Homeಕರ್ನಾಟಕಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

"ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು."

- Advertisement -
- Advertisement -

“ನಾವು ಮರೆತ್ತಿಲ್ಲ. ಜೀನ್ಸ್ ಪ್ಯಾಂಟ್ ಹಾಗೂ ಟೀ ಶರ್ಟ್‌ ಧರಿಸಿದ ಮಹಿಳೆಯರಿಗೆ ಥಳಿಸಿದವರು ನೀವು.  ಅಂದು ಏಟು ತಿಂದ ಮಹಿಳೆಯರ್‍ಯಾರೂ ಮುಸ್ಲಿಮರಲ್ಲ, ಶೂದ್ರರು” ಎಂದು ಹೈಕೋರ್ಟ್ ಹಿರಿಯ ವಕೀಲರಾದ ಎಸ್.ಬಾಲನ್‌ ಹೇಳಿದರು.

ಹಿಜಾಬ್‌‌ ಸಂಬಂಧ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಹೆಣ್ಣುಮಕ್ಕಳು, ಶೂದ್ರರು ಓದಬಾರದೆಂದು ಕಾನೂನು ಮಾಡಿದವರು ನೀವು. ಬ್ರಾಹ್ಮಣ ಮಹಿಳೆಯರಿಗೂ ಓದುವ ಅವಕಾಶ ನೀಡದವರು ನೀವು. ಹಿಂದೂ ಕೋಡ್‌ ಬಿಲ್‌ ಮಂಡಿಸಿ ಮಹಿಳೆಯರಿಗೆ ವಿಚ್ಛೇದನಾ ಹಕ್ಕು, ಆಸ್ತಿಯಲ್ಲಿ ಹಕ್ಕು ಕೊಟ್ಟಿದ್ದು ಅಂಬೇಡ್ಕರ್‌. ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ ರವರ ಮನೆಯ ಮುಂದೆ ಧಿಕ್ಕಾರ ಹಾಕಿದವರು ನೀವು” ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳಲ್ಲಿ ಒಂದು ದನಿ ಬರುತ್ತಿದೆ. ನಾವು ಹಿಂದೂ ರಾಷ್ಟ್ರ ಕಟ್ಟುತ್ತೇವೆ. ಹಾಗಾಗಿ ನೀವು ಹಿಜಾಬ್  ಧರಿಸಬಾರದು. ಹಿಜಾಬ್‌ ಧರಿಸಿದರೆ ನೀವು ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಿದ್ದಾರೆ. ಈ ದೇಶ ಜಾತ್ಯತೀತ ದೇಶ. ಪಾಕಿಸ್ತಾನವಲ್ಲ. ಪಾಕಿಸ್ತಾನ ಧಾರ್ಮಿಕ ದೇಶ. ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ ಎಂದು ಬಾಲನ್‌ ಗುಡುಗಿದರು.

ಇದನ್ನೂ ಓದಿರಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ಈ ದೇಶ ಈ ಜನರ ದೇಶ. ಜನರ ಹಕ್ಕುಗಳಿಗೆ ಧಕ್ಕೆ ಮಾಡಬೇಡಿ. ನಿಮ್ಮ ರಾಜಕೀಯ ರಕ್ತದ ಮೇಲೆ, ದ್ವೇಶದ ಮೇಲೆ ನಿಂತಿದೆ. ಗುಜರಾತ್‌ನಲ್ಲಿ ಮುಸ್ಲಿಮರನ್ನು ಕೊಂದಿರಿ. ದಲಿತರು, ಹಿಂದುಳಿದವರನ್ನು ಜೈಲಿಗೆ ತಳ್ಳಿದಿರಿ. ವೈಶ್ಯರು, ಬ್ರಾಹ್ಮಣರು ಅಧಿಕಾರ ಹಿಡಿದು ಐಶಾರಾಮಿ ಜೀವನ ಮಾಡಿದಿರಿ ಎಂದು ವಾಗ್ದಾಳಿ ನಡೆಸಿದರು.

ಹಿಜಾಬ್‌, ಖಿಮರ್‌, ಅಬಯ ಎಂದರೆ ಏನು? ಹಿಜಾಬ್‌‌ ಎಂದರೆ ತಲೆಯ ಮೇಲೆ ಬಟ್ಟೆಯನ್ನು ಧರಿಸಿಕೊಳ್ಳುವುದು. ಖಿಮಾರ್‌ ಅಂದರೆ ಚಕ್ರಾಕಾರದ ಬಟ್ಟೆಯನ್ನು ತಲೆಯ ಮೇಲೆ ಹಾಕಿಕೊಳ್ಳುವುದು. ಅಬಯ ಅಂದರೆ ಇಡೀ ದೇಹದ ಮೇಲೆ ಬಟ್ಟೆಯನ್ನು ಧರಿಸುವುದು ಇಷ್ಟೇ. ಇದರ ಬಗ್ಗೆ ಕುರಾನ್‌ನಲ್ಲಿದೆ, ಶರಯತ್‌ನಲ್ಲಿದೆ. ಸಾಧಾರಣ ಉಡುಗೆ ಇರಬೇಕು. ದೇಹಾಕೃತಿ ಹೊರಗೆ ಕಾಣಬಾರದು ಎಂದು ಇಸ್ಲಾಂ ನಂಬಿದೆ. ಇದನ್ನು 1400 ವರ್ಷಗಳಿಂದ ಇಸ್ಲಾಂ ಅನುಯಾಯಿಗಳು ಅನುಸರಿಸುತ್ತಾ ಬಂದಿದ್ದಾರೆ. ಇದರ ಬಗ್ಗೆ ತಿಳಿಯಬೇಕಾದರೆ ಕುರಾನ್‌ ಓದಬೇಕು. ಚಾಪ್ಟರ್‌ 24 ವರ್ಸಸ್‌ 31 ಓದಿ, 34 ವರ್ಸಸ್‌‌ 59 ಓದಿ. ಇದರಲ್ಲಿ ಹಿಜಾಬ್‌, ಖಿಮೂರ್‌‌, ಹಿಜಾಬ್‌ ಕುರಿತು ವಿವರಗಳಿವೆ. ಇದೊಂದು ಧಾರ್ಮಿಕ ಆಚರಣೆ. ಇದೊಂದು ಧಾರ್ಮಿಕ ‍ವಸ್ತ್ರ. ಅದು ಅವರ ಧಾರ್ಮಿಕ ಹಕ್ಕು ಎಂದು ಪ್ರತಿಪಾದಿಸಿದರು.

ನಮ್ಮ ದೇಶದಲ್ಲಿ ಸಾವಿರ ವರ್ಷಗಳಿಂದ ಹಿಜಾಬ್‌ ಧರಿಸುತ್ತಿದ್ದಾರೆ. ಸುಲ್ತಾನರ ಕಾಲದಲ್ಲಿ, ಮೊಘಲ್‌, ಶಿವಾಜಿ ಕಾಲದಲ್ಲಿ, ವಿಜಯನಗರ ಅರಸರ ಕಾಲದಲ್ಲಿ ಹಿಜಾಬ್‌‌ ಇತ್ತು. ಮುಸ್ಲಿಂ ಮಹಿಳೆಯರು ತಮ್ಮ ಗುರುತು ಎಂಬಂತೆ ಹಿಜಾಬ್‌ ಧರಿಸುತ್ತಲೇ ಬಂದಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಹಜರತ್ ಬೇಗಂ ಥರದ ವೀರ ಮಹಿಳೆಯರೂ ಹಿಜಾಬ್‌ ಧರಿಸಿ ಹೋರಾಡಿದ್ದರು ಎಂದು ಹೇಳಿದರು.

ಇದನ್ನೂ ಓದಿರಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ಇರಿ ನಾನು ಕೆಲವು ಟಿಪ್ಪಣಿ ಮಾಡುತ್ತೇನೆ: ನ್ಯಾಯಮೂರ್ತಿ ದೀಕ್ಷಿತ್‌

ಸಿಖ್‌ಗಳು ಶೇ. 1.8 ಇದ್ದಾರೆ. ಇಸ್ಲಾಮಿಯರ ಸಂಖ್ಯೆ ಶೇ. 15ರಷ್ಟು ಇದೆ. ಅಂದರೆ ದೇಶದಲ್ಲಿ ಇಪ್ಪತ್ತು ಕೋಟಿ ಜನರಿದ್ದಾರೆ. ಸಿಖ್‌ಗಳು ಆರ್ಮಿಯಲ್ಲಿ ಗಡ್ಡ ಬಿಟ್ಟಿರುತ್ತಾರೆ. ಟರ್ಬನ್ ಹಾಕಿರುತ್ತಾರೆ. ಅವರನ್ನು ಶಾಲೆಗಳಲ್ಲಿ ಸೇರಿಸಿಕೊಳ್ಳುತ್ತೀರಿ. ಸಿಖ್‌ಗಳು ಗಡ್ಡ ಬಿಡುವುದು, ಮುಸ್ಲಿಮರು ಹಿಜಾಬ್‌ ಧರಿಸುವುದು ಎರಡೂ ಒಂದೇ. ಅವರು ಗಡ್ಡ ಬಿಡಬಹುದು, ಇವರು ಹಿಜಾಬ್ ಹಾಕಬಾರದು. ಹಿಂದೂ ಮಹಿಳೆಯರು ಹಣೆಗೆ ಬಿಂದಿ ಇಡುತ್ತಾರೆ, ಕೈಗೆ ಬಳೆ ಹಾಕುತ್ತಾರೆ.  ಹೂ ಮುಡಿಯುತ್ತಾರೆ. ಸೆರಗು ಹಾಕಿಕೊಳ್ಳುತ್ತಾರೆ. ಅದು ಅವರ ಧಾರ್ಮಿಕ ಹಕ್ಕು ಎಂದು ತಿಳಿಸಿದರು.

ನೀವು ತಂದಿರುವ ಆದೇಶ ಬಾಂಬೇ ಹಾಗೂ ಕೇರಳ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಿದೆ. ಹಿಜಾಬ್‌ ಧರಿಸುವುದು ಧಾರ್ಮಿಕರ ಹಕ್ಕು. ಆ ಧಾರ್ಮಿಕ ಗುರುತನ್ನು ಕೆಡಿಸಬೇಡಿ.

“ಇವರಿಗೂ ಭಯೋತ್ಪಾದನೆ ಸಂಘಟನೆಗೂ ಸಂಬಂಧ ಇದೆಯಾ ಹುಡುಕಿ, ಕಾಲ್ ಡೀಟೆಲ್ ತೆಗೆದುಕೊಳ್ಳಿ” ಎಂದು ಉನ್ನತ ಅಧಿಕಾರಿಗಳಿಗೆ ಹೋಮ್‌ ಮಿನಿಸ್ಟರ್‌ ಆದೇಶ ಮಾಡಿದ್ದಾರಂತೆ. ಇವರನ್ನು (ಹೆಣ್ಣುಮಕ್ಕಳನ್ನು) ಯುಎಪಿಎ ಕಾಯ್ದೆಯಡಿ ಸಿಕ್ಕಿಸಲು ನೀವು ಪ್ಲಾನ್ ಮಾಡ್ತಾ ಇದ್ದೀರಾ. ದೇಶದ್ರೋಹದ ಅಡಿಯಲ್ಲಿ ಬಂಧಿಸಲು ಪ್ಲಾನ್ ಮಾಡ್ತಾ ಇದ್ದೀರಿ. ಇದನ್ನು ಒಪ್ಪುವುದಿಲ್ಲ” ಎಂದರು.

ಇವತ್ತು ಮುಸ್ಲಿಮರ ಮೇಲೆ, ಕ್ರೈಸ್ತರ ಮೇಲೆ, ಕಮ್ಯುನಿಸ್ಟರು, ಕಾರ್ಮಿಕರು, ಆದಿವಾಸಿಗಳ ಮೇಲೆ ಎರಗಿದ್ದೀರಿ. ನಾಳೆ ನೀವು ಸಿಖ್‌ಗಳ ಮೇಲೆ ಬರುತ್ತೀರಿ. ದೇಶವನ್ನು ಕಟ್ಟಿರುವ ಶೇ. 95ರಷ್ಟು ಜನರಿಗೆ ತೊಂದರೆ ಕೊಡುತ್ತಿದ್ದೀರಿ. ಕಾರ್ಮಿಕರು, ರೈತರ ಹಕ್ಕನ್ನು ಕಿತ್ತುಕೊಂಡಿದ್ದೀರಿ. ವ್ಯಾಪಾರಿಗಳ ಹಕ್ಕನ್ನು ಜಿಎಸ್‌ಟಿ ಹಾಕಿ ಕಿತ್ತುಕೊಂಡಿದ್ದೀರಿ. ಜನರ ಹಕ್ಕನ್ನು ಡಿಮಾಟೈಷೇಷನ್‌ ಮಾಡಿ ಕಿತ್ತುಕೊಂಡಿದ್ದೀರಿ. ಏರೋಪ್ಲೇನ್‌, ರೋಡ್‌, ಟೆಲಿಫೋನ್‌ ಎಲ್ಲವನ್ನೂ ಮಾರುತ್ತಿದ್ದೀರಿ. ಇದನ್ನು ಮುಚ್ಚಿಹಾಕಲು ಹಿಜಾಬ್‌ ಎನ್ನುತ್ತಿದ್ದೀರಿ. ಇದು ಸರಿಯಲ್ಲ. ಜನ ನಿಮಗೆ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.


ಇದನ್ನೂ ಓದಿರಿ: ಹಿಜಾಬ್ ವಿವಾದ: ಮುಸ್ಲಿಂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಜೈ ಶ್ರೀರಾಮ್ ಘೋಷಣೆ, ವಿದ್ಯಾರ್ಥಿನಿಯರ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

  2. ಬಾಲನ್ ಅವರೇ ಇದು ಹಿಂದೂ ನೆಲಗಟ್ಟಿನ ಮೇಲೆ ನಿರ್ಮಾಣ ಆಗಿರುವ ದೇಶ ,ಇಲ್ಲಿ ಹಿಂದೂಗಳೇ ಸಾರ್ವಭೌಮ ನೀನು ದೇಶ ಬಿಟ್ಟು ಹೋಗಬಹುದು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...