Homeಮುಖಪುಟಕರ್ನಾಟಕವನ್ನು ಯುಪಿ ಮಾಡುವ ಕುಟಿಲ ತಂತ್ರವನ್ನು ವಿಫಲಗೊಳಿಸಿ: ಟಿ.ಎ ನಾರಾಯಣಗೌಡ

ಕರ್ನಾಟಕವನ್ನು ಯುಪಿ ಮಾಡುವ ಕುಟಿಲ ತಂತ್ರವನ್ನು ವಿಫಲಗೊಳಿಸಿ: ಟಿ.ಎ ನಾರಾಯಣಗೌಡ

- Advertisement -
- Advertisement -

ಕರ್ನಾಟಕದ ಶಾಲೆ ಕಾಲೇಜುಗಳಲ್ಲಿ ಭುಗಿಲೆದ್ದಿರುವ ವಿವಾದ ದುರುದ್ದೇಶಪೂರ್ವಕವಾಗಿದ್ದು, ನಾಡಿನ ಶಾಂತಿ, ಸೌಹಾರ್ದತೆ, ಸಹಬಾಳ್ವೆಗೆ ಧಕ್ಕೆ ತಂದಿದೆ. ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿಸುವ ಈ ಕುಟಿಲ ತಂತ್ರವನ್ನು ರಾಜ್ಯದ ಶಾಂತಿಪ್ರಿಯ ನಾಗರಿಕರು ವಿಫಲಗೊಳಿಸಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರವರು ಮನವಿ ಮಾಡಿದ್ದಾರೆ.

ಉಡುಪಿಯ ಒಂದು ಕಾಲೇಜಿನಲ್ಲಿ ಆರಂಭಗೊಂಡ ಸಮಸ್ಯೆ ಇಡೀ ರಾಜ್ಯಕ್ಕೆ ವ್ಯಾಪಿಸಲು ಕಾರಣವಾದರೂ ಏನು? ಎಲ್ಲೆಡೆ ಶಾಂತಿ ಕದಡಿ ಗಲಭೆಯೆಬ್ಬಿಸಲು ಹಿನ್ನೆಲೆಯಲ್ಲಿ ನಿಂತು ಸಂಚು ರೂಪಿಸಿದ ಸಂಘಟನೆಗಳಾದರೂ ಯಾವುವು? ಈ ಸಂಘಟನೆಗಳಿಗೆ ಸರ್ಕಾರದ ಬೆಂಬಲವಿದೆಯೇ? ವಿವಾದ ಆರಂಭಗೊಂಡಾಗಲೇ ಸರ್ಕಾರ ಮಧ್ಯಪ್ರವೇಶಿಸಿ, ಸೌಹಾರ್ದಯುತವಾಗಿ ಬಗೆಹರಿಸಬಹುದಿತ್ತು. ಆದರೆ ಸರ್ಕಾರದ ಮಂತ್ರಿಗಳು, ಸಂಸದರು, ಶಾಸಕರುಗಳು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿ ಪ್ರತ್ಯಕ್ಷವಾಗಿ ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಇದು ಅಕ್ಷಮ್ಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆ, ಕಾಲೇಜುಗಳಲ್ಲಿ ಶಿರವಸ್ತ್ರ ಧರಿಸಬಹುದೇ ಇಲ್ಲವೇ ಎಂಬುದನ್ನು ಭಾರತ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಲಯಗಳು ತೀರ್ಮಾನಿಸಲಿ.‌‌ ಆದರೆ ನ್ಯಾಯಾಲಯದ ವಿಚಾರಣೆ ನಡೆಯುತ್ತಿರುವಾಗಲೇ ಮಕ್ಕಳನ್ನು ಬಳಸಿಕೊಂಡು ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದು ಎಷ್ಟು ಸರಿ?ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದರು. ನಮ್ಮದು ಶರಣರು,‌ ಸಂತರ ನಾಡು. ಇಂಥ ನಾಡಿಗೆ ಧರ್ಮಗಳ ಹೆಸರಲ್ಲಿ ಬೆಂಕಿ ಹಚ್ಚುತ್ತಿರುವ ದುಷ್ಟರು ಭವಿಷ್ಯದ ದಿನಗಳನ್ನು ಇನ್ನಷ್ಟು ಅಪಾಯಕಾರಿಯಾಗಿಸುತ್ತಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು-ನಾಲ್ಕು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿ ನಿಜಕ್ಕೂ ನಾಡಿನ ಭವಿಷ್ಯದ ಕುರಿತು ಆತಂಕವಾಗುತ್ತಿದೆ. ನಾವು ಎಂಥ ಸಮಾಜವನ್ನು ಕಟ್ಟುತ್ತಿದ್ದೇವೆ.? ಹದಿನೈದು-ಹದಿನಾರು ವಯಸ್ಸಿನ ಮಕ್ಕಳಲ್ಲಿ ಧರ್ಮದ್ವೇಷದ ವಿಷಬೀಜ‌ ಬಿತ್ತಲಾಗಿದೆ. ಇದರ ಪರಿಣಾಮ ಘೋರವಾಗಲಿದೆ. ರಾಜ್ಯ ಸರ್ಕಾರ ಶಾಲೆ-ಕಾಲೇಜುಗಳಿಗೆ ಮೂರು‌ದಿನಗಳ ಕಾಲ ರಜೆ ಘೋಷಿಸಿರುವುದು ಸರಿಯಾದ ಕ್ರಮ. ಇನ್ನಷ್ಟು ಅಪಾಯಗಳು‌ ಆಗದಂತೆ‌ ತಡೆಯುವುದು ಅನಿವಾರ್ಯವಾಗಿತ್ತು. ಪರಿಸ್ಥಿತಿ ತಿಳಿಯಾದ ನಂತರ ಶಾಲೆ-ಕಾಲೇಜುಗಳನ್ನು ಆರಂಭಿಸಬೇಕು. ಪ್ರಚೋದನಾಕಾರಿಯಾಗಿ ಮಾತಾಡುವವರ ಬಾಯಿ ಮುಚ್ಚಿಸಬೇಕು.‌ ಸಮಾಜಘಾತಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ಹೊರಗಡೆ ಧರಿಸುವಾಗ ಸಮಸ್ಯೆ ಆಗಲ್ಲ ಎಂದರೆ, ಕಾಲೇಜಿನ ಒಳಗಡೆ ಅದು ಸಮಸ್ಯೆಯಾಗದು: ನ್ಯಾಯಮೂರ್ತಿ ದೀಕ್ಷಿತ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...