Homeಮುಖಪುಟಕರ್ನಾಟಕವನ್ನು ಯುಪಿ ಮಾಡುವ ಕುಟಿಲ ತಂತ್ರವನ್ನು ವಿಫಲಗೊಳಿಸಿ: ಟಿ.ಎ ನಾರಾಯಣಗೌಡ

ಕರ್ನಾಟಕವನ್ನು ಯುಪಿ ಮಾಡುವ ಕುಟಿಲ ತಂತ್ರವನ್ನು ವಿಫಲಗೊಳಿಸಿ: ಟಿ.ಎ ನಾರಾಯಣಗೌಡ

- Advertisement -
- Advertisement -

ಕರ್ನಾಟಕದ ಶಾಲೆ ಕಾಲೇಜುಗಳಲ್ಲಿ ಭುಗಿಲೆದ್ದಿರುವ ವಿವಾದ ದುರುದ್ದೇಶಪೂರ್ವಕವಾಗಿದ್ದು, ನಾಡಿನ ಶಾಂತಿ, ಸೌಹಾರ್ದತೆ, ಸಹಬಾಳ್ವೆಗೆ ಧಕ್ಕೆ ತಂದಿದೆ. ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿಸುವ ಈ ಕುಟಿಲ ತಂತ್ರವನ್ನು ರಾಜ್ಯದ ಶಾಂತಿಪ್ರಿಯ ನಾಗರಿಕರು ವಿಫಲಗೊಳಿಸಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರವರು ಮನವಿ ಮಾಡಿದ್ದಾರೆ.

ಉಡುಪಿಯ ಒಂದು ಕಾಲೇಜಿನಲ್ಲಿ ಆರಂಭಗೊಂಡ ಸಮಸ್ಯೆ ಇಡೀ ರಾಜ್ಯಕ್ಕೆ ವ್ಯಾಪಿಸಲು ಕಾರಣವಾದರೂ ಏನು? ಎಲ್ಲೆಡೆ ಶಾಂತಿ ಕದಡಿ ಗಲಭೆಯೆಬ್ಬಿಸಲು ಹಿನ್ನೆಲೆಯಲ್ಲಿ ನಿಂತು ಸಂಚು ರೂಪಿಸಿದ ಸಂಘಟನೆಗಳಾದರೂ ಯಾವುವು? ಈ ಸಂಘಟನೆಗಳಿಗೆ ಸರ್ಕಾರದ ಬೆಂಬಲವಿದೆಯೇ? ವಿವಾದ ಆರಂಭಗೊಂಡಾಗಲೇ ಸರ್ಕಾರ ಮಧ್ಯಪ್ರವೇಶಿಸಿ, ಸೌಹಾರ್ದಯುತವಾಗಿ ಬಗೆಹರಿಸಬಹುದಿತ್ತು. ಆದರೆ ಸರ್ಕಾರದ ಮಂತ್ರಿಗಳು, ಸಂಸದರು, ಶಾಸಕರುಗಳು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿ ಪ್ರತ್ಯಕ್ಷವಾಗಿ ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಇದು ಅಕ್ಷಮ್ಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆ, ಕಾಲೇಜುಗಳಲ್ಲಿ ಶಿರವಸ್ತ್ರ ಧರಿಸಬಹುದೇ ಇಲ್ಲವೇ ಎಂಬುದನ್ನು ಭಾರತ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಲಯಗಳು ತೀರ್ಮಾನಿಸಲಿ.‌‌ ಆದರೆ ನ್ಯಾಯಾಲಯದ ವಿಚಾರಣೆ ನಡೆಯುತ್ತಿರುವಾಗಲೇ ಮಕ್ಕಳನ್ನು ಬಳಸಿಕೊಂಡು ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದು ಎಷ್ಟು ಸರಿ?ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದರು. ನಮ್ಮದು ಶರಣರು,‌ ಸಂತರ ನಾಡು. ಇಂಥ ನಾಡಿಗೆ ಧರ್ಮಗಳ ಹೆಸರಲ್ಲಿ ಬೆಂಕಿ ಹಚ್ಚುತ್ತಿರುವ ದುಷ್ಟರು ಭವಿಷ್ಯದ ದಿನಗಳನ್ನು ಇನ್ನಷ್ಟು ಅಪಾಯಕಾರಿಯಾಗಿಸುತ್ತಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು-ನಾಲ್ಕು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿ ನಿಜಕ್ಕೂ ನಾಡಿನ ಭವಿಷ್ಯದ ಕುರಿತು ಆತಂಕವಾಗುತ್ತಿದೆ. ನಾವು ಎಂಥ ಸಮಾಜವನ್ನು ಕಟ್ಟುತ್ತಿದ್ದೇವೆ.? ಹದಿನೈದು-ಹದಿನಾರು ವಯಸ್ಸಿನ ಮಕ್ಕಳಲ್ಲಿ ಧರ್ಮದ್ವೇಷದ ವಿಷಬೀಜ‌ ಬಿತ್ತಲಾಗಿದೆ. ಇದರ ಪರಿಣಾಮ ಘೋರವಾಗಲಿದೆ. ರಾಜ್ಯ ಸರ್ಕಾರ ಶಾಲೆ-ಕಾಲೇಜುಗಳಿಗೆ ಮೂರು‌ದಿನಗಳ ಕಾಲ ರಜೆ ಘೋಷಿಸಿರುವುದು ಸರಿಯಾದ ಕ್ರಮ. ಇನ್ನಷ್ಟು ಅಪಾಯಗಳು‌ ಆಗದಂತೆ‌ ತಡೆಯುವುದು ಅನಿವಾರ್ಯವಾಗಿತ್ತು. ಪರಿಸ್ಥಿತಿ ತಿಳಿಯಾದ ನಂತರ ಶಾಲೆ-ಕಾಲೇಜುಗಳನ್ನು ಆರಂಭಿಸಬೇಕು. ಪ್ರಚೋದನಾಕಾರಿಯಾಗಿ ಮಾತಾಡುವವರ ಬಾಯಿ ಮುಚ್ಚಿಸಬೇಕು.‌ ಸಮಾಜಘಾತಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ಹೊರಗಡೆ ಧರಿಸುವಾಗ ಸಮಸ್ಯೆ ಆಗಲ್ಲ ಎಂದರೆ, ಕಾಲೇಜಿನ ಒಳಗಡೆ ಅದು ಸಮಸ್ಯೆಯಾಗದು: ನ್ಯಾಯಮೂರ್ತಿ ದೀಕ್ಷಿತ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...