Homeಮುಖಪುಟಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚೆರಿಗೂ ವ್ಯಾಪಿಸಿದ ಹಿಜಾಬ್‌ ವಿವಾದ

ಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚೆರಿಗೂ ವ್ಯಾಪಿಸಿದ ಹಿಜಾಬ್‌ ವಿವಾದ

- Advertisement -
- Advertisement -

ಭೋಪಾಲ್: ವಿದ್ಯಾರ್ಥಿಗಳು ಹಿಜಾಬ್ ಧರಿಸುವ ವಿವಾದವು ಕರ್ನಾಟಕ ರಾಜ್ಯದ ಗಡಿಯನ್ನು ದಾಟಿದೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ ಮತ್ತು ಪುದುಚೇರಿಯಲ್ಲಿಯೂ ಇದೇ ವಿವಾದ ಸೃಷ್ಟಿಯಾಗುವ ಸೂಚನೆಗಳು ಬಂದಿವೆ.

ಹಿಜಾಬ್‌‌ ಪರವಾಗಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿರುವುದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಶಾಂತಿಯನ್ನು ಕಾಪಾಡಲು ಹೈಕೋರ್ಟ್ ಸೂಚಿಸಿದೆ. ಇದರ ನಡುವೆ ಮಧ್ಯಪ್ರದೇಶದ ಮಂತ್ರಿಯೊಬ್ಬರು ‘ಶಿಸ್ತು’ ಮತ್ತು ‘ಏಕರೂಪದ ಡ್ರೆಸ್ ಕೋಡ್’ ಬಗ್ಗೆ ನಿಯಮ ರೂಪಿಸುವುದಾಗಿ ಹೇಳಿದ್ದಾರೆ. ಶಾಲೆಯಲ್ಲಿ ಹಿಜಾಬ್‌ ಧರಿಸುವುದನ್ನು ಪುದುಚೆರಿಯಲ್ಲಿ ಶಿಕ್ಷಕನೊಬ್ಬ ಆಕ್ಷೇಪಿಸಿದ್ದಾನೆ. ಇದರ ಕುರಿತು ತನಿಖೆ ನಡೆಸುವಂತೆ ಅರಿಯಾಂಕುಪ್ಪಂನ ಸರ್ಕಾರಿ ಶಾಲೆಯ ಮುಖ್ಯಸ್ಥರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.

ಹಿಜಾಬ್ ಧರಿಸಿರುವುದನ್ನು ವಿರೋಧಿಸಿ ಎಲ್ಲೆಡೆ ಕೇಸರಿಧಾರಿ ವಿದ್ಯಾರ್ಥಿಗಳು ದಾಂಧಲೆ ಮಾಡಿರುವುದನ್ನು ಕಂಡು ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಪ್ರೌಢಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಕಳೆದ ತಿಂಗಳು ಉಡುಪಿಯ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸಲು ಕೋರಿದ್ದರಿಂದ ಅಮಾನವೀಯವಾಗಿ ಶಾಲೆಯಿಂದ ಹೊರಗಿಡಲಾಗಿಯಿತು. ಆ ಬಳಿಕ ವಿವಾದ ಉಂಟಾಯಿತು. ಇದೇ ರೀತಿಯ ಅಮಾನವೀಯ ಘಟನೆ ಕುಂದಾಪುರ ಕಾಲೇಜಿನಲ್ಲಿ ಕಂಡು ಬಂದ ಬಳಿಕ ವಿವಾದ ಭುಗಿಲೆದ್ದಿದೆ. ಹಿಜಾಬ್‌ ವಿರೋಧಿಯಾಗಿ ಕೇಸರಿ ಶಾಲು ಧರಿಸಿ ಬರುವ ಮೂಲಕ ವಿದ್ಯಾರ್ಥಿಗಳಲ್ಲಿ ಕೋಮುದ್ವೇಷ ಹಬ್ಬುತ್ತಿದೆ.

ಇದನ್ನೂ ಓದಿರಿ: ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

ಹಿಜಾಬ್ ನಿಷೇಧವನ್ನು ಬೆಂಬಲಿಸಿರುವ ಮಧ್ಯಪ್ರದೇಶದ ಶಾಲಾ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್, ಸರ್ಕಾರವು ಶಿಸ್ತಿಗೆ ಆದ್ಯತೆ ನೀಡುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

“ಹಿಜಾಬ್ ಶಾಲಾ ಸಮವಸ್ತ್ರದ ಭಾಗವಲ್ಲ, ಅದಕ್ಕಾಗಿಯೇ ಅದನ್ನು ಶಾಲೆಗಳಲ್ಲಿ ಧರಿಸುವುದನ್ನು ನಿಷೇಧಿಸಬೇಕು. ಜನರು ತಮ್ಮ ಮನೆಗಳಲ್ಲಿ ಸಂಪ್ರದಾಯಗಳನ್ನು ಅನುಸರಿಸಬೇಕು, ಶಾಲೆಗಳಲ್ಲಿ ಅಲ್ಲ. ನಾವು ಶಾಲೆಗಳಲ್ಲಿ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಅಗತ್ಯವಿದ್ದರೆ, ಈ ಬಗ್ಗೆ ಪರಿಶೀಲಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

“ಕೋವಿಡ್ ಮಧ್ಯೆ ಶಾಲೆಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿವೆಯೋ ಎಂಬುದನ್ನು ಗಮನಿಸುವೋ, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದೋ ಅಥವಾ ಕೋಮು ವಿಭಜನೆಯ ಕಾರ್ಯಸೂಚಿಯನ್ನು ಅನುಸರಿಸುವುದೋ? ಯಾವುದು ತಮ್ಮ ಆದ್ಯತೆ ಎಂಬುದನ್ನು ಸಚಿವರು ತಿಳಿಸಬೇಕು” ಎಂದು ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಒತ್ತಾಯಿಸಿದ್ದಾರೆ.

“ನಮ್ಮ ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಅವರ ಧರ್ಮವನ್ನು ಆಚರಿಸುವ ಹಕ್ಕನ್ನು ನೀಡಿದೆ. ಆದರೆ ಬಿಜೆಪಿ ಸರ್ಕಾರವು ಶಾಲೆಗೆ ಹೋಗುವ ಮಕ್ಕಳನ್ನೂ ಅವರ ಧಾರ್ಮಿಕ ಆಚರಣೆಗಳಿಂದ ವಂಚಿಸಲು ಪ್ರಯತ್ನಿಸುತ್ತಿದೆ. ಸಿಖ್ಖರು ಪೇಟ ಧರಿಸುವುದು ಮತ್ತು ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಮೊದಲಿನಿಂದಲೂ ನಡೆದುಬಂದಿದೆ. ಆದರೆ ಈ ಸರ್ಕಾರವು ಈ ಪ್ರಾಚೀನ ಸಂಪ್ರದಾಯಗಳನ್ನು ಕೊನೆಗಾಣಿಸಲು ಬಯಸುತ್ತಿದೆ. ಇದು ಪ್ರಸ್ತುತ ಅಧಿಕಾರದಲ್ಲಿರುವವರ ಮಾನಸಿಕ ದಿವಾಳಿತನವನ್ನು ತೋರುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದರ ನಡುವೆ ಪುದುಚೇರಿಯಲ್ಲಿ, ಶಿಕ್ಷಣ ನಿರ್ದೇಶನಾಲಯದ ವಕ್ತಾರರು, “ವಿದ್ಯಾರ್ಥಿಯು ಧರಿಸಿದ್ದ ಸ್ಕಾರ್ಫ್ ಅನ್ನು ವಿರೋಧಿಸಿದ ಶಿಕ್ಷಕನ ಬಗ್ಗೆ ವಿದ್ಯಾರ್ಥಿ ಗುಂಪುಗಳು ಮತ್ತು ಇತರ ಸಂಘಟನೆಗಳಿಂದ ದೂರುಗಳನ್ನು ಸ್ವೀಕರಿಸಲಾಗಿದೆ” ಎಂದು ಹೇಳಿದ್ದಾರೆ.

“ವಾಸ್ತವವಾಗಿ ಏನಾಯಿತು ಎಂಬುದನ್ನು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಶಾಲೆಯಿಂದ ವರದಿಯನ್ನು ಸ್ವೀಕರಿಸಿದ ನಂತರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು” ಎಂದು ವಕ್ತಾರರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಎಡ-ಬೆಂಬಲಿತ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾದ ಸ್ಥಳೀಯ ಮುಖ್ಯಸ್ಥರು, “ಬಾಲಕಿ ಕಳೆದ ಮೂರು ವರ್ಷಗಳಿಂದ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುತ್ತಿದ್ದು, ಈಗ ಆಕ್ಷೇಪಣೆ ಏಕೆ ಬಂದಿತು” ಎಂದು ಪ್ರಶ್ನಿಸಿದ್ದಾರೆ.

“ವೀರಂಪಟ್ಟಿನಂ, ಎಂಬಾಲಂ ಮತ್ತು ತಿರುಕನೂರ್‌ನ ಕೆಲವು ಶಾಲೆಗಳು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕವಾದ ಆರ್‌ಎಸ್‌ಎಸ್‌ ಕಾರ್ಯಚೂಚಿಯನ್ನು ಪ್ರೋತ್ಸಾಹಿಸುತ್ತಿವೆ ಎಂಬ ದೂರುಗಳು ಬಂದಿವೆ” ಅಧಿಕಾರಿ ಹೇಳಿದ್ದಾರೆ.

“ನಾವು ಇದರ ಬಗ್ಗೆ ವಿವರವಾದ ತನಿಖೆಯನ್ನು ಬಯಸುತ್ತೇವೆ. ಅಧಿಕಾರಿಗಳ ವಿಭಾಗದ ಸಕ್ರಿಯ ಪ್ರೋತ್ಸಾಹದೊಂದಿಗೆ ಕೇಸರಿಕರಣವನ್ನು ತಡೆಯುತ್ತೇವೆ” ಎಂದು ಅವರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.


ಇದನ್ನೂ ಓದಿರಿ: ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...