಹಿಜಾಬ್ ಹಾಕಬಾರದು. ಹಿಂದೂ ಮಹಿಳೆಯರು ಹಣೆಗೆ ಬಿಂದಿ ಇಡುತ್ತಾರೆ, ಕೈಗೆ ಬಳೆ ಹಾಕುತ್ತಾರೆ.  ಹೂ ಮುಡಿಯುತ್ತಾರೆ. ಸೆರಗು ಹಾಕಿಕೊಳ್ಳುತ್ತಾರೆ. ಅದು ಅವರ ಧಾರ್ಮಿಕ ಹಕ್ಕು ಎಂದು ತಿಳಿಸಿದರು.

ನೀವು ತಂದಿರುವ ಆದೇಶ ಬಾಂಬೇ ಹಾಗೂ ಕೇರಳ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಿದೆ. ಹಿಜಾಬ್‌ ಧರಿಸುವುದು ಧಾರ್ಮಿಕರ ಹಕ್ಕು. ಆ ಧಾರ್ಮಿಕ ಗುರುತನ್ನು ಕೆಡಿಸಬೇಡಿ.

“ಇವರಿಗೂ ಭಯೋತ್ಪಾದನೆ ಸಂಘಟನೆಗೂ ಸಂಬಂಧ ಇದೆಯಾ ಹುಡುಕಿ, ಕಾಲ್ ಡೀಟೆಲ್ ತೆಗೆದುಕೊಳ್ಳಿ” ಎಂದು ಉನ್ನತ ಅಧಿಕಾರಿಗಳಿಗೆ ಹೋಮ್‌ ಮಿನಿಸ್ಟರ್‌ ಆದೇಶ ಮಾಡಿದ್ದಾರಂತೆ. ಇವರನ್ನು (ಹೆಣ್ಣುಮಕ್ಕಳನ್ನು) ಯುಎಪಿಎ ಕಾಯ್ದೆಯಡಿ ಸಿಕ್ಕಿಸಲು ನೀವು ಪ್ಲಾನ್ ಮಾಡ್ತಾ ಇದ್ದೀರಾ. ದೇಶದ್ರೋಹದ ಅಡಿಯಲ್ಲಿ ಬಂಧಿಸಲು ಪ್ಲಾನ್ ಮಾಡ್ತಾ ಇದ್ದೀರಿ. ಇದನ್ನು ಒಪ್ಪುವುದಿಲ್ಲ” ಎಂದರು.

ಇವತ್ತು ಮುಸ್ಲಿಮರ ಮೇಲೆ, ಕ್ರೈಸ್ತರ ಮೇಲೆ, ಕಮ್ಯುನಿಸ್ಟರು, ಕಾರ್ಮಿಕರು, ಆದಿವಾಸಿಗಳ ಮೇಲೆ ಎರಗಿದ್ದೀರಿ. ನಾಳೆ ನೀವು ಸಿಖ್‌ಗಳ ಮೇಲೆ ಬರುತ್ತೀರಿ. ದೇಶವನ್ನು ಕಟ್ಟಿರುವ ಶೇ. 95ರಷ್ಟು ಜನರಿಗೆ ತೊಂದರೆ ಕೊಡುತ್ತಿದ್ದೀರಿ. ಕಾರ್ಮಿಕರು, ರೈತರ ಹಕ್ಕನ್ನು ಕಿತ್ತುಕೊಂಡಿದ್ದೀರಿ. ವ್ಯಾಪಾರಿಗಳ ಹಕ್ಕನ್ನು ಜಿಎಸ್‌ಟಿ ಹಾಕಿ ಕಿತ್ತುಕೊಂಡಿದ್ದೀರಿ. ಜನರ ಹಕ್ಕನ್ನು ಡಿಮಾಟೈಷೇಷನ್‌ ಮಾಡಿ ಕಿತ್ತುಕೊಂಡಿದ್ದೀರಿ. ಏರೋಪ್ಲೇನ್‌, ರೋಡ್‌, ಟೆಲಿಫೋನ್‌ ಎಲ್ಲವನ್ನೂ ಮಾರುತ್ತಿದ್ದೀರಿ. ಇದನ್ನು ಮುಚ್ಚಿಹಾಕಲು ಹಿಜಾಬ್‌ ಎನ್ನುತ್ತಿದ್ದೀರಿ. ಇದು ಸರಿಯಲ್ಲ. ಜನ ನಿಮಗೆ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.


ಇದನ್ನೂ ಓದಿರಿ: ಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

  2. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....