Homeಮುಖಪುಟಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

- Advertisement -
- Advertisement -

ಕೇಸರಿ ಶಾಲು ಧರಿಸುವಂತೆ ಒತ್ತಾಯಿಸಿದ ಕುಶಾಲನಗರದ ಸುಂದರನಗರ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಡೆದಿದೆ.

ಸುಂದರನಗರ ಕಾಲೇಜಿನ ಕಲಾ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಸಂದೀಪ (20) ಎಂಬುವವರು ಕೇಸರಿ ಶಾಲು ಧರಿಸಿ ಪ್ರತಿಭಟಿಸಲು ಮುಂದಾಗಿದ್ದನು. ಆತ ಎಲ್ಲರಿಗೂ ಕೇಸರಿ ಶಾಲು ಹಂಚುವಾಗ ತನಗೆ ಮತ್ತು ತನ್ನ ಸ್ನೇಹಿತೆಗೆ ಶಾಲು ಬೇಡ ಎಂದು ವಿಕ್ರಂ ಎಂಬ ವಿದ್ಯಾರ್ಥಿ ವಿರೋಧಿಸಿದ್ದಾನೆ. ಇದರಿಂದ ಮಾತಿಗೆ ಮಾತು ಬೆಳೆದು ಜಗಳಕ್ಕೆ ಕಾರಣವಾಗಿದೆ. ಕೊನೆಗೆ ಅದು ವಿಕ್ರಂ ಸಂದೀಪನಿಗೆ ಚಾಕು ಹಾಕುವ ಮಟ್ಟಿಗೆ ಬೆಳೆದಿದೆ.

ಸಂದೀಪನ ಬೆನ್ನು ಹಾಗೂ ಭುಜಕ್ಕೆ ಚಾಕು ಇರಿತ ಉಂಟಾಗಿದೆ. ಆತನ ಸ್ನೇಹಿತರ ಮೇಲೂ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರು ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಚಾಕು ಹಾಕಿ ಪರಾರಿಯಾಗಿದ್ದ ವಿಕ್ರಂ ಹಾಗೂ ಆತನ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನ್ನ ಸ್ನೇಹಿತೆಗೆ ಬಲವಂತವಾಗಿ ಕೇಸರಿ ಶಾಲು ಹಾಕಲು ಬಂದರು. ಹಾಗಾಗಿ ಜಗಳ ನಡೆದಿದೆ ಎಂದು ವಿಕ್ರಂ ಪೊಲೀಸರಿಗೆ ತಿಳಿಸಿದ್ದಾನೆ.

 

ಎರಡೂ ಗುಂಪಿನ ನಡುವೆ ನಡೆದ ಘರ್ಷಣೆಯಲ್ಲಿ ಸಂದೀಪರವರ ಹೆಗಲಿಗೆ ಹಾಗೂ ಬೆನ್ನಿಗೆ ಚಾಕುವಿನಿಂದ ಇರಿಯಲಾಗಿದೆ. ವಿಕ್ರಂ ಅವರ ತಲೆ ಹಾಗೂ ಕೈಗೆ ಪೆಟ್ಟಾಗಿದ್ದು, ಸಂದೀಪ ಹಾಗೂ ವಿಕ್ರಂ ಇಬ್ಬರೂ ಚಿಕಿತ್ಸೆ ಪಡೆದಿದ್ದಾರೆ. ನನ್ನ ಮಗನನ್ನು ಓದಲು ಕಾಲೇಜಿಗೆ ಕಳಿಸಿದರೆ ಈ ರೀತಿ ಶಾಲು ಅಂತ ಗಲಾಟೆ ಮಾಡಿಕೊಂಡಿದ್ದಾನೆ. ಕೆಲವರು ವಿದ್ಯಾರ್ಥಿಗಳ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಂದೀಪನ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಸಿ.ಜಯಪ್ರಕಾಶ್, “ಕಾಲೇಜು ವಿದ್ಯಾರ್ಥಿಗಳನ್ನು ಕೆಲವರು ರಾಜಕೀಯವಾಗಿ ಬಳಸಿಕೊಂಡು ಈ ರೀತಿ ಬಲಿಪಶುವನ್ನಾಗಿ ಮಾಡುತ್ತಿದ್ದಾರೆ. ಕೆಲವೇ ಕೆಲವರ ರಾಜಕೀಯ ದುರುದ್ದೇಶಕ್ಕೆ ಅಮಾಯಕ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಇನ್ನು ಮುಂದೆ ಯಾರೂ ಕೂಡಾ ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಇದಕ್ಕೆ ಕಡಿವಾಣ ಹಾಕಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕವನ್ನು ಯುಪಿ ಮಾಡುವ ಕುಟಿಲ ತಂತ್ರವನ್ನು ವಿಫಲಗೊಳಿಸಿ: ಟಿ.ಎ ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೆಮ್ಮದಿಯಿಂದ ಇದ್ದ ಶಾಲಾ ಕಾಲೇಜು ವಾತಾವರಣವನ್ನ ಕೆಲವೇ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ರಾಜಕೀಯ ಬೇಳೆ‌ಬೇಯಿಸಿಕೊಳ್ಳುತ್ತಿದ್ದಾರೆ… ಇಲ್ಲಿ ಸಾಹಿತಿಗಳು. ಪ್ರಜ್ನಾವಂತ ನಾಗರೀಕರು ವಿಧ್ಯಾರ್ಥಿಗಳಿಗೆ ಬುದ್ದಿ ಹೇಳಬೇಕು…. ಮಕ್ಕಳ ಭಾವನೆಗಳೊಂದಿಗೆ ಆಟವಾಡಬೇಡಿ…

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...