Homeಕರ್ನಾಟಕದಲಿತ ಯುವಕನ ಬೆತ್ತಲೆ ಪ್ರಕರಣ ಖಂಡಿಸಿ ಜೂನ್ 18 ರಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ

ದಲಿತ ಯುವಕನ ಬೆತ್ತಲೆ ಪ್ರಕರಣ ಖಂಡಿಸಿ ಜೂನ್ 18 ರಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ

ಇಡೀ ಘಟನೆಯನ್ನು ಅವಲೋಕಿಸಿದರೆ ಮನುಷ್ಯರು ಎಷ್ಟು ಜಾತಿಗ್ರಸ್ಥರಾಗಿದ್ದಾರೆ ಎಂಬ ಆತಂಕ ಮೂಡುತ್ತಿದೆ. ಒಬ್ಬ ಯುವಕನನ್ನು ದಲಿತ ಎಂಬ ಕಾರಣಕ್ಕಾಗಿ ಬೆತ್ತಲೆ ಮೆರವಣಿಗೆ ಮಾಡುವಷ್ಟು ಕ್ರೂರ ಮನಸ್ಸುಗಳನ್ನು ಬದಲಾಯಿಸುವುದಾದರೆ ಹೇಗೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಇತ್ತೀಚಗೆ ನಡೆದ ದಲಿತ ಯುವಕನ ಅಮಾನುಷ ಬೆತ್ತಲೆ ಮೆರವಣಿಗೆ ಪ್ರಕರಣ ವಿರೋಧಿಸಿ, ಈ ರೀತಿಯ ಘಟನೆಗಳು ಮರುಕಳಿಸದಂತೆ ಜಾಗೃತಿ ಮೂಡಿಸಲು ಇದೇ ಜೂನ್ 18 ರಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಜಾಥ ಹಮ್ಮಿಕೊಳ್ಳಲಾಗಿದ್ದು, ಇದೇ ವೇಳೆ ಹಲವು ಮಂದಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಲು ನಿರ್ಧರಿಸಿದ್ದಾರೆ.

ಗುಂಡ್ಲುಪೇಟೆಯ ಪ್ರವಾಸಿ ಮಂದಿರದಲ್ಲಿ ಎಲ್ಲ ಪ್ರಗತಿಪರ ಸಂಘಟನೆಗಳ ವತಿಯಿಂದ ನಿನ್ನೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ಶನಿ ಮಹಾತ್ಮ ದೇವಸ್ಥಾನದಿಂದಲೇ ಬೃಹತ್ ಮೆರವಣಿಗೆ ಆರಂಭವಾಗಲಿದ್ದು, ಗುಂಡ್ಲುಪೇಟೆ ವರಗೆ ಕಾಲು ನಡಿಗೆ ಜಾಥಾ ಮತ್ತು ಗುಂಡ್ಲುಪೇಟೆ ಬಂದ್ ನಡೆಸಲು ಈ ಮೊದಲು ಎಲ್ಲರೂ ಒಕ್ಕೊರಲಿನಿಂದ ನಿರ್ಧರಿಸಿಲಾಗಿತ್ತು. ಆದರೆ 18ರಂದು ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆಗಳು ನಡೆಯುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಬಂದ್ ಹಿಂತೆಗೆದುಕೊಂಡು ದೊಡ್ಡ ಜಾಥ ಮತ್ತು ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ.

ಸಂತ್ರಸ್ತ ಪ್ರತಾಪ್ ರವರು ಐ.ಎ.ಎಸ್ ಪರೀಕ್ಷೆ ಬರೆಯಲು ಹೋಗಿ ತಡವಾದ ಕಾರಣಕ್ಕೆ ಖಿನ್ನನಾಗಿದ್ದಾನೆ. ಆನಂತರ ನಡೆಯಬಾರದ ಘಟನೆಗಳೆಲ್ಲಾ ನಡೆದು ಮನನೊಂದಿದ್ದಾನೆ. ಇಂತಹ ಸಂದರ್ಭದಲ್ಲಿ ನಾವು ಬಂದ್ ಮಾಡಿ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ಬರೆಯುವವರಿಗೆ ತೊಂದರೆ ಕೊಡಬಾರದೆಂದು ಬಂದ್ ಹಿಂತೆಗೆದುಕೊಂಡಿದ್ದೇವೆ. ಬದಲಿಗೆ ದೊಡ್ಡ ಜಾಥಾ ನಡೆಸಿ ಬಂತೇಜಿಗಳ ನೇತೃತ್ವದಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರವಾಗಲು ನಿರ್ಧರಿಸಿದ್ದಾರೆ. ಇಷ್ಟೊಂದು ತಾರತಮ್ಯ ಮತ್ತು ಅವಮಾನ ಮಾಡುವ ಈ ಧರ್ಮ ನಮಗ ಬೇಡ ಎಂದು ದಲಿತ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ ತಿಳಿಸಿದ್ದಾರೆ.

ಸದರಿ ಘಟನೆಗೆ ಸಂಬಂಧಿಸಿದಂತೆ ನಾಡಿನೆಲ್ಲಾ ಪ್ರಗತಿಪರ ಸಂಘಟನೆಗಳು, ಪ್ರಜ್ಞಾವಂತರು, ದಲಿತ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ತಮ್ಮ ತಮ್ಮ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಸರ್ಕಾರದ ಗಮನ ಸೆಳೆದಿವೆ. ಗುಂಡ್ಲುಪೇಟೆಯ ದಲಿತ ಸಂಘಟನೆಗಳು ಒಗ್ಗಟ್ಟಿನಿಂದ ದೂರು ದಾಖಲಿಸಿ ಎಲ್ಲಾ ಆರೋಪಿಗಳನ್ನೂ ಬಂಧಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. 
ಆದರೆ, ಅಷ್ಟಕ್ಕೇ ಸುಮ್ಮನಾದರೆ ಇದೊಂದು ಮಾಮೂಲಿ ಪ್ರಕರಣವಾಗಿ ಮರೆಯಾಗುತ್ತದೆ. ಜಾತಿವಾದಗಳಿಗೆ, ಧರ್ಮಾಂಧರಿಗೆ ಹಾಗೂ ಅಮಾನುಷವಾಗಿ ವರ್ತಿಸಿದ ಜನಗಳಿಗೆ ಹಾಗೂ ಜಡ್ಡುಹಿಡಿದ ವ್ಯವಸ್ಥೆಗೆ ಚುರುಕು ಮುಟ್ಟಿಸಿ ಆತ್ಮಸಾಕ್ಷಿ ಬಡಿದೆಬ್ಬಿಸಲು ಈ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ದಲಿತ ಹೋರಾಟಗಾರ ಡಾ. ಕೃಷ್ಣಮೂರ್ತಿ ಚಮರಂ ತಿಳಿಸಿದ್ದಾರೆ. 

ಕೃಷ್ಣಮೂರ್ತಿ ಚಮರಂ

ಈ ಹೋರಾಟ ಯಶಸ್ವಿಯಾಗಲು ಎಲ್ಲರ ಸಹಕಾರ ಭಾಗವಹಿಸುವಿಕೆ ಅಗತ್ಯ. ಆದ್ದರಿಂದ ನಾಡಿನೆಲ್ಲಾ ಪ್ರಜ್ಞಾವಂತ ಜನಪರ ಸಂಘಟನೆಗಳು ಎಂದಿನಂತೆ ಸ್ವಯಂಪ್ರೇರಿತವಾಗಿ ಗುಂಡ್ಲುಪೇಟೆಗೆ ಆಗಮಿಸಿ ಚಳವಳಿಗೆ ಬೆಂಬಲ ಸೂಚಿಸಿ, ಯಶಸ್ಸುಗೊಳಿಸಬೇಕೆಂದು ಚಮರಂ ರವರು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಹಿರಿಯ ಹೋರಾಟಗಾರರಾಗ ಹರಿಹರ ಆನಂದ ಸ್ವಾಮಿ, ಎಂ.ಬಿ.ಶ್ರೀನಿವಾಸ್. ಡಾ. ಕೃಷ್ಣಮೂರ್ತಿ ಚಮರಂ, ಡಾ.ಮಹದೇವ ಭರಣಿ, ಸಿ.ಎಂ.ಕೃಷ್ಣಮೂರ್ತಿ, ಯರಿಯೂರು ಸಿ.ರಾಜಣ್ಣ, ಸೋಮಯ್ಯ ಮಲೆಯೂರು, ಅಶೋಕ ಪುರಂ ಪುನೀತ್.ಕೆಂ.ಎಂ, ನಾಗರಾಜ್, ಕಂದಹಳ್ಳಿ ನಾರಾಯಣ, ಅಣಗಳ್ಳಿ ಬಸವರಾಜ್, ಚೋರನಹಳ್ಳಿ ಶಿವಣ್ಣ, ಮುರುಡಗಳ್ಳಿ ಮಹದೇವು, ಎಡದೊರೆ ಮಹದೇವ, ಆಲಗೂಡು ಚಂದ್ರಶೇಖರ್, ಪುಟ್ಟಸ್ವಾಮಿ, ಸುರೇಶ್ ಮೌರಿ, ಕಾಗಲವಾಡಿ ಶಿವಣ್ಣ, ರಾಮ ಸಮುದ್ರ ಮಹೇಶ, ಸುಭಾಷ್ ಮಾಡ್ರಹಳ್ಳಿ, ಆರ್.ಸೋಮಣ್ಣ,  ಹೊನ್ನೆಗೌಡನಹಳ್ಳಿ ನಾಗಯ್ಯ, ಹಂಗಳ ಪ್ರಸಾದ್, ಗಿರೀಶ್ ಲಕ್ಕೂರು, ಕಂದೆಗಾಲ ಎಂ ಶಿವಣ್ಣ, ಉಮೇಶ ಮಂಗಲ, ರಂಗಸ್ವಾಮಿ, ಮುಂತಾದ ಅನೇಕರು ಭಾಗವಹಿಸಿದ್ದರು ಬೆಂಬಲ ಸೂಚಿಸಿದ್ದಾರೆ.

ಮನುಷ್ಯತ್ವ ಮರೆತಿರುವುದೇ ಈ ಅಮಾನವೀಯ ಘಟನೆಗೆ ಕಾರಣ- ಚಮರಂ

ಇಡೀ ಘಟನೆಯನ್ನು ಅವಲೋಕಿಸಿದರೆ ಮನುಷ್ಯರು ಎಷ್ಟು ಜಾತಿಗ್ರಸ್ಥರಾಗಿದ್ದಾರೆ ಎಂಬ ಆತಂಕ ಮೂಡುತ್ತಿದೆ. ಒಬ್ಬ ಯುವಕನನ್ನು ದಲಿತ ಎಂಬ ಕಾರಣಕ್ಕಾಗಿ ಬೆತ್ತಲೆ ಮೆರವಣಿಗೆ ಮಾಡುವಷ್ಟು ಕ್ರೂರ ಮನಸ್ಸುಗಳನ್ನು ಬದಲಾಯಿಸುವುದಾದರೆ ಹೇಗೆ? ಆ ಕ್ರೂರ ಮನಸ್ಸುಗಳು ಈಗಲೂ ತಮ್ಮ ಘೋರ ತಪ್ಪನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ. ಆತ ಮಾನಸಿಕ ಅಸ್ವಸ್ಥ, ವಿಗ್ರಹ ಕದಿಯಲು ಬಂದಿದ್ದ, ನಾವೇ ಪಂಚೆ ಕೊಟ್ಟೆವು, ದಲಿತ ಅಂತ ಗೊತ್ತಿರಲಿಲ್ಲ ಎಂಬೆಲ್ಲಾ ಕಟ್ಟುಕಥೆಗಳನ್ನು ಕಟ್ಟಿ ತಾವು ಕೇಸಿನಿಂದ ಬಚಾವ್ ಆಗಲು ಪ್ರಯತ್ನಿಸುತ್ತಿದ್ದಾರೆ. ಆತ ಯಾವ ಜಾತಿಯೇ ಆಗಿರಲಿ, ಆ ಯುವಕನ ಸ್ಥಿತಿಯಲ್ಲಿ ತಾವಿದ್ದರೆ ಹೀಗೆ ಮಾಡುತ್ತಿದ್ದೇವೆ ಎಂದು ಆ ಜಾತಿವಾದಿಗಳು ಯೋಚಿಸದಷ್ಟರ ಮಟ್ಟಿಗೆ ದುಷ್ಟರಾಗಿಬಿಟ್ಟಿದ್ದಾರೆ.

ಇನ್ನು ಪೊಲೀಸ್ ಇಲಾಖೆ ಯಥಾಪ್ರಕಾರ ನಿರ್ಲಕ್ಷ್ಯ ತೋರಿದೆ. ವಿಷಯ ತಿಳಿದರೂ ತುಂಬಾ ತಡವಾಗಿ ಪೊಲೀಸರು ಬಂದಿದ್ದು ಮಾತ್ರವಲ್ಲದೇ ಪೊಲೀಸ್ ವಾಹನ ಚಾಲಕ ಶ್ರೀನಿವಾಸ ಸಂತ್ರಸ್ಥ ಯುವಕನಿಗೆ ಒದ್ದಿರುವುದು ಏನನ್ನು ಸೂಚಿಸುತ್ತದೆ? ಇನ್ನು ಪ್ರಕರಣದ ಎಒನ್ ಆರೋಪಿ ಅರ್ಚಕ ಶಿವಪ್ಪ ಎಂಬುವವರ ಹೆಸರನ್ನು ಎಫ್.ಐ.ಆರ್ ನಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ಇದು ಸರ್ವಥಾ ಸರಿಯಲ್ಲ. ಈಗಾದಲ್ಲಿ ಇಂತಹ ಕ್ರೂರ ಆಚರಣೆಗಳು ಮರಕಳಿಸುವುದರಲ್ಲಿ ಸಂದೇಹವೇ ಇಲ್ಲ.

ದುಷ್ಕೃತ್ಯದ ಆರೋಪಿಗಳು

ಈಗ ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಎ.ಎಸ್.ಐ ಮತ್ತು ವಾಹನ ಚಾಲಕ ಶ್ರೀನಿವಾಸನನ್ನು ಅಮಾನತು ಮಾಡಲಾಗಿದೆ. ಆದರೆ ಸಂತ್ರಸ್ತ ಪ್ರತಾಪ್ ಗೆ ಇಷ್ಟರಿಂದ ನ್ಯಾಯ ಸಿಗುವುದೇ? ತಪ್ಪಿತಸ್ಥರು ತಮ್ಮ ತಪ್ಪನ್ನು ಅರಿತು ಪ್ರಾಯಶ್ಚಿತ ಮಾಡಿಕೊಳ್ಳುತ್ತಾರೆಯೇ? ಇದು ಗುಂಡ್ಲುಪೇಟೆ ತಾಲ್ಲೂಕಿಗೆ ಮಾತ್ರವಲ್ಲ ಇಡೀ ಕರ್ನಾಟಕ, ದೇಶಕ್ಕೆ ಒಂದು ಸಂದೇಶ ನೀಡಬೇಕಿದೆ. ಜಾತಿವಾದಿಗಳಿಗೆ ಎಚ್ಚರಿಕೆ ನೀಡುವಂತೆ ಮಾಡಬೇಕಿದೆ. ಹಾಗಾಗಿ ಬಂದ್ ನಡೆಸಿ ಮುಂದಕ್ಕೂ ಕಾನೂನು ಮತ್ತು ಬೀದಿ ಹೋರಾಟವನ್ನು ಮುಂದುವರೆಸುತ್ತೇವೆಂದು ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಹಲವು ಕಡೆ ಘಟನೆ ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆದಿವೆ. ಅವುಗಳ ಕೆಲ ಚಿತ್ರಗಳು ಇಲ್ಲವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...