Homeಮುಖಪುಟಮುಸುಕು, ಹಿಜಾಬ್‌, ಬಿಕಿನಿ, ಜೀನ್ಸ್‌ ಆಯ್ಕೆ ಮಹಿಳೆಯ ಹಕ್ಕು: ಪ್ರಿಯಾಂಕಾ

ಮುಸುಕು, ಹಿಜಾಬ್‌, ಬಿಕಿನಿ, ಜೀನ್ಸ್‌ ಆಯ್ಕೆ ಮಹಿಳೆಯ ಹಕ್ಕು: ಪ್ರಿಯಾಂಕಾ

- Advertisement -
- Advertisement -

ನವ ದೆಹಲಿ: ಕರ್ನಾಟಕದಲ್ಲಿ ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕಾಲೇಜು ವಿದ್ಯಾರ್ಥಿಗಳನ್ನು ಬೆಂಬಲಿಸಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮಾತನಾಡಿದ್ದು, ಯಾವ ಬಟ್ಟೆಯನ್ನು ಧರಿಸಬೇಕೆಂಬುದರ ಆಯ್ಕೆ ಅವರದು ಮತ್ತು ಈ ಹಕ್ಕನ್ನು ಸಂವಿಧಾನವು ರಕ್ಷಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.

“ಅದು ಬಿಕಿನಿಯಾಗಿರಲಿ, ಘೂಂಘಟ್‌ (ತಲೆ ಮೇಲೆ ಸೆರಗು ಮುಚ್ಚುವುದು) ಆಗಿರಲಿ, ಜೀನ್ಸ್ ಆಗಿರಲಿ ಅಥವಾ ಹಿಜಾಬ್ ಆಗಿರಲಿ, ಆಕೆ ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕು ಭಾರತೀಯ ಸಂವಿಧಾನದ ಮೂಲಕ ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ. #ladkihoonladsaktihoon (ಹುಡುಗಿಯಾಗಿದ್ದೇನೆ ಆದರೆ ಹೋರಾಟಬಲ್ಲೆ) ಎಂಬ ಹ್ಯಾಶ್‌ಟ್ಯಾಗ್‌ ಹಾಕಿದ್ದಾರೆ.

ನಾಳೆಯಿಂದ ಆರಂಭವಾಗಲಿರುವ ಏಳು ಹಂತದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಳಸಿರುವ ಧ್ಯೇಯವಾಕ್ಯ #ladkihoonladsaktihoon. ಕಾಂಗ್ರೆಸ್‌ ಪಕ್ಷವು ಮಹಿಳಾ ಹಕ್ಕುಗಳು ಮತ್ತು ಸಬಲೀಕರಣವನ್ನು ಚುನಾವಣೆಯ ಪ್ರಮುಖ ವಿಷಯಗಳಾಗಿ ಪರಿಗಣಿಸಿದೆ.

ಕಳೆದ ವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತರಗತಿಗಳಲ್ಲಿ ಹಿಜಾಬ್ ಧರಿಸುವ ವಿದ್ಯಾರ್ಥಿಗಳ ಹಕ್ಕನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. “ವಿದ್ಯಾರ್ಥಿಗಳ ಹಿಜಾಬನ್ನು ಶಿಕ್ಷಣಕ್ಕೆ ಅಡ್ಡಿಯಾಗುವಂತೆ ಮಾಡಿ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಅವಳು ಯಾರೊಂದಿಗೂ ಭೇದ ತೋರಿಸುವುದಿಲ್ಲ” ಎಂದು ರಾಹುಲ್ ಟ್ವೀಟ್ ಮಾಡಿದ್ದರು.

ಕಾಲೇಜು ವಿದ್ಯಾರ್ಥಿಗಳು ತರಗತಿಯಲ್ಲಿ ಹಿಜಾಬ್ ಧರಿಸುವ ಹಕ್ಕಿನ ವಿರುದ್ಧ ಕರ್ನಾಟಕದ ಉಡುಪಿ, ಚಿಕ್ಕಮಗಳೂರು ಮತ್ತು ಮಂಡ್ಯ ಜಿಲ್ಲೆಗಳ ಹಲವಾರು ಕಡೆ ಆಘಾತಕಾರಿಯಾಗಿ ಪ್ರತಿಭಟನೆಗಳು ನಡೆಯುತ್ತಿವೆ.

ಮಂಡ್ಯದಲ್ಲಿ ಯುವಕರ ಗುಂಪೊಂದು ಯುವತಿಯೊಬ್ಬಳಿಗೆ ಕೇಸರಿ ಶಾಲುಗಳನ್ನು ಬೀಸುತ್ತಾ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಿರುವಾಗ ಮನಕಲಕುವ ದೃಶ್ಯ ವೈರಲ್‌ ಆಗಿದೆ. ಕೇಸರಿ ಪಡೆಯ ದೌರ್ಜನ್ಯವನ್ನು ಖಂಡಿಸಿದ ಏಕಾಂಗಿ ಹೆಣ್ಣುಮಗಳು ಧಾರ್ಮಿಕ ಹಕ್ಕನ್ನು ಪ್ರತಿಪಾದಿಸಿದ್ದು, ಪ್ರಶಂಸೆಗೆ ಪಾತ್ರವಾಗಿದೆ.

ವಿದ್ಯಾರ್ಥಿನಿ ಮುಸ್ಕಾನ್ ಎನ್‌ಡಿಟಿವಿಯೊಂದಿಗೆ ಮಾತನಾಡುತ್ತಾ, “ನಾನು ಚಿಂತಿಸಲಿಲ್ಲ. ನಾನು ಕಾಲೇಜಿಗೆ ಪ್ರವೇಶಿಸಿದಾಗ ನಾನು ಬುರ್ಖಾ ಧರಿಸಿದ್ದಕ್ಕಾಗಿ ಅವರು ನನಗೆ ಅವಕಾಶ ನೀಡಲಿಲ್ಲ. ಅವರು ನಮ್ಮ ಶಿಕ್ಷಣವನ್ನು ಹಾಳುಮಾಡುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಎರಡು ಪಟ್ಟಣಗಳಲ್ಲಿ ಹಿಜಾಬ್ ಧರಿಸಿದ ಪ್ರತಿಭಟನಾಕಾರರು ಮತ್ತು ಕೇಸರಿ ಶಾಲು ಧರಿಸಿದವರು ಪರಸ್ಪರ ಕಲ್ಲು ತೂರಾಟ ನಡೆಸಿದ ನಂತರ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೇಸರಿ ಸ್ಕಾರ್ಫ್ ಧರಿಸಿದ್ದ ಹುಡುಗರು ಶಾಲಾ ಆವರಣದಲ್ಲಿ ಕೇಸರಿ ಭಾವುಟ ಹಾರಿಸಿ ವಾತಾವರಣವನ್ನು ಕಲುಷಿತಗೊಳಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಚಾಕು ಹಿಡಿದುಕೊಂಡಿದ್ದ ಇಬ್ಬರನ್ನು ಸೋಮವಾರ ಕುಂದಾಪುರದಲ್ಲಿ ಬಂಧಿಸಲಾಗಿದೆ.


ಇದನ್ನೂ ಓದಿರಿ: ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...