Homeಕರ್ನಾಟಕ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

- Advertisement -
- Advertisement -

ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ “ರಾಜ್ಯವು ನಿಯಂತ್ರಣದಲ್ಲಿದೆ” ಎಂದು ರಾಜ್ಯ ಸರ್ಕಾರ ಹೇಳಿದೆ.

ವಿದ್ಯಾರ್ಥಿನಿಯರು ಸಲ್ಲಿಸಿದ ನಾಲ್ಕು ಅರ್ಜಿಗಳ ವಿಚಾರಣೆಯನ್ನು ಕೋರ್ಟ್‌ ಮಂಗಳವಾರ ಪ್ರಾರಂಭಿಸಿದೆ. ವಿದ್ಯಾರ್ಥಿನಿಯರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ ಕಾಮತ್‌, “ಹಿಜಾಬ್ ಬಗ್ಗೆ ಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ಹಿಜಾಬ್ ಧರಿಸಿರುವ ಹುಡುಗಿಯರನ್ನು ಕೆಲವು ಹುಡುಗರು ಬೆನ್ನಟ್ಟುವ ಚಿತ್ರಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, “ಇಂತಹ ಹೇಳಿಕೆಗಳು ತಪ್ಪು ಸಂಕೇತವನ್ನು ನೀಡುತ್ತವೆ. ಹಿಜಾಬ್ ಧರಿಸಿರುವ ಹುಡುಗಿಯರ ಮೇಲೆ ದಾಳಿ ಮಾಡಲಾಗುತ್ತಿದೆ ಎಂಬಂತಹ ಹೇಳಿಕೆಗಳು ಅಪಾಯಕಾರಿ. ರಾಜ್ಯವು ನಿಯಂತ್ರಣದಲ್ಲಿದೆ” ಎಂದು ಹೇಳಿದ್ದಾರೆ.

ಆದರೆ ಮಾಧ್ಯಮಗಳು ವರದಿ ಮಾಡಿರುವಂತೆ ರಾಜ್ಯದಾದ್ಯಂತ ಹಲವು ಕಾಲೇಜುಗಳಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಮಂಡ್ಯದಲ್ಲಿ ಬುರ್ಖಾ ಧರಿಸಿರುವ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಸುತ್ತುವರೆದು ‘ಜೈಶ್ರೀರಾಮ್’ ಘೋಷಣೆ ಕೂಗಿದ್ದಾರೆ. ಶಿವಮೊಗ್ಗದ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸುವ ಧ್ವಜಸ್ಥಂಧದಲ್ಲಿ ಕೇಸರಿ ಧ್ವಜವನ್ನು ಹಾರಿಸಲಾಗಿದೆ.

ಮತ್ತೊಂದು ಪ್ರದೇಶದಲ್ಲಿ ಕೇಸರಿ ಶಾಲು ಹಾಕಿರುವ ವಿದ್ಯಾರ್ಥಿಗಳು ಕಾಲೇಜಿಗೆ ಕಲ್ಲೆಸೆದಿದ್ದಾರೆ. ಮತ್ತೊಂದು ಕಡೆಯಲ್ಲಿ ಬೀದಿಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಮಡಿಕೇರಿಯಲ್ಲಿ ಕೇಸರಿ ಶಾಲು ಧರಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ಹೊಡೆದಾಟ ನಡೆದು, ಚೂರಿ ಇರಿತ ಮಾಡಲಾಗಿದೆ.

ಇದನ್ನೂ ಓದಿ:ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ 

ಈ ನಡುವೆ ಎಲ್ಲಾ ಪ್ರೌಢಶಾಲೆ ಹಾಗೂ ಕಾಲೇಜುಗಳನ್ನು ಮುಂದಿನ ಮೂರು ದಿನಗಳ ಕಾಲ ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ದೀಕ್ಷಿತ್, “ನಾನು ತಾಳ್ಮೆಯಿಂದ ವಿಚಾರಣೆ ನಡೆಸುತ್ತಿದ್ದೇನೆ. ಸಂವಿಧಾನದಲ್ಲಿ ಜನರಿಗೆ ನಂಬಿಕೆ ಇರಬೇಕು. ಚೇಷ್ಟೆ ಮಾಡುವುದರಿಂದ ಸಮಸ್ಯೆ ಇನ್ನೂ ಉರಿಯುವಂತೆ ಮಾಡುತ್ತದೆ” ಎಂದು ಹೇಳಿದ್ದಾರೆ.

“ಪ್ರಕರಣದ ಮುಂದಿನ ವಿಚಾರಣೆ ಬಾಕಿಯಿದೆ. ಈ ನ್ಯಾಯಾಲಯವು ವಿದ್ಯಾರ್ಥಿ ಸಮುದಾಯ ಮತ್ತು ಸಾರ್ವಜನಿಕರಿಗೆ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಲು ವಿನಂತಿಸುತ್ತದೆ. ನ್ಯಾಯಾಲಯವು ಸಾರ್ವಜನಿಕರ ಬುದ್ಧಿವಂತಿಕೆ ಮತ್ತು ಸದ್ಗುಣದಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿದೆ ಮತ್ತು ಅದನ್ನು ಆಚರಣೆಗೆ ತರಬೇಕೆಂದು ಅದು ಆಶಿಸುತ್ತದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಜೂಮ್‌ ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸಿದ್ದಾರೆ. ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸಿದ್ದಾರೆ. ಈಗಾಗಲೇ ಹಿಜಾಬ್‌ ಪರವಾಗಿ ಹಲವಾರು ವಿಷಯಗಳನ್ನು ನ್ಯಾಯಾಲಯದಲ್ಲಿ ಹಿರಿಯ ವಕೀಲ ದೇವದತ್ತ ಕಾಮತ್‌ ಮಂಡಿಸಿದ್ದಾರೆ. ನ್ಯಾಯಾಲಯವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ವಿಚಾರಣೆ ಬುಧವಾರಕ್ಕೆ ಮುಂದೂಡಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...